Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ***************** ಶನಿವಾರ ನಾಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರವಾರ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್, ರೆಡ್ಕ್ರಾಸ್, ಪತಂಜಲಿ, ರೋಟರಿ ಕ್ಲಬ್, ರೋಟರಿ ಸಿಸೈಡ್,ರೋಟರಿ ಪಶ್ಚಿಮ, ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಕಾರವಾರ, ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ-2025 ಕಾರ್ಯಕ್ರಮವನ್ನು ಜೂ.21 ರಂದು ಬೆಳಗ್ಗೆ 6.30 ಗಂಟೆಗೆ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ,ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಇಬ್ಬರ ಸಾವಿಗೆ ಕಾರಣವಾಗಿದ್ದವನ ಹೆಡೆಮುರಿ ಕಟ್ಟಿದ ಯಲ್ಲಾಪುರ ಪೊಲೀಸ್ರು..!
Yallapur Crime News; ಯಲ್ಲಾಪುರ ತಾಲೂಕಿನ ಚಿಕ್ಕಮಾವಳ್ಳಿಯ ಇಂಡಿಯಾ ಗೇಟ್ ಹೋಟೆಲ ಎದುರು ಬೈಕಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸಾವು ಕಂಡಿದ್ದ ಘಟನೆಯಲ್ಲಿ, ಡಿಕ್ಕಿ ಹೊಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ವಾಹನ ಚಾಲಕನನ್ನು ಯಲ್ಲಾಪುರ ಪೊಲೀಸ್ರು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರಿನ ಶೀತಲಾಪ್ರಸಾದ ಅಲಗೂ ಬಿಂದ್ (49) ಎಂಬುವ ಆರೋಪಿಯನ್ನು ಹುಬ್ಬಳ್ಳಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಅಪಘಾತದಲ್ಲಿ ಧಾರವಾಡ ಜಿಲ್ಲೆ ಕಲಘಟಗಿಯ ಬೈಕ್ ಸವಾರ, ರಾಮು ಮಾರುತಿ ಗುಜಲೂರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಹಿಂಬದಿಯ ಸವಾರ ವಿಷ್ಣು ಜಯಪ್ಪ ಗುಜಲೂರಗೆ ಗಾಯವಾಗಿತ್ತು, ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಆತನೂ ಕೂಡ ಸಾವನ್ನಪ್ಪಿದ್ದ. ಹೀಗಾಗಿ, ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸ್ರು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಪಿಐ ರಮೇಶ್ ಹನಾಪುರ ಮಾನವೀಯತೆ..! ಇನ್ನು ಅವತ್ತು ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದ ಯಲ್ಲಾಪುರ ಪಿಐ ರಮೇಶ ಹನಾಪುರ, ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಹೇಗಾದ್ರೂ ಸರಿ ಬದುಕಿಸಬೇಕು ಅಂತ ತಮ್ಮದೇ ಜೀಪ್ ನಲ್ಲಿ ಯಲ್ಲಾಪುರ ಆಸ್ಪತ್ರೆಗೆ...
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?
