ಬೆಳಗಾವಿ: ತೀವ್ರ ವಿರೋಧದ ನಡುವೆಯೂ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದೆ. ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಮಾಡುವಲ್ಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ.
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Category: BIG BREAKING
ಆಕಾಶದಲ್ಲಿ ಸಾಲು ಸಾಲು ಚುಕ್ಕಿಗಳು, ಇದೇನಿದು ನಭದಲ್ಲಿ ಬೆಳಕಿನ ಚಿತ್ತಾರ..? ಅಸಲು ಏನ್ ಗೊತ್ತಾ..?
ಮುಂಡಗೋಡ: ನಭದಲ್ಲಿ ಕಾಣಿಸಿಕೊಂಡ ಸಾಲುಸಾಲು ತಾರೆಗಳು.. ಸರಳರೇಖೆಯಲ್ಲಿ ಹಾದುಹೋದ ನೂರಾರು ಬೆಳಕಿನ ಚುಕ್ಕಿಗಳು.. ಆಗಸದಲ್ಲಿ ನಡೆದ ಈ ವಿಸ್ಮಯವನ್ನು ಕಂಡು ಬೆರಗಾಗಿರುವ ತಾಲೂಕಿನ ಜನತೆ.. ಹೌದು, ಮುಂಡಗೋಡ ತಾಲೂಕಿನಲ್ಲಿ ರಾತ್ರಿ ಆಕಾಶದಲ್ಲಿ ವಿಸ್ಮಯ ನಡೆದಿದೆ. ಮುಂಡಗೋಡ ತಾಲೂಕಿನಾದ್ಯಂತ ಆಗಸದಲ್ಲಿ ಚುಕ್ಕಿಗಳ ಸಾಲು ಸಾಲು ಚಿತ್ತಾರಗಳು, ಬೆಳಕಿನ ಆಟಗಳು ನಡೆದಿದೆ. ಆದ್ರೆ ಇದು ಕೃತಕ ಉಪಗ್ರಹಗಳ ಚಲನೆ ಅಂತಾ ಖಗೋಳತಜ್ಞರು ಸ್ಪಷ್ಟಪಡಿಸಿದ್ದಾರೆ. ಅಸಲು ಏನ್ ಗೊತ್ತಾ..? ನಿಜ ಅಂದ್ರೆ, ಹಾಗೆ ನಮಗೇಲ್ಲ ಕಂಡ ಚುಕ್ಕಿಗಳ ಸಾಲುಗಳು ಎಲಾನ್ ಮಸ್ಕ್...
ಎಂಇಎಸ್ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ಸುವರ್ಣ ಸೌಧ ಮುತ್ತಿಗೆ ಯತ್ನ, ತಡೆದ ಪೊಲೀಸರು..!
ಬೆಳಗಾವಿ: ಇಂದು ಕನ್ನಡಪರ ಸಂಘಟನೆಗಳ ಬೃಹತ್ ಹೋರಾಟ ಹಿನ್ನೆಲೆಯಲ್ಲಿ, ನಾಡದ್ರೊಹಿ ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಕನ್ನಡಪರ ಹೋರಾಟಗಾರರನ್ನು ತಡೆಯಲಾಗಿದೆ. ಹಿರೇಬಾಗೇವಾಡಿ ಟೊಲ್ ಗೇಟ್ ಬಳಿ ಹೋರಾಟಗಾರರನ್ನ ತಡೆದಿರೊ ಪೊಲೀಸರು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕನ್ನಡಪರ ಹೋರಾಟಗಾರ ವಶಕ್ಕೆ ಪಡೆದಿದ್ದಾರೆ. ಪ್ರವಿಣ ಶೆಟ್ಟಿ ಬಣದ ಕಾರ್ಯಕರ್ತರನ್ನು ನೂರಾರು ಕಾರ್ಯಕರ್ತರನ್ನು ವಶಕ್ಕೆ ವಶಕ್ಕೆ ಪಡೆಯಲಾಗಿದೆ.. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.
ಕಲಘಟಗಿ ತಂಬೂರು ಕಾಡಿನಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾಡಾನೆ ದಾಳಿ, ಹಲವರಿಗೆ ಗಾಯ..!
