Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! Uttar Kannada News Today; ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ..! ಕಾರವಾರ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರಕಾರದಿಂದ 2025ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2025 ರ ಜುಲೈ 31ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ವಿವಿಧ ಕ್ಷೇತ್ರಗಳ ಸಾಧಕರಾದ (ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ, ಕ್ರೀಡೆ,ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ,ಸಂಸ್ಕೃತಿ ಮತ್ತು ನೂತನ ಆವಿಷ್ಕಾರಗಳು) ಎಲ್ಲಾ ಮಕ್ಕಳ ಪ್ರಶಸ್ತಿಗೆ ಅರ್ಜಿಯನ್ನು ಆನ್ಲೈನ್ https://awards.gov.in ಮೂಲಕ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಮಕ್ಕಳ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಡಗುಂಜಿ ದೇವಾಲಯ; ಅಂಗಡಿ ಮಳಿಗೆಗಳ ಹರಾಜು ಮುಂದೂಡಿಕೆ ಕಾರವಾರ; ಶ್ರೀ ವಿನಾಯಕ ದೇವಾಲಯ ಇಡಗುಂಜಿಯ ಮಂಗಲಮೂರ್ತಿ ಮಂಗಲ...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಒಂದೂವರೆ ವರ್ಷದೊಳಗೆ ಹು – ಧಾ ಮಹಾನಗರ ಪಾಲಿಕೆ ಆಯುಕ್ತರ ವರ್ಗಾವಣೆ: ಗುತ್ತಿಗೆದಾರರ ಸಂಘ ಆಕ್ರೋಶ..!
Hubli- Dharwad News: ಹುಬ್ಬಳ್ಳಿ : ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಮಿಷನರ್ಗಳಿಗೆ ಪೂರ್ಣಾವಧಿ ಅಧಿಕಾರ ಸಿಕ್ಕೇ ಇಲ್ಲ. ಇಲ್ಲಿ ಆಯುಕ್ತರಾಗಿ ಆಗಮಿಸುವವರು ಕೇವಲ ಒಂದು, ಒಂದೂವರೆ ಹಾಗೂ ಆರು ತಿಂಗಳಲ್ಲಿ ವರ್ಗಾವಣೆಯಾಗುತ್ತಿರುವುದರಿಂದ ಅವಳಿ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಒಂದು ನಗರ ಅಭಿವೃದ್ಧಿಗೊಳ್ಳಬೇಕಾದರೆ ಆಯುಕ್ತರಾಗಿ ಬರುವವರು ಕನಿಷ್ಠ ಎರಡು ವರ್ಷವಾದರೂ ಇಲ್ಲಿರಬೇಕು. ಆದರೆ, ಇಲ್ಲಿಗೆ ಕಮಿಷನರ್ ಆಗಿ ಬರುವವರು ಒಂದರಿಂದ ಒಂದೂವರೆ ವರ್ಷದೊಳಗೆ ವರ್ಗಾವಣೆಗೊಳ್ಳುತ್ತಿರುವುದು ಅಭಿವೃದ್ಧಿ ದೃಷ್ಟಿಯಿಂದ ಹಿನ್ನೆಡೆಗೆ ಕಾರಣವಾಗಿದೆ. ಅಧಿಕಾರ ವಹಿಸಿಕೊಂಡ ಕೇವಲ ಐದೂವರೆ ತಿಂಗಳಲ್ಲಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ್ ಘಾಳಿ ವರ್ಗಾವಣೆಗೊಂಡಿದ್ದಾರೆ. ಸ್ಮಾರ್ಟ್ ಸಿಟಿ ಎಂಡಿ ಆಗಿರುವ ಡಾ. ರುದ್ರೇಶ್ ಅವರಿಗೆ ಕಳೆದ 27ರಂದು ಪಾಲಿಕೆ ಜನವರಿ ಮಹಾನಗರ ಆಯುಕ್ತರನ್ನಾಗಿ ಹೆಚ್ಚುವರಿ ಅಧಿಕಾರವನ್ನು ಸರ್ಕಾರ ನೀಡಿತ್ತು. ಹಿರಿಯ ಕೆಎಎಸ್ ಅಧಿಕಾರಿಯಾಗಿರುವ ಡಾ. ಘಾಳಿ, ಪಾಲಿಕೆ...
