Home BIG BREAKING

Category: BIG BREAKING

Post
ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ಸಿಎಂ, ಆದ್ರೆ, ವಿ.ಎಸ್.ಪಾಟೀಲರ “ಅಧ್ಯಕ್ಷಗಿರಿ” ಸೇಫ್..!

ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ಸಿಎಂ, ಆದ್ರೆ, ವಿ.ಎಸ್.ಪಾಟೀಲರ “ಅಧ್ಯಕ್ಷಗಿರಿ” ಸೇಫ್..!

ಬೆಂಗಳೂರು: ರಾಜ್ಯದಲ್ಲಿನ ಬಹುತೇಕ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ರದ್ದುಗೊಂಡಿದೆ. ನೇಮಕಾತಿ ರದ್ದುಗೊಳಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಆದ್ರೆ, ಅಚ್ಚರಿಯೆಂಬಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಸೇಫ್ ಆಗಿದ್ದಾರೆ. 3 ವರ್ಷದಿಂದ..! ಕಳೆದ ಮೂರು ವರ್ಷಗಳಿಂದ ಅಂದ್ರೆ, ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗಲೇ ಅಧ್ಯಕ್ಷರಾಗಿ ನೇಮಕಗೊಂಡಿದ್ದ, ವಿ.ಎಸ್. ಪಾಟೀಲ್ ರಿಗೆ ಈ ಬಾರಿ ಕೋಕ್ ನೀಡಲಾಗತ್ತೆ ಅನ್ನೊ ಮಾತುಗಳಿದ್ದವು. ಆದ್ರೆ, ಸಿಎಂ ಬಸವರಾಜ್ ಬೊಮ್ಮಾಯಿ ರದ್ದುಗೊಳಿಸಿರೋ ಪಟ್ಟಿಯಲ್ಲಿ ವಿ.ಎಸ್.ಪಾಟೀಲರ ಹೆಸರು ಇಲ್ಲ....

Post
ಮಳೆಯಿಂದ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು, ಹಳಿಯಾಳದ ಮುರ್ಕವಾಡದಲ್ಲಿ ಮನಕಲಕುವ ಘಟನೆ..!

ಮಳೆಯಿಂದ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಸಾವು, ಹಳಿಯಾಳದ ಮುರ್ಕವಾಡದಲ್ಲಿ ಮನಕಲಕುವ ಘಟನೆ..!

ಹಳಿಯಾಳ: ತಾಲೂಕಿನಲ್ಲಿ ಮಳೆಯಿಂದ ಭಾರೀ ಅನಾಹುತವಾಗಿದೆ. ನಿರಂತರ ಮಳೆಯ ಪರಿಣಾಮ ಮಣ್ಣಿನ ಗೋಡೆ ಕುಸಿದು ತಾಯಿ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರ್ಕವಾಡ ಗ್ರಾಮದಲ್ಲಿ ಘಟನೆ ನಡೆದಿದೆ. ರುಕ್ಮಿಣಿ ವಿಠ್ಠಲ್ ಮಾಚಕ (37), ಶ್ರೀದೇವಿ ವಿಠ್ಠಲ್ ಮಾಚಕ (13) ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಇಂದು ಬೆಳಗಿನ ಜಾವ ಮನೆ ಗೋಡೆ ಕುಸಿದು, ಮನೆ ಗೋಡೆ ಪಕ್ಕದಲ್ಲಿ ಮಲಗಿದ್ದ ತಾಯಿ ಮಗಳ ದುರಂತ ಸಾವು ಕಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿರಂತರ ಮಳೆ ನೀರಿಗೆ ಗೋಡೆ ನೆನದು ಕುಸಿತವಾಗಿದರ. ಘಟನಾ...

Post
ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

ಸನವಳ್ಳಿ ಪ್ಲಾಟ್ ಬಳಿ ಅಪಘಾತ, ಬಸನಕಟ್ಟಿಯ ದಂಪತಿಗೆ ಗಾಯ..!

 ಮುಂಡಗೋಡ: ತಾಲೂಕಿನ ಸನವಳ್ಳಿ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಬೈಕ್ ಮೇಲಿದ್ದ ದಂಪತಿಗೆ ಗಂಭೀರ ಗಾಯವಾಗಿದೆ. ಶಿಗ್ಗಾವಿ ತಾಲೂಕಿನ ಬಸನಕಟ್ಟಿ ಗ್ರಾಮದ ನಾಗರಾಜ್ ಲಕ್ಷ್ಮಣ ಅಂಬಿಗೇರ(42) ಹಾಗೂ ಅವ ನ ಪತ್ನಿಗೆ ಗಂಭೀರ ಗಾಯವಾಗಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ತರಲಾಗಿತ್ತು, ಆದ್ರೆ, ಗಂಭೀರ ಗಾಯಗೊಂಡಿರೋ ಕಾರಣಕ್ಕೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಇನ್ನು, ಮುಂಡಗೋಡಿನಿಂದ ಸಂತೆ ಮುಗಿಸಿಕೊಂಡು ಬಸನಕಟ್ಟಿಗೆ ಬೈಕ್ ಮೂಲಕ ತೆರಳುತ್ತಿದ್ದಾಗ, ಬಂಕಾಪುರ...

Post
ತ್ರಿವಳೀ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ಎರಡು ಗಂಡು, ಒಂದು ಹೆಣ್ಣು ಮಗು ಜನನ..!

ತ್ರಿವಳೀ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ಎರಡು ಗಂಡು, ಒಂದು ಹೆಣ್ಣು ಮಗು ಜನನ..!

ಕುಮಟಾ: ಮಹಾತಾಯಿಯೊಬ್ರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಕುಮಟಾದ ಖಾಸಗಿ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾಳೆ. ಗೀತಾ ಪಟಗಾರ ಎಂಬುವ ಮಹಿಳೆಯೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದವಳಾಗಿದ್ದು, ಮದುವೆಯಾಗಿ 11ವರ್ಷದ ಬಳಿಕ ಎರಡು ಗಂಡು ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಮೂರು ಮಕ್ಕಳು ಆರೋಗ್ಯವಾಗಿವೆ.

Post
ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?

ಯಲ್ಲಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಾಗಿಸುತ್ತಿದ್ದ 6 ಒಂಟೆಗಳ ರಕ್ಷಣೆ..?

ಯಲ್ಲಾಪುರ ಪೊಲೀಸರು ನಿನ್ನೆ ತಡರಾತ್ರಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ‌. ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 6  ಒಂಟೆಗಳನ್ನು ರಕ್ಷಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.  ಈಚರ್ ವಾಹನದಲ್ಲಿ, ಹುಬ್ಬಳ್ಳಿ ಕಡೆಯಿಂದ ಭಟ್ಕಳ ಕಡೆಗೆ ಅಕ್ರಮವಾಗಿ, ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ ಒಂಟೆಗಳನ್ನು ಯಲ್ಲಾಪುರ ಪಟ್ಟಣದ ಜೋಡಕೆರೆ ಚೆಕ್ ಪೋಸ್ಟ್ ಬಳಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಬಕ್ರೀದ್ ಹಬ್ಗಕ್ಕಾಗಿ ಬಲಿ ಕೊಡುವ ಸಂಬಂಧ ಒಂಟೆಗಳನ್ನ ಸಾಗಿಸಲಾಗುತ್ತಿತ್ತಾ..? ಅಥವಾ ಬೇರೆ ಯಾವುದೋ ಕಾರಣಕ್ಕೆ ಒಂಟೆಗಳನ್ನು ಸಾಗಿಸಲಾಗುತ್ತಿತ್ತಾ..? ಮಾಹಿತಿ ಇನ್ನಷ್ಟೇ ತಿಳಿದು...

Post
ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?

ಮುಂಡಗೋಡ ಬಿಜೆಪಿಯಲ್ಲೀಗ “ರಾಜೀ”ನಾಮೆ ಪರ್ವ; ಅಷ್ಟಕ್ಕೂ, ಬದಲಾವಣೆಯ ಆಟದಲ್ಲಿ ಗೆಲ್ಲೋರು ಯಾರು..?

ಮುಂಡಗೋಡ: ಬಿಜೆಪಿಯಲ್ಲಿ ಬದಲಾವಣೆ ಪರ್ವ ಶುರುವಾಗಿದೆಯಾ..? ಒಳ ಒಪ್ಪಂದಗಳನ್ನು ಮೀರಿ, ಬಹುತೇಕ ಪಕ್ಷದ ಆಂತರಿಕ ಕಚ್ಚಾಟಕ್ಕೆ ಕಾರಣವಾಗಿದ್ದ ಅಧ್ಯಕ್ಷರು, ಉಪಾಧ್ಯಕ್ಷರ ರಾಜೀನಾಮೆ ಮಸಲತ್ತುಗಳಿಗೆ ಬಿಜೆಪಿ ಪಕ್ಷದ ಕೋರ್ ಕಮೀಟಿ ಮೂಗುದಾಣ ಹಾಕಲು ಸನ್ನದ್ಧವಾಗಿದೆ ಅನ್ನೊ ಖಚಿತ ಮಾಹಿತಿ ಲಭ್ಯವಾಗಿದೆ. 15-15 ರ ಒಪ್ಪಂದ..! ಅಂದಹಾಗೆ, ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರು ಹಲವು ಕಡೆ ಭರ್ಜರಿ ಜಯ ದಾಖಲಿಸಿದ್ದರು. ಹೀಗಾಗಿ, ಬಿಜೆಪಿ ಬೆಂಬಲಿತರಿಗೆ ಅಧಿಕಾರದ ಚುಕ್ಕಾಣಿ ಸಿಕ್ಕಿದ್ದ ಹಲವು ಗ್ರಾಪಂ ಗಳಲ್ಲಿ ಅವತ್ತು, ಅಧಿಕಾರದ ಹಂಚಿಕೆಯಲ್ಲಿ...

Post
ಮಜ್ಜಿಗೇರಿ ಬಳಿ ಚಿರತೆ ಪ್ರತ್ಯಕ್ಷ..? ಅನಾಮತ್ತಾಗಿ 12 ಕುರಿಗಳನ್ನು ತಿಂದು ಹಾಕ್ತಾ ಚಿರತೆ..? ಗ್ರಾಮಸ್ಥರಲ್ಲಿ ಆತಂಕ..!

ಮಜ್ಜಿಗೇರಿ ಬಳಿ ಚಿರತೆ ಪ್ರತ್ಯಕ್ಷ..? ಅನಾಮತ್ತಾಗಿ 12 ಕುರಿಗಳನ್ನು ತಿಂದು ಹಾಕ್ತಾ ಚಿರತೆ..? ಗ್ರಾಮಸ್ಥರಲ್ಲಿ ಆತಂಕ..!

 ಮುಂಡಗೋಡ: ತಾಲೂಕಿನ ಮಜ್ಜಿಗೇರಿ ಬಳಿಯ ಕಾಡಿನಲ್ಲಿ ಚಿರತೆ ಪ್ರತ್ಯಕ್ಷವಾಗಿರೋ ಅನುಮಾನ ದಟ್ಟವಾಗಿದೆ. ಕಾಡಿನಲ್ಲಿ ಮೇಯಲು ಹೋಗಿದ್ದ ಬರೋಬ್ಬರಿ 12 ಕುರಿಗಳನ್ನು ಚಿರತೆ ಕೊಂದು ಹಾಕಿದೆ ಅಂತಾ ಹೇಳಲಾಗ್ತಿದೆ. ಮಜ್ಜಿಗೇರಿ ಗ್ರಾಮದ ಬರಮಣ್ಣ ಉಗ್ರಾಣಿ ಎಂಬುವವರಿಗೆ ಸೇರಿದ 10 ಕುರಿಗಳು ಚಿರತೆ ದಾಳಿಗೆ ಬಲಿಯಾಗಿವೆ. ನಿನ್ನೆ ಸಂಜೆ 4 ಗಂಟೆಯ ಹೊತ್ತಿನಲ್ಲಿ ಚಿರತೆಯನ್ನು ಬರಮಣ್ಣ ನೋಡಿದ್ದಾರೆ ಎನ್ನಲಾಗಿದೆ. ಆದ್ರೆ, ಹಾಗೆ ಚಿರತೆ ಕಂಡ ತಕ್ಷಣವೇ ಭಯದಿಂದ ಕಾಲ್ಕಿತ್ತಿರೊ ಬರಮಣ್ಣ ಉಗ್ರಾಣಿಯವರ 10 ಕುರಿಗಳು ಹಾಗೆ ಬೇರೆಯವರ 2...

Post
ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆಯಿಲ್ಲ..!

ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆಯಿಲ್ಲ..!

ಮುಂಡಗೋಡ: ನಾಳೆ ಶುಕ್ರವಾರ ಮುಂಡಗೋಡ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಆದೇಶ ನೀಡಿರುವಂತೆ ಕರಾವಳಿ ಭಾಗದ ತಾಲೂಕುಗಳಾದ ಕಾರವಾರ, ಅಂಕೋಲಾ, ಭಟ್ಕಳ, ಕುಮಟಾ, ಹೊನ್ನಾವರ ಹಾಗೂ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಜೋಯಿಡಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ನೀಡಲಾಗಿದೆ. ಆದ್ರೆ, ಮುಂಡಗೋಡ ತಾಲೂಕಿಗೆ ರಜೆ ನೀಡಲಾಗಿಲ್ಲ ಅಂತಾ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

Post
ಬೋಟ್ ನಲ್ಲಿ ನದಿ ದಾಟುತ್ತಿದ್ದ ವೇಳೆ ನದಿಯಲ್ಲೇ ಸಿಲುಕಿದ ಐವರ ರಕ್ಷಣೆ..!

ಬೋಟ್ ನಲ್ಲಿ ನದಿ ದಾಟುತ್ತಿದ್ದ ವೇಳೆ ನದಿಯಲ್ಲೇ ಸಿಲುಕಿದ ಐವರ ರಕ್ಷಣೆ..!

ಕಾರವಾರ: ಗ್ರಾಮದಿಂದ ಗ್ರಾಮಕ್ಕೆ ನದಿಯಲ್ಲಿ ಬೋಟ್ ಮೂಲಕ ದಾಟುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬೋಟು ಕೆಟ್ಟು ಐವರು ಗ್ರಾಮಸ್ಥರು ಗಂಗಾವಳಿ ನದಿಯ ಮಧ್ಯೆ ಸಿಲುಕಿಕೊಂಡಿದ್ದ ಘಟನೆ ನಡೆದಿದೆ.  ಅಂಕೋಲಾ ತಾಲೂಕಿನ ಡೋಂಗ್ರಿ ಪಂಚಾಯತಿ ವ್ಯಾಪ್ತಿಯ ರಾಮನಗುಳಿಯಿಂದ ಡೋಂಗ್ರಿಗೆ ಸಂಪರ್ಕಿಸುವ ತೂಗುಸೇತುವೆ ಕಳೆದ ಎರಡು ವರ್ಷಗಳ ಹಿಂದೆ ಗಂಗಾವಳಿಯ ನೆರೆಗೆ ಕೊಚ್ಚಿ ಹೋಗಿತ್ತು. ಇದರಿಂದಾಗಿ ಸದ್ಯ ಇಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯ ಕೂಡ ಪ್ರಗತಿಯಲ್ಲಿತ್ತು. ಆದ್ರೆ, ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ...

Post
ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ, ರಕ್ಷಣೆ ಮಾಡಿದ್ದು ಹೇಗೆ ಗೊತ್ತಾ..?

ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ, ರಕ್ಷಣೆ ಮಾಡಿದ್ದು ಹೇಗೆ ಗೊತ್ತಾ..?

ಕಾರವಾರ: ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ಇಲ್ಲಿನ ವಾಸು ಪೆಡ್ನೇಕರ್ ಎಂಬುವವರ ಮನೆಯ ಬಳಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಕಂಡು ಕುಟುಂಬದವರು ಆತಂಕಗೊಂಡಿದ್ರು.  ಹಾಗೆ, ಕಾಳಿಂಗ ಸರ್ಪ ಕಂಡು ಅತಂಕಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಳಿಂಗ ರಕ್ಷಣೆ ಮಾಡಲಾಗಿದೆ. ಬರೋಬ್ಬರಿ 12 ಅಡಿ..! ಅಲ್ಲಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಬರೋಬ್ಬರಿ 12 ಅಡಿಗೂ ಹೆಚ್ಚು ಉದ್ದವಾಗಿದೆ. ಆಹಾರ ಹುಡುಕಿಕೊಂಡು ಜನವಸತಿ...