ಮುಂಡಗೋಡ: ಮಾಜಿ ಶಾಸಕ, ಯಲ್ಲಾಪುರ ಕ್ಷೇತ್ರದ ಸಂಭವನೀಯ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲರ ಕಾರಿಗೆ ಪುಟ್ಟ ಅಪಘಾತವಾಗಿದೆ. ಮುಂಡಗೋಡ ಪಟ್ಟಣದ ಬನ್ನಿಕಟ್ಟಿ ಹತ್ತಿರ ಕಬ್ಬು ತುಂಬುವ ಟ್ರಾಕ್ಟರ್ ಹಿಂಬದಿಗೆ ಎರಡು ಬಾರಿ ಗುದ್ದಿದ ಪರಿಣಾಮ ಕಾರಿನ ಹಿಂಬದಿಯ ಭಾಗ ಕೊಂಚ ಜಖಂ ಆಗಿದೆ. ಅದೃಷ್ಟವಶಾತ್ ವಿ.ಎಸ್.ಪಾಟೀಲರಿಗೆ ಯಾವುದೇ ಅಪಾಯವಾಗಿಲ್ಲ. ಮುಂಡಗೋಡಿನಿಂದ ಯಲ್ಲಾಪುರ ಕಡೆಗೆ ಹೊರಟಿದ್ದ ಮಾಜಿ ಶಾಸಕ ವಿ.ಎಸ್.ಪಾಟೀಲರ ಕಾರಿಗೆ, ಹಿಂದಿನಿಂದ ಅದೇ ಮಾರ್ಗದಲ್ಲಿ ಹೊರಟಿದ್ದ ಕಬ್ಬು ಸಾಗಿಸುವ ಟ್ರಾಕ್ಟರ್ ಗುದ್ದಿದೆ ಅಂತಾ ಹೇಳಲಾಗ್ತಿದೆ. ಹೀಗಾಗಿ, ತಕ್ಷಣವೇ ಸ್ಥಳೀಯರು ಟ್ರಾಕ್ಟರ್ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
ವಿ.ಎಸ್.ಪಾಟೀಲರ ಕಾರಿಗೆ ಹಿಂಬದಿಯಿಂದ ಗುದ್ದಿದ ಟ್ರಾಕ್ಟರ್,ಅದೃಷ್ಟವಶಾತ್ ತಪ್ಪಿದ ಅನಾಹುತ..!
ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ, ಮೀನುಗಾರ ಸಾವು..!
ಕುಮಟಾ: ತಾಲೂಕಿನ ಅಘನಾಶಿನಿ ನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ದೋಳಿ ಮುಳುಗಡೆಯಾಗಿ ಮೀನುಗಾರ ಸಾವು ಕಂಡಿದ್ದಾನೆ. ಕುಮಟಾದ ಲುಕ್ಕೇರಿ ನಿವಾಸಿಯಾಗಿದ್ದ ವಿಘ್ನೇಶ್ವರ ಅಂಬಿಗ (24) ಮೃತ ದುರ್ದೈವಿಯಾಗಿದ್ದಾನೆ. ಮೀನುಗಾರಿಕೆಗೆ ತೆರಳಿದ್ದ ವೇಳೆ ಒಳನೀರಿನ ಹರಿವಿನಿಂದ ದೋಣಿ ಮುಳುಗಿದೆ. ಹೀಗಾಗಿ, ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥನಾಗಿದ್ದ ವಿಘ್ನೇಶ್ವರ ಆಸ್ಪತ್ರೆಗೆ ಸಾಗಿಸುವ ಸಾವು ಕಂಡಿದ್ದಾನೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವರ್ಷ ಉಳವಿ ಜಾತ್ರೆಗೆ ಚಕ್ಕಡಿ, ಎತ್ತಿನ ಗಾಡಿ ಒಯ್ಯಂಗಿಲ್ಲ, ಜಿಲ್ಲಾಡಳಿತದಿಂದ ಎತ್ತಿನ ಬಂಡಿ ನಿಷೇಧ..!
