ಮುಂಡಗೋಡ ತಾಲೂಕಿನ ಹುನಗುಂದ ಭಾಗದಲ್ಲಿ ಕಬ್ಬು ಕಟಾವಿಗೆ ಬಂದಿದ್ದ ಬಡ ಕಾರ್ಮಿಕರ ಮಕ್ಕಳಿಗೆ ಅಂತೂ ಇಂತೂ ಆಸರೆ ಸಿಕ್ಕಿದೆ. ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ವರದಿ ಪ್ರಸಾರ ಆಗ್ತಿದ್ದಂತೆ ಸಿಡಿಪಿಓ ದೀಪಾ ಬಂಗೇರ್ ಮೇಡಮ್ಮು ಹುನಗುಂದಕ್ಕೆ ಧಾವಿಸಿ ಬಂದಿದ್ದಾರೆ. ಬಡಮಕ್ಕಳ ಗೋಳು ಕಣ್ಣಾರೆ ಕಂಡಿದ್ದಾರೆ. ಮಮ್ಮಲ ಮರುಗಿದ್ದಾರೆ. ಇಲಾಖೆಯಿಂದ ಅದೇನೇನು ಸೌಲಭ್ಯ ಇದೆಯೋ ಅದನ್ನೇಲ್ಲ ಯಥಾವತ್ತಾಗಿ ಪೂರೈಸಲು ಕ್ರಮ ಕೈಗೊಂಡಿದ್ದಾರೆ. ಹೀಗಾಗಿ, ಪುಟ್ಟ ಕಂದಮ್ಮಗಳ ಮುಖದಲ್ಲಿ ಈಗ ಮಂದಹಾಸ ಮೂಡಿದೆ. ಹೀಗಾಗಿ, ದೀಪಕ್ಕನ ಕರ್ತವ್ಯಪರತೆಗೆ ಧನ್ಯವಾದ ಹೇಳಲೇಬೇಕಿದೆ....
Top Stories
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
Category: BIG BREAKING
ಟಿಬೇಟಿಯನ್ ಕಾಲೋನಿ ಬಳಿ ಮರಕ್ಕೆ ಡಿಕ್ಕಿ ಹೊಡೆದ KTM ಬೈಕ್, ಮುಂಡಗೋಡಿನ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ ಸಮೀಪದ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂಬರ್ 1 ರ ಬಳಿ ಬೈಕ್ ಅಪಘಾತವಾಗಿದೆ. ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮುಂಡಗೋಡ ಪಟ್ಟಣದ ಸಂಜು ನರಸಪ್ಪ ಕಳಲಕೊಂಡ(32) ಮೃತ ಬೈಕ್ ಸವಾರ. ಯಲ್ಲಾಪುರ ಕಡೆಯಿಂದ ಮುಂಡಗೋಡ ಕಡೆ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಅನ್ನೊ ಮಾಹಿತಿ ಲಭ್ಯವಾಗಿದೆ. ನಿಯಂತ್ರಣ ತಪ್ಪಿದ ಕೆಟಿಎಂ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಕೂಡ ನುಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು...
ಪಾಳಾ ಭಾಗದಲ್ಲಿ ಹೆಜ್ಜೆ ಹೆಜ್ಜೆಗೂ ಮಟ ಮಟ ಮಟ್ಕಾ, ಅಸಲು, ದಂಧೆ ನಡಿತಿರೋದು ಯಾರ ನೆರಳಲ್ಲಿ ಗೊತ್ತಾ..? “ಮಟ್ಕಾಲಿ”ಯ ಅಡ್ಡಕಸುಬಿಗೆ ಶ್ರೀ ರಕ್ಷೆ ಯಾರದ್ದು..?
ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ. ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮತ್ತೆ ಮಟ್ಕಾ ಅನ್ನೊ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹೀರುತ್ತಿದೆ. ಅಂದಹಾಗೆ, ಇದು ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಬಂದಿರೋ ಎನ್.ವಿಷ್ಣುವರ್ಧನ್ ಸಾಹೇಬ್ರಿಗೆ “ಪಬ್ಲಿಕ್ ಫಸ್ಟ್” ನೀಡುತ್ತಿರೋ “ಫಸ್ಟ್ ಇನ್ಪರ್ಮೇಶನ್ ರಿಪೋರ್ಟ್” ಅಂದ್ರೆ ಮೊದಲ FIR ಮಟ್ಕಾ ಅಡ್ಡೆಗಳು..! ಎಸ್ಪಿ ಸಾಹೇಬ್ರೆ, ಈಗ್ಗೆ ಒಂದು ವರ್ಷವಾಯ್ತು. ಬಹುತೇಕ ಮುಂಡಗೋಡ...
ಬೈಕ್ ಗೆ ಗುದ್ದಿದ ಕಾರ್ 10 ಅಡಿ ದೂರ ಹಾರಿ ಬಿದ್ದ ಮಹಿಳೆ, ಸಿಸಿಟಿವಿಯಲ್ಲಿ ಭಯಾನಕ ದೃಷ್ಯ
ಧಾರವಾಡ: ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ, ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ನಲವಡಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುವಾಗ ಭಯಾನಕ ದುರ್ಘಟನೆ ನಡೆದಿದೆ. ರಸ್ತೆ ದಾಟಿ ಹೋಗುತ್ತಿದ್ದ ಬೈಕ್ ಗೆ ಹುಬ್ಬಳ್ಳಿಗೆ ಆಗಮಿಸುತ್ತಿದ್ದ ಬ್ಲಾಕ್ ಕಲರ್ ಕಾರ್ ಗುದ್ದಿದೆ. ಗುದ್ದಿದ ರಭಸಕ್ಕೆ ಬೈಕ್ ಮೇಲಿದ್ದ ಮಹಿಳೆ 10 ಅಡಿ ಹಾರಿ ಹೋಗಿ ಬಿದ್ದಿದ್ದಾಳೆ. ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಣ್ಣಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಾರ್ಕೆಟಿಂಗ್ ಸೊಸೈಟಿ ಅಧ್ಯಕ್ಷ ರವಿಗೌಡರ ಖುರ್ಚಿಗೆ ಕುತ್ತು, ನಾಮಿನೇಟ್ ಮಾಡಿದ್ದೇ ಕಾನೂನು ಬಾಹಿರವಂತೆ, ಹೈಕೋರ್ಟ್ ಮಹತ್ವದ ಆದೇಶ..!
ಇದು ಮುಂಡಗೋಡ ತಾಲೂಕಿನ ಪಾಲಿಗೆ ಅಚ್ಚರಿಯ ಸಂಗತಿ. ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರ ಖುರ್ಚಿಗೆ ಕುತ್ತು ಬಂದಿದೆಯಾ..? ಮಾರ್ಕೆಟಿಂಗ್ ಸೊಸೈಟಿಗೆ ರವಿಗೌಡ ಪಾಟೀಲರ ನಾಮನಿರ್ದೇಶನವೇ ಕಾನೂನು ಬಾಹಿರಾಗಿದೆ ಅಂತಾ ಹೈಕೋರ್ಟ್ ಧಾರವಾಡ ವಿಭಾಗೀಯ ಪೀಠ ಆದೇಶ ನೀಡಿದೆ. 03.11.2020 ರಂದು ರವಿಗೌಡ ಪಾಟೀಲರನ್ನು ಸರ್ಕಾರದಿಂದಲೇ ನಾಮ ನಿರ್ದೇಶನಗೊಳಿಸಿದ್ದು ಕಾನೂನು ಬಾಹಿರ ಅಂತಾ ಸರ್ಕಾರದ ಆದೇಶವನ್ನು ಮಾನ್ಯ ಹೈಕೋರ್ಟ್ ವಿಭಾಗೀಯ ಪೀಠ ಕಿತ್ತು ಹಾಕಿದೆ. ಹೀಗಾಗಿ, ಸಚಿವ ಶಿವರಾಮ್ ಹೆಬ್ಬಾರ್ ರವರ ಪರಮಾಪ್ತ, ಬಿಜೆಪಿಯ ಪ್ರಭಾವಿ ಮುಖಂಡ...
ಉತ್ತರ ಕನ್ನಡ ಎಸ್ಪಿ ಸುಮನಾ ಪೆನ್ನೇಕರ್ ಎತ್ತಂಗಡಿ, ವರ್ಗಾವಣೆಗೊಳಿಸಿ ಸರ್ಕಾರ ಆದೇಶ..!
ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ.ಸುಮನಾ ಪೆನ್ನೇಕರ್ ಎತ್ತಂಗಡಿಯಾಗಿದ್ದಾರೆ. ಒಂದೇ ಒಂದು ವರ್ಷದ ಅವದಿಯಲ್ಲೇ ಉತ್ತರ ಕನ್ನಡ ಜಿಲ್ಲೆಯಿಂದ ಎಸ್ಪಿ ಮೇಡಂ ವರ್ಗಾವಣೆ ಮಾಡಿದ್ದು ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಂದಹಾಗೆ, ಪಬ್ಲಿಕ್ ಫಸ್ಟ್ ನ್ಯೂಸ್ ಕಳೆದ ಒಂದು ತಿಂಗಳ ಹಿಂದೆಯೇ ನುಡಿದಿದ್ದ ಭವಿಷ್ಯ ನಿಜವಾಗಿದ್ದು, ಉತ್ತರ ಕನ್ನಡಕ್ಕೆ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ವರ್ಗಾವಣೆಗೊಂಡಿದ್ದಾರೆ. ಡಾ ಸುಮನಾ ಪೆನ್ನೇಕರ್ ಮೇಡಂ ಜಿಲ್ಲೆಗೆ ಎಂಟ್ರಿಯಾಗಿ ಬಂದಾಗಿನಿಂದ ಇಲ್ಲಿನ ಅಕ್ರಮಿಗಳು ಬಾಲ ಬಿಚ್ಚಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅದೇಷ್ಟೋ...
ಕಾತೂರು ನಂದಿಪುರದ ಬಳಿ ಭೀಕರ ಅಪಘಾತ, ಎರಡು ಬೈಕಿಗೆ ಕಾರು ಡಿಕ್ಕಿ ಮೂವರಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ನಂದೀಪುರ ಬಳಿ ಭೀಕರ ಅಪಘಾತವಾಗಿದೆ. ರಾಂಗ್ ಸೈಡ್ ಬಂದ ಕಾರೊಂದು ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆಯೂ ಸೇರಿ ಮೂವರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಶಿರಸಿ ಕಡೆಗೆ ಹೋಗುತ್ತಿದ್ದ ಕಾರು, ಶಿರಸಿ ಕಡೆಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಎರಡು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕಿನಲ್ಲಿದ್ದ ಹಾವೇರಿ ಮೂಲದ ಓರ್ವ ಮಹಿಳೆ ಹಾಗೂ ಪುರುಷನಿಗೆ ಗಂಭೀರ ಗಾಯವಾಗಿದೆ. ಹಾಗೆಯೇ ಮತ್ತೊಂದು ಬೈಕಿನಲ್ಲಿದ್ದ ವ್ಯಕ್ತಿಗೂ ಗಾಯವಾಗಿದೆ. ಎಣ್ಣೆ ಏಟಲ್ಲಿ..?...
ಬಾಚಣಕಿಯ ಗುತ್ತಿಗೆದಾರ ಬರಮಪ್ಪ ಏಗಪ್ಪನವರ್ ಅಕಾಲಿಕ ನಿಧನ
ಮುಂಡಗೋಡ ತಾಲೂಕಿನ ಬಾಚಣಕಿಯ ಹಿರಿಯ ಗುತ್ತಿಗೆದಾರ ಬರಮಪ್ಪ ಏಗಪ್ಪನವರ್(70) ವಿಧಿವಶರಾಗಿದ್ದಾರೆ. ಹೃದಯಾಘಾತದಿಂದ ಕೊನೆಯುಸಿರು ಎಳೆದಿರೋ ಬರಮಪ್ಪ ಜನಾನುರಾಗಿಯಾಗಿದ್ದರು. ಮಂಗಳವಾರ ಮದ್ಯಾಹ್ನ ಮನೆಯಲ್ಲಿ ಊಟ ಮುಗಿಸಿಕೊಂಡು ವಿಶ್ರಾಂತಿ ಪಡೆಯುತ್ತಿದ್ದ ಬರಮಪ್ಪ, ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದು ಅಸು ನೀಗಿದ್ದಾರೆ. ಮೃತರು ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ. ಇನ್ನು ಬರಮಪ್ಪ ಏಗಪ್ಪನವರ್ ನಿಧನಕ್ಕೆ ತಾಲೂಕಿನ ಜೈನ ಸಮಾಜ ಕಂಬನಿ ಮಿಡಿದಿದೆ.
ವಿ.ಎಸ್.ಪಾಟೀಲ್ “ಕಮಲ” ತೊರೆದು “ಕೈ” ಹಿಡಿಯೊ ಮುಹೂರ್ತ ಫಿಕ್ಸ್: ಸಂಚಲನ ಪಕ್ಕಾನಾ..?
ಯಲ್ಲಾಪುರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮಾಜಿ NWKSRTC ಅಧ್ಯಕ್ಷ ವಿ.ಎಸ್. ಪಾಟೀಲ್ “ಕೈ” ಪಡೆ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ನೆವೆಂಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲೇ ಕಮಲ ತೊರೆದು “ಕೈ” ಹಿಡಿಯಲಿದ್ದಾರೆ ಪಾಟೀಲರು. ಅಂದಹಾಗೆ, ಇವತ್ತು ಬೆಂಗಳೂರಿನಲ್ಲಿ ಇಂತಹದ್ದೊಂದು ತೀರ್ಮಾನ ಹೊರಬಿದ್ದಿದೆ. ಡಿಕೆಶಿ ಭೇಟಿ..! ಅಸಲು, ಹಲವು ತಿಂಗಳುಗಳಿಂದಲೇ ಬಿಜೆಪಿ ಜೊತೆಗಿನ ಸಂಬಂಧ ಕಳೆದುಕೊಂಡಿದ್ದ ವಿಎಸ್ಪಿ, ಬಹುತೇಕ ಕಾಂಗ್ರೆಸ್ಸಿನ ಪಡಸಾಲೆಯಲ್ಲಿ ಒಂದು ಹೆಜ್ಜೆ ಇಟ್ಟಾಗಿತ್ತು. ಆದ್ರೆ, ಕಾಂಗ್ರೆಸ್ ನ ಭಾರತ್ ಜೋಡೋ ಕಾರ್ಯಕ್ರಮದಲ್ಲಿ...
ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ
ಮುಂಡಗೋಡ ತಾಲೂಕಿನ ಇಂದೂರಿನ ಜನಪದ ಕಲಾವಿದ ಸಹದೇವಪ್ಪ ನಡಗೇರಿಯವರಿಗೆ ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿ ರಾಜ್ಯ ಸರ್ಕಾರ ಇಂದು ಘೋಷಣೆ ಮಾಡಿದೆ. ಅಂದಹಾಗೆ, ಸಹದೇವಪ್ಪ ನಡಗೇರಿಯವರು ತಾಲೂಕಿನ ಹಿರಿಯ ಜನಪದ ಕಲಾವಿದರಾಗಿದ್ದು, ವಿಶೇಷ ಶೈಲಿಯ ಜನಪದ ಗೀತೆಗಳನ್ನು ಹಾಡುತ್ತ ಜನಮನ ಗೆದ್ದಿದ್ದಾರೆ. ಸದ್ಯ ಮುಂಡಗೋಡ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಸೇವೆ ಸಲ್ಲಿಸ್ತಿರೋ ನಡಗೇರಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ತಾಲೂಕಿನ ಜನರ ಹರ್ಷಕ್ಕೆ ಕಾರಣವಾಗಿದೆ. ಪಬ್ಲಿಕ್...









