Cow Shelter Karwar; zಕಾರವಾರ; ಗೋವುಗಳನ್ನು ಸಾಕುವವರ ಸಂಖ್ಯೆ ಹೆಚ್ಚಾಗಬೇಕು. ಸಾಕಲು ಸಾಧ್ಯವಾಗದೇ ಇರುವವರು ಗೋಶಾಲೆಗಳಿಗೆ ಗೋವುಗಳನ್ನು ನೀಡಬೇಕು. ಗೋಶಾಲೆಗಳಲ್ಲಿ ಗೋವುಗಳನ್ನು ಜೋಪಾನವಾಗಿ, ಮೇವು ಹಾಕಿ ನೋಡಿಕೊಳ್ಳಲಾಗುವುದು ಎಂದು ಬಂದರು ಹಾಗೂ ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಶನಿವಾರ ವಿತರಿಸಿದರು.
ಅವರು ಶನಿವಾರ ಜಿಲ್ಲಾಡಳಿತ, ಉತ್ತರ ಕನ್ನಡ ಜಿಲ್ಲಾ ಪ್ರಾಣಿದಯಾ ಸಂಘ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರ ತಾಲೂಕಿನ ಸಾವಂತವಾಡ ಹೋಬಳಿಯ ಕಣಸಗಿರಿ ಗ್ರಾಮದಲ್ಲಿ ನಿರ್ಮಿಸಲಾದ ಸರ್ಕಾರಿ ಗೋಶಾಲೆ ಉದ್ಘಾಟಿಸಿ ಮಾತನಾಡಿದರು.
ಗೋವು ತಾಯಿಗೆ ಸಮಾನ ಅವುಗಳು ಅನಾಥವಾಗಿ ಬಿಡದೇ , ಸೂಕ್ತ ರೀತಿಯಲ್ಲಿ ರಕ್ಷಣೆ ಮಾಡುವ ಉದ್ದೇಶದಿಂದ ಗೋಶಾಲೆಯನ್ನು ರೂ. 50 ಲಕ್ಷ ವೆಚ್ಚದಲ್ಲಿ ತೆರೆಯಲಾಗಿದೆ ಎಂದ ಸಚಿವರು, ರಾಜ್ಯದಲ್ಲಿ ಎಲ್ಲಾ ಕಡೆ ಗೋಶಾಲೆ ತೆರೆಯಲಾಗುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ 6 ಕಡೆ ಗೋಶಾಲೆ ತೆರೆಯಲಾಗಿದೆ. ಅನಾಥ ಗೋವುಗಳನ್ನು ರಕ್ಷಿಸಿ, ಗೋಶಾಲೆಗಳಲ್ಲಿ ಸಾಕಲಾಗುತ್ತದೆ. ಪೋಲಿಸ್ ಇಲಾಖೆಯಿಂದ ರಕ್ಷಿಸಲ್ಪಟ್ಟ ಗೋವುಗಳನ್ನು ಸಹ ಇಲ್ಲಿ ಸಾಕಲಾಗುವುದು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾರ್ಕೇಟಿಂಕ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಕೆ ಸೈಲ್, ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಈಶ್ವರ ಕಾಂದೂ, ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿ ಝುಪಿಶಾನ್ ಹಕ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ. ಮೋಹನ ಕುಮಾರ್, ಚಿತ್ತಾಕುಲಾ ಗ್ರಾಮ ಪಂಚಾಯತ ಅಧ್ಯಕ್ಷ ನಿತಿನ್ ಆನಂದ ಬಾಂದೇಕರ್ ಮತ್ತಿತರರು ಇದ್ದರು.