Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಆ ಪುಟ್ಟ ಕಂದಮ್ಮನ ಸಾವಿಗೆ “ಅಯ್ಯೋ ಪಾಪ ಹೀಗೆ ಆಗಬಾರದಿತ್ತು” ಅಂದ್ರಷ್ಟೇ ಸಾಕಾ..? ಹಾಗಾದ್ರೆ ಇನ್ನೇಷ್ಟು ಬಲಿ ಬೇಕು..?

ಆ ಪುಟ್ಟ ಕಂದಮ್ಮನ ಸಾವಿಗೆ “ಅಯ್ಯೋ ಪಾಪ ಹೀಗೆ ಆಗಬಾರದಿತ್ತು” ಅಂದ್ರಷ್ಟೇ ಸಾಕಾ..? ಹಾಗಾದ್ರೆ ಇನ್ನೇಷ್ಟು ಬಲಿ ಬೇಕು..?

ನಿಜ, ಮಮ್ಮಲ ಮರುಗುತ್ತಿದೆ ಇಡೀ ಮುಂಡಗೋಡ..! ಹಾಗೇ ಒಮ್ಮೆ ಕಲ್ಪಿಸಿಕೊಳ್ಳಿ, ಆ ಕಂದಮ್ಮ ಸಾವು ಬದುಕಿನ ಮದ್ಯೆ ಹೋರಾಡುತ್ತ, ಹುಬ್ಬಳ್ಳಿಯ ಕಿಮ್ಸ್ ICU ಬೆಡ್ಡಿನ ಮೇಲೆ ನರಳಿತ್ತಿರೋ ಸಂದರ್ಭ, ಆ ಹೆತ್ತ ಕರುಳುಗಳು ಪಟ್ಟಿರೋ ಸಂಕಟ ಎಷ್ಟಿರಬಹುದು ಅಲ್ವಾ..? ಇದೇಲ್ಲ ಸಾಕ್ಷಿ ಕೇಳುವವರಿಗೆ ಯಾಕೆ ಅರ್ಥವಾಗ್ತಿಲ್ಲ..? ಇದು, ಮುಂಡಗೋಡ ತಾಲೂಕಿನ ಜನರ ಮಿಲಿಯನ್ ಡಾಲರ್ ಪ್ರಶ್ನೆ. ಸಾಕ್ಷಿ ಬೇಕಂತೆ..? ಎಲ್ಲಿಂದ ನಗಬೇಕೋ ಅರ್ಥವೇ ಅಗುತ್ತಿಲ್ಲ ಕಣ್ರಿ, ಆ ಮುಗ್ದ ಕಂದಮ್ಮನ ಸಾವಿಗೆ ಕಾರಣನಾದ ವೈದ್ಯನ ವಿರುದ್ಧ ಕ್ರಮ‌...

Post
ಪೆಟ್ರೊಲ್ ಬೆಲೆ ಏರಿಕೆಗೆ ಖಂಡನೆ: ಮುಂಡಗೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!

ಪೆಟ್ರೊಲ್ ಬೆಲೆ ಏರಿಕೆಗೆ ಖಂಡನೆ: ಮುಂಡಗೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!

ಮುಂಡಗೋಡ: ಕೇಂದ್ರ ಸರ್ಕಾರ ಪದೇ ಪದೇ ತೈಲ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಶೀಘ್ರವೇ ಪೆಟ್ರೊಲ್ ದರ ಕಡಿಮೆ ಮಾಡುವಂತೆ ಆಗ್ರಹಿಸಿದ್ರು. ಈ ಸಂದರ್ಭದಲ್ಲಿ ಮುಂಡಗೋಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. ಎಂ. ನಾಯಕ್ ಮುಂಡಗೋಡ ಉಸ್ತುವಾರಿಗಳಾದ ಸುರೇಶ್ ಸವಣೂರು, ಎಂ ಎನ್...

Post
ಅಗಲಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ, ಕಳೆದ ವರ್ಷ ಬನವಾಸಿಯಲ್ಲಿ ಪಂಪ ಪ್ರಶಸ್ತಿ ಸ್ವೀಕರಿಸಿದ್ದ ಕ್ಷಣ ಇನ್ನೂ ಅಚ್ಚ ಹಸಿರು..!

ಅಗಲಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ, ಕಳೆದ ವರ್ಷ ಬನವಾಸಿಯಲ್ಲಿ ಪಂಪ ಪ್ರಶಸ್ತಿ ಸ್ವೀಕರಿಸಿದ್ದ ಕ್ಷಣ ಇನ್ನೂ ಅಚ್ಚ ಹಸಿರು..!

ಶಿರಸಿ: ಇಂದು ನಾಡಿನ ಹಿರಿಯ ಸಾಹಿತಿ, ದಲಿತ ಕವಿ, ಡಾ. ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಹಿರಿಯ ಕವಿಯ ನಿಧನಕ್ಕೆ ನಾಡಿನೆಲ್ಲೆಡೆ ಸಂತಾಪ ವ್ಯಕ್ತವಾಗಿದೆ. ಅಂದಹಾಗೆ, ದಲಿತ ಕವಿ ಸಿದ್ದಲಿಂಗಯ್ಯನವರಿಗೆ ಕಳೆದ ವರ್ಷವಷ್ಟೇ ಶಿರಸಿಯ ಬನವಾಸಿ ಕದಂಬೋತ್ಸವದಲ್ಲಿ ಪಂಪ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕಳೆದ ವರ್ಷ ಫೆಬ್ರವರಿ 8, 2020ರಲ್ಲಿ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದ್ದ ಕದಂಬೋತ್ಸವದಲ್ಲಿ ಡಾ.ಸಿದ್ದಲಿಂಗಯ್ಯ ಪಂಪ ಪ್ರಶಸ್ತಿ ಸ್ವೀಕರಿಸಿದ್ದರು. ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಂದ ಪ್ರಶಸ್ತಿ ಸ್ವೀಕರಿಸಿದ್ದ ಸಾಹಿತಿ ಇಂದು ಅಗಲಿದ್ದು ಬನವಾಸಿಯಲ್ಲಿ...

Post
ಕಾತೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು..!

ಕಾತೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು..!

ಮುಂಡಗೋಡ: ತಾಲೂಕಿನ ಕಾತೂರು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು ಮಾಡಿದ ಘಟನೆ ನಡೆದಿದೆ. ಶಿರಾಜ್ ಬೊಮ್ನಳ್ಳಿ ಎಂಬುವವರ ಹೀರೋ ಹೊಂಡಾ ಸ್ಪೆಂಡರ್ ಪ್ರೊ ಬೈಕ್ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದಾಗ ರಾತ್ರಿ ಯಾರೋ ಖದೀಮರು ಬಂದು ಬೈಕ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಅಂತಾ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಶಿರಾಜ್ ಬೊಮ್ನಳ್ಳಿ ದೂರು ದಾಖಲಿಸಿದ್ದಾರೆ

Post
ಮುಂಡಗೋಡ ತಾಲೂಕಿನಲ್ಲಿ ಶನಿವಾರ ಕರೆಂಟು ಇರಲ್ಲ..! ಎಲ್ಲೇಲ್ಲಿ..?

ಮುಂಡಗೋಡ ತಾಲೂಕಿನಲ್ಲಿ ಶನಿವಾರ ಕರೆಂಟು ಇರಲ್ಲ..! ಎಲ್ಲೇಲ್ಲಿ..?

