ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರಿಗೆ ದೇಶಪಾಂಡೆ ರೂಡ್ ಸೆಟಿ ವತಿಯಿಂದ ಇಂದು ಮೆಡಿಕಲ್ ಸೆಪ್ಟಿ ಕಿಟ್ ವಿತರಿಸಲಾಯಿತು. ತಾಲೂಕಿನ ಹುನಗುಂದ ಗ್ರಾಮದ ವಿರಕ್ತ ಮಠದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮವನ್ನು ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್ ಉದ್ಘಾಟಿಸಿ ಮಾತನಾಡಿದ್ರು. ಹುನಗುಂದ ಗ್ರಾಪಂ ಅಧ್ಯಕ್ಷೆ ಯಲ್ಲವ್ವ ಕುನ್ನೂರ್, ಉಪಾಧ್ಯಕ್ಷ ತುಕಾರಾಮ್ ಹೊನ್ನಳ್ಳಿ, ಕಾಂಗ್ರೆಸ್ ಯುವ ಮುಖಂಡ ಧರ್ಮರಾಜ್ ನಡಗೇರಿ, ಗ್ರಾಪಂ ಸದಸ್ಯರಾದ ಈಶ್ವರಗೌಡ ಅರಳಿಹೊಂಡ ಸೇರಿ ದೇಶಪಾಂಡೆ ರೂಡಸೆಟಿಯ ಸಂಚಾಲಕರು ಉಪಸ್ತಿತರಿದ್ದರು.
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಉತ್ತರ ಕನ್ನಡ
ಯಲ್ಲಾಪುರ ತಾಲೂಕಿನ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿದ ಸಚಿವ ಹೆಬ್ಬಾರ್..!
ಯಲ್ಲಾಪುರ:ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಇಂದು ತಾಲೂಕಿನ ದೇಹಳ್ಳಿ, ಆನಗೋಡ ಹಾಗೂ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿದರು. ಸ್ಥಳೀಯ ಜನಪ್ರತಿನಿಧಿಗಳ, ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ,ಗ್ರಾಮಗಳಲ್ಲಿ ಕೊರೊನಾ ಸೋಂಕನ್ನು ತಡೆಯಲು ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮಸ್ಥರನ್ನು ಭೇಟಿಯಾಗಿ ಕೋವಿಡ್ 19 ಸೋಂಕಿನ ಕುರಿತು ಜಾಗೃತಿ ಮೂಡಿಸಿ,ಕೋವಿಡ್ ನ...
ಲಾಕ್ ಡೌನ್: ಅಮ್ಮಾಜಿ ಕೆರೆ ಹತ್ತಿರ ಪೊಲೀಸರ ಕಣ್ಗಾವಲು..!
ಮುಂಡಗೋಡ: ಪಟ್ಟಣದ ಅಮ್ಮಾಜಿ ಕೆರೆ ಹತ್ತಿರ, ಇಂದು ಕಠಿಣ ಲಾಕ್ ಡೌನ್ ಹಿನ್ನೆಲೆಯಲ್ಲಿ 12 ಗಂಟೆ ನಂತರ ಪಟ್ಟಣದ ಒಳಗೆ ಅನಗತ್ಯವಾಗಿ ಪ್ರವೇಶಿಸುವ ವಾಹನ ಸವಾರರಿಗೆ ಪೊಲೀಸ್ರು ಬಿಸಿ ಮುಟ್ಟಿಸುತ್ತಿದ್ದಾರೆ. ಅನಗತ್ಯವಾಗಿ ಸಂಚರಿಸುವ ವಾಹನ ಸವಾರರನ್ನು ತಡೆದು ಕೋವಿಡ್ನಿ ನಿಯಮಗಳನ್ನು ತಿಳಿ ಹೇಳಿದರು. ಹಾಗೆ ಸಂಚಾರ ನಿಯಮ ಪಾಲಿಸಲು ಸಾರ್ವಜನಿಕರಿಗೆ ಪೊಲೀಸ್ ಪೇದೆಗಳು ಎಚ್ಚರಿಸಿದರು.