Dasara Festival News :ಮೈಸೂರು : ದಸರಾ ಆರಂಭವಾಗುವ ಸೆಪ್ಟೆಂಬರ್ ತಿಂಗಳ ಶುಕ್ಲ ಪಕ್ಷದಲ್ಲಿ 2 ಬಾರಿ ಪಂಚಮಿ ಬಂದಿದ್ದು, ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಬರಲಿದೆ. ಹಾಗಾಗಿ ಈ ಬಾರಿ ವಿಶೇಷವಾಗಿ 11 ದಿನಗಳ ದಸರಾ ಆಚರಣೆ ನಡೆಯಲಿದೆ. ಆದರೆ, ಜಂಬೂಸವಾರಿ ಮೆರವಣಿಗೆಯ ಅಂತಿಮ ದಿನಾಂಕವನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿದೆ. ಮಹಾಲಯ ಅಮಾವಾಸ್ಯೆಯ ಬಳಿಕ ಆರಂಭವಾಗುವ ನವರಾತ್ರಿಯು ಈ ಬಾರಿ ದಶರಾತ್ರಿಯಾಗಲಿದೆ. ಇದು ದಸರಾ ಮಹೋತ್ಸವ ಇತಿಹಾಸದಲ್ಲಿಯೇ ಅಪರೂಪದ ಪ್ರಸಂಗವಾಗಿದೆ. ನಿಯಮದಂತೆ ಸೆ.21ಕ್ಕೆ ಅಮಾವಾಸ್ಯೆ ಮುಗಿದ ಮಾರನೆ ದಿನ (ಸೆ.22) ನವರಾತ್ರಿ ಆರಂಭವಾಗಬೇಕು. ಆದರೆ, ಸೆ.26 ಮತ್ತು 27ರಂದು ಪಂಚಮಿ ಬಂದಿರುವುದರಿಂದ ನವರಾತ್ರಿಯ ದಿನಗಳು ದಶರಾತ್ರಿಯಾಗಿ ಮಾರ್ಪಟ್ಟಿವೆ. ಅ.2ರ ಗಾಂಧಿ ಜಯಂತಿಯಂದು ವಿಜಯದಶಮಿ ನಡೆಯಲಿದೆ. ದಸರಾ ಆರಂಭದ ದಿನಗಳಿಂದಲೂ ನವರಾತ್ರಿಯನ್ನು ಯದುವಂಶಸ್ಥರು ಚಾಚೂ ತಪ್ಪದೆ ನಡೆಸಿಕೊಂಡು ಬಂದಿದ್ದಾರೆ. ಸಾಮಾನ್ಯ ಪಂಚಾಂಗಕ್ಕೂ, ಅರಮನೆ ಪಂಚಾಂಗಕ್ಕೂ ವ್ಯತ್ಯಾಸವಿದೆ. ಈ ಹಿನ್ನೆಲೆಯಲ್ಲಿ ಅರಮನೆಯಲ್ಲಿ ನಡೆಯುವ ವಿಜಯದಶಮಿಗೂ, ಸರ್ಕಾರದ ವಿಜಯದಶಮಿಗೂ ವ್ಯತ್ಯಾಸವಾಗಬಹುದು. ಒಂದು ವೇಳೆ...
ಟ್ರಕ್-ಬೊಲೆರೊ ಮುಖಾಮುಖಿ ಡಿಕ್ಕಿ: ಮದುವೆ ಮುಗಿಸಿ ಮರಳುತ್ತಿದ್ದ 9 ಮಂದಿ ಸಾವು..!
Accident News : ಸರೈಕೇಲಾ(ಜಾರ್ಖಂಡ್): ಟ್ರಕ್ ಮತ್ತು ಬೊಲೆರೊ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್ನ ನಮ್ಶೋಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 18ರಲ್ಲಿ ಇಂದು ಬೆಳಗ್ಗೆ ನಡೆಯಿತು. ತಿಲೈತಾರ್ ನಿವಾಸಿಗಳಾದ ವಿಜಯ್ ಮಹಾತೋ, ಸ್ವಪನ್ ಮಹಾತೋ, ಅಜಯ್ ಮಹಾತೋ, ಬೃಹಸ್ಪತಿ ಮಹಾತೋ, ಗುರುಪಾದ ಮಹಾತೋ, ಶಶಾಂಕ್ ಮಹಾತೋ, ಕೃಷ್ಣ ಮಹಾತೋ, ಚಂದ್ರಮೋಹನ್ ಮಹಾತೋ ಮತ್ತು ಚಾಲಕ ಚಿತ್ತರಂಜನ್ ಮಹಾತೋ ಮೃತರೆಂದು ಗುರುತಿಸಲಾಗಿದೆ. ಗುರುವಾರ ಪಶ್ಚಿಮ ಬಂಗಾಳದ ಪುರುಲಿಯಾ ಜಿಲ್ಲೆಯ ಬಲರಾಂಪುರದ ಅದಾಬ್ನಾ ಗ್ರಾಮದಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ ಬೊಲೆರೊನಲ್ಲಿ ಹಿಂತಿರುಗುತ್ತಿದ್ದಾಗ, ಇಂದು ಬೆಳಗ್ಗೆ 7 ಗಂಟೆಯ ಸುಮಾರಿಗೆ ಜಾರ್ಖಂಡ್-ಪಶ್ಚಿಮ ಬಂಗಾಳ ಗಡಿಯ ನಮ್ಶೋಲ್ ಸಮೀಪ ಬೊಲೆರೊ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರಕ್ ಭತ್ತದ ಗದ್ದೆಗೆ ನುಗ್ಗಿ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಒಂಬತ್ತೂ ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಎಲ್ಲರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಪುರುಲಿಯಾ ಆಸ್ಪತ್ರೆಗೆ...
ಸತತ ಎರಡು ದಿನದಿಂದ ಚಿನ್ನದ ಬೆಲೆ ಏರಿಕೆ; ಬೆಂಗಳೂರಲ್ಲಿ ಈಗ ಚಿನ್ನದ ಬೆಲೆ ಎಷ್ಟಿದೆ..?
Gold Price Today: ಇರಾನ್-ಇಸ್ರೇಲ್ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರುತ್ತಿವೆ. ಇದು ಇತರ ಕ್ಷೇತ್ರಗಳ ಮೇಲೂ ಪರಿಣಾಮ ಬೀರುತ್ತಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಿರುವ ಕಾರಣ, ಹೂಡಿಕೆದಾರರು ಹೂಡಿಕೆಗೆ ಸುರಕ್ಷಿತ ಸಾಧನಗಳ್ನು ಹುಡುಕುತ್ತಿದ್ದಾರೆ. ಚಿನ್ನದ ಮೇಲಿನ ಹೂಡಿಕೆ ಹೆಚ್ಚುತ್ತಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರಗಳು ಏರುಗತಿಯಲ್ಲಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಸಮೀಪದಲ್ಲಿ ವಹಿವಾಟು ನಡೆಸುತ್ತಿವೆ. ಇದು ದೇಶೀಯ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದ್ದು, ಚಿನ್ನದ ಬೆಲೆಯಲ್ಲಿ ಸತತ ಎರಡು ದಿನದಿಂದ ಏರಿಕೆ ಕಂಡಿದೆ. ಬೆಂಗಳೂರಲ್ಲಿ ಕಳೆದ ಎರಡೇ ದಿನದಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸುಮಾರು ₹700 ರಷ್ಟು ಹೆಚ್ಚಾಗಿದೆ. ಜೂನ್ 20 ರಂದು ಶುಕ್ರವಾರ ಬೆಂಗಳೂರಲ್ಲಿ ಚಿನ್ನದ ದರಗಳು ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಲ್ಲಿ ಮತ್ತೆ ಏರಿಕೆಯಾದ ಚಿನ್ನದ ಬೆಲೆ ಬೆಂಗಳೂರಲ್ಲಿ ಚಿನ್ನದ ದರಗಳು ಸತತ ಎರಡನೇ ದಿನವೂ ಹೆಚ್ಚಾಗಿವೆ. ಕಳೆದ ಬುಧವಾರ 24 ಕ್ಯಾರೆಟ್ ಅಪರಂಜಿ ಚಿನ್ನದ ದರ...
ತಗ್ಗಿದ ಮಳೆರಾಯನ ಅರ್ಭಟ; ಕರಾವಳಿ ಹೊರತು ಪಡಿಸಿ ರಾಜ್ಯದ ಉಳಿದೆಡೆ ಕಡಿಮೆಯಾದ ಮಳೆ..!
Rain Report; ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಇದೀಗ ಕರಾವಳಿ ಹೊರತುಪಡಿಸಿ ಉಳಿದೆಡೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇಲ್ಲಿ ಜೂನ್ 26ರವರೆಗೂ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ👉 ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಮಳೆ ಅರ್ಭಟ; ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ ನದಿ..! ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿಯಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ. ನಿನ್ನೆ ಎಲ್ಲೆಲ್ಲಿ ಮಳೆಯಾಗಿದೆ..? ಕಾರವಾರ, ಮುಂಡಗೋಡ, ಉಪ್ಪಿನಂಗಡಿ, ಗೇರುಸೊಪ್ಪ, ಮಂಕಿ, ಯಲ್ಲಾಪುರ, ಆಗುಂಬೆ,...
ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ಮಳೆ ಅರ್ಭಟ; ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ ನದಿ..!
Krishna river flowing; ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮುಂದುವರೆದ ಮಳೆ ಆರ್ಭಟ. ಗಡಿ ಜಿಲ್ಲೆ ಬೆಳಗಾವಿಯಲ್ಲೂ ನಿಲ್ಲದ ಮಳೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರೋ ಮಳೆಯಿಂದ, ಕೃಷ್ಣಾ ನದಿಗೆ ಮಹಾರಾಷ್ಟ್ರದಿಂದ 90 ಸಾವಿರ ಕ್ಯೂಸೆಕ್ ಗೂ ಅಧಿಕ ಒಳ ಹರಿವು ಆಗಿದೆ. ಪ್ರವಾಹ ಪರಿಸ್ಥಿತಿ ತಗ್ಗಿಸಲು ಹಿಪ್ಪರಗಿ ಬ್ಯಾರೇಜನಿಂದ ಅಷ್ಟೇ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗ್ತಿದೆ. ಸದ್ಯ ಚಿಕ್ಕೋಡಿ ಉಪ ವಿಭಾಗದಲ್ಲಿ 6 ಕೆಳ ಹಂತದ ಸೇತುವೆಗಳು ಜಲಾವೃತವಾಗಿವೆ. ಸೇತುವೆ ಸಂಪರ್ಕ ಕಡಿತ ಆಗಿದ್ದರಿಂದ 14 ಗ್ರಾಮಸ್ಥರು ಪರ್ಯಾಯ ಮಾರ್ಗವಾಗಿ ಸಂಚಾರ ಮಾಡುತ್ತಿದ್ದಾರೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದರಿಂದ ನೂರಾರು ಎಕರೆ ರೈತರ ಜಮೀನು ಜಲಾವೃತವಾಗಿದೆ. ಹೀಗಾಗಿ, ಮಳೆಗಾಲದ ಆರಂಭದಲ್ಲೇ ನದಿ ಪಾತ್ರದ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮತ್ತೆ ಏರಿಕೆಯ ಹಾದಿ ಹಿಡಿದ ಚಿನ್ನದ ಬೆಲೆ! ಈಗ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
Gold Price Today : ಆಭರಣ ಖರೀದಿಸಲು ಯೋಜಿಸುತ್ತಿರುವವರಿಗೆ ಮತ್ತೆ ಶಾಕ್ ನೀಡಿದೆ ಚಿನ್ನದ ಬೆಲೆ. ಇತ್ತೀಚೆಗೆ ಇಳಿಕೆ ಕಂಡಿದ್ದ ಚಿನ್ನದ ದರ ಈಗ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಪ್ರತಿಕೂಲ ಸನ್ನಿವೇಶಗಳು, ಇರಾನ್-ಇಸ್ರೇಲ್ ಯುದ್ಧ ಮತ್ತು ವ್ಯಾಪಾರ ಅನಿಶ್ಚಿತತೆಗಳಂತಹ ಕಾರಣಗಳಿಂದ ಚಿನ್ನದ ದರಗಳು ಮತ್ತೆ ಹೆಚ್ಚುತ್ತಿವೆ. ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆ ಸಾಧನವಾಗಿ ಪರಿಗಣಿಸುತ್ತಿದ್ದು, ಚಿನ್ನದ ದರಗಳು ಕ್ರಮೇಣ ಹೆಚ್ಚುತ್ತಿವೆ. ದೇಶೀಯ ಮಾರುಕಟ್ಟೆಯಲ್ಲಿ ಒಂದು ತೊಲ (10 ಗ್ರಾಂ) ಚಿನ್ನದ ದರ ಒಂದು ಲಕ್ಷ ರೂಪಾಯಿಗಿಂತ ಹೆಚ್ಚಿನ ಮಟ್ಟದಲ್ಲೇ ವಹಿವಾಟು ನಡೆಸುತ್ತಿದೆ. ಕಳೆದ ಮಂಗಳವಾರ ಚಿನ್ನದ ಬೆಲೆ ಇಳಿಕೆಯಾಗಿತ್ತಾದರೂ, 10 ಗ್ರಾಂ ಬಂಗಾರದ ಬೆಲೆ ₹1 ಲಕ್ಷಕ್ಕಿಂತ ಹೆಚ್ಚಿನ ಮಟ್ಟದಲ್ಲೇ ಇತ್ತು. ಇದೀಗ ಮತ್ತೆ ದರ ಏರಿಕೆಯಾಗಿರುವುದು ಚಿನ್ನ ಖರೀದಿಸುವವರಿಗೆ ಹೆಚ್ಚುವರಿ ಹೊರೆಯಾಗಿದೆ. ಜೂನ್ 19 ರಂದು ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ದರ ಎಷ್ಟಿದೆ ಎಂಬ ವಿವರ ಇಲ್ಲಿದೆ. ಬೆಂಗಳೂರಲ್ಲಿ ಮತ್ತೆ ಹೆಚ್ಚಿದ ಚಿನ್ನದ ದರ ಬೆಂಗಳೂರಲ್ಲಿ...
ಗ್ರಾನೈಟ್ ಮೈಮೇಲೆ ಬಿದ್ದು, ಮಲ್ಲಿಕಾರ್ಜುನ ಟೈಲ್ಸ್ & ಸಿರಾಮಿಕ್ಸ್ ಮಾಲೀಕನೇ ಸಾವು..!
Karwar Crime News; ಕಾರವಾರ: ಮಲ್ಲಿಕಾರ್ಜುನ ಟೈಲ್ಸ & ಸಿರಾಮಿಕ್ಸ ಮಾಲಕ ಮುದ್ದಣ್ಣ ಹಾಲುಂಡಿ ಅವರ ಮೈಮೇಲೆ ಗ್ರಾನೆಟ್ ಕಲ್ಲು ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮುದ್ದಣ್ಣ ಹಾಲುಂಡಿ (53) ಅವರು ಉಪ್ಪಾರ ಸಮುದಾಯದ ಮುಖಂಡರಾಗಿದ್ದರು. ಕೊಪ್ಪಳ ಜಿಲ್ಲೆಯವರಾದ ಅವರು ಕಾರವಾರದ ಬಾಂಡಿಶೆಟ್ಟಾದಲ್ಲಿ ಮನೆ ಮಾಡಿಕೊಂಡಿದ್ದರು. ಅಸ್ನೋಟಿಯ ಕೊಳಗೆ ಗ್ರಾಮದ ಬಳಿ ಅವರು ಗ್ರಾನೆಟ್ ಸಂಗ್ರಹಿಸಿಟ್ಟುಕೊoಡಿದ್ದರು. ಗುರುವಾರ ತಮ್ಮ ಮಳಿಗೆಗೆ ಬಂದ ಗ್ರಾಹಕರಿಗೆ ಗ್ರಾನೆಟ್ ಹಾಗೂ ಟೈಲ್ಸುಗಳನ್ನು ಕಾಣಿಸುತ್ತಿದ್ದರು. ಗ್ರಾಹಕರು ಆಯ್ಕೆ ಮಾಡಿಕೊಂಡ ಕಡಪವನ್ನು ರಿಕ್ಷಾಗೆ ತುಂಬುವ ಕೆಲಸದಲ್ಲಿ ಅವರು ನಿರತರಾದರು. ಕೆಲಸದ ಸಿಬ್ಬಂದಿ ಪ್ರಕಾಶ ಬಾಂದೇಕರ್ ಜೊತೆಗೂಡಿ ಅವರು ರಿಕ್ಷಾ ಒಳಗೆ ಕಡಪ ಕಲ್ಲುಗಳನ್ನು ತುಂಬಿದ್ದರು. ಪ್ರಕಾಶ ಬಾಂದೇಕರ್ 6 ಅಡಿ ಉದ್ದದ ಗ್ರಾನೇಟಿಗೆ ಹಗ್ಗ ಕಟ್ಟುತ್ತಿರುವಾಗ ಆ ಕಲ್ಲು ನೆಲಕ್ಕೆ ಅಪ್ಪಳಿಸಿತು. ರಿಕ್ಷಾದೊಳಗೆ ಕಡಪ ಸರಿಯಾಗಿ ನಿಲ್ಲಿಸುತ್ತಿರುವ ಅವಧಿಯಲ್ಲಿಯೇ 7ಕ್ಕೂ ಅಧಿಕ ಕಡಪ ಕಲ್ಲುಗಳು ಒಮ್ಮೆಲೆ ಮುದ್ದಣ್ಣ ಹಾಲುಂಡಿ ಅವರ ಮೈಮೇಲೆ ಅಪ್ಪಳಿಸಿದವು. ಆ ಕಲ್ಲುಗಳ ಅಡಿಗೆ...
5 ವರ್ಷದಲ್ಲಿ 2303% ರಿಟರ್ನ್; ಈಗ ವಿದೇಶದಲ್ಲಿ ಗುತ್ತಿಗೆ ಪಡೆದ ಫಾರ್ಮಾ ಕಂಪನಿ, ಅಪ್ಪರ್ ಸರ್ಕ್ಯೂಟ್ ಹೊಡೆದ ಷೇರು..!
Pharma Stock News : ನವದೆಹಲಿ: ಭಾರತೀಯ ಷೇರು ಮಾರುಕಟ್ಟೆ ಗುರುವಾರ ರೆಡ್ ಮಾರ್ಕ್ನಲ್ಲಿ ಮುಚ್ಚಿದೆ. ಮಾರುಕಟ್ಟೆ ಕುಸಿತದ ಹೊತಾಗಿಯೂ ಫಾರ್ಮಾ ಕಂಪನಿ ‘ವೆಲ್ಕ್ಯೂರ್ ಡ್ರಗ್ಸ್ & ಫಾರ್ಮಾಸುಟಿಕಲ್ಸ್ (Welcure Drugs and Pharmaceuticals) ಷೇರುಗಳಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಈ ಷೇರು ಬೆಲೆ ಶೇ.5 ರಷ್ಟು ಏರಿಕೆಯೊಂದಿಗೆ ₹14.42ಕ್ಕೆ ತಲುಪಿದ್ದು, ಅಪ್ಪರ್ ಸರ್ಕ್ಯೂಟ್ ಹೊಡೆದಿದೆ. ವಾಸ್ತವವಾಗಿ, ವೆಲ್ಕ್ಯೂರ್ ಡ್ರಗ್ಸ್ ಅಂಡ್ ಫಾರ್ಮಾಸ್ಯುಟಿಕಲ್ಸ್ ಕಂಪನಿಯು ₹517 ಕೋಟಿ ಮೌಲ್ಯದ ಗ್ಲೋಬಲ್ ಸೋರ್ಸಿಂಗ್ ಆರ್ಡರ್ ಪಡೆದಿರುವುದಾಗಿ ಘೋಷಿಸಿದೆ. ಅಂದರೆ, ಅಂತರಾಷ್ಟ್ರೀಯ ಖರೀದಿದಾರರಿಗೆ ದೊಡ್ಡ ಪ್ರಮಾಣದಲ್ಲಿ ಉತ್ಪನ್ನಗಳು ಅಥವಾ ಸೇವೆಗಳನ್ನು ಪೂರೈಸಲು ಈ ಕಂಪನಿಯನ್ನು ಆಯ್ಕೆ ಮಾಡಲಾಗಿದೆ. ಜಾಗತಿಕ ಗುತ್ತಿಗೆ ಪಡೆದಿರುವ ಕಂಪನಿ ಕಂಪನಿಯು ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್ಇ)ಗೆ ಸಲ್ಲಿಸಿರುವ ಫೈಲಿಂಗ್ನಲ್ಲಿ ತಾನು ₹517 ಕೋಟಿ ಮೌಲ್ಯದ ಗ್ಲೋಬಲ್ ಸೋರ್ಸಿಂಗ್ ಆರ್ಡರ್ ಪಡೆದಿರುವುದಾಗಿ ಘೋಷಿಸಿದೆ. ಕಂಪನಿಯ ಘೋಷಣೆಯ ಪ್ರಕಾರ, ಸುಮಾರು ₹517 ಕೋಟಿ ಮೌಲ್ಯದ ಸೋರ್ಸಿಂಗ್ ಮತ್ತು ಖರೀದಿ ಸೇವೆಗಳನ್ನು ಒದಗಿಸಲು ಕಂಪನಿಯು...