ಬಾಚಣಕಿ ಗ್ರಾಪಂ ಅಧ್ಯಕ್ಷ  ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?

ಬಾಚಣಕಿ ಗ್ರಾಪಂ ಅಧ್ಯಕ್ಷ ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುತ್ತಿದೆ. ಇಂದು ಮದ್ಯಾನ 1 ಗಂಟೆಯ ನಂತರ ನಡೆಯಲಿರೋ ಚುನಾವಣೆಯಲ್ಲಿ ಯಾರ ಕೈಗೆ ಅಧಿಕಾರದ ಚುಕ್ಕಾಣಿ..? ಅನ್ನೋ ಕುತೂಹಲಕ್ಕೆ ಉತ್ತರ ಸಿಗಲಿದೆ. 13 ಸದಸ್ಯ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಹೀಗಾಗಿನೇ ಕಾಂಗ್ರೆಸ್ ಬೆಂಬಲಿತ ನಾಗರಾಜ್ ಉಪಾದ್ಯೆ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ರು. ಅದ್ರಂತೆ, ಅರಶಿಣಗೇರಿಯ ತಿಪ್ಪವ್ವ ಢಾಕಪ್ಪ ಲಮಾಣಿ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿದ್ರು. 15-15 ಒಪ್ಪಂದ..! ಆದ್ರೆ, ಅವತ್ತು ಅಧ್ಯಕ್ಷರ ಆಯ್ಕೆ ಹೊತ್ತಲ್ಲಿ ಒಪ್ಪಂದವೊಂದನ್ನು ಮಾಡಿಕೊಂಡಿದ್ದ ಸದಸ್ಯರು, 15 ತಿಂಗಳ ಅವಧಿಗಾಗಿ ಮಾತ್ರ ಅಧ್ಯಕ್ಷರ ಅಧಿಕಾರ ಸೀಮಿತಗೊಳಿಸಿದ್ರು. ಆ ನಂತರ ಬೇರೊಬ್ಬರಿಗೆ ಸ್ಥಾನ ಬಿಟ್ಟುಕೊಡಲು ಒಪ್ಪಂದ ಮಾಡಿಕೊಂಡಿದ್ರು. ಅದ್ರಂತೆ, ನಾಗರಾಜ್ ಉಪಾದ್ಯ ಮಾತು ಕೊಟ್ಟಂತೆ 15 ತಿಂಗಳ ನಂತರ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರು. ಹೀಗಾಗಿ, ಸಧ್ಯ ಅಧ್ಯಕ್ಷರ ಚುನಾವಣೆ ನಡೆಯುತ್ತಿದೆ. ಇದು ಒಂದು...

9 ತಿಂಗಳ ಹಿಂದೆ ಸಿಕ್ಕಿದೆ ಅನಾಥ ಶವ, ಕೊಲೆಯಾಗಿ ನದಿಯಲ್ಲಿ ತೇಲಿಬಂದಿದೆ ಹೆಣ, ಈ ವ್ಯಕ್ತಿ ನಿಮಗೇನಾದ್ರೂ ಗೊತ್ತಾ..?

9 ತಿಂಗಳ ಹಿಂದೆ ಸಿಕ್ಕಿದೆ ಅನಾಥ ಶವ, ಕೊಲೆಯಾಗಿ ನದಿಯಲ್ಲಿ ತೇಲಿಬಂದಿದೆ ಹೆಣ, ಈ ವ್ಯಕ್ತಿ ನಿಮಗೇನಾದ್ರೂ ಗೊತ್ತಾ..?