ಮಹಿಳೆಗೆ ಬೈಕ್ ಡಿಕ್ಕಿ ಹೊಡೆದು, 30 ವರ್ಷ ತಲೆ ಮರೆಸಿಕೊಂಡಿದ್ದ ಆರೋಪಿ ಕೇರಳದಲ್ಲಿ ಬಂಧನ..!
Sirsi Crime News; ಶಿರಸಿ; ಗ್ರಾಮೀಣ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ,30 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟಿದ್ದಾರೆ. 1996 ರಲ್ಲಿ, ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಶಿರಸಿ- ಕುಮಟಾ ರಸ್ತೆ ಕಸಗೆ ಹತ್ತಿರ, ಪಾದಾಚಾರಿ ಕೋಖಂಡದ ಲೀಲಾವತಿ ಗಣಪತಿ ಹೆಗಡೆ ಎಂಬುವ ಮಹಿಳೆಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿ ಹೊಡೆದು ಬೈಕ್ ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದ್ದ. ಆರೋಪಿತನು 1996 ರಿಂದಲೂ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದನು. ಇದನ್ನೂ ಓದಿ👉 ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ..! ಉತ್ತರ ಕನ್ನಡ ಎಸ್ಪಿ ಎಂ ನಾರಾಯಣ್ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಜಿ ಹಾಗೂ ಎಮ್ ಜಗದೀಶ್ ಮತ್ತು ಶಿರಸಿ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಹಾಗೂ ಶಿರಸಿ ಗ್ರಾಮೀಣ ಠಾಣೆಯ ಪಿ ಐ ಮಂಜುನಾಥ್ ಎಮ್, ಪಿಎಸ್ಐ ಸಂತೋಷಕುಮಾರ್ ಹಾಗೂ ಅಶೋಕ್ ರಾಠೋಡ್ ರವರ ಮಾರ್ಗದರ್ಶನದಲ್ಲಿ ಶಿರಸಿ ಗ್ರಾಮೀಣ ಪೊಲೀಸ್...
ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಳ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ..!
Minority Scheme : ಬೆಂಗಳೂರು: ರಾಜ್ಯ ಸರ್ಕಾರ ಗುತ್ತಿಗೆ ಬೆನ್ನಲ್ಲೇ ಈಗ ಅಲ್ಪಸಂಖ್ಯಾತರಿಗೆ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಇದ್ದ ಮೀಸಲಾತಿಯನ್ನು ಶೇಕಡಾ 10 ರಿಂದ 15 ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಗುರುವಾರ ಒಪ್ಪಿಗೆ ನೀಡಿದೆ. ಗುರುವಾರ (ಜೂನ್ ೧೯) ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದ ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಸತಿ ಇಲಾಖೆ ಸಚಿವರಾಗಿರುವ ಜಮೀರ್ ಅಹ್ಮದ್ ಖಾನ್ ಈ ಕುರಿತಾದ ಪ್ರಸ್ತಾಪವನ್ನು ಸಂಪುಟ ಸಭೆಯಲ್ಲಿ ಇಟ್ಟಿದ್ದರು. ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಲ್ಲಿ ಮೀಸಲಾತಿ ಸೌಲಭ್ಯ ಸಿಗಲಿದೆ. ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ ಅವರು, “ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ...
ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ : ಸಚಿವ ಎನ್. ಚಲವರಾಯ ಸ್ವಾಮಿ
Agriculture News; ಕಾರವಾರ; ರಾಜ್ಯದ ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲವರಾಯ ಸ್ವಾಮಿ ಹೇಳಿದರು. ಅವರು ಮಂಗಳವಾರ ಹಳಿಯಾಳದ ಪುರಭವನದಲ್ಲಿ, ಮುಂಗಾರು ಬೀಜ ಬಿತ್ತನೆ ಅಭಿಯಾನಕ್ಕೆ ಚಾಲನೆ ಹಾಗೂ ಕೃಷಿ ಯಂತ್ರೋಪಕರಣ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು 1000 ಅಧಿಕಾರಿ ಸಿಬ್ಬಂದಿಗಳ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು ಹಾಗೂ 700 ಮಂದಿಗೆ ಈಗಾಗಲೇ ಮುಂಬಡ್ತಿ ನೀಡಲಾಗಿದೆ ಎಂದರು. ರಾಜ್ಯದ 224 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 24 ಸಾವಿರ ಕೃಷಿ ಹೊಂಡ ನಿರ್ಮಿಸುವ ಗುರಿ ಹೊಂದಲಾಗಿದೆ. ಕಳೆದ 2 ವರ್ಷದಲ್ಲಿ ರೈತರಿಗೆ 344 ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಗಿದೆ. ಕಬ್ಬು ಕಟಾವು ಯಂತ್ರಗಳ ಖರೀದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ 50 ಲಕ್ಷ ಹಾಗೂ ಸಾಮಾನ್ಯ ವರ್ಗದ ರೈತರಿಗೆ 40 ಲಕ್ಷ ಸಬ್ಸಿಡಿ ನೀಡಲಾಗುತ್ತಿದೆ. ಸ್ಪಿಂಕ್ಲರ್ ಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುತ್ತಿದ್ದು,...
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
Agriculture News; ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಲ್ಲಿರುವ ಭೂಮಿಯಲ್ಲಿ ರಾಸಾಯನಿಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಸಾವಯವ ರೀತಿಯಲ್ಲಿ ಬಳಕೆ ಮಾಡುವ ಮೂಲಕ ಮೂಲಕ ದೇಶದ ಮೊದಲ ಸಾವಯವ ಕೃಷಿ ತಾಲೂಕನ್ನಾಗಿ ಪರಿವರ್ತಿಸಲಾಗುವುದು ಎಂದು ಕೃಷಿ ಸಚಿವ ಎನ್ ಚಲವರಾಯ ಸ್ವಾಮಿ ಹೇಳಿದರು. ಅವರೂ ಮಂಗಳವಾರ, ಜೋಯಿಡಾದಲ್ಲಿ, ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಕೃಷಿ ಸಂಬoಧಿತ ಇಲಾಖೆಗಳು ಹಾಗೂ ಐ.ಸಿ.ಎ ಆರ್- ಕೃಷಿ ವಿಜ್ಞಾನ ಕೇಂದ್ರ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಜೋಯಿಡಾ ತಾಲ್ಲೂಕನ್ನು ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸುವ ಕಾರ್ಯಕ್ರಮದ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜೋಯಿಡಾ ತಾಲೂಕು 70% ಅರಣ್ಯದಿಂದ ಕೂಡಿದ್ದು ಇಲ್ಲಿನ ವಾತಾವರಣ ಬೇರೆ ಕಡೆ ಎಲ್ಲೂ ನೋಡಲು ಸಾಧ್ಯವಿಲ್ಲ, ನೈಸರ್ಗಿಕವಾದ ಭೂಮಿ, ಅರಣ್ಯ ಪ್ರದೇಶ, ಪರಿಸರ ನೈಸರ್ಗಿಕ ಸಂಪತ್ತಿನಿoದ ಕೂಡಿದ್ದು, ಇಲ್ಲಿನ ಭೂಮಿಯಲ್ಲಿ ರಾಸಾಯನಿಕವಲ್ಲದ ಕೃಷಿ ಚಟುವಟಿಯಲ್ಲಿ ತೊಡಗಿಸಿಕೊಂಡು, ಸಂಪೂರ್ಣ ಸಾವಯವ ಕೃಷಿ ತಾಲೂಕನ್ನಾಗಿ ಪರಿವರ್ತಿಸಲು ರೈತರ ಸಹಕಾರವು ಅಗತ್ಯವಾಗಿದೆ ಎಂದರು....
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
Borewell cable theft; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಭಾಗದಲ್ಲಿ ಬೋರವೆಲ್ ಮೋಟರ್ ಕೇಬಲ್ ಕಳ್ಳರ ಹಾವಳಿ ರೈತರ ನಿದ್ದೆಗೆಡಿಸಿದೆ. ಕಳೆದ ಒಂದೂವರೇ ವರ್ಷದಿಂದ ನಿತ್ಯವೂ ಒಂದಿಲ್ಲೊಂದು ರೀತಿಯಲ್ಲಿ ಕೇಬಲ್ ಕಳ್ಳತನ, ಮೋಟರ್ ಕಳ್ಳತನ ಮಾಡಿಕೊಂಡು ಹೋಗುವ ಕಳ್ಳರಿಗೆ ಯಾರ ಭಯವೂ ಇಲ್ಲವಾಗಿದೆ. ಹಾಗಂತ, ಕೊಪ್ಪ, ಇಂದೂರು ಭಾಗದ ರೈತರು ಪೊಲೀಸ್ ಇಲಾಖೆಯ ಮೇಲೆ ಆಕ್ರೋಶಗೊಂಡಿದ್ದಾರೆ. ಅದೇಷ್ಟೇ ಬಡಕೊಂಡ್ರೂ, ಇಷ್ಟೇಲ್ಲ ಕಳ್ಳತನ ಪ್ರಕರಣಗಳು ನಡೆದ್ರೂ ಇದುವರೆಗೂ ಒಂದೇ ಒಂದು ಕೇಸ್ ಖುಲ್ಲಾ ಮಾಡಿಲ್ಲ ಅನ್ನೋದು ಅನ್ನದಾತರ ಆಕ್ರೋಶ.. ಹೌದು, ಮುಂಡಗೋಡ ತಾಲೂಕಿನಲ್ಲಿ ರೈತರ ಗದ್ದೆಗಳಲ್ಲಿನ ಬೋರವೆಲ್ ಗೆ ಅಳವಡಿಸಿದ, ಕೇಬಲ್ ಕಳ್ಳತನವಾಗ್ತಿದೆ. ನಿತ್ಯವೂ ಒಂದಿಲ್ಲೊಂದು ಕಡೆ ಕಳ್ಳರು ಕೈಚಳಕ ತೋರಿಸ್ತಾನೇ ಇದಾರೆ. ಅದ್ರಲ್ಲೂ, ಇಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಪ್ಪ ಗ್ರಾಮದಲ್ಲಿ ಕಳ್ಳರ ಕರಾಮತ್ತುಗಳು ರೈತರ ನಿದ್ದೆಗೆಡಿಸಿವೆ. ಕಳ್ಳತನ ನಡೆದಾಗಲೊಮ್ಮೆ ಪೊಲೀಸರಿಗೆ ದೂರು ಕೊಡೋದು, ಪೊಲೀಸ್ರು ಬಂದು ಪರಿಶೀಲನೆ ಮಾಡೋದು, ಅಷ್ಟೆ ಬಿಟ್ರೆ ಬೇರೆ ಏನಂದ್ರೆ, ಏನೂ ನಡೆಯುತ್ತಿಲ್ಲ. ಕೇವಲ್...
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
Rain Problem News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಬಿರುಸಾಗಿದ್ದು, ಧಾರಾಕಾರ ಮಳೆಗೆ ಮಲೆನಾಡು ಭಾಗದ ವಿವಿದೆಡೆ ಗುಡ್ಡ ಕುಸಿತ ಮುಂದುವರಿದಿದೆ.ಉತ್ತರ ಕನ್ನಡ ಜಿಲ್ಲೆ ಶಿರಸಿ ಸಮೀಪದ ದೇವಿಮನೆ, ಶೃಂಗೇರಿ ತಾಲೂಕಿನ ನೆಮ್ಮಾರ್, ಮಂಗಳೂರಿನ ಕದ್ರಿ, ಕಂಕನಾಡಿಗಳಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಕರಾವಳಿ ಭಾಗದಲ್ಲೂ ಮಳೆ ಅಬ್ಬರಿಸುತ್ತಿದ್ದು, ಭಟ್ಕಳದಲ್ಲಿ 50 ವರ್ಷದ ವೃದ್ಧ ಹಾಗೂ 2 ವರ್ಷದ ಚಿಕ್ಕ ಮಗು ನೀರಲ್ಲಿ ಕೊಚ್ಚಿಹೋಗಿದ್ದಾರೆ. ಬೆಳ್ತಂಗಡಿ ಸಮೀಪ ಮರ ಬಿದ್ದು, ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದಾರೆ. ಇದೇ ವೇಳೆ, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ 6, ಮಂಗಳೂರಿನ 5, ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ವ್ಯಾಪ್ತಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಮಂಗಳವಾರ ಜೂನ್ 17 ರಂದು ರಜೆ ಘೋಷಣೆ ಮಾಡಲಾಗಿದೆ. ಅಂಕೋಲಾ ತಾಲೂಕಿನ ಸುಂಕಸಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡ್ಲಗದ್ದೆ ಗ್ರಾಮದ ರಾಮಾನಗುಳಿ ಮಜರೆಯ ಕಾರವಾರ –...
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 17 ರಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ ಹಾಗೂ ಯಲ್ಲಾಪುರ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಮುಂಡಗೋಡ ತಾಲೂಕಿನಲ್ಲೂ ನಿರಂತರ ಮಳೆಯಾಗುತ್ತಿದ್ದು, ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಗಳಿಗೆ ರಜೆ ಕೊಡಬಹುದು ಅನ್ನೋ ನಿರಿಕ್ಷೆ ಇತ್ತು. ಆದ್ರೆ, ಮುಂಡಗೋಡ ತಾಲೂಕಾಡಳಿತ ಅದ್ಯಾಕೋ ಏನೋ ಇಲ್ಲಿ ರಜೆಯ ಶಿಫಾರಸು ಮಾಡದೇ ಇರುವುದು ಅಚ್ಚರಿಗೆ ಕಾರಣವಾಗಿದೆ.
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
Sugar Factory News; ಕಾರವಾರ: ಜಿಲ್ಲೆಯ ಕಬ್ಬು ಬೆಳಗಾರರ ಪ್ರಮುಖ ಬೇಡಿಕೆಯಾದ ಸಕ್ಕರೆ ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವ ಕುರಿತಂತೆ, ಸದ್ರಿ ಸ್ಥಳದ ಪರಿಶೀಲನೆ ನಡೆಸುವಂತೆ ಕಂದಾಯ, ಪೊಲೀಸ್ ಮತ್ತು ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ, ಜಿಲ್ಲೆಯ ಕಬ್ಬು ಬೆಳಗಾರರ ಮತ್ತು ಸಕ್ಕರೆ ಕಾರ್ಖಾನೆಯ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಳಿಯಾಳದ ಐ.ಇ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಒಳಭಾಗದಲ್ಲಿ ಕಬ್ಬು ತೂಕ ಮಾಡುವ ಯಂತ್ರವನ್ನು ಅಳವಡಿಸಿದ್ದು ಇದರಿಂದಾಗಿ ಕಬ್ಬಿನ ತೂಕದ ಪ್ರಮಾಣದ ಪ್ರತಿ ಬಾರಿ ಗೊಂದಲವಾಗುತ್ತಿದೆ, ಇದನ್ನು ಬಗೆಹರಿಸುವ ದೃಷ್ಠಿಯಿಂದ ಕಾರ್ಖಾನೆಯ ಮುಂಭಾಗದಲ್ಲಿ ತೂಕದ ಯಂತ್ರ ಅಳವಡಿಸುವ ಬಗ್ಗೆ ಕಬ್ಬು ಬೆಳೆಗಾರರ ಪ್ರತಿನಿಧಿಗಳು ಕೋರಿದ್ದು, ಈ ಕುರಿತಂತೆ ಕಾರ್ಖಾನೆಯ ಮುಂಭಾಗದಲ್ಲಿ ಸೂಕ್ತ ಸ್ಥಳ ಇಲ್ಲವೆಂದು ಕಾರ್ಖಾನೆಯ ಪ್ರತಿನಿಧಿಗಳು ತಿಳಿಸಿದರು. ಈ ಬಗ್ಗೆ ಕಂದಾಯ, ಪೊಲೀಸ್ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ...