Home ಸಂಕ್ಷಿಪ್ತ ಸುದ್ದಿ

Category: ಸಂಕ್ಷಿಪ್ತ ಸುದ್ದಿ

Post
ಇಂದೂರಿನಲ್ಲಿ “ಪುನೀತ್” ಪುಣ್ಯಸ್ಮರಣೆ, ಕ್ಯಾಂಡಲ್ ಹಚ್ಚಿ ಶೃದ್ಧಾಂಜಲಿ..!

ಇಂದೂರಿನಲ್ಲಿ “ಪುನೀತ್” ಪುಣ್ಯಸ್ಮರಣೆ, ಕ್ಯಾಂಡಲ್ ಹಚ್ಚಿ ಶೃದ್ಧಾಂಜಲಿ..!

ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ದಿವಂಗತ ನಟ ಪುನೀತ್ ರಾಜಕುಮಾರ್ ರವರ 11 ದಿನದ ಪುಣ್ಯತಿಥಿಯ ನಿಮಿತ್ತ ಶೃದ್ಧಾಂಜಲಿ ಕಾರ್ಯಕ್ರಮ ಹಮ್ಮಿಕೊಳ್ಳಾಗಿತ್ತು. ಸೋಮವಾರ ಸಂಜೆ ಇಲ್ಲಿನ ಮುಖ್ಯ ಸರ್ಕಲ್ ನಲ್ಲಿ ಪುನೀತ್ ರಾಜಕುಮಾರ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ನಂತರ ಮೇಣದ ಬತ್ತಿ ಹಚ್ಚಿ ಶೃದ್ಧಾಂಜಲಿ ಅರ್ಪಿಸಲಾಯಿತು. ಪುನೀತ್ ರಾಜಕುಮಾರ್ ಮತ್ತೆ ಹುಟ್ಟಿ ಬನ್ನಿ ಅಂತಾ ಘೋಷಣೆ ಕೂಗಿದ ಅಭಿಮಾನಿಗಳು ಪುನೀತ್ ಅಕಾಲಿಕ ನಿಧನಕ್ಕೆ ಕಂಬನಿ‌ ಮಿಡಿದ್ರು.

Post
ಸಿದ್ದನಕೊಪ್ಪದ ಕಬಡ್ಡಿ ಪಂದ್ಯಾವಳಿಯಲ್ಲಿ ಅತಿಥಿಗಳೇ ಕಣದಲ್ಲಿ ಘರ್ಜನೆ..!

ಸಿದ್ದನಕೊಪ್ಪದ ಕಬಡ್ಡಿ ಪಂದ್ಯಾವಳಿಯಲ್ಲಿ ಅತಿಥಿಗಳೇ ಕಣದಲ್ಲಿ ಘರ್ಜನೆ..!

ಮುಂಡಗೋಡ: ತಾಲೂಕಿನ ಕಾತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿದ್ದನಕೊಪ್ಪದಲ್ಲಿ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾವಳಿಯಲ್ಲಿ ಉದ್ಘಾಟನೆಗೆ ಬಂದಿದ್ದ ಅತಿಥಿಗಳು ಕಬಡ್ಡಿ ಆಟ ಆಡಿ ಸಂಭ್ರಮಿಸಿದ್ರು. ಎರಡು ತಂಡಗಳಾಗಿ ಕಣಕ್ಕಿಳಿದ ಅತಿಥಿ ಮಹೋದಯರು ಕಬಡ್ಡಿ ಆಟದ ಮಜಲುಗಳನ್ನು ಪ್ರದರ್ಶಿಸಿದ್ರು. ಮಳಗಿಯ ಸಂತೋಷ ಶೇಟ್ ರಾಯ್ಕರ್,ಪಕ್ಕೀರಪ್ಪ, ಶಿವಾಜಿ ಸಿಂಧೆ, ಪ್ರಕಾಶ ಅಜ್ಜಮನವರ್ ಸೇರಿದಂತೆ ಹಲವರು ಕಬಡ್ಡಿ ಆಟದಲ್ಲಿ ಪಾಲ್ಗೊಂಡರು. ಇನ್ನು ನಿನ್ನೆಯಿಂದಲೂ ಸಿದ್ದನಕೊಪ್ಪ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿಗಳು ನಡೆಯುತ್ತಿವೆ.

Post
ಮುಂಡಗೋಡ ತಾಲೂಕಿನ ಅಂಗನವಾಡಿಗಳಲ್ಲಿ ಮತ್ತೆ ಚಿಣ್ಣರ ಕಲರವ..!

ಮುಂಡಗೋಡ ತಾಲೂಕಿನ ಅಂಗನವಾಡಿಗಳಲ್ಲಿ ಮತ್ತೆ ಚಿಣ್ಣರ ಕಲರವ..!

