ಕಾರವಾರ: ಗ್ರಾಮದಿಂದ ಗ್ರಾಮಕ್ಕೆ ನದಿಯಲ್ಲಿ ಬೋಟ್ ಮೂಲಕ ದಾಟುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬೋಟು ಕೆಟ್ಟು ಐವರು ಗ್ರಾಮಸ್ಥರು ಗಂಗಾವಳಿ ನದಿಯ ಮಧ್ಯೆ ಸಿಲುಕಿಕೊಂಡಿದ್ದ ಘಟನೆ ನಡೆದಿದೆ. ಅಂಕೋಲಾ ತಾಲೂಕಿನ ಡೋಂಗ್ರಿ ಪಂಚಾಯತಿ ವ್ಯಾಪ್ತಿಯ ರಾಮನಗುಳಿಯಿಂದ ಡೋಂಗ್ರಿಗೆ ಸಂಪರ್ಕಿಸುವ ತೂಗುಸೇತುವೆ ಕಳೆದ ಎರಡು ವರ್ಷಗಳ ಹಿಂದೆ ಗಂಗಾವಳಿಯ ನೆರೆಗೆ ಕೊಚ್ಚಿ ಹೋಗಿತ್ತು. ಇದರಿಂದಾಗಿ ಸದ್ಯ ಇಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯ ಕೂಡ ಪ್ರಗತಿಯಲ್ಲಿತ್ತು. ಆದ್ರೆ, ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಈ ತಾತ್ಕಾಲಿಕ ಸೇತುವೆಯ ಮೇಲೂ ನೀರು ಹರಿದು ರಾಮನಗುಳಿಯಿಂದ ಡೋಂಗ್ರಿಗೆ ಸಂಪರ್ಕ ಕಡಿತಗೊಂಡಿದ್ದು, ಹತ್ತಾರು ಹಳ್ಳಿಗಳ ಜನತೆ ನಡುಗಡ್ಡೆಯಲ್ಲಿ ಜೀವನ ನಡೆಸುವಂತಾಗಿದೆ. ಈ ಎರಡೂ ಗ್ರಾಮಗಳ ನಡುವೆ ಓಡಾಟಕ್ಕೆ ಸದ್ಯ ಬೋಟನ್ನು ಬಳಸಲಾಗುತ್ತಿದ್ದು, ಹೀಗೆ ಗುಳ್ಳಾಪುರದಿಂದ ಡೋಂಗ್ರಿಗೆ ಬೋಟಿನಲ್ಲಿ ತೆರಳುತ್ತಿದ್ದ ಐವರು ರಭಸದ ಗಂಗಾವಳಿ ನದಿಯ ನಡುವೆ ಸಿಲುಕಿದ್ದಾರೆ. ಈ ಬೋಟು ಈ ಮೊದಲು ಹಾಳಾಗಿತ್ತು. ನಿನ್ನೆಯಷ್ಟೆ ದುರಸ್ತಿ ಮಾಡಿ ನದಿಗೆ ಇಳಿಸಲಾಗಿತ್ತು...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ, ರಕ್ಷಣೆ ಮಾಡಿದ್ದು ಹೇಗೆ ಗೊತ್ತಾ..?
ಕಾರವಾರ: ತಾಲೂಕಿನ ಗೋಟೆಗಾಳಿ ಗ್ರಾಮದಲ್ಲಿ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ. ಇಲ್ಲಿನ ವಾಸು ಪೆಡ್ನೇಕರ್ ಎಂಬುವವರ ಮನೆಯ ಬಳಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಕಂಡು ಕುಟುಂಬದವರು ಆತಂಕಗೊಂಡಿದ್ರು. ಹಾಗೆ, ಕಾಳಿಂಗ ಸರ್ಪ ಕಂಡು ಅತಂಕಗೊಂಡ ಮನೆಯವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಹೀಗಾಗಿ, ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಕಾಳಿಂಗ ರಕ್ಷಣೆ ಮಾಡಲಾಗಿದೆ. ಬರೋಬ್ಬರಿ 12 ಅಡಿ..! ಅಲ್ಲಿ ಪ್ರತ್ಯಕ್ಷವಾಗಿದ್ದ ಕಾಳಿಂಗ ಸರ್ಪ ಬರೋಬ್ಬರಿ 12 ಅಡಿಗೂ ಹೆಚ್ಚು ಉದ್ದವಾಗಿದೆ. ಆಹಾರ ಹುಡುಕಿಕೊಂಡು ಜನವಸತಿ ಪ್ರದೇಶಕ್ಕೆ ಆಗಮಿಸಿರುವ ಕಾಳಿಂಗ ಸರ್ಪ ಕಂಡು ಸ್ಥಳೀಯರು ಆತಂಕಗೊಂಡಿದ್ದರು. ಹೀಗಾಗಿ, ಕಾಳಿಂಗ ಸರ್ಪ ರಕ್ಷಣೆ ಬಳಿಕ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು, ಸೆರೆಹಿಡಿದ ಕಾಳಿಂಗ ಸರ್ಪವನ್ನು ಅರಣ್ಯ ಸಿಬ್ಬಂದಿಗಳು ಸುರಕ್ಷಿತವಾಗಿ ಕಾಡಿಗೆ ಬಿಟ್ಟು ಬಂದಿದ್ದಾರೆ.
