ಕಲಘಟಗಿ: ಕೋವಿಡ್ ಆತಂಕದ ನಡುವೆಯೇ ಕಲಘಟಗಿಯಲ್ಲಿ ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು. ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ 2 ಕಿಮೀ ಉದ್ದದ 9 ಅಡಿ ಅಗಲ ಇರುವ ರಾಷ್ಟ್ರಧ್ವಜದ ಮೆರವಣಿಗೆ ನಡೆಯಿತು. ಮೆರವಣಿಗೆ ವೇಳೆ ಸಾವಿರಾರು ಜನರಿಂದ ರಾಷ್ಟ್ರಭಕ್ತಿಯ ಘೋಷಣೆಗಳು ಮೊಳಗಿದವು. ದೇಶಭಕ್ತಿಯ ಗೀತೆಗಳ ಮೂಲಕ, ಘೋಷಣೆ ಗಳ ಮೂಲಕ ವಿಶೇಷ ರಾಷ್ಟ್ರಧ್ವಜದ ಮೆರವಣಿಗೆ ನಡೆಸಲಾಯಿತು.
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಮುಂಡಗೋಡಿನಲ್ಲಿ ಸಂಗೊಳ್ಳಿ ರಾಯಣ್ಣನ ಜನ್ಮದಿನದ ಸಂಭ್ರಮ..!
ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಾಯಣ್ಣ ಅಭಿಮಾನಿಗಳ ಸಂಘದಿಂದ ಸಂಭ್ರಮದ ಸ್ವಾತಂತ್ರ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜನ್ಮ ದಿನ ಆಚರಿಸಲಾಯಿತು. ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ರಾಯಣ್ಣನವರ ಶೌರ್ಯ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ರಾಯಣ್ಣನವರ ಪರವಾಗಿ ಘೋಷಣೆ ಕೂಗಿ ಅಭಿಮಾನಿಗಳು ಸಂಭ್ರಮಿಸಿದ್ರು.
ಹುನಗುಂದದಲ್ಲಿ ರಾಯಣ್ಣ ಬಾಯ್ಸ್ ನಿಂದ ಸಂಭ್ರಮದ ಧ್ವಜಾರೋಹಣ..!
ಮುಂಡಗೋಡ; ತಾಲೂಕಿನ ಹುನಗುಂದ ಗ್ರಾಮದಲ್ಲಿ ರಾಯಣ್ಣ ಬಾಯ್ಸ್ ವತಿಯಿಂದ ಸಂಭ್ರಮದ ಧ್ವಜಾರೋಹಣ ಹಾಗೂ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣನವರ ಜನ್ಮ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದ್ರು. ಹುನಗುಂದದ ಮುಖ್ಯ ಸರ್ಕಲ್ ನಲ್ಲಿ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು. ಅಲ್ದೇ ಸರ್ಕಲ್ ನಲ್ಲಿ ಇರುವ ಧ್ವಜಸ್ತಂಭದ ಮೇಲೆ ಭಗವಾ ಧ್ವಜವನ್ನೂ ಹಾರಿಸಲಾಯಿತು. ಈ ವೇಳೆ ಗ್ರಾಮದ ರಾಯಣ್ಣ ಬಾಯ್ಸ್ ಸೇರಿದಂತೆ ಹಲವರು ಭಾಗಿಯಾಗಿದ್ರು.
ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು..!
ಹಾನಗಲ್: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲೆ ಇಬ್ಬರು ಬೈಕ್ ಸವಾರರು ಸಾವಿಗೀಡಾದ ಘಟನೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಣಸಿಕಟ್ಟಿ ಕ್ರಾಸ್ ಬಳಿ ಶುಕ್ರವಾರ ಸಂಜೆ ನಡೆದಿದೆ. ಚೇತನ್ ಈಳಗೇರ್ (32) ಹಾಗೂ ಸುರೇಶ್ ಚಕ್ರಸಾಲಿ (33) ಮೃತ ಬೈಕ್ ಸವಾರರು. ಮೃತರಿಬ್ಬರೂ ಹಾನಗಲ್ ತಾಲೂಕಿನ ಬೆಳಗಾಲಪೇಟೆಯ ನಿವಾಸಿಗಳು ಎನ್ನಲಾಗಿದೆ. ಹಾನಗಲ್ ನಿಂದ ಸ್ವಗ್ರಾಮ ಬೆಳೆಗಾಲಪೇಟೆ ಗೆ ಹೋಗುವಾಗ ದುರಂತ ನಡೆದಿದೆ. ಅಪಘಾತ ತೀವ್ರತೆಗೆ ದೇಹಗಳು ಚಿದ್ರಗೊಂಡಿದ್ದು, ರಕ್ತಸ್ರಾವವಾಗಿ ಸ್ಥಳದಲ್ಲೆ ಸಾವು ಕಂಡಿದ್ದಾರೆ. ಸ್ಥಳಕ್ಕೆ ಹಾನಗಲ್ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಾನಗಲ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಲೇ ಬಹಾದ್ದೂರ್..! ಒಂದೇ ನಿಮಿಷದಲ್ಲಿ 100 ಅಡಿ ದೂರ ಟ್ರಾಕ್ಟರ್ ಎಳೆದ ಪೈಲ್ವಾನ್..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಇಂದು ನಾಗರ ಪಂಚಮಿ ಪ್ರಯುಕ್ತ ಖಾಲಿ ಟ್ರಾಕ್ಟರ್ ಇಂಜಿನ್ ಎಳೆಯುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ಯಲ್ಲಪ್ಪ ಫಕ್ಕೀರಪ್ಪ ತುಳಜಾನವರ್ ಎಂಬುವ ಯುವಕ, ಕೇವಲ ಒಂದು ನಿಮಿಷದಲ್ಲಿ100 ಅಡಿ ದೂರ ಟ್ರಾಕ್ಟರ್ ಎಳೆದು ಸಾಹಸ ತೋರಿಸಿದ್ರು. ಹೀಗಾಗಿ, ಗ್ರಾಮಸ್ಥರ ಸಂಭ್ರಮಕ್ಕೆ ಕಾರಣರಾದ್ರು. ಜಯಶಾಲಿ ಯುವಕನಿಗೆ ಕೊಪ್ಪ ಗ್ರಾಮಸ್ಥರು ಸನ್ಮಾನಿಸಿ ಬಹುಮಾನ ನೀಡಿದ್ರು.
ಬೊಮ್ಮಾಯಿ ಸಂಪುಟದ ಮೊದಲ ವಿಕೆಟ್ ಪತನ..? ನೂತನ ಸಿಎಂ ಗೆ ಸಂಕಷ್ಟ ಶುರು..!
ವಿಜಯನಗರ: ತಾವು ಬಯಸದ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರೋ ಶಾಸಕ ಆನಂದ ಸಿಂಗ್ ಬುಧವಾರವೇ ತಮ್ಮ ಸಚಿವಸ್ಥಾನ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವ ಸಾಧ್ಯತೆಗಳಿವೆ. ಇನ್ನೊಂದು ಮೂಲಗಳ ಪ್ರಕಾರ ಅವರು ಈಗಾಗಲೆ ಮುಖ್ಯಮಂತ್ರಿಗಳಿಗೆ ತಮ್ಮ ರಾಜಿನಾಮೆ ಪತ್ರ ಸಲ್ಲಿಸಿದ್ದಾರೆ. ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆಯಿಂದ ತೀವ್ರ ಅಸಮಾಧಾನಗೊಂಡಿರುವ ಆನಂದ ಸಿಂಗ್ ಈಗಾಗಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಖಾತೆ ಬದಲಾವಣೆ ಮಾಡಲು ವಿನಂತಿಸಿ, ಅದಕ್ಕೆ ಗಡುವನ್ನೂ ನೀಡಿದ್ದಾರೆ. ಗಡುವಿನೊಳಗೆ ಖಾತೆ ಬದಲಾಗದಿದ್ದರೆ ನನ್ನ ರಾಜಿನಾಮೆ ಅಂಗೀಕರಿಸಿ ಎಂದು ಪತ್ರವನ್ನೂ ಕೊಟ್ಟು ಬಂದಿದ್ದಾರೆ ಎನ್ನಲಾಗುತ್ತಿದೆ. ಶಾಸಕರ ಕಚೇರಿ ತೆರವು..! ಈ ಮಧ್ಯೆ ಮಂಗಳವಾರ ಸಂಜೆ ಹೊಸಪೆಟೆಯ ರಾಣಿಪೇಟೆಯಲ್ಲಿರುವ ಆನಂದ್ ಸಿಂಗ್ ಅವರ ಶಾಸಕರ ಕಚೇರಿಯ ನಾಮಫಲಕ ತೆರವುಗೊಳಿಸಲಾಗಿದೆ. ಬುಲ್ಡೋಜರ್ ಹಚ್ಚಿ ನಾಮಫಲಕ ತೆಗೆಯಲಾಗಿದೆ. ಬುಧವಾರದಿಂದ ಇಲ್ಲಿ ಶಾಸಕರು ಲಭ್ಯವಿರುವುದಿಲ್ಲ, ಸಾರ್ವಜನಿಕರ ಅಹವಾಲು ಸ್ವೀಕರಿಸುವುದಿಲ್ಲ ಎಂದು ತಿಳಿಸಲಾಗಿದೆ. ಧ್ವಜಾರೋಹಣವನ್ನೂ ಮಾಡಲ್ಲವಂತೆ..! ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಸಚಿವ...
