Shiggaon Murder Case;
ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಶಿವಾನಂದ್ ಕುನ್ನೂರ್ ಎಂಬಾತನ ಮರ್ಡರ್ ಕೇಸಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ ಪೊಲೀಸ್ರು. ಹಾವೇರಿ ಎಸ್ಪಿ ಅಂಶುಕುಮಾರ್, ಘಟನೆಯ ಕುರಿತು ಮಾದ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇಬ್ಬರು ಆರೋಪಿಗಳ ಕಾಲಿಗೆ ಗುಂಡು..!
ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರ ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಮೊದಲು ಆರೋಪಿಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ನಂತರ ಹೆಚ್ಚುವರಿ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ಗೆ ಕಳುಹಿಸಿ ಕೊಡಲಾಗಿದೆ ಅಂತಾ ಎಸ್ಪಿ ತಿಳಿಸಿದ್ರು.
ಅದು ಹಾನಗಲ್ ನ ಕೊಂಡೊಜಿ ಕ್ರಾಸ್..!
ಈ ಆರೋಪಿಗಳು ಗುತ್ತಿಗೆದಾರ ಶಿವಾನಂದ ಅವರನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು. ನಾಲ್ಕು ತಂಡಗಳನ್ನು ರಚಿಸಿ ಶೋಧ ನಡೆಸಲಾಗುತ್ತಿತ್ತು. ಹಾನಗಲ್ ತಾಲೂಕಿನ ಕೊಂಡೊಜಿ ಕ್ರಾಸ್ ಬಳಿ ಆರೋಪಿಗಳು ಇರುವ ಬಗ್ಗೆ ಮಾಹಿತಿ ಪಡೆದ ನಮ್ಮ ಪೊಲೀಸ್ ಸಿಬ್ಬಂದಿ ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳ ಕಾಲಿಗೆ ಶಿಗ್ಗಾವಿ ಸಿಪಿಐ ಸತ್ಯಪ್ಪ ಮಾಳಗೊಂಡ ಹಾಗೂ ಪಿಎಸ್ಐ ಸಂಪತ್ ಫೈರಿಂಗ್ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಮಾಹಿತಿ ನೀಡಿದ್ರು.
ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪಿಎಸ್ಐ ಸಂಪತ್, ಶಿಗ್ಗಾವಿ ಸಿಪಿಐ ಸತ್ಯಪ್ಪ ಮಾಳಗೊಂಡ, ಕಾನ್ಸ್ಟೇಬಲ್ಗಳಾದ ರಾಜು, ಹರೀಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Shiggaon Murder Case;
ಮಂಗಳವಾರದ ಮರ್ಡರ್..!
ಮಂಗಳವಾರ ಮಧ್ಯಾಹ್ನ ಶಿವಾನಂದ ಕುನ್ನೂರ ಹತ್ಯೆ ನಡೆದಿತ್ತು. ಆರೋಪಿಗಳ ಪತ್ತೆಗೆ ನಾಲ್ಕು ಟೀಂ ರಚಿಸಿ ಎಲ್ಲೆಡೆ ಹುಡುಕಾಟ ನಡೆಸಲಾಗುತ್ತಿತ್ತು. ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧನ ವೇಳೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಮುಂದಾದಾಗ ನಮ್ಮ ಸಿಬ್ಬಂದಿ ತಮ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ ಅಂತಾ ಎಸ್ಪಿ ಅಂಶುಕುಮಾರ್ ತಿಳಿಸಿದ್ರು.
ಐವರ ವಿರುದ್ಧ ದೂರು ನೀಡಲಾಗಿತ್ತು..!
ಶಿಗ್ಗಾವಿ ಪಟ್ಟಣದ ಹೊರವಲಯದ ಗಂಗಿಭಾವಿ ಕ್ರಾಸ್ ಬಳಿ ಮಂಗಳವಾರ ಗುತ್ತಿಗೆದಾರ ಶಿವಾನಂದ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆಯ ವಿಡಿಯೋ ವೈರಲ್ ಆಗಿತ್ತು. ಅದನ್ನು ಆಧರಿಸಿ ಶಿವಾನಂದ ಅವರ ಪತ್ನಿ ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ನಾಗರಾಜ್ ಸವದತ್ತಿ, ಹನುಮಂತ, ಅಶ್ರಫ್, ಸುದೀಪ್ ಮತ್ತು ಸುರೇಶ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಇದನ್ನೂ ಓದಿ👉 ಉತ್ತರ ಕನ್ನಡ ಸೇರಿ ರಾಜ್ಯದ ಹಲವೆಡೆ ಮತ್ತೆ ಭಾರಿಮಳೆ ಮುನ್ಸೂಚನೆ..! ಎಲ್ಲೇಲ್ಲಿ..?
ಇದನ್ನೂ ಓದಿ👉 ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!
ಇಲ್ಲಿ ಕ್ಲಿಕ್ ಮಾಡಿ ವಾಟ್ಸಾಪ್ ಚಾನಲ್ ಸೇರಿಕೊಳ್ಳಿ