Home BIG BREAKING

Category: BIG BREAKING

Post
ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್, ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ..! ಯಾವ ಡೇಟ್ ಗೊತ್ತಾ..?

ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್, ಕರ್ನಾಟಕದಲ್ಲೂ ಎರಡು ಹಂತದಲ್ಲಿ ಮತದಾನ..! ಯಾವ ಡೇಟ್ ಗೊತ್ತಾ..?

ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಒಟ್ಟೂ ಇಡೀ ದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅದ್ರಲ್ಲಿ ಕರ್ನಾಟಕದಲ್ಲಿ ಎಪ್ರಿಲ್ 26 ಕ್ಕೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಇನ್ನು ಮೇ 7 ಕ್ಕೆ ಎರಡನೇ ಹಂತದ ಚುನಾವಣೆ ನಡೆಯಲಿದೆ. ಜೂನ್ 4 ರಂದು ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಇಂದು ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಮಾಹಿತಿ ಸುದ್ದಿಗೋಷ್ಟಿಯ ಮೂಲಕ ಹೊರಬಿದ್ದಿದೆ.

Post
ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!

ಹಾರವಳ್ಳಿ ಬಳಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾರು ಅಪಘಾತ, ಆಸ್ಪತ್ರೆಗೆ ದಾಖಲು..!

ಮುಂಡಗೋಡ: ತಾಲೂಕಿನ ಹಾರವಳ್ಳಿ‌‌ ಗ್ರಾಮದ ಹತ್ತಿರ ಮಾಜಿ ಶಾಸಕ‌ ವಿ ಎಸ್ ಪಾಟೀಲ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಬನವಾಸಿಯಿಂದ ಪಾಳಾ- ರಾಮಪೂರ ಮಾರ್ಗವಾಗಿ ತಮ್ಮ ಸ್ವಗ್ರಾಮ ಅಂದಲಗಿಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ‌ ಚಾಲಕ ಆನಂದ ಆಲೂರನಿಗೆ ಕಣ್ಣಿಗೆ ಹಾಗೂ ಮಾಜಿ ಶಾಸಕ ವಿ ಎಸ್ ಪಾಟೀಲರಿಗೆ ಎದಗೆ ಪೆಟ್ಟು ಬಿದ್ದಿದೆ. ಅದೃಷ್ಟವಾಶತ್ ಕಾರಿನ ಏರ್ ಬ್ಯಾಗ್ ಓಪನ್...

Post
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...

Post
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರದ ಈ ವರ್ಷದ ಕಾರಣೀಕ..!

“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರದ ಈ ವರ್ಷದ ಕಾರಣೀಕ..!

 ಸಂಪಾಯಿತಲೇ ಪರಾಕ್” ಇದು ಪ್ರಸಕ್ತ ವರ್ಷದ ಶ್ರೀ ಕ್ಷೇತ್ರ ಮೈಲಾರಲಿಂಗನ ಕಾರಣಿಕ ನುಡಿ. ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದ ಡೆಂಕನಮರಡಿಯಲ್ಲಿ ಸೋಮವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗೊರವಯ್ಯ ಕಾರಣೀಕ ನುಡಿದಿದ್ದಾರೆ. ಲಕ್ಷಾಂತರ ಭಕ್ತರ ನಡುವೆ ಸರಸರನೇ ಬಿಲ್ಲನ್ನೇರಿದ ವರ್ಷದ ಭವಿಷ್ಯ ವಾಣಿ ನುಡಿಯುವ ಗೊರವಯ್ಯ ರಾಮಣ್ಣ ಸದ್ದಲೇ ಎನ್ನುತ್ತ ದೇವವಾಣಿ ಎನ್ನಲಾಗುವ ವರ್ಷದ ದೇವವಾಣಿ “ಸಂಪಾಯಿತಲೇ ಪರಾಕ್” ಕಾರ್ಣಿಕದ ನುಡಿ ನುಡಿದರು. ಈ ಭವಿಷ್ಯವಾಣಿ ಆಡಳಿತದ ಏಳುಬೀಳು ಹಾಗೂ ಪ್ರಕೃತಿ ಬದಲಾವಣೆ ಮುನ್ಸೂಚನೆ...

Post
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..!  ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..! ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!

ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೊನ್ನೆ ದಿನಾಂಕ 23 ರಂದು ಮುಂಡಗೋಡ ತಾಲೂಕಿನ ಪಾಳಾ, ಇಂದೂರು ಭಾಗದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು ಅನ್ನೋ ಆರೋಪದ ಮೇಲೆ ಸಂಸದರ ವಿರುದ್ಧ FIR ದಾಖಲಿಸಲಾಗಿದೆ. ಅಂದಹಾಗೆ, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಯಿ ಹರಿಬಿಟ್ಟಿದ್ದ ಅನಂತಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾಖಾನ್ ಅಂತಾ ವ್ಯಂಗ್ಯವಾಡಿದ್ದರು. ಅಲ್ದೆ, ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಹಿಂದೂ ದೇವಸ್ಥಾನಗಳ ಹುಂಡಿಗೆ ಹಾಕಿದ ಹಣವನ್ನು, ಚರ್ಚ್,...

