ಮುಂಡಗೋಡ: ತಾಲೂಕಿನ ಚೌಡಳ್ಳಿ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತೀ ವರ್ಷದಂತೆ ಈ ವರ್ಷವೂ ಮೈಲಾರಲಿಂಗೇಶ್ವರ ಕಾರಣೀಕ ನುಡಿ ಹೊರಬಿದ್ದಿದೆ. ವೃತಾಧಾರಿ ಜಗಧೀಶ್ ಮಡ್ಲಿ ಬಿಲ್ಲನ್ನೇರಿ, ಆಕಾಶದತ್ತ ಶೂನ್ಯ ದೃಷ್ಟಿಸುತ್ತ ಮತ್ತೆ ಕಾರಣೀಕ ನುಡಿದಿದ್ದಾರೆ. ತಾತ್ಪರ್ಯವೇನು..? “ಮಳೆ ಬಂದು ಭೂಮಿತಾಯಿ ಉಡಿ ತುಂಬಿತಲೇ ಪರಾಕ್” ಪ್ರಸಕ್ತ ವರ್ಷದ ಚೌಡಳ್ಳಿ ಮೈಲಾರಲಿಂಗನ ಕಾರಣೀಕವಿದು. ಅಂದಹಾಗೆ, ಪ್ರಸಕ್ತ ವರ್ಷದ ಕಾರಣೀಕದ ತಾತ್ಪರ್ಯ ಬಹುತೇಕ ರೈತರ ಕೃಷಿಗೆ ಸಂಬಂಧಿಸಿದಂತೆ ಹೊರಬಿದ್ದಿದೆ. ಮಳೆ, ಬೆಳೆಯ ಭವಿಷ್ಯ ನುಡಿಯಲಾಗಿದೆ. ಕಾರಣೀಕ ನುಡಿಯ...
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Category: BIG BREAKING
ವಿದ್ಯಾರ್ಥಿಗಳ ಮೇಲೆ ಬಿದ್ದ ಶಾಲಾ ಕೊಠಡಿ ಸ್ಲಾಬ್, ಐವರು ವಿದ್ಯಾರ್ಥಿಗಳಿಗೆ ಗಾಯ
ಅಂಕೋಲಾ: ನಿರ್ಮಲಾ ಕಾನ್ವೆಂಟ್ ಶಾಲೆಯ ತರಗತಿ ಕೊಠಡಿಯಲ್ಲಿ ವಿದ್ಯಾರ್ಥಿಗಳು ಕುಳಿತಿದ್ದ ವೇಳೆ ಸ್ಲಾಬ್ ನ ಸಿಮೆಂಟ್ ಕುಸಿದು ಮಕ್ಕಳು ಗಾಯಗೊಂಡ ಘಟನೆ ಅಂಕೋಲಾದಲ್ಲಿ ನಡೆದಿದೆ. ಗಾಯಗೊಂಡ ಮಕ್ಕಳನ್ನು ತಾಲೂಕಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ನಾಲ್ಕನೇ ತರಗತಿಯ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಮಕ್ಕಳ ಊಟದ ಸಮಯದಲ್ಲಿ ಸ್ಲಾಬ್ ನಿಂದ ಸಿಮೆಂಟ್ ತುಂಡುಗಳು ಒಂದೇ ಸಮನೆ ಕುಸಿದು, ಅಡಿಯಲ್ಲಿ ಕುಳಿತಿದ್ದ ಮಕ್ಕಳ ಮೈಮೇಲೆ ಬಿದ್ದಿವೆ. ಹೀಗಾಗಿ, ನಾಲ್ಕನೇ ತರಗತಿಯ ಮಕ್ಕಳಿಗೆ ಗಾಯವಾಗಿದೆ. ಅಲ್ಲದೇ ಮಕ್ಕಳು ಗಾಬರಿಗೊಂಡಿವೆ. ಘಟನಾ ಸ್ಥಳಕ್ಕೆ ಶಿಕ್ಷಣ...