12 ಗಂಟೆ ನಂತರವೂ ತೆರೆದಿದ್ದ ದಿನಸಿ ಅಂಗಡಿಗಳು: ಪೊಲೀಸರಿಂದ ಕ್ರಮ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಲಾಕ್ ಡೌನ್ ಸಡಿಲಿಕೆಯ ವಾರದ ಕೊನೆಯ ದಿನ ಅಗತ್ಯ ವಸ್ತುಗಳ ಖರೀಧಿಯಲ್ಲಿ ತೊಡಗಿದ್ದ ಜನ್ರು 12 ಗಂಟೆಯ ನಂತರವೂ ಅನಗತ್ಯ ತಿರುಗಾಡುತ್ತಿದ್ದ ದೃಷ್ಯ ಕಂಡು ಬಂತು. ದಿನಸಿ ಅಂಗಡಿಗಳು ಕೂಡ 12 ಗಂಟೆ ನಂತರವೂ ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದರು. ಹೀಗಾಗಿ, ಮುಂಡಗೋಡ ಪ್ರೊಬೇಷನರಿ ಪಿಎಸ್ ಐ ಕುಮಾರಿ ಕಸ್ತೂರಿ, ಅಂಗಡಿಕಾರರಿಗೆ ಎಚ್ಚರಿಸಿ ಅಂಗಡಿ ಮುಂಗಟ್ಟು ಮುಚ್ಚಿಸಿದರು. ಗುಂಪು ಗುಂಪಾಗಿ ನಿಂತಿದ್ದ ಜನರನ್ನು ಎಚ್ಚರಿಸಿ ಕಳಿಸಿದ್ರು.
ಕಾರವಾರ ಡಿಸಿ ಕಛೇರಿಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಚಿವ ಹೆಬ್ಬಾರ್ ಸಭೆ..!
ಕಾರವಾರ: ಕಾರ್ಮಿಕ ಖಾತೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ, ಶಿವರಾಮ ಹೆಬ್ಬಾರ್ ಇಂದು ಕಾರವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಭಾಂಗಣದಲ್ಲಿ ಕೋವಿಡ್ – 19 ನಿರ್ವಹಣೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲೆಯ ಸದ್ಯದ ಸ್ಥಿತಿಗಳ ಕುರಿತು ಮಾಹಿತಿ ಪಡೆದು, ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳು,ಸೊಂಕಿತರಿಗೆ ಚಿಕಿತ್ಸೆ, ವೈದ್ಯಕೀಯ ಸೌಕರ್ಯಗಳು ಹಾಗೂ ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಶಾಸಕಿ...
ಜಿಲ್ಲಾಸ್ಪತ್ರೆಗೆ 5 ಆಕ್ಸಿಜನ್ ಕಾನ್ಸಂಟ್ರೇಟರ್ ನೀಡಿದ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ..!
ಕಾರವಾರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಉತ್ತರಕನ್ನಡ ಜಿಲ್ಲೆಗೆ ನೀಡಿರುವ ಸುಮಾರು 5 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಇಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಜಿಲ್ಲಾ ವೈದ್ಯಾಧಿಕಾರಿ ಮೂಲಕ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಶಾಸಕಿ ರೂಪಾಲಿ ನಾಯ್ಕ , ಜಿಲ್ಲಾ ವೈದ್ಯಾಧಿಕಾರಿ, ಶರದ್ ನಾಯಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
ಅಸಲಿ ನೋಟಿಗೆ ಕೋಟಾನೋಟು ಮಾರಾಟ ಜಾಲ: 6 ಜನ ದಂಧೆಕೋರರ ಬಂಧನ..!
ದಾಂಡೇಲಿ: ಅಸಲಿ ನೋಟು ಪಡೆದು ನಕಲಿ ನೋಟುಗಳನ್ನು ಮಾರಾಟ ಮಾಡುತ್ತಿದ್ದ ಖತರ್ನಾಕ ಕೋಟಾ ನೋಟು ಖದೀಮರ ಜಾಲವನ್ನು ದಾಂಡೇಲಿ ಪೊಲೀಸ್ರು ಹೆಡೆಮುರಿ ಕಟ್ಟಿದ್ದಾರೆ. ಅಸಲಿ ನೋಟು ಪಡೆದು , ನಕಲಿ ನೋಟು ನೀಡುತ್ತಿದ್ದ ವೇಳೆಯೇ ದಾಂಡೇಲಿ ಗ್ರಾಮೀಣ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಖೋಟಾ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ದಾಳಿ ವೇಳೆ ಖೋಟಾನೋಟು ವ್ಯವಹಾರ ಮಾಡುತ್ತಿದ್ದ 6 ಜನರನ್ನು ಬಂಧಿಸಲಾಗಿದೆ. ಬಂಧಿತರಿಂದ 4.5 ಲಕ್ಷ ಅಸಲಿ ನೋಟು, 72 ಲಕ್ಷದ ಖೋಟಾ ನೋಟು ವಶಕ್ಕೆ ಪಡೆಲಾಗಿದೆ. ಮಹಾರಾಷ್ಟ್ರದ...