ಕಲಘಟಗಿ: ತಾಲ್ಲೂಕಿನ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾರ್ಯಾಚರಣೆ ವೇಳೆ ಆನೆಗಳು ದಿಡೀರನೆ ದಾಳಿ ಮಾಡಿದ ಘಟನೆ ನಡೆದಿದೆ. ಹಲವಾರು ದಿನಗಳಿಂದ 8 ಆನೆಗಳ ಹಿಂಡು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆಲದಕಟ್ಟಿ, ತಂಬೂರ, ಸಂಗಮೇಶ್ವರ ಡಿಂಬವಳ್ಳಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಬಿಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಅಧಿಕಾರಿಗಳು ನಿರಂತರ ಕಾಡಿಗೆ ಅಟ್ಟಲು ಕಾರ್ಯಚರಣೆ ಮಾಡುತ್ತಿದ್ದ ವೇಳೆ ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ. ಬಮ್ಮಿಗಟ್ಟಿ ವಲಯದ ಅಧಿಕಾರಿ ಉಮೇಶ್ ಕಡಿ, ಮೌನೇಶ ಲಿಂಗನಶೆಟ್ಟಿಕೊಪ್ಪ,...
ಮುಂಡಗೋಡಿನಲ್ಲಿ ಮತ್ತೆ ಮಟ್ಕಾ ಶುರು..? ಬರಗೆಟ್ಟವನ ಮಂತ್ಲಿ ಆಸೆಗೆ ದಕ್ಕಿದ್ದು ಎಷ್ಟು ಲಕ್ಷ..?
ಮುಂಡಗೋಡ ತಾಲೂಕಿನ ಮಟ್ಕಾ ಪ್ರಿಯರಿಗೆ ಸಂತಸದ ಸುದ್ದಿಯಿದು. ಇನ್ನೇನು ಇವತ್ತಿನಿಂದ ಅಂದ್ರೆ ಸೋಮವಾರದಿಂದ ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಭರ್ಜರಿ ಶುಭಾರಂಭ ಮಾಡ್ತಿದೆಯಂತೆ. ಅಷ್ಟಕ್ಕೂ ಮಟ್ಕಾ ದಂಧೆಯ ಮಂತ್ಲಿ ಹಣದ ಕೈ ಬಿಸಿ ಇಲ್ಲದೇ ಈ ಛಳಿಗಾಲ ಸಾಗೋಕೆ ಸಾಧ್ಯವೇ ಇಲ್ಲ ಅಂತಾ ಅವನೊಬ್ಬ ಚಕ್ಕಂಬಕ್ಕಳ ಹಾಕ್ಕೊಂಡು ಡೀಲಿಗೆ ಕುಳಿತಿದ್ದನಂತೆ. ಅವನ ಪರಿಶ್ರಮದ ಫಲವಾಗೇ ಈಗ ಮತ್ತೆ ಮಟ್ಕಾ ಅನ್ನೋದು ಮನೆ ಮಾತಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆಯಂತೆ. ಹೀಗೆ ಇತ್ಯಾದಿ ಇತ್ಯಾದಿಯಾಗಿ ಇಡೀ ಮುಂಡಗೋಡ ತಾಲೂಕಿನಲ್ಲಿ ಗುಲ್ಲೆದ್ದಿದೆ. ಗುಲ್ಲು...
ಮತ್ತೊಂದು ಭೀಕರ ಅಪಘಾತ ಸ್ಥಳದಲ್ಲೇ ನಾಲ್ವರ ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ..!
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭೀಕರ ಸರಣಿ ಅಪಘಾತಕ್ಕೆ ಸ್ಥಳದಲ್ಲೇ ನಾಲ್ವರ ದುರ್ಮರಣವಾಗಿದೆ. 10 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಘಟನೆ ನಡೆದಿದ್ದು. ಈರುಳ್ಳಿ ತುಂಬಿದ ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿದೆ. ಬಳಿಕ ಚಲಿಸುತ್ತಿದ್ದ ಕಾರಿಗೆ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿದೆ. ಇನ್ನು, ಅಪಘಾತದ ರಭಸಕ್ಕೆ 2 ಲಾರಿಗಳು ಪಲ್ಟಿ ಹೊಡೆದಿವೆ. ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಈರುಳ್ಳಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಮೃತ ನಾಲ್ವರ ಗುರುತು...
ಮುಂಡಗೋಡ ತಾಲೂಕಿನಲ್ಲಿ ಶೇ. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!
ಮುಂಡಗೋಡ: ತಾಲೂಕಿನಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಯ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಶೇ. 99.53 ರಷ್ಟು ಮತದಾನವಾಗಿದೆ. ಗುಂಜಾವತಿ ಗ್ರಾಮ ಪಂಚಾಯತಿಯ ಓರ್ವ ಮಹಿಳಾ ಸದಸ್ಯೆ ಮತದಾನ ಮಾಡಿಲ್ಲ. ಈ ಕಾರಣದಿಂದ ಶೇ.100 ರಷ್ಟು ಮತದಾನವಾಗಿಲ್ಲ. ಬೆಳಗಿನಿಂದಲೂ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಮತದಾರರು ಸಂಯಮದಿಂದಲೇ ಬಂದು ಮತದಾನ ಮಾಡಿದ್ರು. ಬಹುತೇಕ ಮದ್ಯಾಹ್ನದಷ್ಟೊತ್ತಿಗೆ ಮತದಾನ ಸಂಪೂರ್ಣತೆಯ ಮಟ್ಟ ತಲುಪಿತ್ತು. ಕೆಲವು ಕಡೆ ಮಾತ್ರ ಒಂದಿಷ್ಟು ತಡವಾಗಿ ಬಂದು ಮತದಾರರು ಮತದಾನ ಮಾಡಿದ್ರು. ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರುಗಳು...
ಕೊರೋನಾ ಹೆಚ್ಚಾದ್ರೆ ಶಾಲೆಗಳು ಬಂದ್: ಶಿಕ್ಷಣ ಸಚಿವ ಬಿ.ಸಿ.ನಾಗೇಶ್..!
ಬೆಂಗಳೂರು: ರಾಜ್ಯದಲ್ಲಿ ಒಮೈಕ್ರಾನ್ ವೈರಸ್ ಆತಂಕ ಹುಟ್ಟಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಒಮೈಕ್ರಾನ್ ವೈರಸ್ ಕರ್ನಾಟಕದಲ್ಲೇ ಪತ್ತೆಯಾಗಿದೆ. ಹೀಗಾಗಿ, ಒಮೈಕ್ರಾನ್ ರಾಜ್ಯಕ್ಕೆ ಕಾಲಿಟ್ಟ ನಂತರ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಒಲ್ಲದ ಮನಸ್ಸಿನಿಂದಲೇ ಕಳಿಸುತ್ತಿದ್ದಾರೆ. ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್..! ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆಗಳನ್ನು ಬಂದ್ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್...
ಹುನಗುಂದಕ್ಕೆ ಮತ್ತೆ ವಕ್ಕರಿಸಿದ ಕೊರೋನಾ, ಓರ್ವ ಮಹಿಳೆಗೆ ಸೋಂಕು ದೃಢ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಮತ್ತೆ ಕೊರೊನಾ ಎಂಟ್ರಿ ಕೊಟ್ಟಿದೆ. ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಯೊಬ್ಬಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಅಂತಾ ಗ್ರಾಮ ಪಂಚಾಯತಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಅಂತಾ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ಆ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ...
ಮುಂಡಗೋಡಿನಲ್ಲಿ ಟಿಬೇಟಿಗನ ಪರ್ಸು, ಮೊಬೈಲು ಕಿತ್ತು ಎಸ್ಕೇಪ್ ಆದ ಯುವಕ..! ಬೆನ್ನತ್ತಿ ಹಿಡಿದ ಜನ..!
ಮುಂಡಗೋಡ; ಪಟ್ಟಣದಲ್ಲಿ ಇಂದು ಯುವಕನೋರ್ವ ಟಿಬೇಟಿಯನ್ ವ್ಯಕ್ತಿಯ ಪರ್ಸ್ ಹಾಗೂ ಮೊಬೈಲ್ ಎಗರಿಸಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರ ಕೈಯಲ್ಲಿ ತಗಲಾಕ್ಕೊಂಡು ಪಜೀತಿ ಪಟ್ಟ ಘಟನೆ ನಡೆದಿದೆ. ಸೋಮವಾರ ಸಂತೆ ದಿನವಾದ ಕಾರಣ ಜನಜಂಗುಳಿ ಸೇರಿದ್ದು, ಇದೇ ವೇಳೆ ಪಟ್ಟಣದ ಅಕ್ಷಯ ಲಾಡ್ಜ್ ಬಳಿ, ಟಿಬೇಟಿಯನ್ ವ್ಯಕ್ತಿಯ ಪರ್ಸ್ ಮೇಲೆ ಕಣ್ಣಿಟ್ಟಿದ್ದ ಯುವಕ ಏಕಾಏಕಿ ಪರ್ಸ್ ಹಾಗೂ ಮೊಬೈಲ್ ಗೆ ಕೈ ಹಾಕಿ ಕಿತ್ತುಕೊಂಡಿದ್ದಾನೆ. ಹೀಗಾಗಿ, ತಕ್ಷಣವೇ ಎಚ್ಚೆತ್ತ ಟಿಬೇಟಿಗ ಚೀರಾಡಿದ್ದಾನೆ. ಹೀಗಾಗಿ, ಸಾರ್ವಜನಿಕರು ಪರ್ಸ್ ಕದ್ದೊಯ್ಯುತ್ತಿದ್ದ ಆರೋಪಿಯನ್ನು...




