ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ....
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: BIG BREAKING
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!
ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರು ಸೇರಿಕೊಂಡು ಸುತ್ತಾಡಲು ಹೋದಾಗ ಕೃಷಿ ಹೊಂಡದಲ್ಲಿ ಮೂವರು ಬಾಲಕರು ಬಿದ್ದಿದ್ದಾರೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ(13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13)ಮೃತಪಟ್ಟ ಬಾಲಕರಾಗಿದ್ದಾರೆ. ಇನ್ನು ತಿರುಗಾಡಲು ಹೊರಗೆ ಹೋದ ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆ ವೇಳೆ, ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ...
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಮೈನಳ್ಳಿಯ ಗ್ರಾಮ ದೇವಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಬಂದಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ. ನಾಗರತ್ನ ಜೋಲೆ, ಲಕ್ಷ್ಮೀ ಕೊಕರೆ, ಗಂಗಾರಾಮ ಮುಕ್ಕೊ ಕೊಕರೆ, ಶಾಂತಾಬಾಯಿ ಸಳಕೆ ಹಾಗೂ ಭರತ್ ಸಳಕೆ ಎಂಬಾತರೇ ಸಿಡಿಲಿನ ಶಾಖದಿಂದ ಗಾಯಗೊಂಡಿದ್ದಾರೆ. ತಾಲೂಕಿನಾದ್ಯಂತ ಶನಿವಾರ ಮತ್ತು ರವಿವಾರ ರಾತ್ರಿ ಸಿಡಿಲು ಸಹಿತ ರಭಸದ ಗಾಳಿ ಮಳೆ ಸುರಿದಿತ್ತು. ಬಾಳೆಹಳ್ಳಿ ಹಾಗೂ ಕಳಕೀಕೆರಿ ಗ್ರಾಮದವರು ಮೈನಳ್ಳಿ ಗ್ರಾಮದೇವಿ ಜಾತ್ರೆಗೆ ಬಂದು ದೇವಿ ದರ್ಶನ ಪಡೆದು ನಂತರ ಸಿಡಿಲು...
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!
ಮುಂಡಗೋಡ ಪಟ್ಟಣದಲ್ಲಿ ಗುರುವಾರ ಬಾರೀ ಚರ್ಚೆ ಹಾಗೂ ಹಿಂದು ಕಾರ್ಯಕರ್ತರ ಪ್ರತಿರೋಧಕ್ಕೆ ಕಾರಣವಾಗಿದ್ದ ಗೋಹತ್ಯೆ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಕೆಚ್ಚೆದೆಯ ಕ್ರಮ ಕೈಗೊಂಡಿದ್ದಾರೆ. ಜಾನುವಾರನ್ನು ಅಕ್ರಮವಾಗಿ ವಧೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇಬ್ಬರಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ದೇಶಪಾಂಡೆ ನಗರದ ಜಹೀರ ಅಹ್ಮದ್ ಮೈಮದ್ದಿನ್ ಬೇಪಾರಿ(32) ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಗುರುವಾರ ಬೆಳಗ್ಗೆ 09-15 ಗಂಟೆಯ ಸುಮಾರಿಗೆ ಮುಂಡಗೋಡ ಪಟ್ಟಣದ ಯಲ್ಲಾಪೂರ ರಸ್ತೆಯಲ್ಲಿರುವ ರಜಾಕಿಯ...
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಮುಂಡಗೋಡಿನಲ್ಲಿ ಅಕ್ರಮವಾಗಿ ಗೋಮಾತೆಯ ವಧೆ ಮಾಡಲಾಗಿದೆ. ಹಾಗಂತ ಮುಂಡಗೋಡಿನ ಹಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಮುಂಡಗೋಡ ಹಳೂರಿನಲ್ಲಿರೋ ದರ್ಗಾ ಹತ್ತಿರ ಘಟನೆ ನಡೆದಿದ್ದು, ಘಟನೆಯಲ್ಲಿ ಎಷ್ಟು ಆಕಳನ್ನು ವಧೆ ಮಾಡಲಾಗಿದೆ..? ವಶಪಡಿಸಿಕೊಂಡ ವಸ್ತುಗಳು ಏನೇನು..? ಸಿಕ್ಕ ಆರೋಪಿಗಳು ಎಷ್ಟು..? ಎಲ್ಲ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಕಾರವಾರ: ನಗರಸಭೆ ಮಾಜಿ ಸದಸ್ಯ ಸತೀಶ್ ಕೋಳಂಬಕರ್ ಹತ್ಯೆಯ ಹಿಂದೆ ಅಲ್ಲಿನ ಪೊಲೀಸರ ನಿರ್ಲಕ್ಷ ಹಾಗೂ ಬೇಜವಾಬ್ದಾರಿಯೂ ಕಾರಣವಾಯ್ತಾ..? ಅದೊಂದು ಹೊಟೆಲ್ ನಲ್ಲಿ ನಡೆದಿದ್ದ ಗಲಾಟೆಯ ದೂರು ದಾಖಲಿಸಿಕೊಂಡು ಸರಿಯಾದ ಕ್ರಮ ಕೈಗೊಂಡಿದ್ದರೆ ಸತೀಶ್ ಹೆಣ ಬೀಳ್ತಾನೇ ಇರಲಿಲ್ಲವಾ..? ಹೀಗಾಗಿನೇ ಇವಾಗ ಆ ನಾಲ್ವರು ಬೇಜವಾಬ್ದಾರಿ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆಯಾ..? ಸದ್ಯದ ಬಾತ್ಮಿಗಳನ್ನು ಗಮನಿಸಿದ್ರೆ ಹೌದು ಅನ್ನುತ್ತಿವೆ ಪೊಲೀಸ್ ಮೂಲಗಳು. ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ ಕೋಳಂಬಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ, ನಗರ ಠಾಣೆಯ...
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆಯನ್ನು ಅವರ ಪತ್ನಿಯೇ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವವನ್ನು ಮನೆಯಲ್ಲಿ ಪತ್ತೆ ಹಚ್ಚಲಾಗಿದೆ ಮತ್ತು ಮನೆ ತುಂಬಾ ರಕ್ತಸಿಕ್ತವಾದ ಸ್ಥಿತಿಯಲ್ಲಿ ಕಂಡುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಗಾಗಲೆ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1981ರ ಬ್ಯಾಚ್ನ ಐಪಿಎಸ್ ಅಧಿಕಾರಿ ಓಂ...
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ...
ಹಾವೇರಿ BEO ಮನೆ ಮೇಲೆ ಲೋಕಾಯುಕ್ತ ದಾಳಿ, ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬ್ರಷ್ಟರು..!
ಹಾವೇರಿ ತಾಲೂಕಾ ಶಿಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಿಇಓ ಮೌನೇಶ ಬಡಿಗೇರ ಮನೆ ಮೇಲೆ ದಾಳಿ ನಡೆದಿದ್ದು, ವೇತನ ಬಿಡುಗಡೆ ಮಾಡಲು 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಶಿಕ್ಷಕ ಪ್ರಕಾಶ್ ಬಾರ್ಕಿ ಎಂಬುವವರಿಗೆ ವೇತನ ಬಿಡುಗಡೆ ಮಾಡಲು, 50 ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು, ಅದ್ರಲ್ಲಿ ಇವತ್ತು 15 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ. ದಾಳಿ ವೇಳೆ ಬಿಇಓ ಮೌನೇಶ್...
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನರ್ ಕಿಮ್ಸ್ಗೆ...