ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಪರಿಣಾಮ ಸಿದ್ದಾಪುರ ಪಟ್ಟಣದ ಬಳಿ ಚಲಿಸುತ್ತಿದ್ದ ಓಮಿನಿ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಸಿದ್ದಾಪುರ ಹೊರವಲಯದಲ್ಲಿ ಚಲಿಸುತ್ತಿದ್ದ ಓಮಿನಿ ವಾಹನದ ಮೇಲೆ ಮರ ಬಿದ್ದಿದೆ. ವಿದ್ಯುತ್ ಕಂಬ ಇರೋ ಕಾರಣಕ್ಕೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಓಮಿನಿ ವಾಹನ ನುಜ್ಜುಗುಜ್ಜಾಗಿದ್ದು, ಓಮಿನಿಯಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿದ್ದಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?
ಮುಂಡಗೋಡ; ತಾಲೂಕಿನಲ್ಲಿ ಈಗ ಬದಲಾವಣೆ ಗಾಳಿ ಬೀಸಿದೆ. ಬಹುತೇಕ ಕೋರ್ಟ್ ಆದೇಶದಂತೆ ಇನ್ನೇರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ನಡಿಯೋದು ಬಹುತೇಕ ಫಿಕ್ಸ್ ಆದಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡ ತಾಲೂಕಿನಲ್ಲಿ ಮೂರು ಇದ್ದ ಜಿಪಂ ಕ್ಷೇತ್ರಗಳನ್ನ ಮರು ವಿಂಗಡನೆ ಮಾಡಲಾಗಿದೆ. ಮತ್ತೊಂದು ಕ್ಷೇತ್ರವನ್ನು ಹುಟ್ಟು ಹಾಕುವ ಕಾರ್ಯ ಚಾಲ್ತಿ ಪಡೆದುಕೊಂಡಿದೆ. ಹಾಗಂತ, ಬಲ್ಲ ಮೂಲಗಳಿಂದ ಪಬ್ಲಿಕ್ ಫಸ್ಟ್ ಗೆ ಮಾಹಿತಿ ಸಿಕ್ಕಿದೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 16 ಗ್ರಾಮ ಪಂಚಾಯತಿಗಳಿವೆ. ಇದುವರೆಗೂ ಚಿಗಳ್ಳಿ, ಪಾಳಾ ಹಾಗೂ ಇಂದೂರು,...
ಶಂಕರ್ ಗೌಡಿ ಮುಂಡಗೋಡಿನ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ..!
ಮುಂಡಗೋಡಿಗೆ ನೂತನ ತಹಶೀಲ್ದಾರ್ ಆಗಿ ಶಂಕರ ಗೌಡಿ ವರ್ಗಾವಣೆಯಾಗಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲೆ ಬೀಳಗಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಂಕರ್ ಗೌಡಿಯವರನ್ನು ಮುಂಡಗೋಡಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶ್ರೀಧರ್ ಮುಂದಲಮನಿಯವರನ್ನು ಶಿರಸಿಗೆ ವರ್ಗಾವಣೆಗೊಳಿಸಿದ್ದರಿಂದ ಮುಂಡಗೋಡ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ನಿನ್ನೆಯಷ್ಟೇ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಬಿಡುಗಡೆಗೊಂಡು ಶಿರಸಿಗೆ ವರ್ಗಾವಣೆಯಾಗಿದ್ದರು. ಹೀಗಾಗಿ, ಇಂದು ನೂತನ ತಹಶಿಲ್ದಾರ್ ಶಂಕರ್ ಗೌಡಿಯವರನ್ನು ಸರ್ಕಾರ ಮುಂಡಗೋಡಿಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಇಂದು ಬಿಡುಗಡೆ, ಡೀಸಿ ಆದೇಶ..!
ಮುಂಡಗೋಡ: ಶಿರಸಿಗೆ ವರ್ಗಾವಣೆಗೊಂಡಿರೋ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡದಿಂದ ಬಿಡುಗಡೆಗೊಂಡಿದ್ದಾರೆ. ಬಿಡುಗಡೆಗೊಳಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲಿನ್ ಆದೇಶ ಹೊರಡಿಸಿದ್ದಾರೆ. ಇವತ್ತೇ ಮುಂಡಗೋಡದಿಂದ ಶಿರಸಿಗೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಿಡುಗಡೆಗೊಂಡಿದ್ದು, ಮುಂದಿನ ತಹಶೀಲ್ದಾರ್ ಹುದ್ದೆ ಭರ್ತಿ ಆಗುವವರೆಗೂ ಮುಂಡಗೋಡಿಗೆ ಹೆಚ್ಚುವರಿ ಪ್ರಭಾರಿಯಾಗಿ ಶ್ರೀಧರ್ ಮುಂದಲಮನಿಯವರೇ ಕಾರ್ಯ ನಿರ್ವಹಿಸಲಿದ್ದಾರೆ ಅಂತಾ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?
ಮುಂಡಗೋಡ: ತಾಲೂಕಿನಲ್ಲಿ ಈಗ ಎಲ್ಲೆಂದರಲ್ಲಿ ಸರಾಯಿ ಮಾರಾಟದ ಅಕ್ರಮ ಅಡ್ಡೆಗಳು ತಲೆ ಎತ್ತಿವೆ. ಅಧಿಕೃತ ಮದ್ಯದಂಗಡಿಗಳು ಮುಂಡಗೋಡಿಗಷ್ಟೇ ಸೀಮಿತವಾಗಿವೆ. ಆದ್ರೆ ಅದ್ಯಾರ ಕೃಪಾಕಟಾಕ್ಷವೋ ಗೊತ್ತಿಲ್ಲ, ಇಡೀ ತಾಲೂಕಿನ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ದಂಧೆಕೋರರನ್ನು ಹುಟ್ಟು ಹಾಕಲಾಗಿದೆ. ಹೀಗಾಗಿ, ತಾಲೂಕಿನ ಮಹಿಳೆಯರು, ಪ್ರಜ್ಞಾವಂತರು ಸಂಬಂಧಪಟ್ಟವರಿಗೆ ಹಿಡಿಶಾಪ ಹಾಕ್ತಿದಾರೆ. ಅದ್ರಲ್ಲೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಹಾಮಂಗಳಾರತಿ ಮಾಡ್ತಿದಾರೆ. ಅಬಕಾರಿಗಳದ್ದೇ ಆಟ..? ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಈಗ ಕೆಲವು ಕಿರಾಣಿ ಅಂಗಡಿಗಳಲ್ಲೂ ಮದ್ಯ ಹೇರಳವಾಗಿ ಸಿಗುತ್ತಿದೆ. ಇನ್ನು ತಾಲೂಕಿನ ಟಿಬೇಟಿಯನ್...
ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ, ವಿಜಯಪುರದ ಹೊರವಲಯದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಡೀಸೆಲ್ ರಸ್ತೆಗೆ ಹರಿದಿದೆ. ಹೀಗಾಗಿ, ಟ್ಯಾಂಕರ್ ನಿಂದ ಸೋರುತ್ತಿದ್ದ ಡಿಸೈಲ್ ತುಂಬಿಕೊಳ್ಳಲು ಜನರು ಮುಗಿ ಬಿದ್ದಿದ್ದರು. ವಿಜಯಪುರ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಹೈಪರ್ ಮಾರ್ಟ್ ಬಳಿ ಡೀಸೆಲ್ ಟ್ಯಾಂಕರ್ ಉರುಳಿಬಿದ್ದಿದ್ದು, ವಾಟರ್ ಬಾಟಲ್ ಹಾಗೂ ಇತರ ವಸ್ತುಗಳಲ್ಲಿ ಜನರು, ಡೀಸೆಲ್ ತುಂಬಿಕೊಂಡು ಹೋಗ್ತಿದಾರೆ. ಟ್ಯಾಂಕರ್ ನಿಂದ ಅಪಾರ ಪ್ರಮಾಣದ ಡಿಸೈಲ್...
ವರೂರು ಬಳಿ ಸರಣಿ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ..!
ಹುಬ್ಬಳ್ಳಿ ಸಮೀಪದ ವರೂರಿನ ವಿಆರ್ ಎಲ್ ಬಳಿ ರಾ.ಹೆದ್ದಾರಿ 4 ರಲ್ಲಿ, ಭೀಕರ ಸರಣಿ ಅಪಘಾತವಾಗಿದೆ. ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ವರೂರಿನ VRL ಬಳಿ, ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ಕಂಡು ಮೃತ ವ್ಯಕ್ತಿಯನ್ನು ನೋಡಲು ಬಂದ ಐವರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಹೀಗಾಗಿ ಐವರಿಗೆ ಗಂಭೀರ ಗಾಯವಾಗಿದೆ. ಇದ್ರಲ್ಲಿ ಗಾಯಾಳುವನ್ನು ಸಾಗಿಸಲು ಬಂದಿದ್ದ ಅಂಬ್ಯುಲೆನ್ಸ್ ಸಿಬ್ಬಂದಿಗೂ ಗಾಯವಾಗಿದೆ....
ಕೆಂದಲಗೇರಿಯಲ್ಲಿ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ..!
ಮುಂಡಗೋಡ: ತಾಲೂಕಿನ ಕೆಂದಲಗೇರಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಇಸ್ಪೀಟು ಆಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು, ಐವರ ಮೇಲೆ ಕೇಸು ದಾಖಲಿಸಲಾಗಿದೆ. ನಾಗರಾಜ ಹನುಮಂತ ಚವ್ಹಾಣ(45), ಆಶೋಕ ನಿಂಗಪ್ಪ ಮಂಜಣ್ಣನವರ್(28), ಫಕ್ಕೀರಾ ಸಾಕಪ್ಪ ಕಟ್ಟಿಮನಿ(30), ರುದ್ರಪ್ಪ ತಂದೆ ಗುಳುವಪ್ಪ ಸುಣಗಾರ(38) ಹಾಗೂ ಅಲಿ ಹುಸನ್ ಸಾಬ ಮುಜಾವರ್(35) ಎಂಬುವವರ ಮೇಲೆ ಕೇಸು ದಾಖಲಿಸಲಾಗಿದೆ. ಇದ್ರಲ್ಲಿ ಮೂವರು ಆರೋಪಿಗಳು ಪೊಲೀಸರ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ, ಇನ್ನುಳಿದವರು ಪರಾರಿಯಾಗಿದ್ದಾರೆ.
ನ್ಯಾಸರ್ಗಿಯಲ್ಲಿ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ಓಸಿ ಅಡ್ಡೆಯ ಮೇಲೆ ಪೊಲೀಸರ ದಾಳಿ, ಓರ್ವ ವಶಕ್ಕೆ..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ದಾಳಿ ಮಾಡಿದೆ. ಮಟ್ಕಾ ದಂಧೆ ನಡೆಸುತ್ತಿದ್ದ ಓರ್ವನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ ಪೊಲೀಸ್ರು. ನ್ಯಾಸರ್ಗಿಯ ಪ್ರಕಾಶ ಉದಯ ಹರಿಜನ(32) ಎಂಬುವವನ ಮೇಲೆ ಕೇಸು ದಾಖಲಿಸಲಾಗಿದೆ. ಈತ ನ್ಯಾಸರ್ಗಿ ಗ್ರಾಮದ ಕಲಿಯಮ್ಮಾ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಓಸಿ ಬರೆಯುತ್ತಿದ್ದ, ಅದೇ ವೇಳೆ ದಾಳಿ ಮಾಡಿರೋ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ, ಮಟ್ಕಾ ನಡೆಸುತ್ತಿದ್ದವರ ಛಳಿ ಬಿಡಿಸಿದೆ. ದಾಳಿ ವೇಳೆ...
ಪತಿಯ ಕಿರುಕುಳ ಆರೋಪ, ಬಾಚಣಕಿಯಲ್ಲಿ 6 ತಿಂಗಳ ಗರ್ಭಿಣಿ ನೇಣಿಗೆ ಶರಣು..!
ಮುಂಡಗೋಡ: ತಾಲೂಕಿನ ಬಾಚಣಕಿಯಲ್ಲಿ ಆರು ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರೋ ಘಟನೆ ನಡೆದಿದೆ. ಚೇತನಾ ಗುತ್ತೆಪ್ಪ ಸಣ್ಣಮನಿ(32) ನೇಣಿಗೆ ಶರಣಾದ ಗರ್ಭಿಣಿಯಾಗಿದ್ದು ಪತಿಯ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರೋ ಆರೋಪ ಕೇಳಿ ಬಂದಿದೆ. ಪತಿ ಗುತ್ತೆಪ್ಪ ಸಣ್ಣಮನಿ ಎಂಬುವವನ ವಿರುದ್ಧ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2 ಮಕ್ಕಳ ತಾಯಿಯಾಗಿದ್ದ ಚೇತನಾ, ಈಗ ಮತ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಆದ್ರೆ ಪತಿ ಗುತ್ತೆಪ್ಪ ಮಾನಸಿಕ ಹಾಗೂ ದೈಹಿಕ ಕಿರುಕುಳನೀಡುತ್ತಿದ್ದ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಅಂತಾ ಆರೋಪಿಸಲಾಗಿದ್ದು,...









