ಮುಂಡಗೋಡ: ಶಿವಾಜಿ ಮಹಾರಾಜರು ಒಂದು ಜಾತಿಗೆ ಸೀಮಿತರಾದವರಲ್ಲ, ಸಕಲ ಹಿಂದೂ ಧರ್ಮದ ಜನರ ಆರಾಧಕರು, ಅವರ ಆದರ್ಶಗಳನ್ನ ಯುವ ಪೀಳಿಗೆ ಮೈಗೂಡಿಸಿಕೊಳ್ಳಬೇಕು, ತಾಯಂದಿರು ತಮ್ಮ ಮಕ್ಕಳಿಗೆ ಶಿವಾಜಿ ಮಹಾರಾಜರ ಆದರ್ಶಗಳನ್ನ ತಿಳಿಸಿ ಶಿವಾಜಿ ಮಹಾರಾಜರಂತೆ ಬೆಳೆಸಬೇಕು ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಕರೆ ನೀಡಿದ್ರು. ಅವರು ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣೇಶಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಾಜಿ ಮಹಾರಾಜರ ಪುತ್ತಳಿಯನ್ನ ಅನಾವರಣಗೊಳಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಶುಭದಿನದಂದು ಶಿವಾಜಿ ಮಹಾರಾಜರ ಪುತ್ತಳಿಯನ್ನ ಅನಾವರಣಗೊಳಿಸಿರುವುದು ಬಹಳ ಪುಣ್ಯದ ಕೆಲಸ ಅಂತ ಸಚಿವ್ರು ಹೆಮ್ಮೆ ವ್ಯಕ್ತ ಪಡಿಸಿದ್ರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ, ಎಲ್.ಟಿ.ಪಾಟೀಲ್, ರವಿಗೌಡ ಪಾಟೀಲ್, ತಾಲೂಕಾ ಮರಾಠ ಸಮುದಾಯದ ಅಧ್ಯಕ್ಷ ಡಿ.ಎಫ್.ಮಡ್ಲಿ, ಪ್ರಮುಖರಾದ ಗುಡ್ಡಪ್ಪ ಕಾತೂರ, ಗ್ರಾಮ ಪಂಚಾಯತ ಸದಸ್ಯ ಮಂಜುನಾಥ ಹೋತ್ನಳ್ಳಿ, ಸಿದ್ದು ಹಡಪದ ಎಮ್.ಪಿ.ಕುಸೂರ, ಪಕ್ಕಿರೇಶ ಓಲಿ, ಪರಶುರಾಮ ತಹಶಿಲ್ದಾರ್, ಶಿವಪುತ್ರಪ್ಪ ಹಾನಗಲ್,...
Top Stories
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಅಗಡಿಯ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಈತ ಗದ್ದೆಗೆ ಹೋಗಿ ವಾಪಸ್ ಅಗಡಿಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಪೆಟ್ಟಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಡಗೋಡ ಹೊಸ ಓಣಿಯಲ್ಲಿ ಮನೆಗೆ ಆಕಸ್ಮಿಕ ಬೆಂಕಿ, ಅಪಾರ ಹಾನಿ..!
ಮುಂಡಗೋಡ ಪಟ್ಟಣದ ಹೊಸ ಓಣಿಯಲ್ಲಿ ಬೆಂಕಿ ಅವಘಡವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳ ಮುಂಜಾಗ್ರತೆಯಿಂದ ಆಗಬಹುದಾಗಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ. ಹೊಸ ಓಣಿಯ ರಾಜು ಹಿರೇಮಠ ಎಂಬುವವರಿಗೆ ಸೇರಿದ ಮನೆಯಲ್ಲಿ, ವೀಣಾ ಬಾಳಂಬೀಡ ಎನ್ಹುವವರು ಬಾಡಿಗೆ ಇದ್ದರು. ಇಂದು ಬೆಳಿಗ್ಗೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋದ ನಂತರ ಕೆಲವೇ ಹೊತ್ತಲ್ಲಿ ಬೆಂಕಿ ತಗುಲಿ ಹೊತ್ತಿ ಉರಿದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಪೊಲೀಸರೂ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ನಂತರ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸಿದ್ದಾರೆ.
ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!
ಸವಣೂರು: ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಉಪವಿಭಾಗದ ಎಇಇ ನಿಂಬಣ್ಣ ಹೊಸಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯ ಹಣ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಅಧಿಕಾರಿ ತಗಲಾಕ್ಕೊಂಡಿದ್ದಾರೆ. ಲಚ್ಚಪ್ಪ ದುರ್ಗಪ್ಪ ಕನವಳ್ಳಿ ಎಂಬುವವರಿಂದ ಅವರಿಂದ ರೂ 40, ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟು, ರೂ 30 ಸಾವಿರ ಹಣವನ್ನು ಸ್ವೀಕರಿಸುವಾಗ, ಹಾವೇರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.. ಅಂದಹಾಗೆ, ಲಚ್ಚಪ್ಪ ದುರ್ಗಪ್ಪ ಕನವಳ್ಳಿ RDPR ಸವಣೂರು ಉಪವಿಭಾಗ ವ್ಯಾಪ್ತಿಯಲ್ಲಿ 2 ಕಾಮಗಾರಿಗಳನ್ನು ಮಾಡಿದ್ದರು, ಸದರಿ ಕಾಮಗಾರಿಗಳ ಹಣ ಬಿಡುಗಡೆ ಮಾಡುವಂತೆ AEE ರವರನ್ನು ಕೋರಿಕೊಂಡಾಗ, ಆರೋಪಿತ ಅಧಿಕಾರಿ AEE ನಿಂಬಣ್ಣ ಹೊಸಮನಿ ಅವರು ಕಾಮಗಾರಿ ಹಣ ಬಿಡುಗಡೆ ಮಾಡಲು 40 ಸಾವಿರ ರೂ.ಗೆ ಬೇಡಿಕೆಯೊಟ್ಟಿದ್ದರು. ನಂತರ ಮುಂಗಡವಾಗಿ 30 ಸಾವಿರ ರೂ. ಹಣ ಪಡೆಯುತ್ತಿರುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸವಣೂರಿನ ಲಚ್ಚಪ್ಪ ಕನವಳ್ಳಿ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ...
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ “ಮುಚ್ಚಿ” ಉಂಡವನದ್ದೇ ಕಾರುಬಾರು, ಹಾಗಿದ್ರೆ, ಗಾಂಧಿನಗರ ನಿವಾಸಿಗಳ ಗೋಳು ಕೇಳೋರ್ಯಾರು..?
ಮುಂಡಗೋಡ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಅದೇನಾಗಿದೆಯೊ ಒಂದೂ ಅರ್ಥ ಆಗ್ತಿಲ್ಲ. ಇಡೀ ಪಟ್ಟಣದ ಜನ ಒಂದರ್ಥದಲ್ಲಿ ಇಲ್ಲಿನ ಬ್ರಷ್ಟಾಚಾರ ಕಂಡು ಎಲೆ ಎಡಿಕೆ ಸೇವೆ ಮಾಡೋದಷ್ಟೇ ಬಾಕಿ ಉಳಿದಿದೆ. ಯಾಕಂದ್ರೆ, ಈ ಕಚೇರಿಯಲ್ಲಿನ ಕೆಲವು ನುಂಗಣ್ಣರುಗಳ ಕರಾಮತ್ತು ಹಲವರ ಬದುಕಿನ ಜೊತೆ ಚೆಲ್ಲಾಟಕ್ಕಿಳಿದಂತಾಗಿದೆ. ಬ್ರಷ್ಟರ ಬಂಡವಾಳವಾಯ್ತಾ..? ಫಾರ್ಮ್ ನಂ.3 ಅನ್ನೋ “ಬಂಡವಾಳ” ಇಟ್ಕೊಂಡು ಅಕ್ಷರಶಃ ವ್ಯವಹಾರಕ್ಕಿಳಿದಿರೋ ಪಟ್ಟಣ ಪಂಚಾಯತಿಯ ಕೆಲವು ನುಂಗಣ್ಣರುಗಳಿಗೆ ಇದೊಂದು ರೊಕ್ಕ ಗಳಿಸುವ ಅಡ್ಡ ದಂಧೆಯಾಯ್ತಾ ಅನ್ನೋ ಅನುಮಾನ ಶುರುವಾಗಿದೆ. ಈ ಕಾರಣಕ್ಕಾಗೇ ಮುಂಡಗೋಡಿನ ಅದೊಂದು ಏರಿಯಾದ ಹಿರಿಯ ನಾಗರೀಕರು ಹಿಡಿಶಾಪ ಹಾಕ್ತಿದಾರೆ. ನಿತ್ಯವೂ ಈ ಪಟ್ಟಣ ಪಂಚಾಯತಿಗೆ ಅಲೆದಾಡಿ, ಅಲೆದಾಡಿ ಸುಸ್ತಾಗಿದ್ದಾರೆ. ಇಲ್ಲಿನ ಅಧಿಕಾರಿಗಳಿಗೆ ಕ್ಯಾಕರಿಸಿ ಉಗಿತಿದಾರೆ. ಆದ್ರೂ ನುಂಗಣ್ಣರುಗಳಿಗೆ ಬುದ್ದಿ ಬರುತ್ತಿಲ್ಲವಂತೆ. ಹಾಗಂತ, ಗಾಂಧಿನಗರದ ಹಿರಿಯ ಜೀವಗಳು ನೊಂದು ನುಡಿಯುತ್ತಿದ್ದಾರೆ. ಗಾಂಧಿನಗರ ನಿವಾಸಿಗಳ ಗೋಳು..! ಅಸಲು, ಫಾರ್ಮ ನಂ 3 ನ್ನು ಪಡೆಯುವ ಸಲುವಾಗಿ, ವರ್ಷಗಟ್ಟಲೇ ಅಲೆದಾಡಿರೋ ಮುಂಡಗೋಡಿನ ಗಾಂಧಿನಗರ ಅಭಿವೃದ್ಧಿ ಸಮಿತಿಯ...
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಒತ್ತಾಯ, ಶಿಗ್ಗಾವಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕರಿಸಿ ಆಕ್ರೋಶ..!
ಶಿಗ್ಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಇಂದು ಶಿಗ್ಗಾವಿ ತಹಶೀಲ್ದಾರ ಕಛೇರಿಯಲ್ಲಿ ಶಿಗ್ಗಾವಿ ವಕೀಲರ ಸಂಘದಿಂದ ಒಂದು ದಿನ ಕೋರ್ಟ್ ಕಲಾಪದಿಂದ ದೂರ ಉಳಿದು ತಹಶೀಲ್ದಾರರಿಗೆ ಮನವಿ ನೀಡಿ ಸರಕಾರಕ್ಕೆ ಒತ್ತಾಯಿಸಿದರು. ಕೋರ್ಟ್ ನಿಂದ ಘೋಷಣೆ ಕೂಗುತ್ತ ಆಗಮಿಸಿದ ವಕೀಲರು ತಹಶಿಲ್ದಾರ ಸಂತೋಷ ಹಿರೇಮಠ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಜಿ.ಎಸ್. ಅಂಕಲಕೋಟಿ, ಕೃಷ್ಣ ಎಸ್. ಜೋಷಿ, ಕೆ. ಎನ್. ಹುತ್ತನಗೌಡ್ರ, ಕೆ.ಎಸ್. ಪಾಟೀಲ, ಎಂ. ಎಚ್. ಬೆಂಡಿಗೇರಿ, ವಿ. ಕೆ. ಕೊಣಪ್ಪನವರ, ಬಿ. ಜಿ. ಕೂಲಿ, ವಿ. ಎಸ್. ನಲವಾಲ, ಬಿ. ಎನ್. ಕೊಣನವರ, ಎಂ. ಎನ್. ಕ್ಯಾಲಕೊಂಡ, ಎ. ಎ. ಗಂಜೇನವರ, ಎಸ್. ಎಸ್. ಪೂಜಾರ, ಎಂ. ಜಿ. ವಿಜಾಪೂರ, ಎಸ್. ಬಿ. ಲಕ್ಕಣ್ಣವರ, ಬಿ. ಕೆ. ಮತ್ತಿಗಟ್ಟಿ, ಎಸ್. ಜಿ. ಟೋಪಣ್ಣವರ, ಕೆ. ಎಸ್. ಧರ್ಮಪ್ಪನವರ, ಎಸ್. ಜಿ. ಅಂಕಲಕೋಟಿ, ವಿ. ಸಿ. ಪಾಟೀಲ, ಬಿ. ಜಿ. ರಾಗಿ, ವಿ. ಸಿ. ಪಾಟೀಲ, ಪಿ....
