ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಎರಡು ವರ್ಷದ ಕಂದಮ್ಮ ನೀರಿನ ಟ್ಯಾಂಕ್ ನಲ್ಲಿ ಬಿದ್ದು ಸಾವನ್ನಪ್ಪಿದೆ. ನಂದಿಕಟ್ಟಾ ಗ್ರಾಮದ ಶಾಂತಾರಾಮ ಕಮ್ಮಾರ ಅವರ ಎರಡು ವರ್ಷದ ಗಂಡು ಮಗು ದುರಂತಕ್ಕೀಡಾಗಿದೆ. ಘಟನೆ ಹೇಗಾಯ್ತು..? ಇಂದು ದೀಪಾವಳಿ ಅಮವಾಸ್ಯೆ ನಿಮಿತ್ತ ಶಾಂತಾರಾಮ ಕಮ್ಮಾರ್ ತನ್ನ ಮುದ್ದು ಕಂದನಿಗೆ ತಿಂಡಿ, ತಿನಿಸು ಕೊಡಿಸಲು ಕಿರಾಣಿ ಅಂಗಡಿಗಳಿಗೆ ಅಲೆದಾಡಿದ್ದಾರೆ. ಬೆಳಗ್ಗಿನಿಂದಲೂ ಮಗ ಅದೇನು ಕೇಳ್ತಾನೋ ಅದನ್ನೇಲ್ಲ ತಿನಿಸುಗಳನ್ನು ಕೊಡಿಸಿ ಖುಶಿ ಪಟ್ಟಿದ್ದಾರೆ. ಸಂಜೆ ಅಮವಾಸ್ಯೆಯ ಪೂಜೆಯನ್ನೂ ಮುಗಿಸಿದ್ದಾರೆ. ಆದ್ರೆ, ಸಂಜೆ 6 ಗಂಟೆಯಷ್ಟೊತ್ತಿಗೆ ಮಗ ಮತ್ತೇನೋ ತಿನಿಸು ಕೇಳಿದ್ದಾನೆ. ಹೀಗಾಗಿ, ಮಗುವಿಗೆ ತಿನಿಸು ತರಲು, ಮಗುವನ್ನು ಮನೆಯಲ್ಲೇ ಬಿಟ್ಟು ಅಂಗಡಿಗೆ ತೆರಳಿದ್ದಾರೆ ಶಾಂತಾರಾಮ್ ಕಮ್ಮಾರ್. ವಾಪಸ್ ಬಂದಾಗ..! ಹಾಗೆ, ಅಂಗಡಿಗೆ ಹೋಗಿ ತಿನಿಸು ತಂದು ಇನ್ನೇನು ಮಗುವಿಗೆ ಕೊಡಬೇಕು ಅಂತಾ ಹಂಬಲಿಸಿ ಬಂದಿದ್ದ ತಂದೆ ಮಗುವನ್ನು ಹುಡುಕಾಡಿದ್ದಾರೆ. ಆದ್ರೆ, ಮಗು ಎಲ್ಲೂ ಕಂಡೇ ಇಲ್ಲ. ಹೀಗಾಗಿ, ಇಲ್ಲೊ ಎಲ್ಲೋ ಆಟ...
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ನಂದಿಕಟ್ಟಾ ಗ್ರಾಮದಲ್ಲೊಂದು ಕರುಳು ಹಿಂಡುವ ಘಟನೆ..! ನೀರಿನ ಟ್ಯಾಂಕಿಗೆ ಬಿದ್ದು 2 ವರ್ಷದ ಕಂದಮ್ಮ ಬಲಿ..!
ಶಿರಸಿಯಲ್ಲಿ ಒಂಟಿ ಮಹಿಳೆಯ ಚಿನ್ನದ ಸರ ದೋಚಿಕೊಂಡು ಪರಾರಿಯಾದ ಕಳ್ಳರು..!