ಮುಂಡಗೋಡ: ಪಟ್ಟಣದಲ್ಲಿ ಹಾಗೂ ಟಿಬೇಟಿಯನ್ ಕಾಲೋನಿಗಳಲ್ಲಿ ನಾಳೆ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಹೆಸ್ಕಾಂ ಮುಂಡಗೋಡ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಮುಂಡಗೋಡ ಉಪವಿಭಾಗದ 110/11 ಕೆ.ವಿ.ವಿದ್ಯುತ್ ಕೇಂದ್ರದಿಂದ ಮುಂಡಗೋಡ ಪಟ್ಟಣ ಹಾಗೂ ಟಿಬೇಟಿಯನ್ ಕಾಲೋನಿಗಳಿಗೆ ಹೊರಡುವ 11 ಕೆ.ವಿ.ಮಾರ್ಗದಲ್ಲಿ ತುರ್ತು ಕಾಮಗಾರಿ ಕೈಗೊಳ್ಳುತ್ತಿರೋ ಕಾರಣ, ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post
ಮುಂಡಗೋಡ ತಾಲೂಕಿನಲ್ಲಿ ಇಂದು 14 ಜನ್ರಿಗೆ ಕೊರೋನಾ ಸೋಂಕು ದೃಢ..!

ಮುಂಡಗೋಡ ತಾಲೂಕಿನಲ್ಲಿ ಇಂದು 14 ಜನ್ರಿಗೆ ಕೊರೋನಾ ಸೋಂಕು ದೃಢ..!

ಮುಂಡಗೋಡ:ತಾಲೂಕಿನಲ್ಲಿ ಇಂದು 14 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಅಂತಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಪಟ್ಟಣದ ಗಾಂಧಿನಗರ- 1, ಹೊಸ ಓಣಿ-1, ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ -2, ನೆಹರು ನಗರ-1, ಇಂದೂರು-1, ಜನಗೇರಿ-1, ಕವಲಗಿ-1, ಕೊಳಗಿ- 3 ಹಾಗೂ ಚೌಡಳ್ಳಿ ಗ್ರಾಮದಲ್ಲಿ 4 ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ.

Post
ಬ್ರಾಹ್ಮಣರ ವಿರುದ್ಧ ನಟ ಚೇತನ್ ಹೇಳಿಕೆ:  ಸಚಿವ ಶಿವರಾಮ್ ಹೆಬ್ಬಾರ್ ಖಂಡನೆ..!

ಬ್ರಾಹ್ಮಣರ ವಿರುದ್ಧ ನಟ ಚೇತನ್ ಹೇಳಿಕೆ: ಸಚಿವ ಶಿವರಾಮ್ ಹೆಬ್ಬಾರ್ ಖಂಡನೆ..!

ಯಲ್ಲಾಪುರ: ಕನ್ನಡ ಚಿತ್ರ ನಟ ಚೇತನ್, ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ತೀವ್ರ ಖಂಡನಾರ್ಹ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಸಚಿವ್ರು, ಚೇತನ್ ಹೇಳಿಕೆ ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್...

Post
ಹಾರೈಕೆ ಫಲಿಸಲಿಲ್ಲ, ಬದುಕಿ ಬರಲಿಲ್ಲ ಆ ಪುಟ್ಟ ಕಂದಮ್ಮ..! ಮತ್ತದೇ ಪ್ರಶ್ನೆ..!  ಯಾರು ಹೊಣೆ..???

ಹಾರೈಕೆ ಫಲಿಸಲಿಲ್ಲ, ಬದುಕಿ ಬರಲಿಲ್ಲ ಆ ಪುಟ್ಟ ಕಂದಮ್ಮ..! ಮತ್ತದೇ ಪ್ರಶ್ನೆ..! ಯಾರು ಹೊಣೆ..???

ಮುಂಡಗೋಡ: ನಿನ್ನೆ ರಾತ್ರಿಯಷ್ಟೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ತಾಲೂಕಿನ ಬಾಲಕಿಯೊಬ್ಬಳ ಸಾವು ಬದುಕಿನ ಮದ್ಯೆ ಹೋರಾಡ್ತಿರೋ ಘಟನೆಯ ಸಂಪೂರ್ಣ ಸುದ್ದಿ ನಿಮ್ಮ ಮುಂದಿಟ್ಟಿತ್ತು. ಬಹುಶಃ ತಾವೇಲ್ಲರೂ ಆ ಪುಟ್ಟ ಕಂದಮ್ಮ ಬದುಕಿ ಬರಲಿ ಅಂತಾ ಅದೇಷ್ಟು ಪ್ರಾರ್ಥಿಸಿದ್ದಿರೋ ಗೊತ್ತಿಲ್ಲ. ಆದ್ರೆ ಆ ಎಲ್ಲ ಹಾರೈಕೆಗಳು ಫಲಿಸಲೇ ಇಲ್ಲ. ಹುಬ್ಬಳ್ಳಿಯ ಕಿಮ್ಸ್ ನ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಕಂದಮ್ಮ ಬದುಕಿ ಬರಲೇ ಇಲ್ಲ. ನಿನ್ನೆ ತಡರಾತ್ರಿ ಕಂದಮ್ಮನ ಪ್ರಾಣ ಪಕ್ಷಿ ಹಾರಿಹೋಗಿದೆ. ಕುಟುಂಬಸ್ಥರ ಆಕ್ರಂಧನ...

