Robbery News; ಬೆಂಗಳೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ 2 ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಜೂನ್ 25ರಂದು ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ಎಂ.ಎಸ್. ಪಾಳ್ಯದಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡ ಉದ್ಯಮಿ ಶ್ರೀಹರ್ಷ ವಿ. ಅವರು ನೀಡಿರುವ ದೂರಿನ ಅನ್ವಯ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಗೇರಿ ಮೂಲದ ಶ್ರೀಹರ್ಷ ತಮ್ಮ ಉದ್ಯಮಕ್ಕೆ ಅಗತ್ಯವಿರುವ ಯಂತ್ರವೊಂದನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಬೇಕಿದ್ದುದರಿಂದ 2 ಕೋಟಿ ರೂ. ಹಣವನ್ನು ಯುಎಸ್ಡಿಐಟಿಗೆ ಕನ್ವರ್ಟ್ ಮಾಡಿಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ ತನ್ನ ಸ್ನೇಹಿತರೊಬ್ಬರ ಮೂಲಕ ಶ್ರೀಹರ್ಷ ಅವರಿಗೆ ಬೆಂಜಮಿನ್ ಹರ್ಷ ಎಂಬಾತನ ಪರಿಚಯವಾಗಿತ್ತು. ಯುಎಸ್ಡಿಐಟಿಗೆ ಹಣ ಕನ್ವರ್ಟ್ ಮಾಡಿಸುವ ಸಲುವಾಗಿ ಚರ್ಚಿಸಿದಾಗ ಎಂ.ಎಸ್. ಪಾಳ್ಯದಲ್ಲಿರುವ ಎ.ಕೆ. ಎಂಟರ್ಪ್ರೈಸಸ್ ಬಳಿ ಬರುವಂತೆ ಬೆಂಜಮಿನ್ ಹರ್ಷ ಸೂಚಿಸಿದ್ದ. ಅದರಂತೆ ಜೂನ್ 25ರಂದು ಮಧ್ಯಾಹ್ನ 3 ಗಂಟೆಗೆ ಎಂ.ಎಸ್.ಪಾಳ್ಯದ ಎ.ಕೆ. ಎಂಟರ್ಪ್ರೈಸಸ್ನಲ್ಲಿ ಬೆಂಜಮಿನ್ ಹರ್ಷ ಹಾಗೂ ಶ್ರೀಹರ್ಷ ಭೇಟಿಯಾಗಿದ್ದರು ಎಂದು ದೂರಿನಲ್ಲಿ ವಿವರಿಸಲಾಗಿದೆ. Robbery News;ಶ್ರೀಹರ್ಷ, ಬೆಂಜಮಿನ್ ಮತ್ತು...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಪತಿಯ ಕೊಲೆಗೆ ಪ್ರತಿಕಾರ; ಆ ಹೆಣ್ಣಿನ ಸೇಡಿಗೆ ಅಲ್ಲಿ ಹೆಣವಾಗಿ ಬಿದ್ದವರು ಬರೋಬ್ಬರಿ ಮೂರು ಜನ..!