Post
ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ,  ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!

ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ, ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!

 ಮುಂಡಗೋಡ ತಾಲೂಕಿನ ಬಾಚಣಕಿಯ ಅಂಗಡಿ ಕೆರೆಯಲ್ಲಿ ನಾಡಬಾಂಬ್ ಸ್ಪೋಟ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿ ಹೋದ ನಂತರ, ಇಂದು ಮಂಗಳೂರಿನಿಂದ FSL ತಂಡ ಬೇಟಿ ನೀಡಿ ಪರಿಶೀಲನೆ ಕೈಗೊಂಡಿದೆ. ಶ್ಯಾಂಪಲ್ ಸಂಗ್ರಹ..! ಅಂದಹಾಗೆ, ಶನಿವಾರ ಬೆಳಿಗ್ಗೆ ಮಂಗಳೂರಿನಿಂದ ಬಾಚಣಕಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿರೋ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡ, ನಾಡಬಾಂಬ್ ಸ್ಪೋಟಗೊಂಡ ಸ್ಥಳದಿಂದ ಅವಶೇಷಗಳನ್ನು ಸಂಗ್ರಹಿಸಿದೆ. ಅಲ್ಲದೇ ಸ್ಪೋಟದ ತೀವ್ರತೆಯ ಬಗ್ಗೆ...

Post
ಬಾಚಣಕಿ ನಾಡಬಾಂಬ್ ಸ್ಪೋಟ ಪ್ರಕರಣ, ಕಾರವಾರ ಎಸ್ಪಿ ಸ್ಥಳಕ್ಕೆ ಭೇಟಿ..! ಅರಣ್ಯ ಅಧಿಕಾರಿಗಳೇ ನಿಮಗೆ ಏನೂ ಅನಿಸ್ತಿಲ್ವಾ..?

ಬಾಚಣಕಿ ನಾಡಬಾಂಬ್ ಸ್ಪೋಟ ಪ್ರಕರಣ, ಕಾರವಾರ ಎಸ್ಪಿ ಸ್ಥಳಕ್ಕೆ ಭೇಟಿ..! ಅರಣ್ಯ ಅಧಿಕಾರಿಗಳೇ ನಿಮಗೆ ಏನೂ ಅನಿಸ್ತಿಲ್ವಾ..?

ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದ ಅಂಗಡಿ ಕೆರೆ ಬಳಿ ನಾಡಬಾಂಬ್ ಸ್ಪೋಟಗೊಂಡ ಘಟನೆಗೆ ಸಂಬಂಧಿಸಿದಂತೆ, ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಶುಕ್ರವಾರ ರಾತ್ರಿ ಮಜ್ಜಿಗೇರಿ ಗ್ರಾಮಕ್ಕೆ ಭೇಟಿ ನೀಡಿದ್ರು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರೋ ರೈತ, ಕುರಿಗಾಹಿ ಬರಮಪ್ಪ ವಡ್ಡರ್ ಆರೋಗ್ಯ ವಿಚಾರಿಸಿದ್ರು. ಅಲ್ಲದೇ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ್ರು. ಇದು ದುರಂತ..! ಅಸಲು, ಘಟನೆ ನಡೆದು ಎರಡು ದಿನವಾಗಿದೆ. ಯಾವಾಗ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಚಿತ್ರಣ ತೆರೆದು ಇಟ್ಟಿತ್ತೋ ಅದೇ ಕ್ಷಣದಿಂದ ಪೊಲೀಸ್...

Post
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ, ಗಾಯಾಳು ರೈತನ ಮನೆಗೆ ಪಿಎಸ್ಐ ಸೇರಿ ಅರಣ್ಯಾಧಿಕಾರಿಗಳು ಭೇಟಿ..!

ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ, ಗಾಯಾಳು ರೈತನ ಮನೆಗೆ ಪಿಎಸ್ಐ ಸೇರಿ ಅರಣ್ಯಾಧಿಕಾರಿಗಳು ಭೇಟಿ..!

 ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟಗೊಂಡು ಗಾಯಗೊಂಡಿದ್ದ ಮಜ್ಜಿಗೇರಿ ಗ್ರಾಮದ ರೈತನ ಮನೆಗೆ ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಿಎಸ್ಐ ಪರಶುರಾಮ್ ಭೇಟಿ ನೀಡಿದ್ರು. ಗಾಯಾಳುವಿನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು, ಘಟನೆಯ ಮಾಹಿತಿ ಪಡೆದುಕೊಂಡ್ರು. ಇದಕ್ಕೂ ಮೊದಲು, ಘಟನಾ ಸ್ಥಳದ ಪರಿಶೀಲನೆ ನಡೆಸಿದ ಪಿಎಸ್ಐ ಪರಶುರಾಮ್ ಹಾಗೂ ಅರಣ್ಯ ಅಧಿಕಾರಿಗಳು ಈ ಘಟನೆಯ ಕುರಿತು ಚರ್ಚಿಸಿದ್ರು.

Post
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ..? ರೈತನಿಗೆ ತೀವ್ರ ಗಾಯ, ಕೈ ಬೆರಳುಗಳೇ ಕಟ್..! ಅಲ್ರಿ ಅಧಿಕಾರಿಗಳೇ ಇದೇಲ್ಲ ನಿಮ್ಮ ಗಮನಕ್ಕೇ ಇಲ್ವಾ..?

ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ..? ರೈತನಿಗೆ ತೀವ್ರ ಗಾಯ, ಕೈ ಬೆರಳುಗಳೇ ಕಟ್..! ಅಲ್ರಿ ಅಧಿಕಾರಿಗಳೇ ಇದೇಲ್ಲ ನಿಮ್ಮ ಗಮನಕ್ಕೇ ಇಲ್ವಾ..?

ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದಲ್ಲಿ ನಡೆಯಬಾರದ ಭಯಾನಕ ಘಟನೆಯೊಂದು ನಡೆದಿದೆ. ಕುರಿ ಕಾಯುತ್ತಿದ್ದ ವ್ಯಕ್ತಿಯೋರ್ವ ನಾಡಬಾಂಬ್? ಸ್ಪೋಟಗೊಂಡು ಗಾಯಗೊಂಡಿದ್ದಾನೆ‌. ಘಟನೆ ನಡೆದು ಹತ್ತಾರು ಗಂಟೆಗಳೇ ಕಳೆದ್ರೂ ಮುಂಡಗೋಡಿನ ಯಾವೊಬ್ಬ ಅಧಿಕಾರಿಯೂ ಹೇಗಿದ್ದಿಯಪ್ಪಾ ಯಜಮಾನಾ ಅಂತಾ ಬಂದು ಮಾತಾಡಿಸಿಲ್ಲ. ಅದು ಭಯಾನಕ..! ಅಂದಹಾಗೆ, ಬಾಚಣಕಿಯ ಬರಮಪ್ಪ ವಡ್ಡರ್ ಎಂಬುವ ರೈತನೇ ಸದ್ಯ ನಾಡಬಾಂಬ್? ಸ್ಪೋಟಗೊಂಡು ತೀವ್ರ ಗಾಯಗೊಂಡಿದ್ದಾನೆ. ಈತ ತನ್ನ ಕುರಿಗಳನ್ನು ಮೇಯಿಸಲು ಊರ ಪಕ್ಕದಲ್ಲೇ ಇರೋ ಕೆರೆಯ ಹತ್ತಿರ ಹೋಗಿದ್ದ. ಈ ವೇಳೆ ಬಹಿರ್ದೆಸೆಗೆ ಅಂತಾ ಹೋಗಿದ್ದಾಗ...

Post
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಖತರ್ನಾಕ ಕಳ್ಳಿಯರ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಖತರ್ನಾಕ ಕಳ್ಳಿಯರ ಬಂಧನ..!

ಮುಂಡಗೋಡಿನ ಯಂಗ್ ಆಂಡ್ ಎನರ್ಜಿಟಿಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡಸಿದ್ದಾರೆ. ಪರಿಣಾಮ ಇಬ್ಬರು ಖತರ್ನಾಕ ಅಂತರ್ ಜಿಲ್ಲಾ ಕಳ್ಳಿಯರನ್ನು ಹೆಡೆಮುರಿ ಕಟ್ಟಿದ್ದಾರೆ. ಕಳ್ಳಿಯರ ಜಾಡು ಹಿಡಿದು ದೂರದ ಶಿವಮೊಗ್ಗ ಜಿಲ್ಲೆಯಿಂದ ಕಳ್ಳಿಯರನ್ನು ತಂದು ಕೂರಿಸಿದ್ದಾರೆ. ಅಂದಹಾಗೆ ಬಂಧಿತ ಇಬ್ಬರೂ ಕಳ್ಳಿಯರ ಕರಾಮತ್ತುಗಳು ಒಂದೆರಡಲ್ಲ. ಮುಂಡಗೋಡ ಹಾಗೂ ಶಿರಸಿಯಲ್ಲಿ ಅನಾಮತ್ತಾಗಿ ಲಕ್ಷ ಲಕ್ಷ ಬೆಲೆಯ ಬಂಗಾರ, ಹಣ ದೋಚಿಕೊಂಡು ಹೋಗುವ ಹೀನ ದಂಧೆಯವರು. ಅದು ಎರಡು ವರ್ಷದ ಹಿಂದೆ..! ನಿಮಗೆ ನೆನಪಿರಬಹುದು, ಕಳೆದ ಎರಡು ವರ್ಷದ ಹಿ‌ಂದೆ, ಅಂದ್ರೆ,...