ಉಳವಿ: ಇತಿಹಾಸ ಪ್ರಸಿದ್ಧ ಉಳವಿ ಚನ್ನಬಸವೇಶ್ವರ ಜಾತ್ರೆ ಇನ್ನೇನು ಶುರುವಾಗಲಿದೆ. ಆದ್ರೆ, ಉಳವಿ ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದ ಎತ್ತಿನಬಂಡಿಗೆ ಉತ್ತರ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿರುವುದು ಭಕ್ತರ ಪಾಲಿಗೆ ನುಂಗಲಾರದ ತುತ್ತಾಗಿದೆ. ಯಾಕಂದ್ರೆ, ಪ್ರತಿ ವರ್ಷ ಉಳವಿ ಜಾತ್ರೆಗೆ ಬೆಳಗಾವಿ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಸೇರುತ್ತಿದ್ದರು. ಜಾತ್ರೆಗೆಂದು ಎತ್ತಿನಬಂಡಿಗಳನ್ನು ವಿಶೇಷ ರೀತಿಯಲ್ಲಿ ಸಿಂಗರಿಸುವುದು ಒಂದು ಪರಂಪರೆಯಾಗಿಯೇ ಬೆಳೆದುಬಂದಿದೆ. ಆದರೆ ಈ ಬಾರಿ ರಾಜ್ಯದಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ಚರ್ಮಗಂಟು ರೋಗ (Lumpy Skin Disease – LSD) ಕಾಣಿಸಿಕೊಂಡಿದ್ದರಿಂದ ಎತ್ತಿನಬಂಡಿಗಳಿಗೆ ನಿಷೇಧ ಹಾಕಲು ಜಿಲ್ಲಾಡಳಿತ ನಿರ್ಧರಿಸಿದೆ. ಉಳವಿ ಜಾತ್ರೆಯು ಜನವರಿ 28ರಿಂದ ಫೆ 8ರವರೆಗೆ ನಡೆಯಲಿದೆ. ಭಕ್ತರು ಈಗಾಗಲೇ ಉಳವಿಯತ್ತ ಬರುತ್ತಿದ್ದಾರೆ. ವಾಹನಗಳಲ್ಲಿ ಬರಲು ಯಾವುದೇ ನಿರ್ಬಂಧವಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಟ್ರ್ಯಾಕ್ಟರ್, ಕಾರು, ಬಸ್ ಮತ್ತು ಕಾಲ್ನಡಿಗೆಯಲ್ಲಿ ಭಕ್ತರು ಉಳವಿಗೆ ಬರುತ್ತಿದ್ದಾರೆ. ನೂರಾರು ವರ್ಷಗಳ ಉಳವಿ ಜಾತ್ರೆಯ ಪರಂಪರೆಯಲ್ಲಿ ಎತ್ತಿನಬಂಡಿಗಳಿಲ್ಲದ ಜಾತ್ರೆ ನಡೆಯುತ್ತಿರುವುದು...
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ ಗ್ರಾಮಸ್ಥರು ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಇನ್ನು ಅಗ್ನಿಶಾಮಕ ಸಿಬ್ಬಂದಿಗಳು ಬರುವಷ್ಟರಲ್ಲಿ ಬೆಂಕಿ ನಂದಿಸುವ ಕಾರ್ಯವಾಗಿತ್ತು. ಹೀಗಾಗಿ, ಆಗಬಹುದಾಗಿದ್ದ ಮತ್ತಷ್ಟು ಹಾನಿ ತಪ್ಪಿದಂತಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ವರದಿ-ವಿನಾಯಕ ಎಂ.ಪಿ.
ಇಂದೂರಿನ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ..!
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಗ್ರಾಮ ಒನ್ ಕೇಂದ್ರದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಇಲ್ಲಿನ ಅಶೋಕ ನಡಿಗೇರ ಎಂಬುವವರಿಗೆ ಸೇರಿದ ಗ್ರಾಮ ಒನ್ ಕೇಂದ್ರದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಕಂಪ್ಯೂಟರ್ ಸೇರಿದಂತೆ ಗಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್..? ಅಸಲು, ಇಂದು ಮದ್ಯಾನ ನಡದಿರೋ ಈ ಬೆಂಕಿ ಅನಾಹುತ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಭವಿಸಿದೆ ಅಂತಾ ಹೇಳಲಾಗಿದೆ. ಆದ್ರೆ, ತಾಲೂಕಿನ ಇಂದೂರು, ಹುನಗುಂದ, ನಂದಿಕಟ್ಟಾ ಸೇರಿ ಹಲವು ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ವಿದ್ಯುತ್ ಸಂಪರ್ಕ ಇರಲಿಲ್ಲ. ಹೆಸ್ಕಾಂ ಮುಂಡಗೋಡ ವಿಭಾಗದಲ್ಲಿ ದುರಸ್ತಿ ಕಾರ್ಯದ ಸಲುವಾಗಿ ವಿದ್ಯುತ್ ಸಂಪರ್ಕ ನೀಡಿರಲಿಲ್ಲ. ಹೀಗಾಗಿ, ಬೆಂಕಿ ಹೇಗೆ ತಗುಲಿದೆ ಅಂತಾ ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ ಬೆಂಕಿಯ ಅನಾಹುತದಲ್ಲಿ ಸಾಕಷ್ಟು ಹಾನಿ ಸಂಭವಿಸಿದ್ದು, ಗ್ರಾಮ ಒನ್ ಕೇಂದ್ರದ ಪಿಠೋಪಕರಣಗಳು ಸೇರಿದಂತೆ, ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿ ಆಗಿವೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಲಂಬಾಣಿ ತಾಂಡಾಗಳ ಅಭಿವೃದ್ಧಿಗೆ ಕಟಿಬದ್ಧ: ಅರಶಿಣಗೇರಿಯಲ್ಲಿ ಸಚಿವ ಹೆಬ್ಬಾರ್ ಭರವಸೆ..!
ಮುಂಡಗೋಡ: ತಾಲೂಕಿನ ಬಂಜಾರಾ ಸಮುದಾಯದ, ಲಂಬಾಣಿ ತಾಂಡಾಗಳ ಅಮೂಲಾಗ್ರ ಬದಲಾವಣೆಗೆ, ಅಭಿವೃದ್ದಿಗೆ ನಾನು ಕಟಿಬದ್ಧವಾಗಿದ್ದೆನೆ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಘೋಷಿಸಿದ್ರು. ಅವ್ರು ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಲಂಬಾಣಿ ತಾಂಡಾದಲ್ಲಿ, ಶ್ರೀ ಸಂತ ಸೇವಾಭಾಯಾ ದೇವಸ್ಥಾನದ ಮೂರ್ತಿ ಪ್ರಟಣ ಪ್ರತಿಷ್ಟಾಪನೆ ಹಾಗೂ ನೂತನ ದೇವಾಲಯದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮುಂಡಗೋಡ ತಾಲೂಕಿನ ಪ್ರತಿಯೊಂದೂ ಲಂಬಾಣಿ ತಾಂಡಾಗಳಲ್ಲೂ ಮೂಲಭೂತ ಸೌಲಭ್ಯಗಳು ಸಮರ್ಪಕವಾಗಿ ಮುಟ್ಟುವಂತಹ ವ್ಯವಸ್ಥೆ ಮಾಡಿದ್ದೇವೆ. ಬಹುತೇಕ ತಾಂಡಾಗಳಲ್ಲೂ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾರ್ಯ ನಡೆದಿದೆ. ಹೀಗಾಗಿ, ಈ ಭಾಗದಲ್ಲಿ ಬಂಜಾರಾ ಸಮುದಾಯದ ತಾಂಡಾಗಳ ಸಮಗ್ರ ಅಭಿವೃದ್ಧಿಗೆ ನಾವು ಕಂಕಣಬದ್ಧರಾಗಿದ್ದೇವೆ ಅಂತಾ ಸಚಿವ್ರು ಆಶ್ವಾಸನೆ ನೀಡಿದ್ರು. ಇನ್ನು ಮುಂದಿನ ಐದು ವರ್ಷಗಳಲ್ಲಿ ಮುಂಡಗೋಡ ತಾಲೂಕಿನ ಚಿತ್ರಣವೇ ಬದಲಾಗಲಿದೆ ಅಂತಾ ಭರವಸೆ ನೀಡಿದ ಸಚಿವರು ತಾಲೂಕಿನ ಅಭಿವೃದ್ಧಿಗೆ ತಮ್ಮೇಲ್ಲರ ಆಶೀರ್ವಾದ ಇರಬೇಕು ಅಂತಾ ತಿಳಿಸಿದ್ರು. ಈ ವೇಳೆ ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್, ಬಿಜೆಪಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಗುಡ್ಡಪ್ಪ ಕಾತೂರು,...
ಮಾಜಿ ಜಿಪಂ ಸದಸ್ಯ ಎಲ್.ಟಿ.ಪಾಟೀಲ್ ಹುಟ್ಟು ಹಬ್ಬ, ಅಂಧ ಮಕ್ಕಳ ಜೊತೆ ಹುಟ್ಟಿದ ದಿನದ ಸಂಭ್ರಮ..!