Kalaburgi Triple Murder; ಕಲಬುರ್ಗಿ: ಹೆಣ್ಣಿನ ಸೇಡಿಗಾಗಿ ಇಲ್ಲಿ ತ್ರಿಬಲ್ ಮರ್ಡರ್ ನಡೆದಿದೆ. ಗಂಡನ ಕೊಂದವರನ್ನು ಮುಗಿಸದೇ ತಾಳಿ ತೆಗೆಯಲ್ಲ ಅಂತ ಪ್ರತಿಜ್ಞೆ ಮಾಡಿದ್ದ ಆ ಹೆಣ್ಣಿನ ಕೋಪಜ್ವಾಲೆಯಲ್ಲಿ, ಮೂವರು ಹೆಣವಾಗಿದ್ದಾರೆ. ಕಲಬುರ್ಗಿ ತ್ರಿಬಲ್ ಮರ್ಡರ್ ಕೇಸಿನಲ್ಲಿ ರೋಚಕ ಕಹಾನಿಗಳು ಹೊರ ಬರುತ್ತಿವೆ. 8 ತಿಂಗಳ ಹಿಂದೆ ಕೊಲೆಯಾಗಿದ್ದ ರೌಡಿಶೀಟರ್ ಸೋಮು ತಾಳಿಕೋಟಿ ಪತ್ನಿಯ ಶಪಥ ಮತ್ತೆ ಮೂರು ಜೀವ ತೆಗೆಯುವಂತೆ ಮಾಡಿದೆ. ಹೆಣ್ಣಿನ ದ್ವೇಷ ಎಷ್ಟೊಂದು ಕೆಟ್ಟದು ಎಂಬುದು ಇಲ್ಲಿ ಸಾಬೀತಾಗಿದೆ. ಕಲಬುರ್ಗಿ ಹೊರವಲಯದ ಡ್ರೈವರ್ ಧಾಬಾದಲ್ಲಿ ಮಂಗಳವಾರ ತಡರಾತ್ರಿ ನಡೆದ ಮೂರು ಕೊಲೆಗಳು ಇದಕ್ಕೆ ಸಾಕ್ಷಿಯಾಗಿವೆ. ಗುರುತು ಸಿಗಲಾರದಷ್ಟು ಭಯಂಕರವಾಗಿ ಕೊಲ್ಲಲು ಅದೆಂಥಾ ದ್ವೇಷ ಮನದಲ್ಲಿ ಮನೆ ಮಾಡಿತ್ತು ಎಂಬುದು ಸಾರ್ವಜನಿಕರಲ್ಲಿ ಕಾಡುತ್ತಿರುವ ಪ್ರಶ್ನೆಯಾಗಿದೆ. ಅದು ನವೆಂಬರ್, 2024….! 2024ರ ನವೆಂಬರ್ನಲ್ಲಿ ಡ್ರೈವರ್ ದಾಬಾ ಮಾಲೀಕ ಸಿದ್ಧಾರೂಢ ಹಾಗೂ ಇತರರು ಸೇರಿಕೊಂಡು ರೌಡಿಶೀಟರ್ ಸೋಮು ತಾಳಿಕೋಟಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ಶವವನ್ನು ಅನಾಥವಾಗಿ ಎಸೆದು ಹೋಗಿದ್ದರು. ಈ ವೇಳೆ...
ತಡಸ ತಾಯವ್ವ ದೇವಸ್ಥಾನ ಸಮೀಪ ಲಾರಿ ಅಪಘಾತ..! ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಸ್ಥಗಿತ..!
Lorry accident; ಮುಂಡಗೋಡ ತಾಲೂಕಿನ ಗಡಿ ಭಾಗದ, ತಡಸ ಸಮೀಪದ ಹುಬ್ಬಳ್ಳಿ ರಸ್ತೆಯಲ್ಲಿ, ಲಾರಿಯೊಂದು ಅಪಘಾತವಾಗಿ ಬಿದ್ದಿದೆ. ಹೀಗಾಗಿ, ಮುಂಡಗೋಡ- ಹುಬ್ಬಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ. ಕನಿಷ್ಟ ಎರಡರಿಂದ ಮೂರು ಗಂಟೆಗಳ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ. ಹುಬ್ಬಳ್ಳಿ ರಸ್ತೆಯ ತಾಯವ್ವನ ದೇವಸ್ಥಾನದ ಸಮೀಪ ಲಾರಿ ಅಪಘಾತವಾಗಿ ಅಕ್ಷರಶಃ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಹೀಗಾಗಿ, ರಸ್ತೆಯಲ್ಲಿ ವಾಹಮ ಸಂಚಾರಕ್ಕೆ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಪೊಲೀಸರು ಶಿರಸಿಯಿಂದ ಹುಬ್ಬಳ್ಳಿಯೆಡೆಗೆ ಸಂಚರಿಸುವ ವಾಹನಗಳನ್ನು ಬಂಕಾಪುರ ರಸ್ತೆ ಮಾರ್ಗವಾಗಿ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಿಸುತ್ತಿದ್ದಾರೆ. ಇದನ್ನೂ ಓದಿ👇 ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..! ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?
