Home ಹಾವೇರಿ

Category: ಹಾವೇರಿ

Post
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!

ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!

 ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಕಣ ಮತ್ತಷ್ಟು ಕಾವು ಪಡೆದುಕೊಂಡಿದೆ. ಕ್ಷೇತ್ರದಲ್ಲಿ NDA ಮಿತ್ರ ಪಕ್ಷ JDS ತನ್ನ ಪ್ರಾಭಲ್ಯ ತೋರಿಸಲು ಸಜ್ಜಾಗಿದೆ. ಈ ಕಾರಣಕ್ಕಾಗೇ ನಿಖಿಲ್ ಕುಮಾರಸ್ವಾಮಿ ಇಂದು ಶಿಗ್ಗಾವಿಗೆ ಆಗಮಿಸಿದ್ದಾರೆ. ಶಿಗ್ಗಾವಿಯ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಹಮ್ಮಿಕೊಂಡಿರೋ ಶಿಗ್ಗಾಂವ-ಸವಣೂರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಮೂರು ಕ್ಷೇತ್ರದಲ್ಲಿ NDA...

Post
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?

ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?

ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆ ಕಣ ರಂಗೇರಿದೆ. ಚುನಾವಣೆ ದಿನಾಂಕ ಘೋಷಣೆ ಆಗ್ತಿದ್ದಂತೆ ಟಿಕೆಟ್ ಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯೇ ತಲೆನೋವಾಗಿದೆ. ಟಿಕೆಟ್‌ಗಾಗಿ ಜೋರಾದ ಲಾಭಿ..! ಯಾರಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಎರಡೂ ಪಕ್ಷಗಳ ಟಿಕೆಟ್..? * ಟಿಕೆಟ್‌ ಹಂಚಿಕೆಯಲ್ಲಿ ತಲೆ ಕೆಡಿಸಿಕೊಂಡ ಎರಡೂ ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್‌. * ದೆಹಲಿ ಪಡೆಸಾಲೆಯಲ್ಲಿ ಟಿಕೆಟ್ ಹಂಚಿಕೆ ಚರ್ಚೆ. * ಇನ್ನೂ ಬಗೆಹರಿಯದ ಟಿಕೆಟ್ ಹಂಚಿಕೆ ಗೊಂದಲ. * ಟಿಕೆಟ್‌ಗಾಗಿ ದೆಹಲಿ ಕದ ತಟ್ಟಿದ ಟಿಕೆಟ್...

Post
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ

ಹಾವೇರಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾವಿ ತಹಶೀಲ್ದಾರ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ ಹಾಗೂ ಸಹಾಯಕ ಚುನಾವಣಾಧಿಕಾರಿ...

Post
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

 ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ...

Post
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!

ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!

ಶಿಗ್ಗಾವಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಶಿಗ್ಗಾವಿ ಪಟ್ಟಣದ ಹಿರೇಕೆರೆಯಲ್ಲಿ ಮಂಗಳವಾರ ಸಂಜೆ ಜರುಗಿದೆ. ಮೃತ ವ್ಯಕ್ತಿಗಳನ್ನ ಶಿಗ್ಗಾವಿ ಪಟ್ಟಣದ ಸಾಲಗೇರಿ ಓಣಿಯ ಹಜರತ ಅಲಿ ಇಬ್ರಾಹಿಂ ಮುಕ್ಕೇರಿ (27), ಅಕ್ಸರ್ ಹಿಮಾಮ್ ಖಾಸೀಮ್ ಸುಲ್ತಾನಖಾನವರ (35) ಎಂದು ಗುರುತಿಸಲಾಗಿದೆ. ಮೀನು ಹಿಡಿಯುವಾಗ ಆಯತಪ್ಪಿ ಕೆರೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿಗಳ ದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹೊರತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದು ಮೃತ ವ್ಯಕ್ತಿಗಳ...

Post
ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು

ಊಟ ಮಾಡಿ ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಹರಿದ ರೂಲರ್.! ಇಬ್ಬರು ದಾರುಣ ಸಾವು

ಹಾವೇರಿ; ಊಟ ಮಾಡಿ ರಸ್ತೆಯ ಪಕ್ಕದಲ್ಲಿ ಮಲಗಿದವರ ಮೇಲೆ ರೋಡ್ ರೂಲರ್ ಹರಿದು ಇಬ್ಬರು ಕಾರ್ಮಿಕರ ಸಾವು ಕಂಡ ದಾರುಣ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರಿನಲ್ಲಿ ನಡೆದಿದೆ. ಸಿದ್ದು(24), ಪ್ರೀತಮ್ ( 25) ರೂಲರ್ ಅಡಿಗೆ ಸಿಲುಕಿ ಸಾವು ಕಂಡ ದುರ್ಧೈವಿಗಳು. ಮೊಟೇಬೆನ್ನೂರಿನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು, ಮಾಧ್ಯಾಹ್ನದ ವೇಳೆ ಊಟ ಮಾಡಿ ರೂಲರ್ ಪಕ್ಕದಲ್ಲಿ ಮಲಗಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಬ್ಯಾಡಗಿ ಪೊಲೀಸರು ಬೇಟಿ ನೀಡಿ,...

Post
ಟ್ರ್ಯಾಕ್ಟರ್ ಹಾಗೂ ಇಂಜೀನ್ ನಡುವೆ ಸಿಲುಕಿ ದಾರುಣ ಸಾವು ಕಂಡ ಚಾಲಕ, ಗುಡ್ಡ ಹತ್ತಿಸುವಾಗ ದುರಂತ..!

ಟ್ರ್ಯಾಕ್ಟರ್ ಹಾಗೂ ಇಂಜೀನ್ ನಡುವೆ ಸಿಲುಕಿ ದಾರುಣ ಸಾವು ಕಂಡ ಚಾಲಕ, ಗುಡ್ಡ ಹತ್ತಿಸುವಾಗ ದುರಂತ..!

ಹಾನಗಲ್: ಟ್ಯ್ರಾಕ್ಟರ್ ಇಂಜಿನ್ ಮತ್ತು ಟ್ರೆಲರ್ ಮಧ್ಯ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹಾನಗಲ್ ತಾಲೂಕಿನ ಆಡೂರ ಗ್ರಾಮದಲ್ಲಿ ನಡೆದಿದೆ‌. ಬಂಕಾಪೂರ ಗ್ರಾಮದ ಯಲ್ಲಪ್ಪ ಉಳಿವೆಪ್ಪ ವಳಗೇರಿ (40) ಮೃತ ದುರ್ದೈವಿಯಾಗಿದ್ದಾನೆ. ಈತ ಬಂಕಾಪೂರ ಗ್ರಾಮದಿಂದ ಆಡೂರ ಗ್ರಾಮಕ್ಕೆ ಟ್ರ್ಯಾಕ್ಟರ್ ನಲ್ಲಿ ಎಂ.ಸ್ಯಾಂಡ್ ಉಸುಕು ತಂದಿದ್ದ. ಗ್ರಾಮದಲ್ಲಿರುವ ಗುಡ್ಡವನ್ನ ಹತ್ತಿಸುವ ವೇಳೆ ಅವಘಡ ನಡೆದಿದೆ. ಏಕಾಏಕಿ ಟ್ರ್ಯಾಕ್ಟರ್ ಇಂಜಿನ್ ಮೆಲಕ್ಕೆ ಹಾರಿದ ಪರಿಣಾಮ ಇಂಜಿನ್ ಮತ್ತು ಟ್ರೆಲರ್ ನಡುವೆ ಟ್ರ್ಯಾಕ್ಟರ್ ಚಾಲಕ ಸಿಲುಕಿಕೊಂಡು ಸಾವನ್ನಪ್ಪಿದ್ದಾನೆ. ಆಡೂರ ಪೊಲೀಸ್...

Post
ಪಂಪಸೆಟ್ ದುರಸ್ತಿ ವೇಳೆ ವಿದ್ಯುತ್ ತಗುಲಿ ತಂದೆ ಮಗ ದಾರುಣ ಸಾವು

ಪಂಪಸೆಟ್ ದುರಸ್ತಿ ವೇಳೆ ವಿದ್ಯುತ್ ತಗುಲಿ ತಂದೆ ಮಗ ದಾರುಣ ಸಾವು

ಹಾವೇರಿ: ಪಂಪ್‌ಸೆಟ್ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಪತ್ತೇಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕರಬಸಪ್ಪ ಕಡೇನಾಯಕನಹಳ್ಳಿ (50) ಹಾಗೂ ಅವರ ಪುತ್ರ ದರ್ಶನ ಕಡೇನಾಯಕನಹಳ್ಳಿ (26) ಎಂದು ಗುರುತಿಸಲಾಗಿದೆ. ಕರಬಸಪ್ಪ ಮತ್ತು ದರ್ಶನ ಇಬ್ಬರೂ ಸೇರಿಕೊಂಡು ಪಂಪ್ ಸೆಟ್ ದುರಸ್ತಿ ಮಾಡಲು ಮುಂದಾಗಿದ್ದರು. ಭತ್ತದ ಬೆಳೆಗೆ ನೀರು ಹಾಯಿಸಲು ಮೋಟಾರ್‌ ಆನ್ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶಕ್ಕೆ ಪಂಪ್ ಸೆಟ್ ಮೇಲೆಯೇ ಬಿದ್ದು ಇಬ್ಬರೂ ಸ್ಥಳದಲ್ಲೇ...

Post
ಶಿಗ್ಗಾವಿಯಲ್ಲಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

ಶಿಗ್ಗಾವಿಯಲ್ಲಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

 ಶಿಗ್ಗಾವಿ ಪಟ್ಟಣದಲ್ಲಿ ಶ್ರೀ ಶರಣ ಹಡಪದ ಅಪ್ಪಣ್ಣನವರ 890ನೇ ಜಯಂತ್ಯೋತ್ಸವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ನಂತರ, ಶಿಗ್ಗಾವಿ-ಸವಣೂರ ತಾಲೂಕಿನಿ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಹಾವೇರಿ ಜಿಲ್ಲಾ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶ್ರೀ ಅನ್ನದಾನಿಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಹಾಗೂ ಸಾನಿದ್ಯವನ್ನು ಶ್ರೀ ಮ ನಿ ಪ್ರ ಸಂಗನಬಸವ ಮಹಾಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ...

error: Content is protected !!