ಮುಂಡಗೋಡ: ತಾಲೂಕಿನಲ್ಲಿ ಸೋಮವಾರದಿಂದ ಅಂಗನವಾಡಿ ಕೇಂದ್ರಗಳು ಮತ್ತೆ ಚಾಲನೆ ಪಡೆದುಕೊಂಡಿವೆ. ತಾಲೂಕಿನ ಪ್ರತೀ ಗ್ರಾಮಗಳಲ್ಲೂ ಅಂಗಮವಾಡಿ ಕೇಂದ್ರಗಳನ್ನು ಸ್ವಚ್ಚಗೊಳಿಸಿ, ತಳಿರು ತೋರಣಗಳಿಂದ ಶೃಂಗರಿಸಿ, ಪೂಜೆ ಮಾಡಿ ಪುನರಾರಂಭ ಮಾಡಲಾಗಿದೆ. ಕೊರೋನಾ ಸಂಕಷ್ಟದ ನಡುವೆ ಬಂದ್ ಆಗಿದ್ದ ಅಂಗನವಾಡಿಗಳು ಇಂದಿನಿಂದ ಪುಟ್ಟ ಪುಟ್ಟ ಮಕ್ಕಳ ಕಲರವದೊಂದಿಗೆ ಶುರುವಾದವು. ತಾಲೂಕಿನ ಅಗಡಿಯಲ್ಲಿ ಅಂಗನವಾಡಿಯ ಪುನರಾರಂಭಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅಂಗನವಾಡಿ ಕಾರ್ಯಕರ್ತರು ಮಕ್ಕಳನ್ನು ಬರಮಾಡಿಕೊಂಡರು..

Post
ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!

ಕಾತೂರಿನಲ್ಲಿ ಸರಳ ಗಣೇಶೋತ್ಸವ, ಸಂತೋಷ ಶೇಟ್ ರಾಯ್ಕರ್ ದಂಪತಿಯಿಂದ ವಿಶೇಷ ಪೂಜೆ..!

ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಗಣೇಶ ಚತುರ್ಥಿಯ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಳಗಿಯ ಸಂತೋಷ ಶೇಟ್ ರಾಯ್ಕರ್ ದಂಪತಿಗಳು ಪೂಜಾ ಕಾರ್ಯಕ್ರಮ ನೆರವೇರಿಸಿದ್ರು. ಕಾತೂರಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಟಾಪಿಸಲಾಗಿರೋ ಗಣೇಶ ಮೂರ್ತಿಗೆ ಸಂತೋಷ ರಾಯ್ಕರ್ ದಂಪತಿಗಳು ಇಂದು ವಿಶೇಷ ಪೂಜೆ ಸಲ್ಲಿಸಿದ್ರು. ಈ ವೇಳೆ ಗ್ರಾಮದ ಹಲವು ಮುಖಂಡರು ಭಾಗಿಯಾಗಿದ್ರು. ****************** ಜಾಹೀರಾತು

Post
ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!

ಹುನಗುಂದದಲ್ಲಿ ಸರಳವಾಗಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ..!

  ಮುಂಡಗೋಡ: ತಾಲೂಕಿನ ಹುನಗುಂದ ದೇಶಪಾಂಡೆ ನಗರದಲ್ಲಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಿತು. ಕೋವಿಡ್ ಮಾರ್ಗಸೂಚಿಯ ಅನ್ವಯ ಸರಳವಾಗಿ ಆಚರಿಸಲಾದ ಗಣೇಶೋತ್ಸವಕ್ಕೆ, ಸರಳವಾದ ಮೆರವಣಿಗೆ ಮೂಲಕ ಗಣೇಶ ವಿಸರ್ಜನೆ ನಡೆಸಲಾಯಿತು. ಅದಕ್ಕೂ ಮೊದಲು, ಇಂದು ಗಣೇಶನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಜನಾ ಪದಗಳ ಮೂಲಕ ಗಣೇಶನಿಗೆ ಜಯ ಘೋಷಗಳನ್ನು ಕೂಗಿ ಭಕ್ತಿ ಸಮರ್ಪಿಸಲಾಯಿತು..

Post
ಮುಂಡಗೋಡಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿಯ ಜಯಂತಿ ಕಾರ್ಯಕ್ರಮ..!

ಮುಂಡಗೋಡಿನಲ್ಲಿ ಇಂದು ವೀರಭದ್ರೇಶ್ವರ ಸ್ವಾಮಿಯ ಜಯಂತಿ ಕಾರ್ಯಕ್ರಮ..!

ಮುಂಡಗೋಡ: ಪಟ್ಟಣದಲ್ಲಿ ಇಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಪುರೋಹಿತರ ಬಳಗದಿಂದ ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿನ ಬಸವಣ್ಣ ದೇವಸ್ಥಾನದಲ್ಲಿ ಸೇರಿದ್ದ ಪುರೋಹಿತರು ಹಾಗೂ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಕಾರ್ಯಕರ್ತರು ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಣೆ ಮಾಡಿದ್ರು. ವೀರಭದ್ರೇಶ್ವರ ನಾಮಾವಳಿ ಸೇರಿದಂತೆ ಧಾರ್ಮಿಕ ಪೂಜಾ ಕೈಂಕರ್ಯಗಳ ಕುರಿತು ಚರ್ಚಿಸಿದ್ರು..

  • 1
  • 2
error: Content is protected !!