ಬೆಳಗಾವಿ: ಇಂದು ಕನ್ನಡಪರ ಸಂಘಟನೆಗಳ ಬೃಹತ್ ಹೋರಾಟ ಹಿನ್ನೆಲೆಯಲ್ಲಿ, ನಾಡದ್ರೊಹಿ ಎಂಇಎಸ್ ಕಾರ್ಯಕರ್ತರ ಪುಂಡಾಟ ಖಂಡಿಸಿ, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಕನ್ನಡಪರ ಹೋರಾಟಗಾರರನ್ನು ತಡೆಯಲಾಗಿದೆ. ಹಿರೇಬಾಗೇವಾಡಿ ಟೊಲ್ ಗೇಟ್ ಬಳಿ ಹೋರಾಟಗಾರರನ್ನ ತಡೆದಿರೊ ಪೊಲೀಸರು, ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ಕನ್ನಡಪರ ಹೋರಾಟಗಾರ ವಶಕ್ಕೆ ಪಡೆದಿದ್ದಾರೆ. ಪ್ರವಿಣ ಶೆಟ್ಟಿ ಬಣದ ಕಾರ್ಯಕರ್ತರನ್ನು ನೂರಾರು ಕಾರ್ಯಕರ್ತರನ್ನು ವಶಕ್ಕೆ ವಶಕ್ಕೆ ಪಡೆಯಲಾಗಿದೆ.. ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ.
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಕಲಘಟಗಿ ತಂಬೂರು ಕಾಡಿನಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕಾಡಾನೆ ದಾಳಿ, ಹಲವರಿಗೆ ಗಾಯ..!
ಕಲಘಟಗಿ: ತಾಲ್ಲೂಕಿನ ತಂಬೂರ ಅರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಕಾರ್ಯಾಚರಣೆ ವೇಳೆ ಆನೆಗಳು ದಿಡೀರನೆ ದಾಳಿ ಮಾಡಿದ ಘಟನೆ ನಡೆದಿದೆ. ಹಲವಾರು ದಿನಗಳಿಂದ 8 ಆನೆಗಳ ಹಿಂಡು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಆಲದಕಟ್ಟಿ, ತಂಬೂರ, ಸಂಗಮೇಶ್ವರ ಡಿಂಬವಳ್ಳಿ ಗ್ರಾಮಗಳ ಅರಣ್ಯ ಪ್ರದೇಶದಲ್ಲಿ ಬಿಡು ಬಿಟ್ಟಿದ್ದ ಆನೆಗಳನ್ನು ಅರಣ್ಯ ಅಧಿಕಾರಿಗಳು ನಿರಂತರ ಕಾಡಿಗೆ ಅಟ್ಟಲು ಕಾರ್ಯಚರಣೆ ಮಾಡುತ್ತಿದ್ದ ವೇಳೆ ಅಧಿಕಾರಿಗಳ ಮೇಲೆ ದಾಳಿ ನಡೆಸಿವೆ. ಬಮ್ಮಿಗಟ್ಟಿ ವಲಯದ ಅಧಿಕಾರಿ ಉಮೇಶ್ ಕಡಿ, ಮೌನೇಶ ಲಿಂಗನಶೆಟ್ಟಿಕೊಪ್ಪ,...
ಮುಂಡಗೋಡಿನಲ್ಲಿ ಮತ್ತೆ ಮಟ್ಕಾ ಶುರು..? ಬರಗೆಟ್ಟವನ ಮಂತ್ಲಿ ಆಸೆಗೆ ದಕ್ಕಿದ್ದು ಎಷ್ಟು ಲಕ್ಷ..?
