ಮುಂಡಗೋಡ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಲಿದೆ, ಬಿಜೆಪಿ ಪರ ಫಲಿತಾಂಶ ಬರುತ್ತದೆ ಪ್ರಧಾನಿ ನರೇಂದ್ರ ಮೋದಿ ಅವರ ಒಂಬತ್ತು ವರ್ಷಗಳ ಆಳ್ವಿಕೆಗೆ ಮೆಚ್ಚುಗೆ ಇದ್ದು ಬಿಜೆಪಿ ಸಕಾರಾತ್ಮಕ ಫಲಿತಾಂಶ ಸಿಗಲಿದೆ ಎಂಬ ಭರವಸೆ ಇದೆ ಅಂತಾ ಅರುಣಾಚಲ ಸಿಎಂ ಪೇಮಾ ಖಂಡು ಭವಿಷ್ಯ ನುಡಿದ್ರು. ಎರಡು ದಿನಗಳ ಕಾಲ ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ಗೆ ಭೇಟಿ ನೀಡಿರೋ ಅವ್ರು ಮಾತನಾಡಿದರು. ಇನ್ನು ಮಣಿಪುರದಲ್ಲಿ ನಡೆದ ಗಲಭೆ ವಿಚಾರವಾಗಿ ಮಾತನಾಡಿದ ಅವ್ರು, ಅಲ್ಲಿ ಗಲಭೆ ನಡೆಯುತ್ತಿರುವುದು ಇದೇ ಮೊದಲ ಅಲ್ಲ. ಅಲ್ಲಿ ಆಗಾಗ ನಡದೆ ಇರುತ್ತದೆ, ಇದೊಂದು ದುರದೃಷ್ಟಕರ ಸಂಗತಿ ಎಂದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಲ್ಲಿನ ಬೆಳವಣಿಗೆ ಮೇಲೆ ನಿಗಾ ಇಟ್ಟಿವೆ ಮಣಿಪುರದಲ್ಲಿ ಶಾಂತಿ ಸ್ಥಾಪಿಸುವತ್ತ ಹೆಜ್ಜೆ ಇಡಲಾಗಿದೆ ಎಂದು ಸ್ಪಷ್ಟಪಡಿಸಿದರು. ಇನ್ನು ಧಾರ್ಮಿಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಂದಿದ್ದೇನೆ ಎಂದ ಅವರು, ಮುಂಡಗೋಡ ಟಿಬೇಟಿಯನ್ ಕ್ಯಾಂಪ್ ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವೆ. ಎರಡು...
Top Stories
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಪಂಚ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ, ಮೋದಿ ಅಲೆ ಕೆಲಸ ಮಾಡಲಿದೆ- ಟಿಬೇಟಿಯನ್ ಕ್ಯಾಂಪ್ ಗೆ ಆಗಮಿಸಿದ ಅರುಣಾಚಲ ಸಿಎಂ ಪೇಮಾ ಖಂಡು ಹೇಳಿಕೆ
ಮುಂಡಗೋಡಿನಲ್ಲಿ ಖತರ್ನಾಕ ATM ವಂಚಕಿಯ ಬಂಧನ, ಹಣ ಡ್ರಾ ಮಾಡಿ ಕೊಡುವುದಾಗಿ ವಂಚಿಸಿದ್ದ ಲೇಡಿ..!
ಮುಂಡಗೋಡ: ಎಟಿಎಂ ನಿಂದ ಹಣ ಡ್ರಾ ಮಾಡಿ ಕೊಡುವುದಾಗಿ ಹೇಳಿ, ಬರೋಬ್ಬರಿ 69 ಸಾವಿರ ರೂ. ವಂಚಿಸಿದ್ದ ಖತರ್ನಾಕ ವಂಚಕಿಯನ್ನು ಮುಂಡಗೋಡ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಈ ಮೂಲಕ ಕಳೆದ ಸೆಪ್ಟೆಂಬರ್ 29 ರಂದು ನಡೆದಿದ್ದ ಎಟಿಎಂ ವಂಚನೆ ಪ್ರಕರಣವನ್ನು ಭೇದಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಖಾರಿಪುರ ತಾಲೂಕಿನ ಶಿರಾಳಕೊಪ್ಪದ ಆರೋಪಿ ಮಹಿಳೆ ಕೌಸರಬಾನು ನಜೀರಸಾಬ ಹಿರೇಕರೂರು(35) ಎಂಬುವವಳನ್ನು ಬಂಧಿಸಿ, 12 ಸಾವಿರ ರೂ. ಹಣ ವಶಕ್ಕೆ ಪಡೆದಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಮೈನಳ್ಳಿಯ ಸಹೀನಾಜ್ ಮಹಮ್ಮದ್ ಸಲೀಂ ಎಂಬುವವರು ಮುಂಡಗೋಡ ಠಾಣೆಗೆ ದೂರು ನೀಡಿದ್ದರು. ಕಳೆದ ಸೆಪ್ಟೆಂಬರ್ 25 ರಂದು ಸಾಯಂಕಾಲ ಮುಂಡಗೋಡಿನ ಬಸ್ ನಿಲ್ದಾಣದ ಎದುರಿನಲ್ಲಿರೋ ಎಟಿಎಂ ನಲ್ಲಿ ಹಣ ತೆಗೆಯಲು ಹೋಗಿದ್ದರು. ಈ ವೇಳೆ ಸರತಿ ಸಾಲಿನಲ್ಲಿ ಹಿಂದೆ ನಿಂತಿದ್ದ ಅಪರಿಚಿತ ಮಹಿಳೆ ಎಟಿಎಂ ನಿಂದ ಹಣ ತೆಗೆದು ಕೊಡುವುದಾಗಿ ನಂಬಿಸಿದ್ದಳು. ಅದೇ ವೇಳೆ ಎಟಿಎಂ ಪಾಸ್ ವರ್ಡ್ ಪಡೆದುಕೊಂಡಿದ್ದಳು. ಹಾಗೇ ದೂರುದಾರಳ ಎಟಿಎಂ ಕಾರ್ಡ್ ಎಗರಿಸಿ ಬೇರೆ...
ಕಾತೂರು ಸಮೀಪದ ಗೋಟಗೋಡಿಕೊಪ್ಪದಲ್ಲಿ ಚಿರತೆ ದಾರುಣ ಸಾವು..! ಅಷ್ಟಕ್ಕೂ ಚಿರತೆಯ ಸಾವಿಗೆ ಎನು ಕಾರಣ..?
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪ ಸಮೀಪದ ಮುಕ್ತಿ ಮಠದ ಹತ್ತಿರ ಎರಡು ವರ್ಷದ ಗಂಡು ಚಿರತೆ ದಾರುಣ ಸಾವು ಕಂಡಿದೆ. ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿರತೆಯ ಸಾವು ಹೇಗಾಯ್ತು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಮದ್ಯಾಹ್ನವೇ..? ಶುಕ್ರವಾರ ಮದ್ಯಾಹ್ನವೇ ಗೋಟಗೋಡಿಕೊಪ್ಪದ ಮುಕ್ತಿ ಮಠದ ಹತ್ತಿರದ ಗದ್ದೆಗಳ ಪಕ್ಕದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ರೈತರು ಚಿರತೆಯ ಮೃತದೇಹ ಕಂಡು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಮೃತದೇಹದ ಕುರಿತು ಮುಂದಿನ ಕ್ರಮ ಕೈಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹೇಗೆ ಸಾವು..? ಅಂದಹಾಗೆ, ರಸ್ತೆ ಪಕ್ಕದ ಗದ್ದೆಯಲ್ಲಿ ಚಿರತೆ ಸಾವು ಕಂಡಿದೆ. ಆದ್ರೆ, ಯಾವ ಕಾರಣಕ್ಕೆ ಸಾವು ಕಂಡಿದೆ ಅನ್ನೋ ಮಾಹಿತಿಯನ್ನು ಅರಣ್ಯ ಅಧಿಕಾರಿಗಳು ನೀಡಬೇಕಿದೆ. ಬಹುಶಃ ರಸ್ತೆ ದಾಟುವಾಗ ವಾಹನಗಳಿಗೆ ಡಿಕ್ಕಿಯಾಗಿ ಸಾವುಜ ಕಂಡಿತಾ..? ಅಥವಾ ಬೇರೆ ಯಾವುದಾದರೂ ಕಾರಣಕ್ಕೆ ಸಾವು ಕಂಡಿದೆಯಾ ವೈದ್ಯರ ವದಿಯ ಬಳಿಕವಷ್ಟೇ ಮಾಹಿತಿ ದೊರೆಯಬೇಕಿದೆ. ಸದ್ಯ...
ಅನಧಿಕೃತ ಇಟ್ಟಿಗೆ ಭಟ್ಟಿಗಳು ಬಾಲ ಬಿಚ್ಚಂಗಿಲ್ಲ, ಮತ್ತೆ ದಂಧೆಗಿಳಿದ್ರೆ ಹುಶಾರ್ ಅಂತಾ ಎಚ್ಚರಿಸಿದ್ರು ತಹಶೀಲ್ದಾರ್..!
ಮುಂಡಗೋಡ ತಾಲೂಕಿನಲ್ಲಿ ಅಕ್ರಮ ಇಟ್ಟಿಗೆ ಭಟ್ಟಿ ದಂಧೆಗೆ ಬಹುತೇಕ ಮೂಗುದಾರ ಬಿದ್ದಂತಾಗಿದೆ. ತಾಲೂಕಿನಲ್ಲಿ ಇನ್ಮೇಲೆ ಮತ್ತೆ ಇಟ್ಟಿಗೆ ಭಟ್ಟಿ ದಂಧೆ ಶುರು ಮಾಡಿದ್ರೆ ಸುಮ್ನೆ ಬಿಡಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತು ಪತ್ರಕರ್ತರು ಹಾಗೂ ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ನಲ್ಲಿ ತಹಶೀಲ್ದಾರ್ ಸಂದೇಶ ರವಾನಿಸಿದ್ದಾರೆ. ಎಲ್ಲವೂ ಅನಧಿಕೃತವಂತೆ..! ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಎಲ್ಲವೂ ಅನಧಿಕೃತ ಇಟ್ಟಿಗೆ ಭಟ್ಟಿಗಳಂತೆ. ಇಲ್ಲಿ ಯಾರೊಬ್ರೂ ಅಧಿಕೃತ ಪರವಾನಗಿ ಪಡೆದು ದಂಧೆ ಮಾಡಿಯೇ ಇಲ್ಲ ಅನ್ನೋದು ತಹಶೀಲ್ದಾರ ಕಚೇರಿಯಿಂದ ಸಿಕ್ಕ ಮಾಹಿತಿ. ಹೀಗಾಗಿ, ಖಡಕ್ ಸಮರ ಸಾರಿರೋ ತಹಶೀಲ್ದಾರ್ ಸಾಹೇಬ್ರು, ಯಾರೊಬ್ಬರಿಗೂ ಸೊಪ್ಪು ಹಾಕುತ್ತಿಲ್ಲ. ಅದ್ಯಾರೇ ವಕಾಲತ್ತು ವಹಿಸಿದ್ರೂ ಯಾರಂದ್ರೆ ಯಾರಿಗೂ ಕ್ಯಾರೇ ಅಂತಿಲ್ಲ. ತಾಲೂಕಿನಲ್ಲಿ ಅದೇನೇ ಆದ್ರೂ ಅಕ್ರಮ ಇಟ್ಟಿಗೆ ಭಟ್ಟಿಗಳ ಹಾವಳಿ ನಿಯಂತ್ರಣಕ್ಕೆ ತೊಡೆ ತಟ್ಟಿ ನಿಂತಿದ್ದಾರೆ. ಹೀಗಾಗಿ, ಇಡೀ ತಾಲೂಕಿನ ಜನ ತಹಶೀಲ್ದಾರರ ಕ್ರಮಕ್ಕೆ ಮನತುಂಬಿ ಹರಸ್ತಿದಾರೆ. ಹೆಮ್ಮೆ ಪಡ್ತಿದಾರೆ. ಹಳ್ಳಿಗಳಲ್ಲಿ..! ಮುಂಡಗೋಡ ತಾಲೂಕಿನ...
ಚಿಗಳ್ಳಿಯಲ್ಲಿ ನೇಣಿಗೆ ಶರಣಾದ ವ್ಯಕ್ತಿ, ಕಲ್ಲಪ್ಪಜ್ಜನ ಗುಡ್ಡದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ..!
ಮುಂಡಗೋಡ ತಾಲೂಕಿನ ಚಿಗಳ್ಳಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಗ್ರಾಮದ ಹೊರ ವಲಯದಲ್ಲಿರೋ ಕಲ್ಲಪ್ಪಜ್ಜಯ್ಯನ ಗುಡ್ಡದ ದೇವಸ್ಥಾನದ ಬಳಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ತಿಳಿದು ಬಂದಿದೆ. ಚಿಗಳ್ಳಿಯ ಈರಪ್ಪ ಫಕ್ಕೀರಪ್ಪ ಲಕ್ಕಿಕೊಪ್ಪ (45) ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದ್ರೆ, ಯಾವುದೋ ಕಾರಣಕ್ಕೆ ಇಂದು ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಾನಗಲ್ ನಲ್ಲಿ ಎರಡು ಪುಟ್ಟ ಕಂದಮ್ಮಗಳೂ ಸೇರಿ ಮೂವರ ಬರ್ಬರ ಹತ್ಯೆ..! ಮೈದುನನಿಂದಲೇ ನಡೀತಾ ಕೃತ್ಯ..?
ಹಾನಗಲ್ ತಾಲೂಕಿನ ಯಳ್ಳೂರಿನಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈದುನನೇ ಅಣ್ಣನ ಹೆಂಡತಿ ಹಾಗೂ ಎರಡು ಪುಟ್ಟ ಪುಟ್ಟ ಕಂದಮ್ಮಗಳನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಅನ್ನೋ ಆರೋಪ ಕೇಳಿ ಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭೀಕರ ತ್ರಿಬಲ್ ಮರ್ಡರ್ ಆಗಿದೆ ಅನ್ನೋ ಅನುಮಾನ ವ್ಯಕ್ತವಾಗಿದ್ದು, ಗೀತಾ ಮರಿಗೌಡ್ರು (32), ಅಕುಲ್ (10), ಅಂಕಿತಾ (7) ಭೀಕರವಾಗಿ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಬೆಳಗಿನ ಜಾವ 3.30 ರ ಸುಮಾರಿನಲ್ಲಿ ಭೀಕರ ಹತ್ಯೆ ನಡೆದಿದೆ ಎನ್ನಲಾಗಿದೆ. ಕುಮಾರಗೌಡ್ ಮರಿಗೌಡ್ರು (35)ಎಂಬುವ ಮೈದುನನೇ ಕೊಲೆ ಮಾಡಿ ನಾಪತ್ತೆಯಾಗಿರೋ ಅನುಮಾನ ವ್ಯಕ್ತವಾಗಿದೆ. ಪಾಪಿ ತಮ್ಮನೇ, ಸ್ವಂತ ಅಣ್ಣ ಹೊನ್ನೆಗೌಡ ಎಂಬುವವನ ಹೆಂಡತಿ ಮತ್ತು ಮಕ್ಕಳನ್ನು ಹತ್ಯೆಗೈದಿದ್ದಾನೆ ಎನ್ನಲಾಗಿದ್ದು, ಮೃತ ಗೀತಾ ಪತಿ ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೀಗಾಗಿ, ಸದ್ಯ ನಾಪತ್ತೆಯಾಗಿರೋ ಮೈದುನ ಕುಮಾರಗೌಡನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಹಾವೇರಿ ಎಸ್ಪಿ, ಹಾನಗಲ್ ಸಿಪಿಐ...
ಅವ್ರೊಬ್ಬ DyRFO ಸಾಹೇಬ್ರು..! ಅವ್ರ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್..! ಅರಣ್ಯಾಧಿಕಾರಿಗಳೇ ಯಾರಿಗಾಗಿ ಈ ದೌಲತ್ತು..?
ಯಲ್ಲಾಪುರ ಅರಣ್ಯ ಇಲಾಖೆಯಲ್ಲಿ DyRFO ಒಬ್ರು ಹುಲಿ ಉಗುರಿನ ಪೆಂಡೆಂಟ್ ಧರಿಸಿ ಫೋಟೊಗೆ ಫೋಸ್ ನೀಡಿದ್ದಾರೆ. ಹಾಗಂತ ಸಾಕಷ್ಟು ಚರ್ಚೆಗಳು ಖುದ್ದು ಇಲಾಖೆಯ ಅಂಗಳದಲ್ಲೇ ಕಳೆದ ಎರಡು ಮೂರು ದಿನಗಳಿಂದ ನಡೆಯುತ್ತಿದೆ. ಅಲ್ದೇ ಸಾಮಾಜಿಕ ಜಾಲತಾಣಗಳಲ್ಲಿ ಆ ಪೋಟೋಗಳೂ ಹರಿದಾಡ್ತಿವೆ. ಇಲಾಖೆಯ ಅಧಿಕಾರಿಗಳೇ ಹೀಗೆ ಮಾಡಿದ್ರೆ, ಸಾರ್ವಜನಿಕರ ಪಾಡೇನು ಅನ್ನೋ ಪ್ರಶ್ನೆ ನೆಟ್ಟಿಗರು ಕೇಳ್ತಿದಾರಂತೆ. ಅವರು ಹಾಗಾ..? ಅಸಲು, ಅವ್ರು ಇಡೀ ಕೆನರಾ ವಲಯದಲ್ಲೇ ಜಬರ್ದಸ್ತ್ ಪ್ರಭಾವಿಯಂತೆ. ಇಡೀ ಇಲಾಖೆಯೇ ಇವರ ಇಶಾರೆಯಲ್ಲಿ ಬದ್ರವಾಗಿದೆ ಅನ್ನೋ ಪುಕಾರು ಇದೆ. ಅಂತಹದ್ದೊಂದು ಹವಾ ಮೆಂಟೇನ್ ಮಾಡಿರೋ ಅವರ ವಿರುದ್ಧ ತುಟಿ ಬಿಚ್ಚಲು ಅಲ್ಲಿನ ಹಿರಿಯ ಅಧಿಕಾರಿಗಳೇ ಒಂದುಕ್ಷಣ ಬೆವರಿ ಬಿಡ್ತಾರೆ ಅನ್ನೋ ವಾತಾವರಣ ಇದೆಯಂತೆ. ಅದಕ್ಕಾಗೇ ನಾವೂ ಕೂಡ ಅವ್ರಿಗೆ “ಅವನು ಇವನು” ಅನ್ನದೇ ಫುಲ್ಲಿಲೋಡೇಡ್ ಗೌರವ ನೀಡುತ್ತಿದ್ದೆವೆ.. ಯಾಕಂದ್ರೆ, ಅದು ನಮ್ಮ ಪುಣ್ಯ ಅಂದುಕೊಂಡಿದ್ದಿವಿ. ನಮಗೂ ಬೆವರು ಕಣ್ರಿ..! ಅಲ್ದೇ ಅವರ ಹವಾ, ಬಲಿಷ್ಟ ಬಿರುಗಾಳಿಯ ಬಗ್ಗೆ ಹತ್ತಾರು ಜನ ಇಲಾಖೆಯ...
ಶಂಕರ್ ಫಕೀರಪ್ಪ ಗೆ ಪಿಹೆಚ್ ಡಿ ಪದವಿ ಪ್ರಧಾನ, ಸಿಹಿ ತಿನ್ನಿಸಿ ಸಂಭ್ರಮ..!
ಧಾರವಾಡ: ಶಂಕರ್ ಫಕೀರಪ್ಪ ಅವರು, ಧಾರವಾಡ ವಿಶ್ವ ವಿದ್ಯಾಲಯದಿಂದ ಗಣಿತ ಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ ಪಡೆದಿದ್ದಾರೆ. ನಿನ್ನೆ ಸೋಮವಾರ ಧಾರವಾಡ ವಿಶ್ವವಿದ್ಯಾಲಯ ದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ ಗೆಹ್ಲೊಟ್ ಪದವಿ ಪ್ರಧಾನ ಮಾಡಿದ್ರು. ಅಂದಹಾಗೆ, ಶಂಕರ್ ಫಕೀರಪ್ಪ ಇವ್ರು ಪಿಹೆಚ್ ಡಿ ಪದವಿ ಪಡೆದಿದ್ದಕ್ಕೆ, ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ಸೇರಿದಂತೆ ಸಮಾಜದ ಹಲವು ಮುಖಂಡರು ಹರ್ಷ ವ್ಯಕ್ತಪಡಿಸಿದ್ದಾರೆ. ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾರೆ.
ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ಶಾಕ್, RFO ಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ..!
ಹಾವೇರಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಶಾಕ್ ನೀಡಲಾಗಿದೆ. ಇಬ್ಬರು RFO ಗಳ ಮನೆ, ಸೇರಿದಂತೆ 9 ಕಡೆ ಲೋಕಾ ದಾಳಿಯಾಗಿದೆ. RFO ಪರಮೇಶ್ವರ ಪೇರಲನವರ, RFO ಮಾಲತೇಶ ನ್ಯಾಮತಿ ಗೆ ಸೇರಿದ ಮನೆ ಹಾಗೂ ಫಾರ್ಮ್ ಹೌಸ್ ಸೇರಿ 9 ಕಡೆ ದಾಳಿ ನಡೆಸಲಾಗಿದೆ. ಹಾವೇರಿ ನಗರ ಹಾಗೂ ಕುರಬಗೊಂಡ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. RFO ಪರಮೇಶ್ವರ ಪೇರಲನವರಗೆ ಸೇರಿದ ಎರಡು ಮನೆ ಸೇರಿದಂತೆ 6 ಕಡೆ ದಾಳಿ ನಡೆದಿದೆ. ಇನ್ನು ಮತ್ತೋರ್ವ RFO ಮಾಲತೇಶ್ ನ್ಯಾಮತಿಯವರ ಮನೆ ಸೇರಿ ಮೂರು ಕಡೆ ದಾಳಿ ನಡೆದಿದೆ. ಹಾವೇರಿಯ ಶಿವಾಜಿನಗರ, ವರದಾನೇಶ್ವರಿ ನಗರ, ಕುರುಬಗೊಂಡ ಗ್ರಾಮದ ಮನೆ, ಫಾಮ್೯ ಹೌಸ್ ಗಳ ಮೇಲೆ ದಾಳಿ ನಡೆಸಿರೋ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಏನೇನು ಸಿಕ್ಕಿದೆ ಅನ್ನೋ ಬಗ್ಗೆ ಇನ್ನಷ್ಟೆ ಮಾಹಿತಿ ಬರಬೇಕಿದೆ.
ಕಾರವಾರದ ಯುವಕ ಆತ್ಮಹತ್ಯೆ ಕೇಸ್, ಪಿಐ, ಪಿಎಸ್ಐ ಸೇರಿ ಮೂವರು ಪೊಲೀಸರು ಸಸ್ಪೆಂಡ್..!
ಪೊಲೀಸರ ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಯುವಕನ ಕೇಸ್ ಗೆ ಮೂವರು ಪೊಲೀಸರ ಅಮಾನತ್ತಾಗಿದೆ. ಕಾರವಾರದಲ್ಲಿ ಮಾರುತಿ ನಾಯ್ಕ ಎಂಬಾತನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ, ಪಿಎಸ್ಐ ಸೇರಿದಂತೆ ಮೂವರನ್ನು ಸಸ್ಪೆಂಡ್ ಮಾಡಿ ಎಸ್ಪಿ ವಿಷ್ಣುವರ್ಧನ್ ಆದೇಶಿಸಿದ್ದಾರೆ. CPI ಕುಸುಮಾಧರ ಕೆ, PSI ಶಾಂತಿನಾಥ ಹಾಗೂ ಕಾನಸ್ಟೆಬಲ್ ದೇವರಾಜ್ ಸಸ್ಪೆಂಡ್ ಆಗಿದ್ದಾರೆ. ಮಾರುತಿ ನಾಯ್ಕ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಸುಸೈಡ್ ನೋಟ್ ಬರೆದು ವಿಡಿಯೋ ರೆಕಾರ್ಡ್ (video record)ಮಾಡಿದ್ದ. ತನ್ನ ಆತ್ಮಹತ್ಯೆಗೆ ಪೊಲೀಸರು, ಎಲಿಷಾ ಎಲಕಪಾಟಿ, ಬಸವರಾಜ, ಸುರೇಶ್ ಮತ್ತಿತರರ ಹೆಸರು ಬರೆದಿಟ್ಟಿದ್ದ. ಹೀಗಾಗಿ, ಪ್ರಕರಣದ ಗಂಭೀರತೆ ಬಯಲಾದ ಹಿನ್ನೆಲೆ ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಲಾಗಿದ್ದು, ಆರೋಪಿಗಳನ್ನ ಬಂಧಿಸಲಾಗಿದೆ. ದಲಿತ ಮುಖಂಡ ಎಲಿಷಾ ಎಲಕಪಾಟಿ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನ ಮಾರುತಿ ನಾಯ್ಕ್ ರೆಕಾರ್ಡ್ ಮಾಡಿದ್ದ. ಬಳಿಕ ಎಲಿಷ ಎಲಕಪಾಟಿ ಕುಟುಂಬಸ್ಥರು ಮಾರುತಿ ನಾಯ್ಕ್ ಮೇಲೆ ಹಲ್ಲೆ ನಡೆಸಿದ್ದರು. ಎಲಿಷಾ ಕುಟುಂಬಕ್ಕೆ ಪೊಲೀಸರು ಬೆಂಬಲವಾಗಿ...