ಅಬ್ಬಾ..! ಶಿರಸಿ ಶೈಕ್ಷಣಿಕ ಜಿಲ್ಲೆಯ DDPI ಬಸವರಾಜ್ ಎತ್ತಂಗಡಿ..! ಹೊಸ DDPI ಆಗಿ ಬಂದ್ರು ಡಿ. ಆರ್. ನಾಯ್ಕ್..!
DDPI Transfer News; ಶಿರಸಿ ಶೈಕ್ಷಣಿಕ ಜಿಲ್ಲೆಯ ಬಲು ಜನಪ್ರಿಯ DDPI ಆಗಿದ್ದ ಸನ್ಮಾನ್ಯ ಬಸವರಾಜ್ ರವರನ್ನು, ಸರ್ಕಾರ ಸ್ಥಳವನ್ನೂ ತೋರಿಸದೇ ಎತ್ತಂಗಡಿ ಮಾಡಿದೆ. ನೂತನ DDPI ಆಗಿ D.R. ನಾಯ್ಕ್ ನೇಮಕವಾಗಿದ್ದಾರೆ. ಬೆಳಗಾವಿ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರವಾಚಕರಾಗಿ ಕಾರ್ಯನಿರ್ವಹಿಸುತಿದ್ದ ಡಿ. ಆರ್. ನಾಯ್ಕ್, ಶಿರಸಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಆಗಿ ಬಂದಿದ್ದಾರೆ. ಹೀಗಾಗಿ, ಸದ್ಯ ಡಿಡಿಪಿಐ ಆಗಿದ್ದ ಬಸವರಾಜ್ ಅವರನ್ನು ಸ್ಥಳ ನಿಯುಕ್ತಿಗಾಗಿ ಸರಕಾರಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಅಂದಹಾಗೆ, ಡಿ. ಆರ್. ನಾಯ್ಕ್ ರವರು ಈ ಹಿಂದೆ ಸಿದ್ದಾಪುರ BEO ಆಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು ಅನ್ನೊ ಮಾಹಿತಿ ಇದೆ. ಪುಣ್ಯಕ್ಕೆ, ಇವ್ರಿಂದಲಾದ್ರೂ ನಮ್ಮ ಮುಂಡಗೋಡಿನ ಶಿಕ್ಷಣ ಕ್ಷೇತ್ರ ಸುಧಾರಿಸಲಿ ಅನ್ನೋದು, ಅಸಂಖ್ಯ ಶಿಕ್ಷಣಾಭಿಮಾನಿಗಳ ಆಶಯ..! ಹೀಗಾಗಿ, ನಿರ್ಗಮಿಸುತ್ತಿರೋ DDPI ರವರಿಗೆ ಹೃದಯಪೂರ್ವಕವಾಗಿ, ಸಂಭ್ರಮ, ಸಡಗರದ ಖುಶಿಯಿಂದಲೇ ಇಲ್ಲಿನ ಜನ ಬೀಳ್ಕೊಡುತ್ತಿದ್ದಾರೆ.
ಚಿಗಳ್ಳಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಕರು HM ಆಗಿದ್ದಾರಂತೆ, SDMC ರಚಿಸಿದ್ದು ಗೊತ್ತೇ ಇಲ್ಲವಂತೆ..! ಇದು ಪಾಲಕರ ಆಗ್ರಹದ ಅರ್ಜಿ..! ಬಿಇಓ ಮೇಡಂ ಏನ್ರಿ ಇದೇಲ್ಲ..?