Post
ಮುಂಡಗೋಡಿನಲ್ಲಿ ಸರ್ಕಾರಿ ವೈದ್ಯನ ಖಾಸಗಿ ದರ್ಬಾರ್..? ಆಗಿರೋ ಅವಾಂತರಕ್ಕೆ ಹೊಣೆ ಯಾರು..?

ಮುಂಡಗೋಡಿನಲ್ಲಿ ಸರ್ಕಾರಿ ವೈದ್ಯನ ಖಾಸಗಿ ದರ್ಬಾರ್..? ಆಗಿರೋ ಅವಾಂತರಕ್ಕೆ ಹೊಣೆ ಯಾರು..?

ಮುಂಡಗೋಡ: ವೈದ್ಯ ನಾರಾಯಣೋ ಹರಿಃ ಅಂತಾರೆ, ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸದ ನಡುವೆ ತಮ್ಮ ಜೀವ ಪಣಕ್ಕಿಟ್ಟು ಹಗಲು ರಾತ್ರಿ ಎನ್ನದೇ ಸೋಂಕಿತರ ಸೇವೆಯಲ್ಲಿ ಬಹುತೇಕ ವೈದ್ಯರುಗಳು ನಿರತರಾಗಿದ್ದಾರೆ. ಇನ್ನು ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಹಾಗೂ ಮತ್ತವರ ತಂಡ, ತಾಲೂಕಿನಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಇನ್ನಿಲ್ಲದ ಪರಿಶ್ರಮ ಪಟ್ಟಿದ್ದಾರೆ, ಪಡುತ್ತಿದ್ದಾರೆ.. ಮಹಾಮಾರಿಯನ್ನು ಕಟ್ಟಿ ಹಾಕುವಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಆ ಕಾರಣಕ್ಕಾಗಿ ಪಬ್ಲಿಕ್ ಫಸ್ಟ್ ನ್ಯೂಸ್ ಟೀಂ ವತಿಯಿಂದ ತಾಲೂಕಿನ ವೈದ್ಯ ದೇವರುಗಳಿಗೆ...

Post
ಮುಂಡಗೋಡ: ತಾಲೂಕಿನಲ್ಲಿಂದು 21 ಪಾಸಿಟಿವ್ ದೃಢ, 206 ಸಕ್ರೀಯ ಕೇಸ್..!

ಮುಂಡಗೋಡ: ತಾಲೂಕಿನಲ್ಲಿಂದು 21 ಪಾಸಿಟಿವ್ ದೃಢ, 206 ಸಕ್ರೀಯ ಕೇಸ್..!

ಮುಂಡಗೋಡ-ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ತಾಲೂಕಿನಲ್ಲಿ ಒಟ್ಟೂ 206 ಸಕ್ರೀಯ ಪ್ರಕರಣಗಳಾಂದಂತಾಗಿದೆ. ಇನ್ನು 62 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 164 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಯಾವುದೇ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ ಅಂತಾ ಮುಂಡಗೋಡ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ. ********************** ಪಬ್ಲಿಕ್ ಫಸ್ಟ್ ನ್ಯೂಸ್ ಇಂದಿನ ಪ್ರಮುಖ ಸುದ್ದಿ ನೋಡಲು ಇಲ್ಲಿ ಕ್ಲಿಕ್ ಮಾಡಿ..

error: Content is protected !!