ವಡಗಟ್ಟಾ ಚೆಕ್ ಪೊಸ್ಟ್ ನಲ್ಲಿ ಎತ್ತುವಳಿ ದಂಧೆ..? ಅರಣ್ಯ ಸಿಬ್ಬಂದಿಗಳೇ ಇಲ್ಲಿ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ: ತಾಲೂಕಿನ ಗಡಿಭಾಗದ ವಡಗಟ್ಟಾ ಚೆಕ್ ಪೊಸ್ಟ್ ಅಂದ್ರೆ ಅರಣ್ಯ ಉತ್ಪನ್ನ ತನಿಖಾ ಠಾಣೆ ಅನ್ನೋದು ನಾಮಕೆವಾಸ್ತೆ ಅನ್ನುವಂತಾಗಿದೆ. ಉತ್ತರ ಕನ್ನಡದ ಅದ್ರಲ್ಲೂ ಮುಂಡಗೋಡ ತಾಲೂಕಿನ ಅಮೂಲ್ಯ ಅರಣ್ಯ ಸಂಪತ್ತಿನ ರಕ್ಷಣೆಗಾಗಿ ಪ್ರತಿಷ್ಟಾಪಿಸಲ್ಪಟ್ಟಿರೋ ವಡಗಟ್ಟಾ ಅರಣ್ಯ ಉತ್ಪನ್ನಗಳ ತನಿಖಾ ಠಾಣೆ ಚೆಕ್ ಪೊಸ್ಟ್ ನಲ್ಲಿ ಕೆಲವು ಅರಣ್ಯ ಇಲಾಖೆ ಸಿಬ್ಬಂದಿಗಳೇ ಎತ್ತುವಳಿಗೆ ನಿಂತಿದ್ದಾರಾ..? ಈ ದೃಷ್ಯ ನೋಡಿದ್ರೆ ಹಾಗೆ ಅನ್ನಿಸತ್ತೆ. ದೃಷ್ಯ ನಂಬರ್ 1. ದಂಧೆ ಮಾಡಿಕೊಂಡ್ರಾ..? ಇದು ವಡಗಟ್ಟಾ ಅರಣ್ಯ ಚೆಕ್ಪೋಸ್ಟ್ ನಲ್ಲಿ ನಿತ್ಯವೂ ನಡೆಯುವ...
ಹಳ್ಳಿ ಹಳ್ಳಿಗಳಲ್ಲೂ ಅಕ್ರಮವಾಗಿ ಮದ್ಯ ಮಾರಾಟ, ಕಾತೂರಿನಲ್ಲಿ ಸಿಡಿದೆದ್ದ ಮಹಿಳೆಯರು, ಅಬಕಾರಿಗಳೇ ಎಲ್ಲಿದ್ದಿರಿ..?
ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಹಿಳೆಯರು ಸಿಡಿದೆದ್ದಿದ್ದಾರೆ. ತಾಲೂಕಿನಲ್ಲಿ ಅಕ್ರಮವಾಗಿ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರೋ ದಂಧೆಗೆ ಕಡಿವಾಣ ಹಾಕಿ ನಮ್ಮನ್ನ ರಕ್ಷಿಸಿ ಅಂತಾ ಅಧಿಕಾರಿಗಳಿಗೆ, ಸರ್ಕಾರಕ್ಕೆ ಹಿಡಿಶಾಪ ಹಾಕ್ತಿದಾರೆ. ಕಿರಾಣಿ ಅಂಗಡಿಯಲ್ಲೂ ಮದ್ಯ..? ನಿಜ, ಮುಂಡಗೋಡ ತಾಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅದೇಷ್ಟರ ಮಟ್ಟಿಗೆ ತನ್ನ ಕಬಂದಬಾಹು ಚಾಚಿಕೊಂಡಿದೆ ಅಂದ್ರೆ, ತಾಲೂಕಿನ ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲೂ ಮದ್ಯ ಸಿಗತ್ತೆ. ಅಧಿಕೃತವಾಗಿ ಮಾರಾಟ ಮಾಡೋ ಕೆಲವೇ ಕೆಲವು ಅಂಗಡಿಗಳು ತಮ್ಮ ವೈನ್ ಶಾಪ್ ಗಳಲ್ಲಿ ಕುಳಿತು ಅಧಿಕೃತವಾಗಿ...
ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್...
ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?
ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ....
ಮುಂಡಗೋಡಿನ ಅಮ್ಮಾಜಿ ಕೆರೆ ಮೇಲೆ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿರೂಪಾಕ್ಷಯ್ಯ ಜಂಬಯ್ಯನವರ್ (45) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ತಕ್ಷಣವೇ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡಿನ ನ್ಯಾಸರ್ಗಿ ಬಳಿ ಭೀಕರ ಅಪಘಾತ, ಮರಕ್ಕೆ ಡಿಕ್ಕಿ ಹೊಡೆದ ಕಾರು, ಓರ್ವ ಗಂಭೀರ..!!
ಮುಂಡಗೋಡ; ತಾಲೂಕಿನ ನ್ಯಾಸರ್ಗಿ ಬಳಿ ಭೀಕರ ಅಪಘಾತವಾಗಿದೆ. ವೇಗವಾಗಿ ಬಂದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ನ್ಯಾಸರ್ಗಿಯ ಅನ್ವರ್ ಷಹಜಹಾನ್ ದೊಡ್ಮನಿ(26) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ನ್ಯಾಸರ್ಗಿಯಿಂದ ಮುಂಡಗೋಡಿಗೆ ಕಾರಲ್ಲಿ ಬರುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮುಂಡಗೋಡಿನ 108 ಅಂಬ್ಯಲೆನ್ಸ್ ಗೆ ಕರೆ ಮಾಡಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುವಿನ ಕಾಲಿಗೆ ಭಾರೀ ಪೆಟ್ಟು ಬಿದ್ದಿದ್ದು ತಾಲೂಕಾಸ್ಪತ್ರೆಯಲ್ಲಿ ಪ್ರಥಮ...
ಮುಂಡಗೋಡಿನಲ್ಲಿ ಮೊಬೈಲ್ ಎಗರಿಸಿದ್ದವನಿಗೆ ಬಿತ್ತು ಬಿಸಿ ಬಿಸಿ ಗೂಸಾ..!
ಮುಂಡಗೋಡ; ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಪಟ್ಟಣದ ಮೊಬೈಲ್ ಶಾಪ್ ಒಂದರಲ್ಲಿ ಮೊಬೈಲ್ ಖರೀಧಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿ ಮೊಬೈಲ್ ಎಗರಿಸಿಕೊಂಡು ಹೋಗಿದ್ದಾನೆ. ನಂತರ ಮೊಬೈಲ್ ಕಳೆದುಕೊಂಡ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗಾಗಿ ತಡಕಾಡಿದ್ದಾರೆ. ನಂತ್ರ ಶಿವಾಜಿ ಸರ್ಕಲ್ ನಲ್ಲಿ ಅಚಾನಕ್ಕಾಗಿ ಮೊಬೈಲ್ ಕಳ್ಳ ತಗಲಾಕ್ಕೊಂಡಿದ್ದಾನೆ. ಹೀಗಾಗಿ, ಮೊಬೈಲ್ ಕಳೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ನಂತರ ಪೊಲೀಸ್ ಠಾಣೆಗೆ ಮೊಬೈಲ್ ಕಳ್ಳನನ್ನು ಕರೆದುಕೊಂಡು ಹೋಗಿದ್ದಾರೆ...
ಮುಂಡಗೋಡಿನ ಕೊಪ್ಪ ಬಳಿ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಕೊಪ್ಪ ಬಳಿ ಬೀಕರ ಅಪಘಾತ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸ್ಕಿಡ್ ಆಗಿ ಲಾರಿಯಡಿ ಬಿದ್ದು ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ನಂದಿಕಟ್ಟಾ ಗ್ರಾಮದ ಷರೀಫ್ ಎಂಬುವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಇನ್ನು ಮತ್ತೋರ್ವ ಸವಾರ ವಿಶ್ವನಾಥ್ ಸವಣೂರ್ ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾನೆ. ಇಬ್ಬರೂ ಯುವಕರು ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಹೋಗುವ ವೇಳೆ, ಮುಂಡಗೋಡ ಕಡೆಗೆ ಹೋಗುತ್ತಿದ್ದ ಲಾರಿ ಓವರ್ ಟೇಕ್ ಮಾಡಲು...