ಉತ್ತರ ಕನ್ನಡ ಸೇರಿ ರಾಜ್ಯದ ಹಲವೆಡೆ ಮತ್ತೆ ಭಾರಿ‌ಮಳೆ ಮುನ್ಸೂಚನೆ..! ಎಲ್ಲೇಲ್ಲಿ..?

Heavy Rains Forecast;
ಬೆಂಗಳೂರು: ಉತ್ತ ಕನ್ನಡ ಜಿಲ್ಲೆ, ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಕರ್ನಾಟಕದಾದ್ಯಂತ ಭಾರೀ ಮಳೆ ಮುಂದುವರೆದಿದೆ. ಕೊಡಗಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಇನ್ನುಳಿದಂತೆ, ಉತ್ತರ ಕನ್ನಡ ಜಿಲ್ಲೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ ಉತ್ತರ ಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಮಂಡ್ಯ, ಮೈಸೂರು ಹಾಗೂ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಎಲ್ಲೇಲ್ಲಿ ಮಳೆ..?
ಯಲ್ಲಾಪುರ, ಖಾನಾಪುರ, ಕ್ಯಾಸಲ್​ರಾಕ್, ಕಿತ್ತೂರು, ಸಕಲೇಶಪುರ, ಕಮ್ಮರಡಿ, ಆಗುಂಬೆ, ಶೃಂಗೇರಿ, ಕಳಸ, ಸೋಮವಾರಪೇಟೆ, ಕೊಪ್ಪ, ನಾಪೋಕ್ಲುವಿನಲ್ಲಿ ಅತ್ಯಧಿಕ ಮಳೆಯಾಗಿದೆ. ಬೆಳ್ತಂಗಡಿ, ಮೂಡುಬಿದಿರೆ, ಧರ್ಮಸ್ಥಳ, ಸುಳ್ಯ, ಬಂಟ್ವಾಳ, ಮಂಗಳೂರು, ಹಳಿಯಾಳ, ಪೊನ್ನಂಪೇಟೆ, ಪಣಂಬೂರು, ಜೋಯ್ಡಾ, ಎನ್.​ಆರ್.​ಪುರ್, ಪುತ್ತೂರು, ನಿಪ್ಪಾಣಿ, ಹಿಡಕಲ್, ಕುಂದಾಪುರ, ಹುಬ್ಬಳ್ಳಿ, ಮಹಾಲಿಂಗಪುರ, ಭದ್ರಾವತಿ, ಹೆಚ್​​ಡಿ ಕೋಟೆ, ಶಿಗ್ಗಾಂವಿ, ಸಂಕೇಶ್ವರ, ಸೇಡಂ, ದೇವರಹಿಪ್ಪರಗಿ, ಬೈಲಹೊಂಗಲ, ಮುದ್ದೇಬಿಹಾಳದಲ್ಲಿ ನಿನ್ನೆಯಿಂದ ಮಳೆ ಬಿದ್ದಿದೆ.

ಇದನ್ನೂ ಓದಿ👇ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ವಿಜಯನಗರ, ಬೀದರ್​ ನಲ್ಲಿ ಸಹ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿರಂತರ ಸುದ್ದಿಗಾಗಿ ನಮ್ಮ ವಾಟ್ಸಾಪ್ ಚಾನಲ್ ಸೇರಲು ಈ ಕೆಂಪು ಅಕ್ಷರಗಳ‌ಮೇಲೆ ಕ್ಲಿಕ್ ಮಾಡಿ, ಫಾಲೋ ಮಾಡಿ

error: Content is protected !!