ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

ಶಿರಸಿ ಪೊಲೀಸರ ಕಾರ್ಯಾಚರಣೆ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ, ಇಬ್ಬರು ಆರೋಪಿಗಳು ಮಾಲು ಸಹಿತ ಅಂದರ್..!

Sirsi Police Operation; ಶಿರಸಿ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಅನ್ನಭಾಗ್ಯದ ಪಡಿತರ ಅಕ್ಕಿ ಸಂಗ್ರಹಿಸಿ ಸಾಗಿಸುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಾಲು ಮತ್ತು ವಾಹನ ಸಮೇತ ಬಂಧಿಸಿದ್ದಾರೆ. ಶಿರಸಿಯ ಚಿಪಗಿ ನರೇಬೈಲಿನ ಉಬೇದ /ಸಲೀಂ ಜವಳಿ ಈತನು ಪಡಿತರ ಚೀಟಿದಾರರಿಂದ ಕಡಿಮೆ ಬೆಲೆಗೆ ಖರೀದಿಸಿದ ಅನ್ನಬಾಗ್ಯ ಯೋಜನೆಯ ಒಟ್ಟು 40 ಕ್ವಿಂಟಲ್ ಅಕ್ಕಿಯನ್ನು ತನ್ನ ಹಿಟ್ಟಿನ ಗಿರಣಿಯಲ್ಲಿ ಸಂಗ್ರಹಿಸಿಟ್ಟಿದ್ದ, ಹೀಗೆ ಸಂಗ್ರಹಿಸಿಟ್ಟ ಅನ್ನಭಾಗ್ಯದ ಅಕ್ಕಿಯನ್ನು ಈಸಳೂರಿನ ಸುನೀಲ್ ಮಹಾದೇವಪ್ಪ ನಡಗಿ ಎಂಬಾತ ಖರೀದಿಸಿದ್ದ. ಇನ್ನು, ಹಾಗೆ ಪಡಿತರ ಅಕ್ಕಿಯನ್ನು ಖರೀದಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು, ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ಟಾಟಾ ಕಂಪನಿಯ 407 ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿಕೊಂಡು ಹೊಗುತ್ತಿದ್ದ. ಈ ವೇಳೆ ಶಿರಸಿಯ ಮಂಗಳೂರ ಹೊಟೆಲ್ ಕ್ರಾಸ್ ಹತ್ತಿರ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. Sirsi Police Operation; ಈ ವೇಳೆ ಸುನೀಲ್ ಮಹಾದೇವಪ್ಪ ನಾಡಗಿ, ಅಲ್ತಾಫ್ ರೆಹಮತ್ ಉಲ್ಲಾ ಶೇಖ್ ಎಂಬುವವರನ್ನು ವಶಕ್ಕೆ...

Heavy Rain Warning; ಇಂದಿನಿಂದ 2 ದಿನ ಭಾರೀ ಮಳೆ ಎಚ್ಚರಿಕೆ; ಉತ್ತರ ಕನ್ನಡ ಸೇರಿ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್..!

Heavy Rain Warning; ಇಂದಿನಿಂದ 2 ದಿನ ಭಾರೀ ಮಳೆ ಎಚ್ಚರಿಕೆ; ಉತ್ತರ ಕನ್ನಡ ಸೇರಿ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್..!

Heavy Rain Warning; ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 20ರಿಂದ ಎರಡು ದಿನ ಕೆಲ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್‌ ಅಲರ್ಟ್‌ ನೀಡಲಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜುಲೈ ಜುಲೈ 20ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಿಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್‌ ಅಲರ್ಟ್‌ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ. ಜುಲೈ 21ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮನ್ಸೂಚನೆ...

ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಂಭವ, ಎಚ್ಚರವಹಿಸಿ; ಜಿಲ್ಲಾಧಿಕಾರಿ

ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಂಭವ, ಎಚ್ಚರವಹಿಸಿ; ಜಿಲ್ಲಾಧಿಕಾರಿ

Heavy rain Alert; ಕಾರವಾರ; ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಜು.20 ರ ಬೆಳಗ್ಗೆ 5.30 ವರೆಗೆ 24 ಗಂಟೆಗಳ ಹಠಾತ್ ಪ್ರವಾಹ ಅಪಾಯದ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ. ಎಚ್ಚರಿಕೆಗಳು..! ಸಂಪೂರ್ಣವಾಗಿ ನ್ಯಾಚುರೇಟೆಡ್ ಮಣ್ಣು ಮತ್ತು ಕಳವಳಕಾರಿ ಪ್ರದೇಶದ ತಗ್ಗು ಪ್ರದೇಶಗಳಲ್ಲಿ ಮೇಲ್ಮೆ ಹರಿವು /ಮುಳುಗಡೆ ಸಂಭವಿಸಬಹುದೆಂದು ಮುನ್ಸೂಚನೆ ನೀಡಲಾಗಿರುವುದರಿಂದ ಕೆಳಗಿನಂತೆ ಸೂಚನೆಗಳನ್ನು ಪಾಲಿಸುವುದು. ಸಾರ್ವಜನಿಕರು ಸಮುದ್ರ ಪ್ರದೇಶಗಳಿಗೆ ಹೋಗಬಾರದು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ, ನೀರಿನ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರವಹಿಸುವುದು. ಇದನ್ನೂ ಓದಿ👉ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..? ನದಿ ತೀರದಲ್ಲಿ ವಾಸಿಸುವವರು ಹಠಾತ್...

ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?

ಯಲ್ಲಾಪುರದಲ್ಲಿ ಸರಣಿ ಮನೆ ಕಳ್ಳತನ..! ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಖದೀಮರ ಕೈಚಳಕ..! ಈ ಕ್ಷಣಕ್ಕೂ ಪೊಲೀಸರ “ದಿವ್ಯ ಮೌನ”..? ಅಯ್ಯೋ ಏನಿದೇಲ್ಲ..?

Yellapur Police News; ಯಲ್ಲಾಪುರದಲ್ಲಿ ಗುರುವಾರ ಸರಣೀ ಕಳ್ಳತನವಾಗಿದೆ‌. ಪಟ್ಟಣದ ಹೃದಯ ಭಾಗದಲ್ಲೇ, ಅದೂ‌ ಕೂಡ ಯಲ್ಲಾಪುರ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲೇ ಇರೊ, ತಿಲಕ್ ಚೌಕಿನಲ್ಲಿ ಬರೋಬ್ಬರಿ ಐದು ಮನೆಗಳ ಕಳ್ಳತನ ಮಾಡಿದ್ದಾರೆ ಖದೀಮರು. ದುರಂತ ಅಂದ್ರೆ, ಘಟನೆ ನಡೆದು ಎರಡು ದಿನ ಆಗ್ತಾ ಬಂದ್ರೂ ಇಲ್ಲಿನ ಪೊಲೀಸರು ಮಾತ್ರ “ತುಟಿ ಪಿಟಕ್” ಅನ್ನದೇ ಮೌನಕ್ಕೆ ಶರಣಾಗಿದ್ದಾರೆ. ಬಿಟ್ರೆ, ಈ ಕ್ಷಣಕ್ಕೂ ಜಸ್ಟ್ ಏನಂದ್ರೇ ಏನೂ ಮಾಡಿಲ್ಲ, ಅನ್ನೋದು ಜನರಿಗೆ ಅರ್ಥವಾಗದ ಪ್ರಶ್ನೆ..! ಎರಡು ದಿನಾ ಆಯ್ತು ಕಣ್ರಿ..! ಅಸಲು, ಘಟನೆ ನಡೆದಿದ್ದು ಕಳೆದ ಗುರುವಾರ ರಾತ್ರಿ, ಶುಕ್ರವಾರ ಬೆಳಗಿನ ಜಾವದಲ್ಲಿ, ಲಕ್ಷಾಂತರ ಮೌಲ್ಯದ ಚಿನ್ನದ ಒಡವೆ ಸೇರಿದಂತೆ ಸಂಪತ್ತುಗಳು ಕಳ್ಳರ ಪಾಲಾಗಿದೆ. ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಇಷ್ಟಾದ್ರೂ, ಯಲ್ಲಾಪುರದ “ಧೀ”ಮಂತ ಪೊಲೀಸರು ಈ ಕ್ಷಣಕ್ಕೂ ಒಂದು ಕೇಸು ದಾಖಲಿಸಿಕೊಂಡಿಲ್ಲ, ಈ ಬಗ್ಗೆ ತುಟಿ ಬಿಚ್ಚಿಲ್ಲವಲ್ಲ ಯಾಕೆ..? ಅನ್ನೋದು ಸಾರ್ವಜನಿಕರ ಪ್ರಶ್ನೆಯಾಗಿದೆ. ಅದು ಠಾಣೆಯ ಕೂಗಳತೆ ದೂರ..! ಅಂದಹಾಗೆ, ಯಲ್ಲಾಪುರದ...

ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!

ಪಂಪಸೆಟ್ ಮೋಟಾರ್ ರಿಪೇರಿ ವೇಳೆ ವಿದ್ಯುತ್ ತಗುಲಿ ಮೂವರು ರೈತರ ದಾರುಣ ಸಾ*ವು..!