ನಂದಿಕಟ್ಟಾದಲ್ಲಿ ಕೊರೋನಾ ಸೋಂಕಿತರಿಗೆ ಔಷಧಿ ಕಿಟ್ ವಿತರಣೆ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಕೊರೋನ ಸೋಂಕಿತರ ಮನೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ನೀಡಿದ ಕೋವಿಡ್ ಕೇರ್ ಮೆಡಿಷನ್ ಕಿಟ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಾ ರೈತ ಮೂರ್ಚಾ ಅಧ್ಯಕ್ಷರಾದ ಕಲ್ಲನಗೌಡ ಬಸನ ಗೌಡ್ರ, ತಾಲೂಕ ಎಪಿಎಮ್ ಸಿ ಸದಸ್ಯರು ನಿಂಗಪ್ಪಾ ಕವಟೆ, ಪರಶುರಾಮ್ ಮೇಂತೆಕಾರ, ಸಹಕಾರ ಸಂಘದ ಸದಸ್ಯ ರಾಘವೇಂದ್ರ ಜೋಂಡಿಗನವರ, ತಾಲೂಕಾ ಯುವ ಮೂರ್ಚಾ ಕಾರ್ಯದರ್ಶಿ ಕೇದಾರಿ ಬಿ ಮುಗಳಿ ಹಾಗೂ ಕಮ್ಯೂನಿಟಿ ಹೆಲ್ತ್ ಆಪೀಸರ್ ತಾಯವ್ವಾ ಸರ್ದಾರ್, ಆಶಾ ಕಾರ್ಯಕರ್ತೆ ಸವಿತಾ...
ಮುಂಡಗೋಡ: ತಾಲೂಕಿನಲ್ಲಿಂದು 58 ಪಾಸಿಟಿವ್ ದೃಢ, 87 ಗುಣಮುಖ, ಒಂದು ಸಾವು..!
ಮುಂಡಗೋಡ-ತಾಲೂಕಿನಲ್ಲಿ ಇಂದು 58 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಓರ್ವ ಸಾವನ್ನಿಪ್ಪಿದ್ದಾನೆ. ಇನ್ನು 87 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ತಾಲೂಕಿನಲ್ಲಿ ಒಟ್ಟೂ 384 ಸಕ್ರೀಯ ಪ್ರಕರಣಗಳಿದ್ದು, 114 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 227 ಜನ ಸೋಂಕಿತರು ಹೋಂ ಐಸೋಲೇಶನ್ ನಲ್ಲಿದ್ದಾರೆ. 43 ಜನ ಸೋಂಕಿತರು ಕೋವಿಡ್ ಕೇರ್ ಸೆಂಟರ್ ನಲ್ಲಿದ್ದಾರೆ. ಇನ್ನು ತಾಲೂಕಿನ ಇಂದಿರಾನಗರದ 76 ವರ್ಷದ ವೃದ್ದ ಕೊರೋನಾಗೆ ಇಂದು ಬಲಿಯಾಗಿದ್ದು, ಇದುವರೆಗೂ ತಾಲೂಕಿನಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 58 ಕ್ಕೆ...
ಕಾರವಾರ: ಜಿಲ್ಲೆಯಲ್ಲಿ E- ಹಾಸ್ಪಿಟಲ್ ಅಡಿ ನೇಮಕಗೊಂಡಿದ್ದ, 25 ಹೊರಗುತ್ತಿಗೆ ಸಿಬ್ಬಂದಿಗಳ ದಿಢೀರ್ ವಜಾ..!
ಕಾರವಾರ: E-ಹಾಸ್ಪಿಟಲ್ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿಯೋಜನೆಗೊಂಡಿದ್ದ ಸುಮಾರು 25 ಸಿಬ್ಬಂದಿಗಳನ್ನು ಇಂದಿನಿಂದ ಕೈ ಬಿಡುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಸಿಬ್ಬಂದಿಗಳು ದಿಢೀರ್ ವಜಾದಿಂದ ದಿಕ್ಕು ತೋಚದಂತಾಗಿದ್ದಾರೆ. ಸರ್ಕಾರ ಕಳೆದ ಒಂದು ತಿಂಗಳ ಹಿಂದೆ E-ಹಾಸ್ಪಿಟಲ್ ಅಡಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗುತ್ತಿಗೆ ಸಿಬ್ಬಂದಿಗಳ ನೇಮಕ ಮಾಡಿಕೊಂಡಿತ್ತು. ಆಯಾ ತಾಲೂಕಾ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ನಿರ್ದಿಷ್ಟ ಮೊತ್ತಕ್ಕೆ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳುವಂತೆ ಆದೇಶಿಸಿತ್ತು. ಈ ಆದೇಶದಂತೆ ಆಸ್ಪತ್ರೆಗಳು ಡಾಟಾ ಎಂಟ್ರಿ ಸಿಬ್ಬಂದಿಗಳ ನೇಮಕ...