ಇಬ್ಬರು ಅಂತರ್ ಜಿಲ್ಲಾ ಕಳ್ಳರ ಹೆಡೆಮುರಿ ಕಟ್ಟಿದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಅವ್ರು ದೇವಸ್ಥಾನ, ಒಂಟಿ ಮನೆಗಳನ್ನು ಗುಡಿಸಿ ಗುಂಡಾಂತರ ಮಾಡೋ ಮಹಾನ್ ಖದೀಮರು, ಅವಕಾಶ ಸಿಕ್ರೆ ರಾಬರಿ ಮಾಡಿ ಬಾಚಿಕೊಂಡು ಹೋಗೋ ಖತರ್ನಾಕ ಕಿರಾತಕರು, ಆದ್ರೆ ಈಗ ಮುಂಡಗೋಡ ಪೊಲೀಸರ ಕೈಗೆ ತಗಲಾಕ್ಕೊಂಡು ಬಿಟ್ಟಿದ್ದಾರೆ. ತಾಲೂಕಿನ ಮಂದಿಗೆ ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ದೇವರನ್ನೇ ಬಿಡದವರು..! ಯಸ್, ಇವ್ರು ಅಕ್ಷರಶಃ ಅಂತರ್ ಜಿಲ್ಲಾ ಪ್ರೊಫೆಷನಲ್ ಕಳ್ಳರು. ಮುಂಡಗೋಡ ತಾಲೂಕಿನಲ್ಲಿ ದೇವಸ್ಥಾನ, ಮನೆ ಕಳ್ಳತನ ಹಾಗೂ ರಾಬರಿ ಪ್ರಕರಣಗಳಲ್ಲಿ ಸೇರಿ ಒಟ್ಟು ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದವರು. ಆದ್ರೆ ನಸೀಬು ಕೆಟ್ಟು ಮುಂಡಗೋಡ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಪರಿಣಾಮ, ಸುಮಾರು 1 ಲಕ್ಷ ರೂ. ಮೌಲ್ಯದ ಚಿನ್ನದ ಆಭರಣಗಳನ್ನು ಇಲ್ಲಿನ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂದಹಾಗೆ, ಇವ್ರಿಬ್ರೂ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನವ್ರು. ಅಬ್ದುಲ್ ಸತ್ತಾರ ಶೇಖ್ ಅಲಿಯಾಸ್ ಮಲಿಕ್, ಶ್ರೀಧರ ಅಲಿಯಾಸ್ ಸಿರಿ ಬಂಡಿವಡ್ಡರ ಬಂಧಿತ ಕಳ್ಳತನದ ಆರೋಪಿಗಳು. ಪಾಂಡುರಂಗನಿಗೇ ಕನ್ನ ಹಾಕಿದ್ರು..! ಈ ಖತರ್ನಾಕಿ ಕಿಲಾಡಿ ಜೋಡಿ, ತಾಲೂಕಿನ ಕೊಪ್ಪ ಗ್ರಾಮದ ಪಾಂಡುರಂಗ...
ಸವಣೂರಿನಲ್ಲಿ ನಿನ್ನೆ ನಡೆದ ಮರ್ಡರನ ಎದೆ ನಡುಗಿಸುವ ರಣಭೀಕರ ದೃಷ್ಯ..!
ಸವಣೂರು: ಇಲ್ಲಿನ ಕಾರಡಗಿ ಕ್ರಾಸ್ ಬಳಿ ನಿನ್ನೆ ರವಿವಾರ, ನಡು ರಸ್ತೆಯಲ್ಲೇ ನಡೆದಿದ್ದ ರೌಡಿಶೀಟರ್ ಬರ್ಬರ ಹತ್ಯೆಯ ಭಯಾನಕ ದೃಷ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಚ್ಚು ಹಾಗೂ ಕೊಡಲಿಯಿಂದ ಮನಸೊಯಿಚ್ಚೆ ಹೊಡೆದು ಕೊಂದು ಹಾಕಿದ್ದಾರೆ ಕೊಲೆ ಪಾತಕಿಗಳು. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದ ಕಾರಡಗಿ ಕ್ರಾಸ್ ಬಳಿ ನಿನ್ನೆ ಸಂಜೆ ನಡೆದಿದ್ದ ಘಟನೆಯಲ್ಲಿ, ಅನ್ವರ ಶೇಕ್ ಅಲಿಯಾಸ್ ಹಜರತ್ ಅಲಿ ಮೂಮಿನ್ ಎಂಬುವ 40 ವರ್ಷ ವಯಸ್ಸಿನ ರೌಡಿಶೀಟರ್ ಬರ್ಬರ ಹತ್ಯೆಯಾಗಿದ್ದ. ಇಮ್ರಾನ್ ಚೌದರಿ (28) ಹಾಗೂ ಆತನ ಸಹಚರರು ಬರ್ಬರವಾಗಿ ಹತ್ಯೆ ಮಾಡಿದ್ರು. ಹಪ್ತಾ ವಸೂಲಿ ವಿಚಾರವಾಗಿ ಜಗಳವಾಡಿದ್ದ ಅನ್ವರ್ ಶೇಖ್ ಹಾಗೂ ಇಮ್ರಾನ್ ಚೌದರಿ, ಮದ್ಯೆ ಮಾತು ಮಾತಿಗೆ ಬೆಳೆದು, ಈ ವೇಳೆ ಜಗಳ ವಿಕೋಪಕ್ಕೆ ಹೋಗಿತ್ತು. ಆ ನಂತ್ರ ಕೊಡಲಿಯಿಂದ ಇಮ್ರಾನ್ ಹಾಗೂ ಸಹಚರರು ಅನ್ವರ್ ಶೇಖ್ ನನ್ನು ಅಟ್ಟಾಡಿಸಿ ಹೊಡೆದಿದ್ರು. ಈ ವೇಳೆ ಅಲ್ಲೇ ಇದ್ದವರೊಬ್ರು ತಮ್ಮ ಮೊಬೈಲ್ ನಲ್ಲಿ ದೃಷ್ಯ ಸೆರೆ ಹಿಡಿದಿದ್ದಾರೆ. ಆ...
ಎಸ್.ಎಸ್.ಎಲ್.ಸಿ ಫಲಿತಾಂಶ: ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಫಸ್ಟ್..!
ಶಿರಸಿ: ಇಂದು ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಮೂವರು ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ. ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರದ ಪ್ರಶಾಂತಿ ವಿದ್ಯಾನಿಕೇತನದಲ್ಲಿ ಓದುತ್ತಿರೋ ವಿದ್ಯಾರ್ಥಿನಿ ಹೇಮಾ ಉಮೇಶ ಹೆಗಡೆ ಹಾಗೂ ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ ಮತ್ತು ರೇಷ್ಮಾ ಹೆಗಡೆ 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಕಳೆದ ವರ್ಷ ಒಬ್ಬ ವಿದ್ಯಾರ್ಥಿನಿ 625 ಅಂಕ ಗಳಿಸಿ ಸಾಧನೆ ಮಾಡಿದ್ದಳು. ಆದರೆ ಈ ಬಾರಿ ಮೂವರು ವಿದ್ಯಾರ್ಥಿಗಳು 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಗೆ ಪಾಲಕರು ಹಾಗೂ ಶೈಕ್ಷಣಿಕ ಸಂಸ್ಥೆಯವರು ಸಂತೋಷ ವ್ಯಕ್ತಪಡಿಸಿದ್ದಾರೆ.
ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ..!
ಶಿಗ್ಗಾವಿ : ಅನ್ನದಾನತನ ಮೇಲೆ ಕರಡಿಯೊಂದು ದಾಳಿ ಮಾಡಿ ಗಂಭೀರ ಗಾಯಗೊಳಿಸಿದ ಘಟನೆ, ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ದುಂಢಶಿ ಗ್ರಾಮದ ಬಳಿ ನಡೆದಿದೆ. ಮಹಾವೀರ ಧರ್ಮಪ್ಪ ದಿಪ್ಪಣ್ಣನವರ (55) ಎಂಬುವವರೇ ಕರಡಿ ದಾಳಿಗೆ ತುತ್ತಾದವರು. ಇಂದು ತನ್ನ ಜಮೀನಿನಲ್ಲಿ ಕೆಲಸಕ್ಕೆ ಹೋದ ವೇಳೆ ದಾಳಿ ನಡೆಸಿದ ಕರಡಿ, ರೈತನ ಮುಖ,ತಲೆ, ಮೈಮೇಲೆ ಮನಬಂದಂತೆ ಕಚ್ಚಿದೆ. ಪರಿಣಾಮ ರೈತ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಕೆಲಹೊತ್ತು ನರಳಾಡುತ್ತ ಬಿದ್ದಿದ್ದಾನೆ. ನಂತರ, ಸ್ಥಳೀಯರು ಅಂಬ್ಯುಲೆನ್ಸ್ ಗೆ ಕರೆಮಾಡಿ ಗಂಭೀರ ಗಾಯಗೊಂಡ ರೈತನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.