ಶಿರಸಿ: ನಗರದ ಭತ್ತದ ಓಣಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಚಿನ್ನ ದೋಚಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. ಉಷಾ ದಾಮೋದರ ಪೈ ಎಂಬುವ ಮಹಿಳೆಯೇ ಚಿನ್ನ ಕಳೆದುಕೊಂಡವರು. ಬಿಳಿ ಕಾರಿನಲ್ಲಿ ಬಂದ ದರೋಡೆಕೋರರು, ಕುಮಟಾಕ್ಕೆ ಹೋಗುವ ಮಾರ್ಗ ಕೇಳಿ ಮಹಿಳೆಯ ಕುತ್ತಿಗೆಯಲ್ಲಿನ ಸರ ಹರಿದು ಪರಾರಿಯಾಗಿದ್ದಾರೆ. ಸುಮಾರು 1,10,000 ರೂಪಾಯಿ ಮೌಲ್ಯದ ಚಿನ್ನದ ಸರ ದೋಚಿದ್ದಾರೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ***************************************
ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಸೋಲು; ಉಸ್ತುವಾರಿ ಹೊತ್ತಿದ್ದ ಮುರುಗೇಶ್ ನಿರಾಣಿ ಸಾಹೇಬ್ರು ಏನ್ ಹೇಳಿದ್ರು ಗೊತ್ತಾ..?
ಹಾನಗಲ್ ಉಪ ಚುನಾವಣೆ ಫಲಿತಾಂಶ ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಅಂತಾ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರತಿಪಾದಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಹೇಳಿಕೆ ನೀಡಿರೋ ಸಚಿವ, ಹಾನಗಲ್ ಕ್ಷೇತ್ರದಲ್ಲೂ ಗೆಲುವಿನ ವಿಶ್ವಾಸ ಇತ್ತು, ಮತದಾರರ ನಿರ್ಧಾರಕ್ಕೆ ತಲೆಬಾಗುತ್ತೇವೆ. ಸೋಲಿನ ಕಾರಣದ ಬಗ್ಗೆ ಆತ್ಮಾವಲೋಕನ ಮಾಡುತ್ತೇವೆ.ಹಾನಗಲ್ ನಲ್ಲಿ ಸೋಲು ಆಗಿದೆ. ಮಾಜಿ ಸಿಎಂ ಒಬ್ಬರು ಈ ಫಲಿತಾಂಶ ಮುಂದಿನ ಚುನಾವಣೆ ದಿಕ್ಸೂಚಿ ಎಂದಿದ್ದಾರೆ. ಅವರು ಮುಖ್ಯಮಂತ್ರಿ ಇದ್ದಾಗಲೂ ಉಪ ಚುನಾವಣೆಯಲ್ಲಿ ಸೋತಿದ್ರು. ಸಿಎಂ ಬಸವರಾಜ್ ಬೊಮ್ಮಾಯಿ ಸರ್ವತೋಮುಖ ಅಭಿವೃದ್ದಿಗೆ ಒತ್ತು ನೀಡಿದ್ದಾರೆ. ಎಲ್ಲ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗ್ತಿದ್ದಾರೆ, 2023 ರ ಚುನಾವಣೆಯಲ್ಲಿ ಪೂರ್ಣಬಹುಮತದ ಸರ್ಕಾರ ತರುವಲ್ಲಿ ಯಶಸ್ವಿ ಆಗುತ್ತಾರೆ ಅಂತಾ ವಿಶ್ವಾಸ ವ್ಯಕ್ತ ಪಡಿಸಿದ್ರು. *************************************** ಜಾಹೀರಾತುಗಳು
ಎಸಿಬಿ ಬಲೆಗೆ ಬಿದ್ದ PSI, ಬೈಕ್ ಹತ್ತಿ ಎಸ್ಕೇಪ್; ಪೊಲೀಸರನ್ನೇ ಬೆನ್ನತ್ತಿ ಹಿಡಿದ ಜನ..!
ತುಮಕೂರು: ಗುಬ್ಬಿ ತಾಲೂಕು ಸಿ.ಎಸ್.ಪುರ ಠಾಣೆಯಲ್ಲಿ ಇಂದ ಸಾರ್ವಜನಿಕರೇ ದಂಗಾಗುವಂತಹ ಘಟನೆ ನಡೆದಿದೆ. ಎಸಿಬಿ ದಾಳಿಯಿಂದ ತಪ್ಪಿಸಿಕೊಂಡು ಪಿಎಸ್ ಐ ಓಡಿ ಹೋಗಿದ್ದಾನೆ. ಹೀಗಾಗಿ, ಹಾಗೆ ತಪ್ಪಿಸಿಕೊಂಡು ಓಡಿ ಹೋಗುತ್ತಿದ್ದ ಪಿಎಸ್ ಐ ರನ್ನು ಹಿಡಿಯಲು ಸಾರ್ವಜನಿಕರೇ ಬೆನ್ನತ್ತಿದ್ದಾರೆ. ಹಾಗೇ ಎಸಿಬಿಯಿಂದ ತಪ್ಪಿಸಿಕೊಂಡು ಓಡಿಹೋದ ಪಿಎಸ್ ಐ ಹೆಸರು, ಸೋಮಶೇಖರ್.. ಇವತ್ತು ನಡೆದಿದ್ದಿಷ್ಟು..! ಅಂದಹಾಗೆ, ಇವತ್ತು ಲಂಚಬಾಕತನದ ವಿರುದ್ಧ ಪಿಎಸ್ ಐ ಹಾಗೂ ಮುಖ್ಯಪೇದೆಯ ವಿರುದ್ಧ ಎಸಿಬಿಗೆ ದೂರು ಬಂದ ಹಿನ್ನೆಲೆ, ಎಸಿಬಿ ಅಧಿಕಾರಿಗಳು, ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ್ದರು. ಸಿ.ಎಸ್.ಪುರ ಪಿಎಸ್ಐ ಮತ್ತು ಮುಖ್ಯ ಪೇದೆಯನ್ನು ಎಸಿಬಿ ಬಲೆಗೆ ಕೆಡವಿದ್ದರು. ಬರೋಬ್ಬರಿ 16 ಸಾವಿರ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿಯೇ ಬಲೆಗೆ ಬಿದ್ದಾಗಿತ್ತು. ಹೀಗಾಗಿ, ಎಸಿಬಿ ಅಧಿಕಾರಿಗಳು ಲಂಚಬಾಕ ಆರೋಪಿ ಪಿಎಸ್ ಐ ಸೋಮಶೇಖರ್ ನ್ನು, ವಶಕ್ಕೆ ಪಡೆದಿದ್ದರು. ಇನ್ನೇನು ವಿಚಾತಣೆ ಮುಗಿಸಿ ಜಸ್ಟ್ ಊಟ ಮಾಡೋಣ ಅಂತಾ ಎಸಿಬಿ...
ಕಾರವಾರದಲ್ಲಿ ಸಂಭ್ರಮದ ರಾಜ್ಯೋತ್ಸವ, ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ಹೆಬ್ಬಾರ್..!
ಕಾರವಾರ: 66 ನೇ ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದ್ರು. ತೆರೆದ ವಾಹನದಲ್ಲಿ ವಿವಿಧ ಪಡೆಗಳಿಂದ ಗೌರವ ವಂದನೆ ಸ್ವೀಕರಿಸಿದ ಸಚಿವ ಹೆಬ್ಬಾರ್, ಸಮಾರಂಭದಲ್ಲಿ ಭಾಷಣ ಮಾಡಿದ್ರು. ಈ ವೇಳೆ ಶಾಸಕಿ ರೂಪಾಲಿ ನಾಯ್ಕ್ , ಜಿಲ್ಲಾಧಿಕಾರಿ ಮುಲೈ ಮುಹಿಲಿನ್, ನೂತನ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಸೇರಿ ಹಲವರು ಉಪಸ್ಥಿತರಿದ್ದರು. ಇನ್ನು, ಇಂದಿನ 66 ನೇ ರಾಜ್ಯೋತ್ಸವದ ಸಂಭ್ರಮ ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಸಂಭ್ರಮಿಸಿದೆ. *************************************** ಜಾಹೀರಾತುಗಳು
ಇಂದೂರು ಕೊಪ್ಪದ ವ್ಯಕ್ತಿಯ ಶವ ಅಮರಗೋಳದಲ್ಲಿ ಪತ್ತೆ..! ರೈಲ್ವೆ ಹಳಿಯ ಪಕ್ಕದಲ್ಲೇ ಸತ್ತುಬಿದ್ದವನ ಸುತ್ತ ಅನುಮಾನದ ಹುತ್ತ..!
ಮುಂಡಗೋಡ: ತಾಲೂಕಿನ ಕೊಪ್ಪ (ಇಂದೂರು) ಗ್ರಾಮದ ವ್ಯಕ್ತಿಯೋರ್ವನ ಶವ ಹುಬ್ಬಳ್ಳಿ ಸಮೀಪದ ಅಮರಗೋಳ ಬಳಿ ರೈಲ್ವೆ ಹಳಿಯ ಪಕ್ಕದಲ್ಲಿ ದೊರೆತಿದೆ. ಮಂಜುನಾಥ್ ಬಸಪ್ಪ ಬೆಲವಂತರ(35) ಎಂಬುವವನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಅಮರಗೋಳ ಈತನ ಪತ್ನಿಯ ತವರೂರು, ಪತ್ನಿ ತವರು ಮನೆಯಲ್ಲೇ ಇದ್ದ ಕಾರಣಕ್ಕೆ,, ಕಳೆದ ಹತ್ತು ದಿನಗಳ ಹಿಂದೆ ಅಮರಗೋಳಕ್ಕೆ ಹೋಗಿದ್ದ ಮಂಜುನಾಥ್, ನಿನ್ನೆ ರಾತ್ರಿಯೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಸಧ್ಯ ಸ್ಥಳಕ್ಕೆ ಭೇಟಿ ನೀಡಿರೋ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಂದಿಗಟ್ಡಾ ಗ್ರಾಮದಲ್ಲೂ ನಟ ಪುನೀತ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.
ಹುನಗುಂದ ಗ್ರಾಮದಲ್ಲೂ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಗುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು. ಈ ವೇಳೆ ಗ್ರಾಪಂ ಸದಸ್ಯ ಈಶ್ವರಗೌಡ ಅರಳಿಹೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು..
ಮತ್ತೋರ್ವ ಅಪ್ಪು ಅಭಿಮಾನಿಯ ಆತ್ಮಹತ್ಯೆ..! ಪುಟ್ಟ ಮಗುವನ್ನೇ ಮರೆತ ಅಭಿಮಾನಿ..!!
ಚಿಕ್ಕಮಗಳೂರು: ನಟ ಪುನೀತ್ ಸಾವಿನಿಂದ ಮನನೊಂದು ಮತ್ತೋರ್ವ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ರಾಂಪುರದಲ್ಲಿ ನಡೆದಿದೆ. ಶರತ್ (30) ಆತ್ಮಹತ್ಯೆಮಾಡಿಕೊಂಡ ಅಭಿಮಾನಿಯಾಗಿದ್ದಾನೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪುನೀತ್ ರಾಜಕುಮಾರ್ ವಿಧಿವಶರಾದ ಸುದ್ದಿ ತಿಲಕಿಯುತ್ತಿದ್ದಂತೆ ನಿನ್ನೆಯಿಂದಲೂ ಅಳುತ್ತಿದ್ದ ಶರತ್ಗೆ ಮನೆಯವರಿಂದ ಸಮಾಧಾನ ಹೇಳಿದ್ರೂ ನೋವು ಕಡೆ ನೆಯಾಗಿರಲಿಲ್ಲ ಟಿವಿ ನೋಡುತ್ತಿದ್ದವನು ಏಕಾಏಕಿ ರೂಮಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು, ಹೋಟೆಲ್ಗಳಿಗೆ ಮರದ ಹೊಟ್ಟು ತುಂಬುವು ಕೆಲಸ ಮಾಡುತ್ತಿದ್ದ ಶರತ್ ಗೆ ಒಂದು ಪುಟ್ಟ ಮಗುವಿದ್ದು, ಸಧ್ಯ ಪತ್ನಿ ಎಂಟು ತಿಂಗಳ ಗರ್ಭೀಣಿಯಾಗಿದ್ದಾರೆ. ಚಿಕ್ಕ ಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಹಾಗೂ ಹುನಗುಂದದಲ್ಲಿ ನಟ ಪುನೀತ್ ರಾಜಕುಮಾರ್ ಗೆ ಅಭಿಮಾನಿಗಳ ಶೃದ್ದಾಂಜಲಿ..!
ಮುಂಡಗೋಡ: ತಾಲೂಕಿನ ಇಂದೂರು ಹಾಗೂ ಹುನಗುಂದ ಗ್ರಾಮಗಳಲ್ಲಿ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಶೃದ್ದಾಂಜಲಿ ಅರ್ಪಿಸಿದ್ರು. ಪುನೀತ್ ರಾಜಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ರು. ನಟ ಪುನಿತ್ ಅಕಾಲಿಕಮರಣ ರಾಜ್ಯಕ್ಕೆ ತುಂಬಲಾರದ ನಷ್ಟ ಅಂತಾ ಶೋಕ ವ್ಯಕ್ತಪಡಿಸಿರೋ ಅಭಿಮಾನಿಗಳು ಅಪ್ಪು ಮತ್ತೊಮ್ಮೆ ಹುಟ್ಟಿ ಬಾ ಅಂತಾ ಘೋಷಣೆ ಕೂಗಿದ್ರು.