ರಾಜ್ಯದಲ್ಲಿರೋದು 40% ಪರ್ಸೆಂಟ್ ಸರ್ಕಾರ, ಬಿಜೆಪಿ ಜಾತಿಗಳ ನಡುವೆ ಗಲಾಟೆ ನಡೆಸುತ್ತಿದೆ- ಮುಂಡಗೋಡಿನಲ್ಲಿ ಆರ್.ವಿ.ದೇಶಪಾಂಡೆ ಆರೋಪ
ಮುಂಡಗೋಡ: ರಾಜ್ಯದಲ್ಲಿ ಸದ್ಯ 40% ಪರ್ಸೆಂಟ್ ಸರ್ಕಾರವಿದೆ. ಬಿಜೆಪಿ ಆಡಳಿತಕ್ಕೆ ಬಂದ ನಂತ್ರ ಜಾತಿ ಜಾತಿಗಳ ನಡುವೆ ಗಲಾಟೆ, ವೈರತ್ವ ಬೆಳೆಸಲಾಗ್ತಿದೆ ಹೀಗಾಗಿ, ಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ನೂರಕ್ಕೆ ನೂರರಷ್ಟು ಸತ್ಯ ಅಂತಾ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆರ್ ವಿ.ದೇಶಪಾಂಡೆ ಭವಿಷ್ಯ ನುಡಿದ್ರು. ಅವ್ರು, ಪಟ್ಟಣದ ಎಲ್ ವಿ ಕೆ ಕೇಂದ್ರದ ಸಭಾಭವನದಲ್ಲಿ ರವಿವಾರ ಸಂಜೆ ”ಆರ್. ವಿ. ದೇಶಪಾಂಡೆ ಹಾಗೂ ಜಿಲ್ಲಾ ನೂತನ ಅಧ್ಯಕ್ಷ ಸಾಯಿನಾಥ ಗಾಂವಕರ್ ರವರಿಗೆ ನಡೆಸಲಾದ ಅಭಿನಂದನಾ ಕಾರ್ಯಕ್ರಮ ಹಾಗೂ ವಿವಿಧ ಪಕ್ಷದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಸಭಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡುತ್ತಿದ್ದರು. 40% ಸರ್ಕಾರ..! ಇನ್ನು ಭಾಷಣದುದ್ದಕ್ಕೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೇಶಪಾಂಡೆ, ರಾಜ್ಯದಲ್ಲಿರೋದು 40% ಕಮೀಷನ್ ಸರಕಾರ ಅಂತಾ ಆರೋಪಗಳ ಸುರಿಮಳಯೇ ನಡೆಯುತ್ತಿದೆ. ಹಾಗಂತ ಇದನ್ನ ಕಾಂಗ್ರೆಸ್ ಆರೋಪ ಮಾಡಿಲ್ಲ, ಬದಲಾಗಿ, ಗುತ್ತಿಗೆದಾರರ ಸಂಘ . ಲಂಚವಿಲ್ಲದೇ ರಾಜ್ಯದಲ್ಲಿ...
ಗರಗದ ಮಡಿವಾಳೇಶ್ವರ ಮಠದ ಪೀಠಾಧಿಪತಿ ಲಿಂಗೈಕ್ಯ..!
ಧಾರವಾಡ: ಗರಗದ ಶ್ರೀ ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಶ್ರೀ ಚನ್ನಬಸವ ಮಹಾಸ್ವಾಮೀಜಿ (89) ಅನಾರೋಗ್ಯದಿಂದ ಲಿಂಗೈಕ್ಯರಾಗಿದ್ದಾರೆ. ಧಾರವಾಡ ತಾಲೂಕಿನ ಗರಗದ ಪ್ರಸಿದ್ಧ ಮಠವಾಗಿರೋ ಮಡಿವಾಳೇಶ್ವರ ಮಠದಲ್ಲಿ ಕಳೆದ 55 ವರ್ಷಗಳಿಂದ ಶ್ರೀಗಳು ಮಠದಲ್ಲಿದ್ದರು. ಅನಾರೋಗ್ಯದ ಹಿನ್ನೆಲೆ ಇಂದು ನಿಧನರಾಗಿದ್ದಾರೆ. ಇನ್ನು, ಕಳೆದ ವಾರವಷ್ಟೇ ಗರಗದ ಮಡಿವಾಳೇಶ್ವರರ ಜಾತ್ರೆ ಅದ್ದೂರಿಯಾಗಿ ನಡೆದಿತ್ತು. ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.
“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!
ಮೈಲಾರ: “ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್” ಇದು ಪ್ರಸಕ್ತ ವರ್ಷದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ, ವೃತಾದಾರಿ ಗೊರವಯ್ಯ ನುಡಿದ ಕಾರ್ಣಿಕ ನುಡಿ. ಗೊರವಯ್ಯ ರಾಮಪ್ಪ ಎಂಬುವವರು 14 ಅಡಿ ಎತ್ತರದ ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಎಂಬ ಕಾರ್ಣಿಕ ವಿಶ್ಲೇಷಣೆ ಮಾಡಲಾಗಿದೆ. ಡೆಂಕಣಮರಡಿಯಲ್ಲಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಣೆ ಮಾಡಿದ್ದಾರೆ. ರಾಜಕೀಯ, ಕೃಷಿ ಈ ಬಾರಿಯ ಕಾರ್ಣಿಕ ನುಡಿಯ ಪ್ರಕಾರ, ಪ್ರಾಮಾಣಿಕವಾಗಿ, ನಿಷ್ಠೆಯಿಂದ ಇರುವವರೊಬ್ಬರು ರಾಜ್ಯವನ್ನು ಆಳುತ್ತಾರೆ ಎಂಬ ಭವಿಷ್ಯ ನುಡಿದಿದ್ದಾರೆ. ಇನ್ನು ಪ್ರಸಕ್ತ ವರ್ಷವೂ ಮಳೆಯ ಪ್ರಮಾಣ ಜಾಸ್ತಿಯಾಗಲಿದೆ. ಬೆಳೆಯೂ ಜಾಸ್ತಿ ಆಗಲಿದೆ, ರೈತರಿಗೆ ಒಳ್ಳೆಯದಾಗುತ್ತದೆ. ಇದರ ಜೊತೆಗೆ ಮಳೆ ಜಾಸ್ತಿಯಾಗಿ ಬೆಳೆ ಹಾನಿಯೂ ಆಗಲಿದೆ ಅನ್ನೋ ತಾತ್ಪರ್ಯವನ್ನು ವಿವರಿಸಲಾಗಿದೆ.
ಎಣ್ಣೆ ಏಟಲ್ಲಿ ಮಲಗಿದ್ದವನ ಜೇಬಿಗೆ ಕನ್ನ ಹಾಕಿದ ಅಜ್ಜಿ, ಹಣ ಎಗರಿಸಿ ಪರಾರಿ..!
ಯಲ್ಲಾಪುರ: ಎಣ್ಣೆ ಹೊಡೆದು ಟೈಟ್ ಆಗಿ ಮಲಗಿದ್ದವನ ಜೇಬಿನಿಂದ ವೃದ್ದೆಯೋರ್ವಳು ಹಣ ಎಗರಿಸಿದ್ದಾಳೆ. ಹಾಡಹಗಲೇ ಯಲ್ಲಾಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು ಸ್ಥಳೀಯರ ಮೊಬೈಲ್ ಕೆಮೇರಾದಲ್ಲಿ ಸೆರೆಯಾಗಿದೆ. ಯಲ್ಲಾಪುರ ಬಸ್ ನಿಲ್ದಾಣದ ನಂದಿನ ಹಾಲಿನ ಕೌಂಟರ್ ಬಳಿ ಓರ್ವ ವ್ಯಕ್ತಿ, ಫುಲ್ ಟೈಟ್ ಆಗಿ ನಶೆಯಲ್ಲೇ ಮಲಗಿರ್ತಾನೆ. ಈ ವೇಳೆ ಅಲ್ಲಿಗೆ ಬಂದ ವೃದ್ದೆಯೋರ್ವಳು, ಏಕಾಏಕಿ ನಶೆಯಲ್ಲಿ ಮಲಗಿದ್ದವನ ಜೇವಿಗೆ ಕೈ ಹಾಕಿದ್ದಾಳೆ. ಕೈಗೆ ಸಿಕ್ಕಷ್ಟು ಹಣ ಎಗರಿಸಿಕೊಂಡು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಇದನ್ನೇಲ್ಲ ಅಲ್ಲೇ ನೋಡುತ್ತ ನಿಂತಿದ್ದ ಯುವಕರು ಮೊಬೈಲ್ ನಲ್ಲಿ ಚಿತ್ರಿಸಿಕೊಂಡಿದ್ದಾರೆ. ಸದ್ಯ, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ಕುಡಿದ ನಶೆಯಲ್ಲಿ ಎಲ್ಲೆಂದರಲ್ಲಿ ಮಲಗುವರಿಗೆ ಎಚ್ಚರಿಕೆ ಎನ್ನುವಂತಾಗಿದೆ.