ಬಹುಶಃ ಅದೊಂದು ಭೀಕರ ಕೊಲೆ. ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಅದ್ಯಾರೋ ಗೊತ್ತಿಲ್ಲ, ಕುತ್ತಿಗೆಗೆ ಟವೇಲ್ ಬಿಗಿದು ಬರ್ಬರವಾಗಿ ಕೊಂದಿದ್ದಾರೆ ದುಷ್ಟರು. ಅದೇಲ್ಲಿ ಕೊಲೆ ಮಾಡಿದ್ದಾರೋ ಅದೂ ಕೂಡ ಇವತ್ತಿಗೂ ಗೊತ್ತಾಗಿಲ್ಲ. ಹಾಗೆ ನಿರ್ದಯವಾಗಿ ಕೊಲೆ ಮಾಡಿ, ಮಲಪ್ರಭಾ ನದಿಯಲ್ಲಿ ತಂದು ಬೀಸಾಕಿ ಹೋಗಿದ್ದಾರೆ. ಆ ಶವ ತೇಲುತ್ತ ಬಂದು ಬೆಳಗಾವಿ ಜಿಲ್ಲೆಯ ಚಾಪಗಾಂವ್ ಸಮೀಪದ ಮಲಪ್ರಭಾ ನದಿಯ ದಂಡೆಯ ಮೇಲೆ ಸಿಕ್ಕಿದೆ. 9 ತಿಂಗಳ ಹಿಂದೆ.. ಅಷ್ಟಕ್ಕೂ, ಈ ಶವ ಸಿಕ್ಕಿದ್ದು ನಿನ್ನೆ ಮೊನ್ನೆಯಲ್ಲ. ಬರೋಬ್ಬರಿ 9 ತಿಂಗಳ ಹಿಂದೆ, ಅಂದ್ರೆ, 2021 ರ ಸೆಪ್ಟೆಂಬರ್ ತಿಂಗಳಲ್ಲಿ ಶವ ಸಿಕ್ಕಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಪೊಲೀಸರು ಅವತ್ತೇ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದಿದ್ದಾರೆ. ಆದ್ರೆ ಇದುವರೆಗೂ ಆ ಶವ ಯಾರದ್ದು ಅನ್ನೋ ಸಣ್ಣದೊಂದು ಸುಳಿವೂ ಸಿಕ್ಕಿಲ್ಲ. ರಾಜ್ಯ ತಡಕಾಡಿದ್ರು.. ಅಂದಹಾಗೆ, ಹಾಗೆ ನದಿಯ ದಡದಲ್ಲಿ ಶವ ಸಿಕ್ಕ ಗಳಿಗೆಯಿಂದ ಇಲ್ಲಿಯವರೆಗೂ ಪೊಲೀಸರೇನು ಸುಮ್ಮನೆ ಕುಳಿತಿಲ್ಲ....

ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಅವಿಶ್ವಾಸಕ್ಕೆ ಅರ್ಜಿ, ಹೆಬ್ಬಾರ್ ಸಾಹೇಬ್ರ ನಿರ್ಲಕ್ಷಕ್ಕೆ ಸಿಡಿದೆದ್ರಾ ಸದಸ್ಯರು..!

ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಅವಿಶ್ವಾಸಕ್ಕೆ ಅರ್ಜಿ, ಹೆಬ್ಬಾರ್ ಸಾಹೇಬ್ರ ನಿರ್ಲಕ್ಷಕ್ಕೆ ಸಿಡಿದೆದ್ರಾ ಸದಸ್ಯರು..!

ಸಚಿವ ಶಿವರಾಂ ಹೆಬ್ಬಾರ್ ಅದ್ಯಾಕೋ ಏನೋ ಕಾರ್ಯಕರ್ತರ ಮನಸಿನಾಳ ಅರ್ಥೈಸಿಕೊಳ್ಳುವಲ್ಲಿ ವಿಫಲರಾಗ್ತಿದಾರಾ..? ಇಂತಹದ್ದೊಂದು ಅನುಮಾನ, ಕ್ಷೇತ್ರದ ಸದ್ಯದ ಸ್ಥಿತಿ ನೋಡಿದ್ರೆ ಎಂಥವರಿಗೂ ಅರ್ಥವಾಗ್ತಿದೆ. ಅಸಲು, ಸಚಿವರು ಮಾಡಿರೋ ಸಣ್ಣದೊಂದು ನಿರ್ಲಕ್ಷಕ್ಕೆ ಮುಂಡಗೋಡ ಪಟ್ಟಣ ಪಂಚಾಯತಿ ಸದ್ಯ ಕೊತ ಕೊತ ಕುದಿಯುತ್ತಿದೆ. ಬಿಜೆಪಿಯೊಳಗಿನ ಆಂತರಿಕ ಬೇಗುದಿ ಸ್ಫೋಟಗೊಂಡಿದೆ. ಅವಿಶ್ವಾಸ ಮಂಡನೆಗೆ ಅರ್ಜಿ..! ಮುಂಡಗೋಡ ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಿಸಲು ಅರ್ಜಿ ಸಲ್ಲಿಕೆಯಾಗಿದೆ. ಅದ್ಯಕ್ಷೆ ರೇಣುಕಾ ರವಿ ಹಾವೇರಿ ಹಾಗೂ ಉಪಾಧ್ಯಕ್ಷ ಮಂಜುನಾಥ್ ಹರ್ಮಲಕರ್ ವಿರುದ್ಧ ಅವಿಶ್ವಾಸಕ್ಕೆ ಅರ್ಜಿ ಸಲ್ಲಿಸಲಾಗಿದೆ‌. ಗಟ್ಟಿಯಾಗಿತ್ತು ಬಿಜೆಪಿ..! ಒಟ್ಟೂ 19 ಸದಸ್ಯ ಬಲದ ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ, ಮೂಲ ಬಿಜೆಪಿಗ 10 ಜನ ಸದಸ್ಯರಿದ್ದರು, ಆ ನಂತರದ ಬೆಳವಣಿಗೆಯಲ್ಲಿ ಶಿವರಾಮ್ ಹೆಬ್ಬಾರ್ ಬಳಗದಿಂದ ಗೆದ್ದು ಬಂದಿದ್ದ ನಾಲ್ವರು ಬಿಜೆಪಿ ಪಾಳಯ ಸೇರಿಕೊಂಡಿದ್ದರು. ಹೀಗಾಗಿ ಈ ಪಟ್ಟಣ ಪಂಚಾಯತಿಯಲ್ಲಿ ಬಿಜೆಪಿ ಬಲ 14 ಕ್ಕೆ ಏರಿತ್ತು. ಕಮಲ‌ ಪಡೆಗೆ ಗಟ್ಟಿ ನೆಲೆ ಸಿಕ್ಕಿತ್ತು. 15-...

ಭೀಕರ ರಸ್ತೆ ಅಪಘಾತ, ಕ್ರೂಸರ್ ನಾಲೆಗೆ ಬಿದ್ದು 9 ಜನರ ದಾರುಣ ಸಾವು, 8 ಜನರಿಗೆ ಗಾಯ..!

ಭೀಕರ ರಸ್ತೆ ಅಪಘಾತ, ಕ್ರೂಸರ್ ನಾಲೆಗೆ ಬಿದ್ದು 9 ಜನರ ದಾರುಣ ಸಾವು, 8 ಜನರಿಗೆ ಗಾಯ..!

 ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಬೆಳಗಾವಿ ಸಮೀಪ ಕಣಬರಗಿ ಬಳಿ ಭೀಕರ ಅಪಘಾತವಾಗಿದೆ. ಕ್ರೂಸರ್ ನಾಲೆಗೆ ಉರುಳಿ ಬಿದ್ದ ಪರಿಣಾಮ, 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರು ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಎನ್ನಲಾಗಿದೆ. ಕೂಲಿ ಕೆಲಸಕ್ಕಾಗಿ ಕ್ರೂಸರ್ ವಾಹನದಲ್ಲಿ ಬೆಳಗಾವಿಯತ್ತ ಬರುತ್ತಿದ್ರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಬಳ್ಳಾರಿ ನಾಲೆಗೆ ಕ್ರೂಸರ್ ವಾಹನ ಪಲ್ಟಿಯಾಗಿ ಬಿದ್ದು 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಿನಗೂಲಿ ನೌಕರರು ರೈಲ್ವೆ ಬ್ರಿಡ್ಜ್ ಕಾಮಗಾರಿಗಾಗಿ ಕೆಲಸಕ್ಕೆ ಹೋಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ಬೆನ್ನಲ್ಲೇ ಗೋಕಾಕ್ ಹಾಗೂ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಟ್ರಾಫಿಕ್ ಜಾಮ್ ಆಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ‌ ನಡೆದಿದೆ.

ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗೂಡಂಗಡಿಯ ಮೇಲೆ ಪೊಲೀಸರ ದಾಳಿ, ಕೇಸು ದಾಖಲು..!

ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಗೂಡಂಗಡಿಯ ಮೇಲೆ ಪೊಲೀಸರ ದಾಳಿ, ಕೇಸು ದಾಖಲು..!

ಮುಂಡಗೋಡ: ತಾಲೂಕಿನ ಅಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಓರ್ವನ ಮೇಲೆ ಕೇಸು ದಾಖಲಿಸಲಾಗಿದೆ. ಅಗಡಿಯ ನಾಗರಾಜ್ ರೇಖಪ್ಪ ಲಮಾಣಿ ಎಂಬುವವನ ಮೇಲೆ ಕೇಸು ದಾಖಲಿಸಲಾಗಿದ್ದು, ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಅಕ್ರಮವಾಗಿ ಯಾವುದೇ ಪರ್ಮಿಟ್ ಇಲ್ಲದೇ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಾರೀ ಮಳೆ ಗಾಳಿಗೆ, ಚಲಿಸುತ್ತಿದ್ದ ಓಮಿನಿ ಮೇಲೆ ಬಿದ್ದ ಮರ, ವಾಹನ ಜಖಂ..!

ಭಾರೀ ಮಳೆ ಗಾಳಿಗೆ, ಚಲಿಸುತ್ತಿದ್ದ ಓಮಿನಿ ಮೇಲೆ ಬಿದ್ದ ಮರ, ವಾಹನ ಜಖಂ..!

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಪರಿಣಾಮ ಸಿದ್ದಾಪುರ ಪಟ್ಟಣದ ಬಳಿ ಚಲಿಸುತ್ತಿದ್ದ ಓಮಿನಿ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಸಿದ್ದಾಪುರ ಹೊರವಲಯದಲ್ಲಿ ಚಲಿಸುತ್ತಿದ್ದ ಓಮಿನಿ ವಾಹನದ ಮೇಲೆ ಮರ ಬಿದ್ದಿದೆ. ವಿದ್ಯುತ್ ಕಂಬ ಇರೋ ಕಾರಣಕ್ಕೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಓಮಿನಿ ವಾಹನ ನುಜ್ಜುಗುಜ್ಜಾಗಿದ್ದು, ಓಮಿನಿಯಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ‌. ಸಿದ್ದಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..

ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?

ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?

ಮುಂಡಗೋಡ; ತಾಲೂಕಿನಲ್ಲಿ ಈಗ ಬದಲಾವಣೆ ಗಾಳಿ ಬೀಸಿದೆ. ಬಹುತೇಕ ಕೋರ್ಟ್ ಆದೇಶದಂತೆ ಇನ್ನೇರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ನಡಿಯೋದು ಬಹುತೇಕ ಫಿಕ್ಸ್ ಆದಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡ ತಾಲೂಕಿನಲ್ಲಿ ಮೂರು ಇದ್ದ ಜಿಪಂ ಕ್ಷೇತ್ರಗಳನ್ನ ಮರು ವಿಂಗಡನೆ ಮಾಡಲಾಗಿದೆ. ಮತ್ತೊಂದು ಕ್ಷೇತ್ರವನ್ನು ಹುಟ್ಟು ಹಾಕುವ ಕಾರ್ಯ ಚಾಲ್ತಿ ಪಡೆದುಕೊಂಡಿದೆ. ಹಾಗಂತ, ಬಲ್ಲ ಮೂಲಗಳಿಂದ ಪಬ್ಲಿಕ್ ಫಸ್ಟ್ ಗೆ ಮಾಹಿತಿ ಸಿಕ್ಕಿದೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 16 ಗ್ರಾಮ ಪಂಚಾಯತಿಗಳಿವೆ. ಇದುವರೆಗೂ ಚಿಗಳ್ಳಿ, ಪಾಳಾ ಹಾಗೂ ಇಂದೂರು, ಹೀಗೆ ಮೂರು ಜಿಲ್ಲಾ ಪಂಚಾಯತ ಕ್ಷೇತ್ರಗಳಿದ್ದವು, ಜೊತೆಗೆ 11 ತಾಲೂಕು ಪಂಚಾಯತಿ ಕ್ಷೇತ್ರಗಳಿದ್ದವು. ಆದ್ರೆ, ಸದ್ಯ ಈ ಎಲ್ಲಾ ಕ್ಷೇತ್ರಗಳ ಮರುವಿಂಗಡನೆಗೆ ಶಿಫಾರಸ್ಸು ಮಾಡಲಾಗಿದೆ. ಮೂರು ಇದ್ದ ಜಿಪಂ ಕ್ಷೇತ್ರಗಳನ್ನು ಮರುವಿಂಗಡಿಸಿ 4 ಕ್ಷೇತ್ರಗಳನ್ನಾಗಿ ಮಾಡಲಾಗಿದೆ. ಹಾಗೆನೇ 11 ಇದ್ದ ತಾಪಂ ಕ್ಷೇತ್ರಗಳನ್ನು 9 ಕ್ಕೆ ಇಳಿಸಲಾಗಿದೆ. ಹಾಗಂತ, ಶಿಫಾರಸ್ಸು ಮಾಡಿದ್ದು ಇನ್ನೆರಡು ದಿನಗಳಲ್ಲಿ ಸರ್ಕಾರ ಮರುವಿಂಗಡನೆಯ ಆದೇಶ ಹೊರಡಿಸೋ ಸಾಧ್ಯತೆ ಇದೆ...

ಶಂಕರ್ ಗೌಡಿ ಮುಂಡಗೋಡಿನ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ..!

ಶಂಕರ್ ಗೌಡಿ ಮುಂಡಗೋಡಿನ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ..!

ಮುಂಡಗೋಡಿಗೆ ನೂತನ ತಹಶೀಲ್ದಾರ್ ಆಗಿ ಶಂಕರ ಗೌಡಿ ವರ್ಗಾವಣೆಯಾಗಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲೆ ಬೀಳಗಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಂಕರ್ ಗೌಡಿಯವರನ್ನು ಮುಂಡಗೋಡಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶ್ರೀಧರ್ ಮುಂದಲಮನಿಯವರನ್ನು ಶಿರಸಿಗೆ ವರ್ಗಾವಣೆಗೊಳಿಸಿದ್ದರಿಂದ ಮುಂಡಗೋಡ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ನಿನ್ನೆಯಷ್ಟೇ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಬಿಡುಗಡೆಗೊಂಡು ಶಿರಸಿಗೆ ವರ್ಗಾವಣೆಯಾಗಿದ್ದರು. ಹೀಗಾಗಿ, ಇಂದು ನೂತನ ತಹಶಿಲ್ದಾರ್ ಶಂಕರ್ ಗೌಡಿಯವರನ್ನು ಸರ್ಕಾರ ಮುಂಡಗೋಡಿಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.

ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಇಂದು ಬಿಡುಗಡೆ, ಡೀಸಿ ಆದೇಶ..!

ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಇಂದು ಬಿಡುಗಡೆ, ಡೀಸಿ ಆದೇಶ..!

ಮುಂಡಗೋಡ: ಶಿರಸಿಗೆ ವರ್ಗಾವಣೆಗೊಂಡಿರೋ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡದಿಂದ ಬಿಡುಗಡೆಗೊಂಡಿದ್ದಾರೆ. ಬಿಡುಗಡೆಗೊಳಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲಿನ್ ಆದೇಶ ಹೊರಡಿಸಿದ್ದಾರೆ. ಇವತ್ತೇ ಮುಂಡಗೋಡದಿಂದ ಶಿರಸಿಗೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಿಡುಗಡೆಗೊಂಡಿದ್ದು, ಮುಂದಿನ ತಹಶೀಲ್ದಾರ್ ಹುದ್ದೆ ಭರ್ತಿ ಆಗುವವರೆಗೂ ಮುಂಡಗೋಡಿಗೆ ಹೆಚ್ಚುವರಿ ಪ್ರಭಾರಿಯಾಗಿ ಶ್ರೀಧರ್ ಮುಂದಲಮನಿಯವರೇ ಕಾರ್ಯ ನಿರ್ವಹಿಸಲಿದ್ದಾರೆ ಅಂತಾ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯ‌ಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?

ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯ‌ಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?

ಮುಂಡಗೋಡ: ತಾಲೂಕಿನಲ್ಲಿ ಈಗ ಎಲ್ಲೆಂದರಲ್ಲಿ ಸರಾಯಿ ಮಾರಾಟದ ಅಕ್ರಮ ಅಡ್ಡೆಗಳು ತಲೆ ಎತ್ತಿವೆ. ಅಧಿಕೃತ ಮದ್ಯದಂಗಡಿಗಳು ಮುಂಡಗೋಡಿಗಷ್ಟೇ ಸೀಮಿತವಾಗಿವೆ. ಆದ್ರೆ ಅದ್ಯಾರ ಕೃಪಾಕಟಾಕ್ಷವೋ ಗೊತ್ತಿಲ್ಲ, ಇಡೀ ತಾಲೂಕಿನ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ದಂಧೆಕೋರರನ್ನು ಹುಟ್ಟು ಹಾಕಲಾಗಿದೆ. ಹೀಗಾಗಿ, ತಾಲೂಕಿನ ಮಹಿಳೆಯರು, ಪ್ರಜ್ಞಾವಂತರು ಸಂಬಂಧಪಟ್ಟವರಿಗೆ ಹಿಡಿಶಾಪ ಹಾಕ್ತಿದಾರೆ. ಅದ್ರಲ್ಲೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಹಾಮಂಗಳಾರತಿ ಮಾಡ್ತಿದಾರೆ. ಅಬಕಾರಿಗಳದ್ದೇ ಆಟ..? ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಈಗ ಕೆಲವು ಕಿರಾಣಿ ಅಂಗಡಿಗಳಲ್ಲೂ ಮದ್ಯ ಹೇರಳವಾಗಿ ಸಿಗುತ್ತಿದೆ. ಇನ್ನು ತಾಲೂಕಿನ ಟಿಬೇಟಿಯನ್ ಕಾಲೋನಿಗಳ ಅಕ್ಕಪಕ್ಕದಲ್ಲೇ ಹತ್ತಾರು ಅಂಗಡಿಗಳು ಬಿಂಧಾಸ್ ಆಗಿ ಸರಾಯಿ ಮಾರಾಟ ಮಾಡ್ತಿವೆ. ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 6 ರ ಕ್ರಾಸ್ ಬಳಿ, ಕ್ಯಾಂಪ್ ನಂಬರ್ 8 ಬಳಿ ಅಕ್ರಮವಾಗಿ ಯಾವುದೇ ಪರ್ಮಿಟ್ ಇಲ್ಲದೇ ಸರಾಯಿ ಮಾರಾಟ ಮಾಡಲಾಗ್ತಿದೆ. ಹೀಗಾಗಿ, ಈ ಭಾಗದ ಹಲವು ಯುವಕರು ಮದ್ಯದ ದಾಸರಾಗ್ತಿದಾರೆ. ಈ ನಶೆಯಲ್ಲೇ ಹಲವು ಬಗೆಯ ಕ್ರೈಂ ಗಳು ನಡೆಯುತ್ತಿವೆ. ಅವ್ರು ಹೇಳಿದ್ದೇ ರೇಟು..!...