Home BIG BREAKING

Category: BIG BREAKING

Post
ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!

ಉತ್ತರ ಕನ್ನಡಕ್ಕೆ ನೂತನ ಉಸ್ತುವಾರಿ ಸಚಿವರ ನೇಮಕ, ಹೆಬ್ಬಾರ್ ಸಾಹೇಬ್ರಿಗೆ ಹಾವೇರಿ ಹೊಣೆ..!!

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರ ಬದಲಾವಣೆಯಾಗಿದೆ. ಈ ಮೊದಲು ಉಸ್ತುವಾರಿಯಾಗಿದ್ದ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಗೆ ಕೋಕ್ ನೀಡಿ, ಕೋಟಾ ಶ್ರೀನಿವಾಸ್ ಪೂಜಾರಿಯವರನ್ನ ಉತ್ತರ ಕನ್ನಡಕ್ಕೆ ಉಸ್ತುವಾರಿ ಸಚಿವರನ್ನಾಗಿಸಿದ್ದಾರೆ. ಹಾಗೇ, ಶಿವರಾಮ್ ಹೆಬ್ಬಾರ್ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿದ್ದಾರೆ.

Post
ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?

ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?

ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ‌. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ...

Post
ವಿದ್ಯಾರ್ಥಿಗಳಿಗೂ ಕಾಡ್ತಿದೆ ಕೊರೋನಾ..!! ಮುಂಡಗೋಡ ತಾಲೂಕಿನಲ್ಲಿ ಇಂದು 53 ಪಾಸಿಟಿವ್, ವಿದ್ಯಾರ್ಥಿಗಳಲ್ಲೇ ಹೆಚ್ಚು ಸೋಂಕು..!

ವಿದ್ಯಾರ್ಥಿಗಳಿಗೂ ಕಾಡ್ತಿದೆ ಕೊರೋನಾ..!! ಮುಂಡಗೋಡ ತಾಲೂಕಿನಲ್ಲಿ ಇಂದು 53 ಪಾಸಿಟಿವ್, ವಿದ್ಯಾರ್ಥಿಗಳಲ್ಲೇ ಹೆಚ್ಚು ಸೋಂಕು..!

ಮುಂಡಗೋಡ: ತಾಲೂಕಿನಲ್ಲಿ ಮತ್ತೆ ಇಂದು ಕೊರೋನಾ ಮಹಾ ಸ್ಪೋಟಗೊಂಡಿದೆ. ತಾಲೂಕಿನಲ್ಲಿ ಇಂದು 53 ಜನರಿಗೆ ಸೋಂಕು ದೃಢಪಟ್ಟಿದೆ. ಈ ಬಾರಿ ಬಹುತೇಕ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಪ್ರಮಾಣ ಗಣನೀಯವಾಗಿ ಏರಿದೆ. ಅದ್ರಲ್ಲೂ ಲೊಯೊಲಾ ಶಿಕ್ಷಣ ಕೇಂದ್ರದ ಪ್ರೌಢಶಾಲೆ, ಕಾಲೇಜು ವಿಭಾಗದ ಬರೋಬ್ಬರಿ 16 ವಿದ್ಯಾರ್ಥಿಗಳಲ್ಲಿ ಸೋಂಕು ದೃಢ ಪಟ್ಟಿದೆ. ಯಾವ್ಯಾವ ಶಾಲೆ, ಎಷ್ಟು ವಿದ್ಯಾರ್ಥಿಗಳು? ತಾಲೂಕಿನ ಬಡ್ಡಿಗೇರಿ ಪ್ರಾಥಮಿಕ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ, ಮಳಗಿ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಐವರು, ಪಾಳಾ ಉರ್ದು ಶಾಲೆಯ...

Post
ಮುಂಡಗೋಡ ಲೊಯೋಲಾ ಬಳಿ  ಮಹಿಳೆಗೆ ವಾಹನ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು..!

ಮುಂಡಗೋಡ ಲೊಯೋಲಾ ಬಳಿ ಮಹಿಳೆಗೆ ವಾಹನ ಡಿಕ್ಕಿ, ಸ್ಥಳದಲ್ಲೇ ಮಹಿಳೆ ಸಾವು..!

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಶಾಲೆಯ ಹತ್ತಿರ ಭಾರೀ ದುರ್ಘಟನೆ ನಡೆದಿದೆ. ಪಾದಾಚಾರಿ ಮಹಿಳೆಯೋರ್ವಳಿಗೆ ಮಾರುತಿ ಇಕೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕರಗಿನಕೊಪ್ಪ ಗ್ರಾಮದ ಲೋಕವ್ವ ಧರ್ಮಣ್ಣ ಲಮಾಣಿ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆಯಾಗಿದ್ದಾಳೆ. ಶಿರಸಿ ಕಡೆಯಿಂದ ಬರುತ್ತಿದ್ದ ಮಾರುತಿ ಇಕೊ ವಾಹನ, ಮುಂಡಗೋಡ ಕಡೆಯಿಂದ ಕಾಲ್ನಡಿಗೆಯಲ್ಲೇ ಬರುತ್ತಿದ್ದ ಮಹಿಳೆಗೆ ಡಿಕ್ಕಿಯಾಗಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಫುಲ್ ಟ್ರಾಫಿಕ್ ಜಾಮ್..!...

Post
ಸನವಳ್ಳಿ ಜಲಾಶಯದ ಬಳಿ ಸ್ಕೂಟಿ ಅಪಘಾತ, ಸವಾರನಿಗೆ ಗಂಭೀರ ಗಾಯ..!

ಸನವಳ್ಳಿ ಜಲಾಶಯದ ಬಳಿ ಸ್ಕೂಟಿ ಅಪಘಾತ, ಸವಾರನಿಗೆ ಗಂಭೀರ ಗಾಯ..!

ಮುಂಡಗೋಡ: ತಾಲೂಕಿನ ಸನವಳ್ಳಿ ಜಲಾಶಯದ ಹತ್ತಿರ ಅಪಘಾತವಾಗಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ಅಬ್ದುಲ್ ಗಫಾರ್(26) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಸನವಳ್ಳಿ ಜಲಾಶಯದ ಹತ್ತಿರ ಸ್ಕೂಟಿ ಸ್ಕಿಡ್ ಆಗಿರೋ ರೀತಿಯಲ್ಲಿ, ಗಂಭೀರ ಗಾಯಗೊಂಡು ಬಿದ್ದಿದ್ದ ಯುವಕನನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ 108 ಅಂಬ್ಯಲೆನ್ಸ್ ಗೆ ಕರೆ ಮಾಡಿದ್ದಾರೆ. ಹೀಗಾಗಿ, ಮುಂಡಗೋಡ 108 ಅಂಬ್ಯುಲೆನ್ಸ್ ನ ಧನರಾಜ್ ಬಳೂರು ಸೇರಿದಂತೆ ಸಿಬ್ಬಂದಿಗಳು, ಗಾಯಾಳುಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ...

Post
ವರದಕ್ಷಿಣೆ ಕಿರುಕುಳ ಕೇಸ್; ಲಂಚ ಪಡೆದ ಇನ್ಸ್ ಪೆಕ್ಟರ್ ಸಸ್ಪೆಂಡ್..!

ವರದಕ್ಷಿಣೆ ಕಿರುಕುಳ ಕೇಸ್; ಲಂಚ ಪಡೆದ ಇನ್ಸ್ ಪೆಕ್ಟರ್ ಸಸ್ಪೆಂಡ್..!

ಬೆಂಗಳೂರು: ಲಂಚ ಪಡೆದ ಆರೋಪದಡಿ ಮಡಿವಾಳ ಠಾಣೆ ಇನ್ಸ್‌ಪೆಕ್ಟರ್ ಸುನೀಲ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ವರದಕ್ಷಿಣೆ ಕಿರುಕುಳ ಸಂಬಂಧ ಆರೋಪಿ ಅಜಯ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು. ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಅಜಯ್ ವಿರುದ್ಧ ವಾರೆಂಟ್ ಜಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮುಂಬೈಯಿಂದ ಆರೋಪಿ ಅಜಯ್‌ನನ್ನು ವಾರೆಂಟ್ ಮೇಲೆ ಕರೆತಂದಿದ್ದ ಪೊಲೀಸರು ಹಣ ಪಡೆದು ಬಿಟ್ಟು ಕಳಿಸಿದ್ದರು ಎನ್ನಲಾಗಿದೆ. ಆದರೆ, ಆರೋಪಿ ಪೊಲೀಸರಿಗೆ ಲಂಚದ ರೂಪದಲ್ಲಿ...

Post
ಮುಂಡಗೋಡಿನ ವ್ಯಕ್ತಿಯ ಅನುಮಾನಾಸ್ಪದ ಸಾವು, ಹಲವು ಶಂಕೆ..!

ಮುಂಡಗೋಡಿನ ವ್ಯಕ್ತಿಯ ಅನುಮಾನಾಸ್ಪದ ಸಾವು, ಹಲವು ಶಂಕೆ..!

ಮುಂಡಗೋಡ; ವ್ಯಕ್ತಿಯೊಬ್ಬ ಅನುಮಾನಾಸ್ಪದ ಸಾವು ಕಂಡಿದ್ದಾನೆ. ಮುಂಡಗೋಡ ನಿವಾಸಿ ಮೆಹೆಬೂಬ್ ಸಾಬ್ ಜಮಖಂಡಿ(45) ಸಾವು ಕಂಡಿದ್ದಾನೆ. ತಾಲೂಕಿನ ಸುಳ್ಳಳ್ಳಿಯ ಬ್ರಿಡ್ಜ್ ಬಳಿ ಘಟನೆ ನಡೆದಿದ್ದು, ಬೈಕ್ ಮೇಲಿಂದ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಕಂಡು ಬಂದಿದೆ. ಮುಂಡಗೋಡ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.  

Post
ಶಿರಸಿಯ ನಿಡಗೋಡ ಬಳಿ ಪೊಲೀಸ್ ಜೀಪ್ ಪಲ್ಟಿ, ಚಾಲಕ ಗಂಭೀರ, ಪಿಎಸ್ ಐ ಅಪಾಯದಿಂದ ಪಾರು..!

ಶಿರಸಿಯ ನಿಡಗೋಡ ಬಳಿ ಪೊಲೀಸ್ ಜೀಪ್ ಪಲ್ಟಿ, ಚಾಲಕ ಗಂಭೀರ, ಪಿಎಸ್ ಐ ಅಪಾಯದಿಂದ ಪಾರು..!

ಶಿರಸಿ: ನಿಡಗೋಡ ಬಳಿ ಸಿದ್ದಾಪುರ ಪೊಲೀಸ್ ಠಾಣೆಯ ಜೀಪ್ ಪಲ್ಟಿಯಾಗಿದೆ. ಪರಿಣಾಮ ಚಾಲಕನಿಗೆ ತೀವ್ರ ಗಾಯವಾಗಿದ್ದು, ವಾಹನದಲ್ಲೇ ಇದ್ದ ಪಿಎಸ್ ಐ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರಸಿಯಲ್ಲಿ ನಡೆಯುತ್ತಿರುವ ಪೊಲೀಸ್ ದೈಹಿಕ ಪರೀಕ್ಷೆಗೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಎದುರಿನಿಂದ ಅತಿವೇಗವಾಗಿ ಬಂದ ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಘಟನೆ ನಡೆದಿದೆ ಎನ್ನಲಾಗಿದ್ದು. ತೀವ್ರವಾಗಿ ಗಾಯಗೊಂಡ ಯಲ್ಲಪ್ಪ ಕಾಗವಾಡ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ‌. ಇನ್ನು, ಘಟನೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಪಿಎಸ್ಐ ಮಹಾಂತೇಶ ಕುಂಬಾರ ಸಿದ್ದಾಪುರ ಸರಕಾರಿ...

Post
ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ..!

ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ..!

ಬೆಳಗಾವಿ: ತೀವ್ರ ವಿರೋಧದ ನಡುವೆಯೂ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದೆ. ಕಾಂಗ್ರೆಸ್ ಸದಸ್ಯರ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಮಾಡುವಲ್ಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಿದೆ.

Post
ಆಕಾಶದಲ್ಲಿ ಸಾಲು ಸಾಲು ಚುಕ್ಕಿಗಳು, ಇದೇನಿದು ನಭದಲ್ಲಿ ಬೆಳಕಿನ ಚಿತ್ತಾರ..? ಅಸಲು ಏನ್ ಗೊತ್ತಾ..?

ಆಕಾಶದಲ್ಲಿ ಸಾಲು ಸಾಲು ಚುಕ್ಕಿಗಳು, ಇದೇನಿದು ನಭದಲ್ಲಿ ಬೆಳಕಿನ ಚಿತ್ತಾರ..? ಅಸಲು ಏನ್ ಗೊತ್ತಾ..?

ಮುಂಡಗೋಡ: ನಭದಲ್ಲಿ ಕಾಣಿಸಿಕೊಂಡ ಸಾಲುಸಾಲು ತಾರೆಗಳು.. ಸರಳರೇಖೆಯಲ್ಲಿ ಹಾದುಹೋದ ನೂರಾರು ಬೆಳಕಿನ ಚುಕ್ಕಿಗಳು.. ಆಗಸದಲ್ಲಿ ನಡೆದ ಈ ವಿಸ್ಮಯವನ್ನು ಕಂಡು ಬೆರಗಾಗಿರುವ ತಾಲೂಕಿನ ಜನತೆ.. ಹೌದು, ಮುಂಡಗೋಡ ತಾಲೂಕಿನಲ್ಲಿ ರಾತ್ರಿ ಆಕಾಶದಲ್ಲಿ ವಿಸ್ಮಯ ನಡೆದಿದೆ. ಮುಂಡಗೋಡ ತಾಲೂಕಿನಾದ್ಯಂತ ಆಗಸದಲ್ಲಿ ಚುಕ್ಕಿಗಳ ಸಾಲು ಸಾಲು ಚಿತ್ತಾರಗಳು, ಬೆಳಕಿನ ಆಟಗಳು ನಡೆದಿದೆ. ಆದ್ರೆ ಇದು ಕೃತಕ ಉಪಗ್ರಹಗಳ ಚಲನೆ ಅಂತಾ ಖಗೋಳತಜ್ಞರು ಸ್ಪಷ್ಟಪಡಿಸಿದ್ದಾರೆ. ಅಸಲು ಏನ್ ಗೊತ್ತಾ..? ನಿಜ ಅಂದ್ರೆ, ಹಾಗೆ ನಮಗೇಲ್ಲ ಕಂಡ ಚುಕ್ಕಿಗಳ ಸಾಲುಗಳು ಎಲಾನ್ ಮಸ್ಕ್...