Three Farmers Death; ಯಾದಗಿರಿ;ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಂತಿ ತಗುಲಿ‌ ಮೂವರು ರೈತರು ಸಾವು ಕಂಡಿರೋ ಘಟನೆ, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಅಗತೀರ್ಥ ಗ್ರಾಮದಲ್ಲಿ ನಡೆದಿದೆ. ಈರಪ್ಪ(40) ದೇವು(30) ಸುರೇಶ್(22) ಎಂಬುವ ರೈತರು, ಮೋಟಾರ್ ಪಂಪ್ ಸೆಟ್ ರಿಪೇರಿ ವೇಳೆ ವಿದ್ಯುತ್ ತಗುಲಿ ಸಾವು ಕಂಡ ರೈತರಾಗಿದ್ದಾರೆ. ಮೂವರು ಸದಬ ಗ್ರಾಮದ ದುರ್ದೈವಿಗಳು ಎನ್ನಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಕೆಂಭಾವಿ ಸಮುದಾಯ ಆಸ್ಪತ್ರೆ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ👉ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!

ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..!  ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!

ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!

Police Programme; ಬೆಂಗಳೂರು: ಜನಸ್ನೇಹಿ ಪೊಲೀಸ್​​ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಲೇಔಟ್​ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಚಾಲನೆ ನೀಡಲಿದ್ದಾರೆ. ಅಪರಾಧ ನಿಯಂತ್ರಣದ ಜೊತೆಗೆ ನಾಗರೀಕರಲ್ಲಿ ಸುರಕ್ಷತೆ ಭಾವನೆ ಮೂಡಿಸುವುದೇ ಕಾರ್ಯಕ್ರಮ ಆಶಯವಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗಿರುವ ಪೊಲೀಸ್​ ಗಸ್ತು ಪ್ರಕ್ರಿಯೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನೂತನ ಅಭಿಯಾನಕ್ಕೆ ಇನ್ನು ಮುಂದೆ ಸಕ್ರಿಯವಾಗಿ ಮನೆ-ಮನೆಗೆ ಪೊಲೀಸರು ಬಂದು ಕಾನೂನು ಪರಿಧಿಯಲ್ಲಿ ಸಾರ್ವಜನಿಕರು ದೂರುಗಳನ್ನು ಆಲಿಸಲಿದ್ದಾರೆ. ಏನಿದು ಮನೆ-ಮನೆ ಪೊಲೀಸ್​ ಅಭಿಯಾನ: ಪ್ರತಿ ಪೊಲೀಸ್​ ಠಾಣಾ ವ್ಯಾಪ್ತಿಯ ಸರಹದ್ದನ್ನು ಬೀಟ್‌ಗಳಾಗಿ ವಿಂಗಡಿಸಿ, ಬೀಟ್‌ಗಳನ್ನು ಸಬ್‌ಬೀಟ್‌ಗಳಾಗಿ ವಿಂಗಡಿಸಿದೆ. ಸಬ್‌ಬೀಟ್‌ಗಳಲ್ಲಿ 40-50 ಮನೆಗಳನ್ನೊಳಗೊಂಡ ಒಂದು ಕ್ಲಸ್ಟರ್ ಅಥವಾ ಸಮೂಹವನ್ನಾಗಿ ರಚಿಸಲಾಗುತ್ತದೆ. ಪ್ರತಿ ಕ್ಲಸ್ಟರ್‌ಗೆ ಒಬ್ಬ ಪೊಲೀಸ್​ ಸಿಬ್ಬಂದಿಯನ್ನು ನೇಮಿಸಿ ಉಸ್ತುವಾರಿ ಅಧಿಕಾರಿಗಳಾಗಿ ಎಎಸ್‌ಐ ಮತ್ತು ಪಿಎಸ್‌ಐನ್ನು ನಿಯೋಜಿಸಲಾಗುತ್ತದೆ. ಪ್ರತಿ ಮನೆಗೆ...

ಸಿಎಂ ಸಿದ್ದರಾಮಯ್ಯರಿಂದ ಅವಮಾನಕ್ಕೆ ಈಡಾಗಿದ್ದ ಎಎಸ್ಪಿ ನಾರಾಯಣ ಬರಮನಿಗೆ ಪದೋನ್ನತಿ ನೀಡಿದ ರಾಜ್ಯ ಸರ್ಕಾರ..!

ಸಿಎಂ ಸಿದ್ದರಾಮಯ್ಯರಿಂದ ಅವಮಾನಕ್ಕೆ ಈಡಾಗಿದ್ದ ಎಎಸ್ಪಿ ನಾರಾಯಣ ಬರಮನಿಗೆ ಪದೋನ್ನತಿ ನೀಡಿದ ರಾಜ್ಯ ಸರ್ಕಾರ..!

Promoted News; ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, ಎಸಿಪಿ ಅಗಿ ಅವರು ಕಾರ್ಯನಿರ್ವಹಿಸಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಪದೋನ್ನತಿ ನೀಡಿ, ಬೆಳಗಾವಿ ಜಿಲ್ಲೆಗೆ ನಿಯುಕ್ತಿ ಮಾಡಿದೆ. ಏಪ್ರಿಲ್‌ನಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಅವರು ವೇದಿಕೆಯಲ್ಲಿ ಭಾಷಣ ಮಾಡಲು ಮುಂದಾದಾಗ ವೇದಿಕೆಯ ಮುಂಭಾಗದಲ್ಲಿ ಬಿಜೆಪಿ ಕಾಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದರು. ಇದರಿಂದ ಕೆರಳಿದ್ದ ಸಿದ್ದರಾಮಯ್ಯ ಅಲ್ಲೇ ಇದ್ದ ಧಾರವಾಡ ಎಎಸ್‌ಪಿಯಾಗಿದ್ದ ಭರಮನಿ ಅವರಿಗೆ ಹೊಡೆಯುವ ರೀತಿ ಕೈ ಎತ್ತಿದರು. ಬಳಿಕ ಸಿದ್ದರಾಮಯ್ಯ ಅವರ ವರ್ತನೆ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಈ ಘಟನೆಯಿಂದ...

ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!

ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ಇಂದು ಗುರುವಾರ ಜುಲೈ 17 ರಂದು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!

ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!

Heavy Rain Forecast; ಬೆಂಗಳೂರು :ಉತ್ತರ ಕನ್ನಡ ಜಿಲ್ಲೆ ಸೇರಿ ಕರ್ನಾಟಕದ ಕರಾವಳಿ, ಮಲೆನಾಡಿನ ಬಹುತೇಕ ಕಡೆಗಳಲ್ಲಿ ಜುಲೈ 21ರವರೆಗೂ ಭಾರಿ ಮಳೆ(Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ವೇಗವಾಗಿ ಗಾಳಿಯೂ ಬೀಸಲಿದೆ ಅಂತಾ ಎಚ್ಚರಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ರಾಮನಗರ, ಮೈಸೂರು, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜುಲೈ 15ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಜುಲೈ 16ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ಜುಲೈ 17 ರಿಂದ ಜುಲೈ 20...

ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!

 Police shoot News; ಯಲ್ಲಾಪುರದಲ್ಲಿ ಮತ್ತೊಂದು ಫೈರಿಂಗ್ ದಾಖಲಾಗಿದೆ. ಈ ಬಾರಿ ರಾಮನಗರದ ಕುಖ್ಯಾತ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹಲವು ಪ್ರಕರಣದಲ್ಲಿ ಬೇಕಾಗಿದ್ದು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದವನ ಕಾಲಿಗೆ ಗುಂಡು ಹಾಕಲಾಗಿದೆ. ಈ‌ ಮೂಲಕ ಅಕ್ರಮ ಹಾಗೂ ಅಂದಾ ದರ್ಬಾರ್ ಮಾಡುವ ಅಡ್ನಾಡಿಗಳಿಗೆ ಜಿಲ್ಲೆಯಲ್ಲಿ ಜಾಗ ಇಲ್ಲಾ ಅಂತಾ ಪೊಲೀಸ್ರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅಂದಹಾಗೆ, ರಾಮನಗರದ ತುಕಾರಾಮ್ @ ಪ್ರವೀಣ ಮನೋಹರ ಸುಧೀರ್( 37) ಅನ್ನೋ ರೌಡಿಶೀಟರ್ ಗೆ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಸಮೀಪದಲ್ಲಿ ಫೈರಿಂಗ್ ಮಾಡಲಾಗಿದೆ. ಪೊಲೀಸರ ಮೇಲೆಯೇ ಹಲ್ಲೆ‌ಮಾಡಿ, ಧಮ್ಕಿ ಹಾಕಿದ್ದ ಈ ರೌಡಿಶೀಟರ್ ಈಗ ಖಾಕಿ ಬಲೆಯಲ್ಲಿ ತಗಲಾಕ್ಕೊಂಡಿದ್ದಾನೆ. 2015 ರಿಂದಲೂ‌‌….! ಅಂದಹಾಗೆ, ಪ್ರವೀಣ ತಂದೆ ಮನೋಹರ ಸುಧೀರ ಎಂಬುವ 37 ವರ್ಷದ ವ್ಯಕ್ತಿ ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಆ ಭಾಗದಲ್ಲಿ ಕುಖ್ಯಾತಿ ಪಡೆದಿದ್ದ. ಹೀಗಾಗಿ, 2015 ನೇ ಸಾಲಿನಿಂದ ಸತತವಾಗಿ ಪೊಲೀಸರು...