ಮುಂಡಗೋಡ ತಾಲೂಕಿನ ಮಟ್ಕಾ ಪ್ರಿಯರಿಗೆ ಸಂತಸದ ಸುದ್ದಿಯಿದು. ಇನ್ನೇನು ಇವತ್ತಿನಿಂದ ಅಂದ್ರೆ ಸೋಮವಾರದಿಂದ ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಭರ್ಜರಿ ಶುಭಾರಂಭ ಮಾಡ್ತಿದೆಯಂತೆ. ಅಷ್ಟಕ್ಕೂ ಮಟ್ಕಾ ದಂಧೆಯ ಮಂತ್ಲಿ ಹಣದ ಕೈ ಬಿಸಿ ಇಲ್ಲದೇ ಈ ಛಳಿಗಾಲ ಸಾಗೋಕೆ ಸಾಧ್ಯವೇ ಇಲ್ಲ ಅಂತಾ ಅವನೊಬ್ಬ ಚಕ್ಕಂಬಕ್ಕಳ ಹಾಕ್ಕೊಂಡು ಡೀಲಿಗೆ ಕುಳಿತಿದ್ದನಂತೆ. ಅವನ ಪರಿಶ್ರಮದ ಫಲವಾಗೇ ಈಗ ಮತ್ತೆ ಮಟ್ಕಾ ಅನ್ನೋದು ಮನೆ ಮಾತಾಗುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿದೆಯಂತೆ. ಹೀಗೆ ಇತ್ಯಾದಿ ಇತ್ಯಾದಿಯಾಗಿ ಇಡೀ ಮುಂಡಗೋಡ ತಾಲೂಕಿನಲ್ಲಿ ಗುಲ್ಲೆದ್ದಿದೆ. ಗುಲ್ಲು...
ಮತ್ತೊಂದು ಭೀಕರ ಅಪಘಾತ ಸ್ಥಳದಲ್ಲೇ ನಾಲ್ವರ ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ..!
ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭೀಕರ ಸರಣಿ ಅಪಘಾತಕ್ಕೆ ಸ್ಥಳದಲ್ಲೇ ನಾಲ್ವರ ದುರ್ಮರಣವಾಗಿದೆ. 10 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 40ರಲ್ಲಿ ಘಟನೆ ನಡೆದಿದ್ದು. ಈರುಳ್ಳಿ ತುಂಬಿದ ಲಾರಿ ಹಾಗೂ ಕ್ಯಾಂಟರ್ ನಡುವೆ ಡಿಕ್ಕಿಯಾಗಿದೆ. ಬಳಿಕ ಚಲಿಸುತ್ತಿದ್ದ ಕಾರಿಗೆ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿದೆ. ಇನ್ನು, ಅಪಘಾತದ ರಭಸಕ್ಕೆ 2 ಲಾರಿಗಳು ಪಲ್ಟಿ ಹೊಡೆದಿವೆ. ಅಪಘಾತದಲ್ಲಿ ಲಕ್ಷಾಂತರ ಮೌಲ್ಯದ ಈರುಳ್ಳಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಮೃತ ನಾಲ್ವರ ಗುರುತು...
ಮುಂಡಗೋಡ ತಾಲೂಕಿನಲ್ಲಿ ಶೇ. 99.53 ರಷ್ಟು ಶಾಂತಿಯುತ ಮತದಾನ..! ಭದ್ರತೆಯಲ್ಲಿ ಕಾರವಾರಕ್ಕೆ ಮತಪೆಟ್ಟಿಗೆ ರವಾನೆ..!!
ಮುಂಡಗೋಡ: ತಾಲೂಕಿನಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಯ ಮತದಾನ ಶಾಂತಿಯುತವಾಗಿ ಸಂಪನ್ನಗೊಂಡಿದೆ. ಶೇ. 99.53 ರಷ್ಟು ಮತದಾನವಾಗಿದೆ. ಗುಂಜಾವತಿ ಗ್ರಾಮ ಪಂಚಾಯತಿಯ ಓರ್ವ ಮಹಿಳಾ ಸದಸ್ಯೆ ಮತದಾನ ಮಾಡಿಲ್ಲ. ಈ ಕಾರಣದಿಂದ ಶೇ.100 ರಷ್ಟು ಮತದಾನವಾಗಿಲ್ಲ. ಬೆಳಗಿನಿಂದಲೂ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲೂ ಮತದಾರರು ಸಂಯಮದಿಂದಲೇ ಬಂದು ಮತದಾನ ಮಾಡಿದ್ರು. ಬಹುತೇಕ ಮದ್ಯಾಹ್ನದಷ್ಟೊತ್ತಿಗೆ ಮತದಾನ ಸಂಪೂರ್ಣತೆಯ ಮಟ್ಟ ತಲುಪಿತ್ತು. ಕೆಲವು ಕಡೆ ಮಾತ್ರ ಒಂದಿಷ್ಟು ತಡವಾಗಿ ಬಂದು ಮತದಾರರು ಮತದಾನ ಮಾಡಿದ್ರು. ತಾಲೂಕಿನಲ್ಲಿ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರುಗಳು...
ಕೊರೋನಾ ಹೆಚ್ಚಾದ್ರೆ ಶಾಲೆಗಳು ಬಂದ್: ಶಿಕ್ಷಣ ಸಚಿವ ಬಿ.ಸಿ.ನಾಗೇಶ್..!
ಬೆಂಗಳೂರು: ರಾಜ್ಯದಲ್ಲಿ ಒಮೈಕ್ರಾನ್ ವೈರಸ್ ಆತಂಕ ಹುಟ್ಟಿಸಿದೆ. ದೇಶದಲ್ಲೇ ಮೊದಲ ಬಾರಿಗೆ ಒಮೈಕ್ರಾನ್ ವೈರಸ್ ಕರ್ನಾಟಕದಲ್ಲೇ ಪತ್ತೆಯಾಗಿದೆ. ಹೀಗಾಗಿ, ಒಮೈಕ್ರಾನ್ ರಾಜ್ಯಕ್ಕೆ ಕಾಲಿಟ್ಟ ನಂತರ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಒಲ್ಲದ ಮನಸ್ಸಿನಿಂದಲೇ ಕಳಿಸುತ್ತಿದ್ದಾರೆ. ಕೊರೋನಾ ಹೆಚ್ಚಾದ್ರೆ ಶಾಲೆ ಬಂದ್..! ಇದೇ ಸಂದರ್ಭದಲ್ಲಿ ಕೊರೋನಾ ಹೆಚ್ಚಾದ್ರೆ ಶಾಲೆಗಳನ್ನು ಬಂದ್ ಮಾಡುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್...
ಹುನಗುಂದಕ್ಕೆ ಮತ್ತೆ ವಕ್ಕರಿಸಿದ ಕೊರೋನಾ, ಓರ್ವ ಮಹಿಳೆಗೆ ಸೋಂಕು ದೃಢ..!
ಮುಂಡಗೋಡ: ತಾಲೂಕಿನ ಹುನಗುಂದದಲ್ಲಿ ಮತ್ತೆ ಕೊರೊನಾ ಎಂಟ್ರಿ ಕೊಟ್ಟಿದೆ. ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಹೋಗುತ್ತಿದ್ದ ಹುನಗುಂದದ ಮಹಿಳೆಯೊಬ್ಬಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಅಂತಾ ಗ್ರಾಮ ಪಂಚಾಯತಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇಲ್ಲಿನ ಮಹಿಳೆ ಪ್ರತಿನಿತ್ಯ ಟಿಬೇಟಿಯನ್ ಕಾಲೋನಿಗೆ ಮನೆಕೆಲಸಕ್ಕೆ ಅಂತಾ ಅಡುಗೆ ಮಾಡಲು ಹೋಗುತ್ತಿದ್ದಳು ಎನ್ನಲಾಗಿದೆ. ಹೀಗಾಗಿ, ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಟೆಸ್ಟ್ ಮಾಡಿದ್ದರು. ನಂತರ ಆ ವರದಿಯಲ್ಲಿ ಮಹಿಳೆಗೆ ಕೊರೋನಾ ದೃಢ ಪಟ್ಟಿದೆ. ಹೀಗಾಗಿ, ಗ್ರಾಮ ಪಂಚಾಯತಿ ಸದಸ್ಯರುಗಳು, ಸಿಬ್ಬಂದಿಗಳು ಸೋಂಕಿತೆಯ ಮನೆಗೆ ಭೇಟಿ ನೀಡಿ...
ಮುಂಡಗೋಡಿನಲ್ಲಿ ಟಿಬೇಟಿಗನ ಪರ್ಸು, ಮೊಬೈಲು ಕಿತ್ತು ಎಸ್ಕೇಪ್ ಆದ ಯುವಕ..! ಬೆನ್ನತ್ತಿ ಹಿಡಿದ ಜನ..!
ಮುಂಡಗೋಡ; ಪಟ್ಟಣದಲ್ಲಿ ಇಂದು ಯುವಕನೋರ್ವ ಟಿಬೇಟಿಯನ್ ವ್ಯಕ್ತಿಯ ಪರ್ಸ್ ಹಾಗೂ ಮೊಬೈಲ್ ಎಗರಿಸಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರ ಕೈಯಲ್ಲಿ ತಗಲಾಕ್ಕೊಂಡು ಪಜೀತಿ ಪಟ್ಟ ಘಟನೆ ನಡೆದಿದೆ. ಸೋಮವಾರ ಸಂತೆ ದಿನವಾದ ಕಾರಣ ಜನಜಂಗುಳಿ ಸೇರಿದ್ದು, ಇದೇ ವೇಳೆ ಪಟ್ಟಣದ ಅಕ್ಷಯ ಲಾಡ್ಜ್ ಬಳಿ, ಟಿಬೇಟಿಯನ್ ವ್ಯಕ್ತಿಯ ಪರ್ಸ್ ಮೇಲೆ ಕಣ್ಣಿಟ್ಟಿದ್ದ ಯುವಕ ಏಕಾಏಕಿ ಪರ್ಸ್ ಹಾಗೂ ಮೊಬೈಲ್ ಗೆ ಕೈ ಹಾಕಿ ಕಿತ್ತುಕೊಂಡಿದ್ದಾನೆ. ಹೀಗಾಗಿ, ತಕ್ಷಣವೇ ಎಚ್ಚೆತ್ತ ಟಿಬೇಟಿಗ ಚೀರಾಡಿದ್ದಾನೆ. ಹೀಗಾಗಿ, ಸಾರ್ವಜನಿಕರು ಪರ್ಸ್ ಕದ್ದೊಯ್ಯುತ್ತಿದ್ದ ಆರೋಪಿಯನ್ನು...
ಮುಂಡಗೋಡ ಬಳಿ ಭಾರೀ ಅಪಘಾತ, ಕೆರೆಯಲ್ಲಿ ಮುಳಗಿದ ಕಾರು, ಓರ್ವನ ಶವ ಪತ್ತೆ, ಹಲವರು ಸಿಲುಕಿರೋ ಶಂಕೆ..!
ಮುಂಡಗೋಡ ಪಟ್ಟಣದ ಹೊರವಲಯದ ಯಲ್ಲಾಪುರ ರಸ್ತೆಯ ಕೆರೆಯಲ್ಲಿ ಭಾರೀ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಕೆರೆಗೆ ನುಗ್ಗಿ, ಕಾರು ಸಂಪೂರ್ಣ ಮುಳಗಡೆಯಾಗಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು ಶವ ಕೆರೆಯಲ್ಲಿ ತೇಲಾಡುತ್ತಿತ್ತು, ಶವ ಹೊರ ತೆಗೆಯಲಾಗಿದೆ. ಇನ್ನು ಕಾರಲ್ಲಿ ಹಲವರು ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಕಾರು ಸಂಪೂರ್ಣವಾಗಿ ನೀರಲ್ಲಿ ಮುಳುಗಿದೆ. ಮೃತರು ಎಲ್ಲಿಯವರು, ಯಾವಾಗ ಘಟನೆ ಆಯ್ತು, ತಿಲಕಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ, 108 ಅಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಶವ ಹೊರತೆಗೆಯುವ...
ನಂದಿಕಟ್ಟಾದ ತೋಟದ ಮನೆಯಲ್ಲಿ ಹೆಣವಾಗಿ ಬಿದ್ದ ಮಾಲೀಕ, ಸಾವಿನ ಸುತ್ತ ಹಲವು ಅನುಮಾನ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದ ತೋಟದ ಮನೆಯಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ನಂದಿಕಟ್ಟಾ ಗ್ರಾಮದ ಬಾಬು ನವಲೆನವರ್ ಎಂಬ ವ್ಯಕ್ತಿಯು ಅವರ ತೋಟದ ಮನೆಯಲ್ಲಿಯೇ ಹೆಣವಾಗಿ ಬಿದ್ದಿದ್ದಾನೆ. ಶನಿವಾರ ರಾತ್ರಿಯೇ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಮೃತನ ಬಾಯಲ್ಲಿ ರಕ್ತ ಬಂದಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಧ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆಯ ನಂತರವಷ್ಟೇ ಅಸಲಿ ಸಂಗತಿ ಹೊರಬರುವ ಸಾಧ್ಯತೆ ಇದೆ.