ಭೀಕರ ಅಪಘಾತ, ನಿಡಸೋಸಿ ಮಠದ ಶ್ರೀಗಳು ಅದೃಷ್ಟವಶಾತ್ ಪಾರು..!
ಧಾರವಾಡ – ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರ ಅಂತ್ಯಕ್ರಿಯೆಗೆ ಬಂದಿದ್ದ ಶ್ರೀಗಳ ಕಾರು ಅಪಘಾತವಾಗಿದೆ. ಬೆಳಗಾವಿ ಹೊರವಲಯದ ತೇಗೂರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದೆ. ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದ್ದು, ಕಾರ್ ಪಲ್ಟಿಯಾಗಿ ಕಾರ ನುಜ್ಜುಗುಜ್ಜಾಗಿದೆ. ಆದ್ರೆ ಏರಬ್ಯಾಗ ಇದ್ದಿದ್ದರಿಂದ ಅದೃಷ್ಟವಶಾತ್ ಶ್ರೀಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಶ್ರೀಗಳ ಕಾಲಿಗೆ ಚಿಕ್ಕಪುಟ್ಟ ಗಾಯವಾಗಿದೆ. ಸದ್ಯ ಕೆಎಲ್ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಚಾಲಕ ರಮೇಶ ಮಾಳಿ ಸೇರಿದಂತೆ ಇಬ್ಬರು ಆಪ್ತ ಸಹಾಯಕರು ಕಾರಿನಲ್ಲಿದ್ದರು. ಎಲ್ಲರಿಗೂ ಸಣ್ಣ ಪುಟ್ಟ ಗಾಯ ಹೊರತುಪಡಿಸಿದರೆ ಯಾವುದೇ ಗಂಭೀರ ಪ್ರಮಾಣದ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಗಡಿಭಾಗದಲ್ಲಿ ಅಪಾರ ಭಕ್ತ ಸಮೂಹ ಹೊಂದಿರುವ ಶ್ರೀಗಳು, ಸರಳತೆಯ ಮೂಲಕ ಉತ್ತರ ಕರ್ನಾಟಕದ ನಡೆದಾಡುವ ದೇವರು ಅಂತಲೇ ಪ್ರಖ್ಯಾತಿ ಪಡೆದಿದ್ದಾರೆ. ಹೀಗಾಗಿ, ಜಗದ್ಗುರು ಪಂಚಮ ಶಿವಲಿಂಗೇಶ್ವರ ಕಾರು ಅಪಾಘತವಾಗಿರುವ ಸುದ್ದಿ ಎಲ್ಲೆಡೆ ಹಬ್ಬುತ್ತಿದ್ದಂತೆ...
21 ವರ್ಷ ದೇಶ ಕಾಯ್ದ ವೀರ ಯೋಧನಿಗೆ ಮುಂಡಗೋಡಿಗರ ಭವ್ಯ ಸ್ವಾಗತ ಹೇಗಿತ್ತು ಗೊತ್ತಾ..?
ಮುಂಡಗೋಡ; ಅವ್ರು ಬರೋಬ್ಬರಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ದೇಶ ಕಾಯ್ದವರು. ಈಗಷ್ಟೇ ನಿವೃತ್ತಿ ಹೊಂದಿ ಸ್ವಗ್ರಾಮಕ್ಕೆ ಆಗಮಿಸುತ್ತಿರೋ ದೀರ ಯೋಧ. ಬಿಎಸ್ ಎಫ್ ಯೋಧನಾಗಿ ದೇಶದ ಗಡಿ ಕಾಯ್ದ ವೀರನಿಗೆ ಇಂದು ಮುಂಡಗೋಡಿಗರು ಹೃದಯಪೂರ್ವಕ ಸ್ವಾಗತ ಕೋರಿದ್ರು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಯೋಧ ಗಣಪತಿ ರವಳಪ್ಪನವರ್ ರವರಿಗೆ ಭವ್ಯ ಸ್ವಾಗತ ಕೋರಲಾಯಿತು. ಹಾರ ಹಾಕಿ ಗೌರವಪೂರ್ವಕ ಸನ್ಮಾನಿಸಲಾಯಿತು. ಪಟಾಕಿ ಸಿಡಿಸಿ ಯೋಧನ ಆಗಮನಕ್ಕೆ ಸಂಭ್ರಮಿಸಲಾಯಿತು. ನೂರಾರು ಬೈಕ್ ಗಳನ್ನೇರಿ ಜಯಕಾರಗಳೊಂದಿಗೆ ಯೋಧನಿಗೆ ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ಕರೆತರಲಾಯಿತು.
ನಾಳೆ ಗುರುವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಿಸಿ ಡೀಸಿ ಆದೇಶ..!
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಬಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆ ಗುರುವಾರವೂ ಶಾಲಾ ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಸೂಚನೆ ನೀಡಲಾಗಿದ್ದು. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಗುರುವಾರವೂ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಟಿಬೇಟಿಯನ್ ಕಾಲೋನಿಯಲ್ಲಿ ದಲೈ ಲಾಮಾರ 87 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ, ಟಿಬೇಟಿಗರ ಧರ್ಮಗುರು ದಲೈ ಲಾಮಾರವರ 87 ನೇ ಜನ್ಮ ದಿನದ ಸಂಭ್ರಮ ಕಳೆ ಕಟ್ಟಿದೆ. ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂ.3 ರ ಕಮ್ಯುನಿಟಿ ಹಾಲ್ ನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತ್ತು. ದಲೈ ಲಾಮಾರವರ ಹುಟ್ಟು ಹಬ್ಬದ ನಿಮಿತ್ತ ಕೇಕ್ ಕತ್ತರಿಸಿ ಸಂಭ್ರಮಿಸಲಾಯಿತು. ಅಪರ ಜಿಲ್ಲಾಧಿಕಾರಿ ರಾಜೂ ಮೊಗವೀರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ರು. ಇನ್ನು, ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಟಿಬೇಟಿಗರು, ಸಾಂಪ್ರದಾಯಿಕ ಉಡುಗೆ ತೊಟ್ಟು ಸಂಭ್ರಮಿಸಿದ್ರು. ವಿವಿಧ ವೇಷ ಭೂಷಣಗಳೊಂದಿಗೆ ದಲೈ ಲಾಮಾರವರ ಹುಟ್ಟುಹಬ್ಬದ ಸಂಭ್ರಮದಲ್ಲಿ ತೊಡಗಿದ್ದರು.
ಭಾರೀ ಮಳೆ, ಗೋಕರ್ಣ ಬಳಿ ರಸ್ತೆ ಮೇಲೆ ಗುಡ್ಡ ಕುಸಿತ, ರಸ್ತೆ ಸಂಚಾರ ಅಸ್ತವ್ಯಸ್ತ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ, ಅವಾಂತರಗಳು ಸೃಷ್ಟಿಯಾಗಿವೆ. ಕುಮಟಾ ತಾಲೂಕಿನ ಗೋಕರ್ಣ ಕ್ರಾಸ್ ಬಳಿ ಗುಡ್ಡ ಕುಸಿತವಾಗಿದೆ. ಗೋಕರ್ಣದ ಮಾದನಗೇರಿಯ ಬಳಿ ಗುಡ್ಡ ಕುಸಿತವಾಗಿದ್ದು, ಐಆರ್ಬಿ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಗುಡ್ಡ ಕುಸಿತವಾಗಿದೆ ಅನ್ನೋ ಆರೋಪ ಕೇಳಿಬಂದಿದೆ. ಗುಡ್ಡ ಕುಸಿತದಿಂದಾಗಿ, ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು, ಹೀಗಾಗಿ, ವಾಹನಗಳಿಗೆ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಹೆದ್ದಾರಿಗೆ ಬಿದ್ದ ಮಣ್ಣನ್ನ ತೆರವುಗೊಳಿಸುವ ಕಾರ್ಯ ಚುರುಕುಗೊಳಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಮುಂದುವರೆದ ಮಳೆಯ ಅರ್ಭಟ ಹಿನ್ನೆಲೆ, ನಾಳೆ ಬುಧವಾರವೂ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ಬುಧವಾರ ಹಾಗೂ ಗುರವಾರ ಭಾರೀ ಮಳೆಯ ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ನೀಡಿರೋ ಮುನ್ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಬುಧವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಭಾರೀಮಳೆ ಸುರಿಯೋ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ತಾಲೂಕಾಡಳಿತಗಳಿಗೆ ಸಂದೇಶ ರವಾನಿಸಲಾಗಿದೆ.
ಸಿನಿಮಿಯ ರೀತಿಯಲ್ಲಿ ಹಂತಕರ ಹೆಡೆಮುರಿ ಕಟ್ಟಿದ ಪೊಲೀಸರು, ಅಷ್ಟಕ್ಕೂ ಹತ್ಯೆ ನಂತರ ಪೊಲೀಸರಿಗೆ ಕರೆ ಮಾಡಿದ್ರಾ ಹಂತಕರು..?
ಬೆಳಗಾವಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಿ ಪರಾರಿಯಾಗುತ್ತಿದ್ದ ಹಂತಕರ ಅರೆಸ್ಟ್ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗದ ಬಳಿ ಸಾರ್ವಜನಿಕರ ಸಹಕಾರದೊಂದಿಗೆ ಪೊಲೀಸ್ರು ಹಂತಕರನ್ನು ಹೆಡೆಮುರಿ ಕಟ್ಟಿದ್ದಾರೆ. ಚಂದ್ರಶೇಖರ್ ಗುರೂಜಿಯವರನ್ನು ಭೀಕರವಾಗಿ ಹತ್ಯೆ ಮಾಡಿದ್ದ ಹಂತಕರು, ಬಟ್ಟೆ ಬದಲಿಸಿ ಕಾರಲ್ಲೇ ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ತೆರಳುತ್ತಿದ್ರು. ಇದೇ ವೇಳೆ ಮೊಬೈಲ್ ಟವರ್ ಲೋಕೇಶನ್ ಆಧಾರದಲ್ಲಿ ಹತ್ಯೆಯಾದ ಕೇವಲ 4 ಗಂಟೆಯಲ್ಲೇ ಹಂತಕರನ್ನು ಎಳೆದು ತಂದಿದ್ದಾರೆ ಪೊಲೀಸರು. ಆರೋಪಿಗಳಿಂದಲೇ ಕರೆ..! ಇನ್ನು, ಹಾಗೆ ಗುರೂಜಿಯ ಹತ್ಯೆಯ ನಂತರ ಹಂತಕರು ಹುಬ್ಬಳ್ಳಿ ಪೊಲೀಸರಿಗೆ ಖುದ್ದಾಗಿ ಪೋನ್ ಕರೆ ಮಾಡಿದ್ದರಂತೆ. ಮಾದ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಹಂತಕರು, ನಾವು ಬೆಳಗಾವಿ ಕಡೆಗೆ ಹೋಗುತ್ತಿದ್ದೇವೆ ಅಂತಾ ಹೇಳಿದ್ದರಂತೆ. ಹೀಗಾಗಿ, ತಕ್ಷಣವೇ ಹುಬ್ಬಳ್ಳಿ ಪೊಲೀಸ್ರು ರಾಮದುರ್ಗ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಅಲರ್ಟ್ ಆದ ರಾಮದುರ್ಗ ಪೊಲೀಸರು ಹಂತಕರನ್ನು ಬಂಧಿಸಿದ್ದಾರೆ. ಹಾಗಂತ, ಹುಬ್ಬಳ್ಳಿ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಆಪ್ತರಿಂದಲೇ ಹತ್ಯೆಯಾದ್ರಾ ಚಂದ್ರಶೇಖರ ಗುರೂಜಿ..? ಬೇನಾಮಿ ಆಸ್ತಿಗಾಗಿ ಚುಚ್ಚಿ ಚುಚ್ಚಿ ಕೊಂದ್ರಾ ಹಂತಕರು..?
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯರ ಬೀಕರ ಹತ್ಯೆಯ ಹಿಂದೆ ಬೇನಾಮಿ ಆಸ್ತಿಯ ನೆರಳಿದೆ. ಬಹುತೇಕ ಆಪ್ತರೇ ಹಂತಕರು ಅನ್ನೋ ಪ್ರಾಥಮಿಕ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ. ಅಷ್ಟಕ್ಕೂ, ಹಂತಕ ಆರೋಪಿಗಳು ಕಲಘಟಗಿ ತಾಲೂಕಿನ ದುಮ್ಮವಾಡದ ನಿವಾಸಿಗಳು ಎನ್ನಲಾಗಿದೆ. ಬೇನಾಮಿ ಆಸ್ತಿ ಕಾರಣವಾ..? ಇನ್ನು, ಚಂದ್ರಶೇಖರ್ ಗುರೂಜಿ ವನಜಾಕ್ಷಿಯ ಹೆಸರಿಗೆ ಬೇನಾಮಿ ಆಸ್ತಿ ಮಾಡಿದ್ದರು ಎನ್ನಲಾಗಿದೆ. ಈ ಕಾರಣಕ್ಕಾಗಿ ಹಾಗೆ ವನಜಾಕ್ಷಿ ಹೆಸರಲ್ಲಿ ಇದ್ದ ಆಸ್ತಿ ವಾಪಸ್ ಕೇಳಿದ್ದ ಕಾರಣಕ್ಕೆ ಇಂತಹ ಭೀಕರ ಹತ್ಯೆ ನಡೆದಿದೆ ಅನ್ನುವ ಮಾತುಗಳು ಕೇಳಿ ಬಂದಿದೆ.