Education Department; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪಾಲಕರು ಮತ್ತೆ ಆಕ್ರೋಶಗೊಂಡಿದ್ದಾರೆ. ಪ್ರೌಢಶಾಲೆಯ ಇಡೀ ಅಂಗಳದಲ್ಲಿ ರಾಜಕೀಯ ಅನ್ನೋದು ಹಾಸು ಹೊಕ್ಕಾಗಿದೆ, ಹೀಗಾಗಿ, ಇಲ್ಲಿ ಕಾನೂನು ಅನ್ನೋದು ಯಾರಿಗೂ ಅನ್ವಯವಾಗ್ತಿಲ್ಲ, ತಮಗೆ ಇಷ್ಟ ಬಂದಂಗೆ ಎಲ್ಲವನ್ನೂ ನಡೆಸಿಕೊಂಡು ಹೋಗ್ತಿದಾರೆ. ಹೀಗಾಗಿ, ಇಲ್ಲಿನ ಶಿಕ್ಷಣ ಅಧೋಗತಿಗೆ ಇಳಿದಿದೆ ಅಂತಾ ಹಲವು ಪಾಲಕರು ಬಿಇಓ ಗೆ ಲಿಖಿತವಾಗಿ ದೂರು ನೀಡಿದ್ದಾರೆ. SDMC ಸಮಿತಿ ಆಯ್ಕೆ ಅದ್ವಾನ..? ಅಸಲು, ಆ ಪ್ರೌಢಶಾಲೆಯಲ್ಲಿ ಕಲಿಯುತ್ತಿರೋ ವಿದ್ಯಾರ್ಥಿಗಳ ಪಾಲಕರು ಸಭೆ ಮಾಡಿ, SDMC ರಚನೆ ಮಾಡಬೇಕಾಗಿರತ್ತೆ. ಆದ್ರೆ, ಈ ಪ್ರೌಢಶಾಲೆಯಲ್ಲಿ ಮಾತ್ರ ಅಂತಹ ಯಾವ ಸಭೆಯನ್ನೂ ಕರೆಯದೇ, ಕೆಲ ರಾಜಕೀಯದವರ ಮೂಗಿನ ನೇರಕ್ಕೆ ಸದಸ್ಯರುಗಳು, ಅಧ್ಯಕ್ಷರುಗಳ ಆಯ್ಕೆ ಮಾಡಿಕೊಳ್ಳಲಾಗಿದೆಯಂತೆ. ಹೀಗಾಗಿ, ಇದೇಲ್ಲ ಸರಿಯಲ್ಲ, ಕೂಡಲೇ ಪಾಲಕರ ಸಭೆ ಕರೆದು, ಕಾನೂನುಬದ್ಧ, ನಿಯಮಾನುಸಾರ SDMC ರಚನೆ ಆಗಬೇಕು ಅಂತ ಪಾಲಕರು ಬಿಇಓ ಗೆ ಒತ್ತಾಯಿಸಿದ್ದಾರೆ. ಇಲ್ಲಿ ದೈಹಿಕ ಶಿಕ್ಷಕರು HM ಆಗಬಹುದಾ..? ಇನ್ನು, ಇದೇ ಚಿಗಳ್ಳಿ ಪ್ರೌಢಶಾಲೆಯಲ್ಲಿ, ದೈಹಿಕ...