ಮುಂಡಗೋಡ: ಮಾಜಿ ಜಿ.ಪಂ.ಸದಸ್ಯ ಎಲ್.ಟಿ. ಪಾಟೀಲ ಅವರ 65ನೇ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದಿಂದ ಪಟ್ಟಣದ ದೇಶಪಾಂಡೆ ನಗರದರಲ್ಲಿರುವ ಜ್ಞಾನ ಪ್ರಜ್ಞಾ ಅಂದ ಮಕ್ಕಳ ಶಾಲೆಯಲ್ಲಿ ಹುಟ್ಟು ಹಬ್ಬವನ್ನು ಶನಿವಾರ ಆಚರಿಸಲಾಯಿತು. ಈ ವೇಳೆ ಎಲ್.ಟಿ.ಪಾಟೀಲ ಮಾತನಾಡಿ, 84 ಲಕ್ಷ ಜೀವ ರಾಶಿಯನ್ನು ದಾಟಿ ಮಾನವನಾಗಿ ಜನಿಸುತ್ತೇವೆ. ಹುಟ್ಟು ಮತ್ತು ಸಾವಿನ ಮಧ್ಯೆ ನಾವೇನು ಸಾಧಿಸುತ್ತೇವೆ’ ಎಂಬುವುದು ಮುಖ್ಯವಾಗಿದೆ. ದೇವರು ನಿಮ್ಮೆಲ್ಲರ ಬಾಳಿನಲ್ಲಿ ಪ್ರಜ್ವಲ ಶಕ್ತಿ ನೀಡಲಿ ಎಂದು ಅಂದ ಮಕ್ಕಳಿಗೆ ಹಾರೈಸಿ, ಅಂದ ಮಕ್ಕಳಿಗೆ ಇಷ್ಟ ಆಗುವ ಅಡುಗೆ ಮಾಡಿಸಿ ಬಡಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ. ಸದಸ್ಯ ಎಲ್.ಟಿ.ಪಾಟೀಲ ಅವರಿಗೆ ಜ್ಞಾನ ಪ್ರಜ್ಞಾ ಅಂದ ಮಕ್ಕಳ ಶಾಲೆಯ ಮುಖ್ಯೋಪಧ್ಯಾಯರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ಎಲ್.ಟಿ. ಪಾಟೀಲ ಅಭಿಮಾನಿಗಳು ಹಾಗೂ ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?
ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ ಬೀಸಾಕಿ ಹೋದ್ರಾ ಕಟುಕರು ಅನ್ನೋ ಅನುಮಾನ ಶುರುವಾಗಿದೆ. ಒಟ್ನಲ್ಲಿ ದಾರಿಹೋಕರು ರಸ್ತೆಯಲ್ಲಿ ಬಿದ್ದಿದ್ದ ಕಂದಮ್ಮನನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕೊಪ್ಪದಲ್ಲಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆ, ಬಸ್ ತಂಗುದಾಣಕ್ಕಾಗಿ ರಸ್ತೆ ತಡೆ..!
ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆದಿದೆ. ಗ್ರಾಮಕ್ಕೆ ಬಸ್ ತಂಗುದಾಣ ನಿರ್ಮಿಸಿ ಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಅರ್ಧ ಗಂಟೆಗೂ ಹೆಚ್ಚು ಕಾಲ ಬಸ್ ತಡೆದಿದ್ದಾರೆ. ಅಂದಹಾಗೆ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮಸ್ಥರು, ವಿದ್ಯಾರ್ಥಿಗಳು ಗ್ರಾಮಕ್ಕೆ ಒಂದು ಬಸ್ ತಂಗುದಾಣದ ಕನಸು ಹೊತ್ತಿದ್ದಾರೆ. ಇದುವರೆಗೂ ಗ್ರಾಮಕ್ಕೆ ಒಂದು ಬಸ್ ತಂಗುದಾಣ ನಿರ್ಮಿಸಿಕೊಟ್ಟಿಲ್ಲ ಇಲ್ಲಿನ ಅಧಿಕಾರಿಗಳು. ದುರಂತ ಅಂದ್ರೆ ಜನಪ್ರತಿನಿಧಿಗಳಿಗೂ ಈ ಬಗ್ಗೆ ಕ್ಯಾರೇ ಇಲ್ಲ. ಹೀಗಾಗಿ, ಪ್ರತಿದಿನವೂ ಶಾಲಾಬಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಮಳೆ ಬಿಸಿಲಿನಲ್ಲಿಯೇ ಬಸ್ ಗಾಗಿ ಕಾದು ರಸ್ತೆಯ ಪಕ್ಕದಲ್ಲಿ ನಿಲ್ಲಬೇಕಿದೆ. ಹೀಗಾಗಿ, ವಿದ್ಯಾರ್ಥಿಗಳು ಅದೆಷ್ಟೋ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಈ ಬಗ್ಗೆ ಕಣ್ಣೆತ್ತಿಯೂ ನೋಡಿಲ್ಲ. ಈ ಕಾರಣಕ್ಕಾಗಿ ಗ್ರಾಮಸ್ಥರು ಇಂದು ಪ್ರತಿಭಟನೆ ಕೈಗೊಂಡಿದ್ರು. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾ ನಿರತರ ಮನವೊಲಿಸಿ ಪ್ರತಿಭಟನೆ ತಣ್ಣಗಾಗಿಸಿದ್ರು.
ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?
ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.