ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಬಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದ್ದು. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಗುರುವಾರವೂ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: BIG BREAKING
ಭಾರೀ ಮಳೆ, ಗೋಕರ್ಣ ಬಳಿ ರಸ್ತೆ ಮೇಲೆ ಗುಡ್ಡ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ, ಅವಾಂತರಗಳು ಸೃಷ್ಟಿಯಾಗಿವೆ. ಕುಮಟಾ ತಾಲೂಕಿನ ಗೋಕರ್ಣ ಕ್ರಾಸ್ ಬಳಿ ಗುಡ್ಡ ಕುಸಿತವಾಗಿದೆ. ಗೋಕರ್ಣದ ಮಾದನಗೇರಿಯ ಬಳಿ ಗುಡ್ಡ ಕುಸಿತವಾಗಿದ್ದು, ಐಆರ್ಬಿ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತವಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು, ಹೀಗಾಗಿ, ವಾಹನಗಳಿಗೆ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹೆದ್ದಾರಿಗೆ ಬಿದ್ದ ಮಣ್ಣನ್ನ ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ,...
ಮುಂದುವರೆದ ಮಳೆಯ ಅರ್ಭಟ ಹಿನ್ನೆಲೆ, ನಾಳೆ ಬುಧವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಬುಧವಾರ ಹಾಗೂ ಗುರವಾರ ಭಾರೀ ಮಳೆಯ ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಬುಧವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಸಿನಿಮಿಯ ರೀತಿಯಲ್ಲಿ ಹಂತಕರ ಹೆಡೆಮುರಿ ಕಟ್ಟಿದ ಪೊಲೀಸರು, ಅಷ್ಟಕ್ಕೂ ಹತ್ಯೆ ನಂತರ ಪೊಲೀಸರಿಗೆ ಕರೆ ಮಾಡಿದ್ರಾ ಹಂತಕರು..?
ಬೆಳಗಾವಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಿ ಪರಾರಿಯಾಗುತ್ತಿದ್ದ ಹಂತಕರ ಅರೆಸ್ಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಸಾರ್ವಜನಿಕರ ಸಹಕಾರದೊಂದಿಗೆ ಪೊಲೀಸ್ರು ಹಂತಕರನ್ನು ಹೆಡೆಮುರಿ ಕಟ್ಟಿದ್ದಾರೆ. ಚಂದ್ರಶೇಖರ್ ಗುರೂಜಿಯವರನ್ನು ಭೀಕರವಾಗಿ ಹತ್ಯೆ ಮಾಡಿದ್ದ ಹಂತಕರು, ಬಟ್ಟೆ ಬದಲಿಸಿ ಕಾರಲ್ಲೇ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ತೆರಳುತ್ತಿದ್ರು. ಇದೇ ವೇಳೆ ಮೊಬೈಲ್ ಟವರ್ ಲೋಕೇಶನ್ ಆಧಾರದಲ್ಲಿ ಹತ್ಯೆಯಾದ ಕೇವಲ 4 ಗಂಟೆಯಲ್ಲೇ ಹಂತಕರನ್ನು ಎಳೆದು ತಂದಿದ್ದಾರೆ ಪೊಲೀಸರು. ಆರೋಪಿಗಳಿಂದಲೇ ಕರೆ..! ಇನ್ನು, ಹಾಗೆ ಗುರೂಜಿಯ ಹತ್ಯೆಯ...
ಆಪ್ತರಿಂದಲೇ ಹತ್ಯೆಯಾದ್ರಾ ಚಂದ್ರಶೇಖರ ಗುರೂಜಿ..? ಬೇನಾಮಿ ಆಸ್ತಿಗಾಗಿ ಚುಚ್ಚಿ ಚುಚ್ಚಿ ಕೊಂದ್ರಾ ಹಂತಕರು..?
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯರ ಬೀಕರ ಹತ್ಯೆಯ ಹಿಂದೆ ಬೇನಾಮಿ ಆಸ್ತಿಯ ನೆರಳಿದೆ. ಬಹುತೇಕ ಆಪ್ತರೇ ಹಂತಕರು ಅನ್ನೋ ಪ್ರಾಥಮಿಕ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಅಷ್ಟಕ್ಕೂ, ಹಂತಕ ಆರೋಪಿಗಳು ಕಲಘಟಗಿ ತಾಲೂಕಿನ ದುಮ್ಮವಾಡದ ನಿವಾಸಿಗಳು ಎನ್ನಲಾಗಿದೆ. ಬೇನಾಮಿ ಆಸ್ತಿ ಕಾರಣವಾ..? ಇನ್ನು, ಚಂದ್ರಶೇಖರ್ ಗುರೂಜಿ ವನಜಾಕ್ಷಿಯ ಹೆಸರಿಗೆ ಬೇನಾಮಿ ಆಸ್ತಿ ಮಾಡಿದ್ದರು ಎನ್ನಲಾಗಿದೆ. ಈ ಕಾರಣಕ್ಕಾಗಿ ಹಾಗೆ ವನಜಾಕ್ಷಿ ಹೆಸರಲ್ಲಿ ಇದ್ದ ಆಸ್ತಿ ವಾಪಸ್ ಕೇಳಿದ್ದ ಕಾರಣಕ್ಕೆ ಇಂತಹ ಭೀಕರ ಹತ್ಯೆ ನಡೆದಿದೆ ಅನ್ನುವ...
ಹುಬ್ಬಳ್ಳಿಯಲ್ಲಿ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಬರ್ಬರ ಹತ್ಯೆ..! 60 ಬಾರಿ ಚಾಕುವಿನಿಂದ ಚುಚ್ಚಿ ಕೊಂದ ಹಂತಕರು..!
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಬೀಕರ ಹತ್ಯೆಯಾಗಿದೆ. ಹುಬ್ಬಳ್ಳಿಯ ಖಾಸಗಿ ಹೊಟೇಲಿನಲ್ಲಿ ಭಕ್ತರ ಸೋಗಿನಲ್ಲಿ ಬಂದ ವ್ಯಕ್ತಿಯಿಂದ ಕೊಲೆ ನಡೆದಿದೆ. ಕಾಲಿಗೆ ಬೀಳುವ ನೆಪದಲ್ಲಿ ಬಂದ ವ್ಯಕ್ತಿ ಕಾಲಿಗೆ ಬೀಳುತ್ತಿದ್ದಂತೆ, ಮತ್ತೊಂದು ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕೇವಲ 40 ಸೆಕೆಂಡ್ ನಲ್ಲೆ 60 ಬಾರಿ ಎದೆಗೆ ಚೂರಿ ಇರಿತವಾಗಿದೆ. ಹೀಗಾಗಿ, ಸ್ಥಳದಲ್ಲೇ ಚಂದ್ರಶೇಖರ ಸ್ವಾಮೀಜಿ ಮೃತಪಟ್ಟಿದ್ದಾರೆ. ಕೊಲೆಗೆ ಕಾರಣವೇನು, ಕೊಲೆಗಾರರು ಯಾರು ಅನ್ನೋದು ಇನ್ನಷ್ಟೇ ತಿಳಿದು ಬರಬೇಕಿದೆ. ಸ್ಥಳಕ್ಕೆ ಪೊಲೀಸ್ ಕಮೀಷನರ್ ಲಾಬುರಾಮ್...
ಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂದ್ರು, ವಿ.ಎಸ್.ಪಾಟೀಲ್, ಮಾಜಿ ಶಾಸಕರ ಮನದಾಳದ ಮಾತು ಎಂಥಾದ್ದು ಗೊತ್ತಾ..?
ಮುಂಡಗೋಡ: ತಮ್ಮ ಸುಪುತ್ರನ ವಿರುದ್ಧ ಪ್ರಕಟಣೆ ಹೊರಡಿಸಿದ್ದು ನಾನೇ ಅಂತಾ ಮಾಜಿ ಶಾಸಕ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ತಮ್ಮ ಮನದಾಳದ ನೋವು ಹಂಚಿಕೊಂಡಿರೋ ಪಾಟೀಲರು, ಮಮ್ಮಲ ಮರುಗಿದ್ದಾರೆ. ಯಾವ ತಂದೆಗೂ ಈ ಪರಿಸ್ಥಿತಿ ಬರೋದು ಬೇಡ ಅಂತ ಅಳಲು ತೋಡಿಕೊಂಡಿದ್ದಾರೆ.
ತಮ್ಮ ಸುಪುತ್ರನ ವಿರುದ್ಧವೇ ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ರಾ ವಿ.ಎಸ್.ಪಾಟೀಲ್..?
ವಿ.ಎಸ್.ಪಾಟೀಲ್, ಈ ಹೆಸ್ರು ಕೇಳಿದ್ರೆ ಇಡೀ ಉತ್ತರ ಕನ್ನಡ ಜಿಲ್ಲೆಯಲ್ಲಿ, ಅದ್ರಲ್ಲೂ ಯಲ್ಲಾಪುರ ಕ್ಷೇತ್ರದಲ್ಲಿ ಅದೇನೋ ಒಂದು ಅಭಿಮಾನ. ಅದೇನೋ ಒಂದು ಪ್ರೀತಿ. ಅವರ ಅಪ್ಪಟ ಜವಾರಿ ಭಾಷೆಯ ಮಾತುಗಳು, ನೇರ ನುಡಿಗಳು, ನಿಷ್ಕಲ್ಮಶ ಮನಸ್ಸು ಹೀಗೆ ಅವ್ರನ್ನ ನಾನು ಇವತ್ತಿಗೂ ಒಬ್ಬ ರಾಜಕಾರಣಿ ಅಂತಾ ನೋಡಿಯೇ ಇಲ್ಲ. ಅವ್ರು ನಮ್ಮ ಮಾರ್ಗದರ್ಶಿ ಸ್ಥಾನದಲ್ಲಿ ಯಾವಾಗ್ಲೂ ಇರ್ತಾರೆ. ಹೀಗಿರೋ ಅವ್ರಿಗೆ ಇಂತಹದ್ದೊಂದು ಪರಿಸ್ಥಿತಿ ಬಂದಿದೆಯಾ..? ಆ ಮಟ್ಟಿಗಿನ ಅನಿವಾರ್ಯತೆ ಎದುರಾಗಿದೆಯಾ..? ನಿಜಕ್ಕೂ ವಿ.ಎಸ್.ಪಾಟೀಲರ ಮನಸ್ಸು ಈ ಮಟ್ಟಿಗೆ...
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...
ಸಿಡ್ಲಗುಂಡಿ ಬಳಿ ಲಾರಿ, ಬೊಲೆರೊ ಮದ್ಯೆ ಮುಖಾಮುಕಿ ಡಿಕ್ಕಿ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ..!
ಮುಂಡಗೋಡ:ತಾಲೂಕಿನ ಯಲ್ಲಾಪುರ ರಸ್ತೆಯಲ್ಲಿ ಅಪಘಾತವಾಗಿದೆ. ಅಶೋಕ ಲೈಲ್ಯಾಂಡ್ ಹಾಗೂ ಬುಲೆರೊ ವಾಹನದ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಿಡ್ಲಗುಂಡಿ, ಮೈನಳ್ಳಿ ಸಮೀಪದ ಕಿರು ಸೇತುವೆ ಬಳಿ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ, ಡಿಕ್ಕಿಯ ರಭಸಕ್ಕೆ ಅಶೋಕ ಲೈಲಾಂಡ್ ಲಾರಿ ಉರುಳಿ ಬಿದ್ದಿದೆ. ಇಷ್ಟಾದ್ರೂ, ಅದೃಷ್ವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಬೊಲೆರೋ ವಾಹನದಲ್ಲಿ ಸಾಕಷ್ಟು ಜನ ಪ್ರಯಾಣಿಕರಿದ್ರು. ಆದ್ರೆ ಯಾರಿಗೂ ತೊಂದರೆಯಾಗಿಲ್ಲ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ...