ಸಾರ್ವಜನಿಕರ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ: ಸುಷಮಾ ಗೋಡಬೋಲೆ
KARWAR ZP MEETING; ಕಾರವಾರ; ಜಿಲ್ಲಾ ಪಂಚಾಯತ್ ವತಿಯಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ನ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ನಿಗಧಿತವಾಗಿ ತಮ್ಮ ವ್ಯಾಪ್ತಿಯ ತಾಲೂಕು ಕೇಂದ್ರಗಳಿಗೆ ಭೇಟಿ ನೀಡಬೇಕು ಅಲ್ಲಿನ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರಗತಿಯನ್ನು ಪರಿಶೀಲಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸಕರಾತ್ಮಕವಾಗಿ ಸ್ಪಂದಿಸಿ ಅಗತ್ಯ ನೆರವು ಒದಗಿಸಬೇಕು, ವಾರ್ಷಿಕ ಕ್ರಿಯಾ ಯೋಜನೆ ರೂಪಿಸುವಾಗ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಬೇಡಿಕೆಗಳನ್ನು ಇದರಲ್ಲಿ ಅಳವಡಿಸಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಉತ್ತಮ ಆಡಳಿತ ಸೇವೆ ಒದಗಿಸಬೇಕು ಎಂದರು. KARWAR ZP MEETING; ಪ್ರಸ್ತುತ ಜಿಲ್ಲೆಯಲ್ಲಿನ 59 ಅಪೌಷ್ಠಿಕ ಮಕ್ಕಳಿಗೆ ಸೂಕ್ತ...
Rain forecast; ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಮಳೆ, ಗಾಳಿಯ ಮುನ್ಸೂಚನೆ..!
Rain forecast; ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. Rain forecast; ಸಂಜೆ 4 ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದೆ.
ಇಬ್ಬರ ಮೇಲೆ ಹರಿದ ಟ್ರ್ಯಾಕ್ಟರ್ ಚಕ್ರ, ಆದ್ರೂ ಬಚಾವಾದ್ರು, ಕಲಘಟಗಿಯಲ್ಲಿ ಅಚ್ಚರಿಯ ಘಟನೆ..!
Accident News; ಕಲಘಟಗಿ; ಟ್ರ್ಯಾಕ್ಟರ್ ಚಕ್ರದಲ್ಲಿ ಸಿಲುಕಿ ಇಬ್ಬರು ಒದ್ದಾಡಿದ ಘಟನೆ, ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ನಲ್ಲಿ ನಿನ್ನೆ ಸಂಜೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹಾಗೂ ಗೂಡ್ಸ್ ವಾಹನ ಚಾಲಕರ ನಡುವೆ ಜಗಳ ನಡೆದಿತ್ತು, ಎರಡು ವಾಹನಗಳ ನಡುವೆ ಸಣ್ಣ ಅಪಘಾತವಾಗಿತ್ತು, ಆಗ ಇಬ್ಬರು ಚಾಲಕರ ಮಧ್ಯೆ ಮಾತಿನ ವಾಗ್ವಾದ ನಡೆದಿತ್ತು, ಗೂಡ್ಸ್ ವಾಹನ ಚಾಲಕ ಟ್ರ್ಯಾಕ್ಟರ್ ಹತ್ತಿ ವಾಗ್ವಾದ ನಡೆಸುತ್ತಿದ್ದ. ಆಗ ಟ್ರ್ಯಾಕ್ಟರ್ ಚಾಲಕ ಗಾಡಿ ಚಾಲಾಯಿಸಿದ್ದಾನೆ. ಹೀಗಾಗಿ, ಇಬ್ಬರೂ ಆಯ ತಪ್ಪಿ ಬಿದ್ದಿದ್ದು ಟ್ರ್ಯಾಕ್ಟರ್ ಚಕ್ರದ ಕೆಳಗೆ ಸಿಲುಕಿದ್ದಾರೆ. ಈ ವೇಳೆ ಇಬ್ಬರ ಮೇಲೂ ಟ್ರ್ಯಾಕ್ಟರ್ ಚಕ್ರ ಹತ್ತಿ ಇಳದಿದೆ. ಆದರೂ ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳು ಕಲಘಟಗಿ ಮತ್ತು ಬೆಲವಂತರ ಗ್ರಾಮ ನಿವಾಸಿಗಳು ಎನ್ನಲಾಗಿದೆ. ಗಾಯಾಳುಗಳಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಜ್ಯವನ್ನೇ ಬೆಚ್ಚಿ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಇದೇ ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸನಿರ್ವಹಿಸಿದ್ದ. ಸದ್ಯ ನಿವೃತ್ತಿಯಾಗಿರೋ ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38) ಹಾಗೂ ಹುಬ್ಬಳ್ಳಿಯ ಚಾಲುಕ್ಯ ನಗರದ ಸುನೀಲ ತಂದೆ ನಂರಸಿಂಹಲು ಮೋಕಾ(40) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. Robbery Case;ಆರೋಪಿತರಿಂದ ಕೃತ್ಯಕ್ಕೆ ಬಳಸಿದ 02 ಕಾರುಗಳು ಹಾಗೂ ಕಾರುಗಳಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10 ಕೋಟಿ 75 ಲಕ್ಷ ರೂ. ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂದಹಾಗೆ, ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ...
ಗೊಬ್ಬರದ ಗುಂಡಿಗೆ ಬಿದ್ದು ದಾರುಣ ಸಾವು ಕಂಡ ಪುಟ್ಟ ಮಗು..!
Ankola Crime News; ಅಂಕೋಲಾ: ಗೊಬ್ಬರದ ಗುಂಡಿಗೆ ಬಿದ್ದು ಪುಟ್ಟ ಮಗು ದಾರುಣ ಸಾವು ಕಂಡಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಡೊಂಗ್ರಿ ಗ್ರಾಪಂ ವ್ಯಾಪ್ತಿಯ ಹಳವಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ ಸಾದ್ವಿ ಶ್ರೀಕಾಂತ್ ಹೆಬ್ಬಾರ್ (2.3) ವರ್ಷ ಸಾವನ್ನಪ್ಪಿದ ಮಗುವಾಗಿದ್ದಾಳೆ. ಈಕೆ ಹಳವಳ್ಳಿ ಗ್ರಾಮದ ಮೂಲೆಮನೆಯ ಶ್ರೀಕಾಂತ್ ಹೆಬ್ಬಾರ್ ಮತ್ತು ರೂಪಾ ದಂಪತಿಯ ದ್ವಿತೀಯ ಪುತ್ರಿಯಾಗಿದ್ದಳು. Ankola Crime News; ನಿನ್ನೆ ಬೆಳಿಗ್ಗೆ ಎಂದಿನಂತೆ ಸಾದ್ವಿ ಅಪ್ಪನೊಂದಿಗೆ ದನದ ಕೊಟ್ಟಿಗೆ ಬಳಿ ತೆರಳಿದ್ದಾಳೆ, ತಂದೆ ಕೊಟ್ಟಿಗೆಯ ಕೆಲಸದಲ್ಲಿ ಮಗ್ನರಾಗಿದ್ದರು. ಹೀಗಾಗಿ ಮಗಳ ಚಲನವಲನವನ್ನು ಗಮನಿಸಿರಲಿಲ್ಲ,ಕೆಲ ಸಮಯದ ಬಳಿಕ ಮಗಳ ಸದ್ದು ಕೇಳಿಸದೆ ಇದ್ದುದರಿಂದ ಸುತ್ತ ಮುತ್ತ ಹುಡುಕಾಟ ನಡೆಸಿದ್ದಾನೆ.ಕೊನೆಗೆ ಮಗು ಸಾದ್ವಿ ಗೊಬ್ಬರ ಗುಂಡಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ತಕ್ಷಣ ಗುಂಡಿಯಿಂದ ಮಗುವನ್ನು ಮೇಲಕೆತ್ತಿ ತಾಲೂಕಾಸ್ಪತ್ರೆ ಕರೆತಂದಿದ್ದಾರೆ,ವೈದ್ಯರು ಪರೀಕ್ಷಿಸಿದಾಗ ಮಗು ಸಾವನ್ನಪ್ಪಿರುವ ಬಗ್ಗೆ ದೃಢಪಡಿಸಿದ್ದಾರೆ.ಪುಟ್ಟ ಕಂದಮ್ಮನ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಇದನ್ನೂ ಓದಿ ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ...