ಧಾರವಾಡ: ಕಲಘಟಗಿ ವಿಧಾನಸಭಾ ಕ್ಷೇತ್ರದ ಅಳ್ನಾವರದಲ್ಲಿ ನಾಗರಾಜ ಛಬ್ಬಿ ಬೆಂಬಲಿಗರಿಂದ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು. ಪೆಟ್ರೋಲ್ ದರ ಏರಿಕೆ ಕುರಿತು, ಪೆಟ್ರೊಲ್ ಹಾಕಿಸಿಕೊಳ್ಳಲು ಬಂದ ಜನರ ಅಭಿಪ್ರಾಯ ಕೇಳಲಾಯಿತು. ಸಕಷ್ಟು ಜನರು ಪೆಟ್ರೊಲ್ ದರ ಏರಿಕೆಗೆ ಖಂಡನೆ ವ್ಯಕ್ತ ಪಡಿಸಿದ್ರು. ಈ ಸಂಧರ್ಭದಲ್ಲಿ ಪ.ಪಂ.ಸದಸ್ಯ ತಮೀಮ್ ತೆರಗಾಂವ, ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಂಕರ ಮುಗಳಿ, ಮಾಜಿ ಗ್ರಾ.ಪಂ ಅಧ್ಯಕ್ಷ ರಾಮೂ ಕೋಲೇಕರ, ಅಬೂಬಕರ ನದಾಫ, ಶಾಮಸುಂಧರ ಗಾಯಕವಾಡ, ಶಶಿಕುಮಾರ ಗಾಣಿಗೇರ, ಶಂಕರ ಗಿರಿಯಾಲ, ಸದ್ದಾಂ ಬೋಗೂರ, ಅಶೋಕ ತಿರಕನ್ನವರ, ಇಸ್ಮಾಯಿಲ್ ಪಠಾಣ, ಇಸ್ಮಾಯಿಲ್ ಮಲೀಕಬಾರ, ರಾಹುಲ್ ಶಿಂಧೆ ಸೇರೊದಂತೆ ಅನೇಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
Top Stories
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ನ್ಯಾಸರ್ಗಿಯಲ್ಲಿ ಇಸ್ಪೀಟು ಅಡ್ಡೆ ಮೇಲೆ ಪೊಲೀಸರ ದಾಳಿ: ನಾಲ್ವರ ವಿರುದ್ಧ ಕೇಸ್..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ಇಸ್ಪೀಟು ಆಟದಲ್ಲಿ ತೊಡಗಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ಮಾಡಿ 4 ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೈಲಾರಿ ಮಹದೇವಪ್ಪ ಸಾಗರ, ಮಂಜುನಾಥ್ ಹನ್ಮಂತಪ್ಪ ಉಪಾದ್ಯಾಯ, ಬಸವಂತಪ್ಪ ಲಕ್ಷ್ಮಣ ಮಡ್ಡಿ ಹಾಗೂ ಮಂಜುನಾಥ ನಾಗಪ್ಪ ಧರ್ಮೋಜಿ ಎಂಬುವ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನು ದಾಳಿ ವೇಳೆ 2,200 ರೂ.ನಗದು ಹಾಗೂ ಇಸ್ಪೀಟು ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಭಾರಿ ಮಳೆಯಿಂದ ಶೇಂಗಾ ಬೆಳೆ ಮಣ್ಣುಪಾಲು; ಮನನೊಂದ ರೈತ ಆತ್ಮಹತ್ಯೆ..!
ಮುಂಡಗೋಡ: ತಾಲೂಕಿನ ಅರಶಿಣಗೇರಿ ಗ್ರಾಮದಲ್ಲಿ ಸಾಲಬಾಧೆಯಿಂದ ರೈತನೊಬ್ಬ ಕಾಡಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೇವೇಂದ್ರಪ್ಪ ಈರಪ್ಪ ತೆಗ್ಗಳ್ಳಿ(60) ಎಂಬುವ ರೈತನೇ ಆತ್ಮಹತ್ಯೆಗೆ ಶರಣಾಗಿದ್ದಾನೆ. 4 ಎಕರೆ ಜಮೀನು ಹೊಂದಿರೋ ರೈತ ಈ ವರ್ಷ 1ಲಕ್ಷ 20 ಸಾವಿರ ರೂಪಾಯಿ ಖರ್ಚು ಮಾಡಿ ಶೇಂಗಾ ಬೆಳೆದಿದ್ದ. ಆದ್ರೆ ಇತ್ತಿಚೆಗೆ ಸುರಿದ ಭಾರೀ ಮಳೆಯಿಂದ ಬೆಳೆದಿದ್ದ ಶೇಂಗಾ ಎಲ್ಲಾ ಹಾಳಾಗಿತ್ತು. ಹೀಗಾಗಿವಸಾಲ ಸೋಲ ಮಾಡಿ ಬೆಳೆದಿದ್ದ ಬೆಳೆ ಕೈಕೊಟ್ಟ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಮೃತನ ಪುತ್ರ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.
ಆ ಪುಟ್ಟ ಕಂದಮ್ಮನ ಸಾವಿಗೆ “ಅಯ್ಯೋ ಪಾಪ ಹೀಗೆ ಆಗಬಾರದಿತ್ತು” ಅಂದ್ರಷ್ಟೇ ಸಾಕಾ..? ಹಾಗಾದ್ರೆ ಇನ್ನೇಷ್ಟು ಬಲಿ ಬೇಕು..?
ನಿಜ, ಮಮ್ಮಲ ಮರುಗುತ್ತಿದೆ ಇಡೀ ಮುಂಡಗೋಡ..! ಹಾಗೇ ಒಮ್ಮೆ ಕಲ್ಪಿಸಿಕೊಳ್ಳಿ, ಆ ಕಂದಮ್ಮ ಸಾವು ಬದುಕಿನ ಮದ್ಯೆ ಹೋರಾಡುತ್ತ, ಹುಬ್ಬಳ್ಳಿಯ ಕಿಮ್ಸ್ ICU ಬೆಡ್ಡಿನ ಮೇಲೆ ನರಳಿತ್ತಿರೋ ಸಂದರ್ಭ, ಆ ಹೆತ್ತ ಕರುಳುಗಳು ಪಟ್ಟಿರೋ ಸಂಕಟ ಎಷ್ಟಿರಬಹುದು ಅಲ್ವಾ..? ಇದೇಲ್ಲ ಸಾಕ್ಷಿ ಕೇಳುವವರಿಗೆ ಯಾಕೆ ಅರ್ಥವಾಗ್ತಿಲ್ಲ..? ಇದು, ಮುಂಡಗೋಡ ತಾಲೂಕಿನ ಜನರ ಮಿಲಿಯನ್ ಡಾಲರ್ ಪ್ರಶ್ನೆ. ಸಾಕ್ಷಿ ಬೇಕಂತೆ..? ಎಲ್ಲಿಂದ ನಗಬೇಕೋ ಅರ್ಥವೇ ಅಗುತ್ತಿಲ್ಲ ಕಣ್ರಿ, ಆ ಮುಗ್ದ ಕಂದಮ್ಮನ ಸಾವಿಗೆ ಕಾರಣನಾದ ವೈದ್ಯನ ವಿರುದ್ಧ ಕ್ರಮ ಕೈಗೊಳ್ಳಲು ಸಾಕ್ಷಿ ಬೇಕಂತೆ..! ಹಾಗಾದ್ರೆ ಇನ್ಮುಂದೆ, ಮುಂಡಗೋಡ ತಾಲೂಕಿನ ಹಳ್ಳಿಗಳ ಮುಗ್ದ ಜನರು ಇಲ್ಲಿನ ಖಾಸಗಿ ಆಸ್ಪತ್ರೆಗೆ ಹೋಗಬೇಕು ಅಂದ್ರೆ ಅದಕ್ಕೆ ಪೂರಕವಾದ ಸಾಕ್ಷಿ ಇಟ್ಕೊಂಡೆ ಹೋಗಬೇಕೆನೋ..? ಅಷ್ಟಕ್ಕೂ, ಸಾಕ್ಷಿಯ ಹೆಸರಲ್ಲಿ ಬಡವರನ್ನು ಹೆದರಿಸಿ ಇನ್ನೇಷ್ಟು ಮುಗ್ದ ಪ್ರಾಣಗಳ ಜೊತೆ ಚೆಲ್ಲಾಟವಾಡೋದು..? ಆ ಹೆತ್ತವರ ಕರುಳ ಕಣ್ಣೀರಿನ ಶಾಪ ಸುಮ್ನೆ ಬಿಡತ್ತಾ..? ಅಂದಹಾಗೆ, ಇಲ್ಲಿ ಸಾಕ್ಷಿ ಕೊಡಿ ಅಂತಾ ಕೇಳ್ತಿರೋರು ನಮ್ಮ ಪೊಲೀಸರು...
ಪೆಟ್ರೊಲ್ ಬೆಲೆ ಏರಿಕೆಗೆ ಖಂಡನೆ: ಮುಂಡಗೋಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!
ಮುಂಡಗೋಡ: ಕೇಂದ್ರ ಸರ್ಕಾರ ಪದೇ ಪದೇ ತೈಲ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಪೆಟ್ರೋಲ್ ಬಂಕ್ ನಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಶೀಘ್ರವೇ ಪೆಟ್ರೊಲ್ ದರ ಕಡಿಮೆ ಮಾಡುವಂತೆ ಆಗ್ರಹಿಸಿದ್ರು. ಈ ಸಂದರ್ಭದಲ್ಲಿ ಮುಂಡಗೋಡ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. ಎಂ. ನಾಯಕ್ ಮುಂಡಗೋಡ ಉಸ್ತುವಾರಿಗಳಾದ ಸುರೇಶ್ ಸವಣೂರು, ಎಂ ಎನ್ ದುಂಡಿಸಿ, ಅಲಿ ಹಸನ್ ಬೆಂಡಿಗೇರಿ, ಧರ್ಮರಾಜ್ ನಡಿಗೇರ, ರಾಜು ಹಿರೇಮಠ, ಪಟ್ಟಣ ಪಂಚಾಯಿತಿ ಸದಸ್ಯರಾದ ಮಹಮ್ಮದ್ ಗೌಸ್ ಮಕಾನದಾರ, ಜಾಫರ ಹಂಡಿ, ನಾಗರಾಜ ಹಂಚಿನಮನಿ, ರಾಜು ಬೋವಿ, ಮಲ್ಲು ಗೌಳಿ, ಜೈನೂ ಬೆಂಡಿಗೇರಿ, ಅಲ್ಲಾವುದ್ದೀನ್, ಬಸವರಾಜ ಆಸ್ತಕಟ್ಟಿ, ಆಶಿಫ್ ಮಕಾಂದಾರ ಸೇರಿದಂತೆ ತಾಲ್ಲೂಕಿನ ಮುಖಂಡರುಗಳು, ಘಟಕದ ಅಧ್ಯಕ್ಷರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು
ಪೆಟ್ರೊಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ..!
ದೇವರಹಿಪ್ಪರಗಿ: ಪಟ್ಟಣದ ಪೆಟ್ರೊಲ್ ಬಂಕ್ ಹತ್ತಿರ ಇಂದು ಕಾಂಗ್ರೆಸ್ ಕಾರ್ಯಕರ್ತರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರತಿಭಟನೆ ಮಾಡಿ ಮಾತನಾಡಿದ ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗುಡಿಮನಿ, ದೇಶದಲ್ಲಿ ಸುಮಾರು ಏಳು ವರ್ಷಗಳಿಂದ ಪೆಟ್ರೊಲ್ ಬೆಲೆ ಏರುತ್ತಲೇ ಇದೆ. ದಿನನಿತ್ಯ ಬಳಸುವ ಗ್ಯಾಸ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಅಂತಾ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರ್ ಬಿಜಾಪುರ್, ಬಶೀರ್ ಬೇಪಾರಿ, ರಜಾಕ್ ಹರವಾಳ, ರಾಘವೇಂದ್ರ ಪಡಗಾನೂರ, ಯಾಕೂಬ್ ಶಹಪುರ್, ದಾದಾಪೀರ್ ಬೇಪಾರಿ, ಮಾಂತೇಶ್ ಚಲವಾದಿ, ರಾಕೇಶ್ ಮೇಲಿನಮನಿ, ಹಾಜಿಲಾಲ, ಮಸಳಿ ಹೀಗೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶ್ವಾನ ಪ್ರಿಯರೇ ಗಮನಿಸಿ..! ಈ ಶ್ವಾನದ ಹೊಟ್ಟೆಯಲ್ಲಿದೆ ಚಿನ್ನ..!!
ಸಾಮಾನ್ಯವಾಗಿ ನಮಗೆ ಭದ್ರತೆ ನೀಡಲೆಂದು ನಾಯಿ ಸಾಕುತ್ತೇವೆ. ಆದರೆ, ಇಲ್ಲೊಂದು ಕುಟುಂಬ ಮಾಡಿದ ಎಡವಟ್ಟಿಗೆ ಹಗಲು ರಾತ್ರಿ ತಮ್ಮಸಾಕು ನಾಯಿಗೆ ಭದ್ರತೆ ನೀಡುವಂತಾಗಿದೆ. ಅಂದಹಾಗೆ, ಇದಕ್ಕೆಲ್ಲ ಕಾರಣ ಬಂಗಾರದ ಚೈನ್, ಹೌದು! ನೀವು ಇದನ್ನು ನಂಬಲೇ ಬೇಕು. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದ ದಿಲೀಪಕುಮಾರ್ ಹಿರೇಮಠ ಅವರ ಪಮಾರಿನ್ ತಳಿಯ ನಾಯಿ ಮರಿ ಸದ್ಯ 2 ತಿಂಗಳದ್ದು, ಮನೆ ಮಂದಿಗೆಲ್ಲ ಅಚ್ಚುಮೆಚ್ಚು. ಆದರೆ, ಮಾಲೀಕನ ಬಂಗಾರ ಚೈನ್ ಈಗ ನಾಯಿಯ ಹೊಟ್ಟೆ ಸೇರಿಬಿಟ್ಟಿದೆ. 2 ತೊಲೆ ಬಂಗಾರದ ಚೈನನ್ನು ಕಚ್ಚಿ ತುಂಡು ಮಾಡಿ ತಿಂದುಬಿಟ್ಟಿದೆ ಶ್ವಾನ. ಈ ವೇಳೆ ಮಾಲೀಕ ನಿದ್ದೆಗೆ ಜಾರಿದ್ದರು. ಎಚ್ಚರವಾದಾಗ ನಾಯಿ ಬಳಿ ಚೈನ್ ತುಂಡುಗಳನ್ನು ಗಮನಿಸಿ ಶಾಕ್ ಆಗಿದ್ದಾರೆ. ಕೂಡಲೇ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಚಿಕ್ಕ ಮರಿಯಾದ ಕಾರಣ ಆಪರೇಷನ್ ಬೇಡವೆಂದು ಡಾಕ್ಟರ್ ತಿಳಿಸಿದ್ದಾರೆ. ಇದೆ ವೇಳೆ ನಾಯಿ ಬಹಿರ್ದೆಸೆ ಮಾಡಿದ್ದು, ಒಂದೆರೆಡು ತುಂಡುಗಳು ಬಂದಿವೆ. ಸದ್ಯ ನಾಯಿಮರಿ ಹೊಟ್ಟೆಯಲ್ಲಿ 80 ಸಾವಿರ ರೂ. ಚಿನ್ನವಿದೆ...
ಇದೇ ತಿಂಗಳು ಮದುವೆಯಿತ್ತು..! ಆದ್ರೆ ಮದುಮಗ ಮಾತ್ರ ಇವತ್ತು ರೈಲಿಗೆ ತಲೆ ಕೊಟ್ಟು ಬಿಟ್ಟ..! ಯಾಕೆ ಹೀಗಾಯ್ತು..?
ಹಾವೇರಿ: ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಆಗಬೇಕಿದ್ದ ಯುವಕ ರೈಲು ಹಳಿಗೆ ಬಿದ್ದು ಸಾವು ಕಂಡ ಘಟನೆ ಹಾವೇರಿ ನಗರದ ಹೊರವಲಯದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಹಾವೇರಿ ಬಸವೇಶ್ವರ ನಗರದ ನಿವಾಸಿ, ವೀರೇಶ್ ಬೆನಕಪ್ಪನವರ (36), ಮೃತ ಯುವಕನಾಗಿದ್ದು ಇತ್ತೀಚೆಗಷ್ಟೇ ಮದುವೆ ನಿಶ್ಚಿತಾರ್ಥವಾಗಿತ್ತು. ಈ ತಿಂಗಳು 28 ರಂದು ಹಾವೇರಿಯಲ್ಲಿ ಮದವೆ ಕೂಡ ನಿಶ್ಚಯವಾಗಿತ್ತು. ಆದ್ರೆ ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳಕ್ಕೆ ರೈಲ್ವೆ ಪೋಲಿಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಹಾವೇರಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಅಗಲಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ, ಕಳೆದ ವರ್ಷ ಬನವಾಸಿಯಲ್ಲಿ ಪಂಪ ಪ್ರಶಸ್ತಿ ಸ್ವೀಕರಿಸಿದ್ದ ಕ್ಷಣ ಇನ್ನೂ ಅಚ್ಚ ಹಸಿರು..!
ಶಿರಸಿ: ಇಂದು ನಾಡಿನ ಹಿರಿಯ ಸಾಹಿತಿ, ದಲಿತ ಕವಿ, ಡಾ. ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಹಿರಿಯ ಕವಿಯ ನಿಧನಕ್ಕೆ ನಾಡಿನೆಲ್ಲೆಡೆ ಸಂತಾಪ ವ್ಯಕ್ತವಾಗಿದೆ. ಅಂದಹಾಗೆ, ದಲಿತ ಕವಿ ಸಿದ್ದಲಿಂಗಯ್ಯನವರಿಗೆ ಕಳೆದ ವರ್ಷವಷ್ಟೇ ಶಿರಸಿಯ ಬನವಾಸಿ ಕದಂಬೋತ್ಸವದಲ್ಲಿ ಪಂಪ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕಳೆದ ವರ್ಷ ಫೆಬ್ರವರಿ 8, 2020ರಲ್ಲಿ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದ್ದ ಕದಂಬೋತ್ಸವದಲ್ಲಿ ಡಾ.ಸಿದ್ದಲಿಂಗಯ್ಯ ಪಂಪ ಪ್ರಶಸ್ತಿ ಸ್ವೀಕರಿಸಿದ್ದರು. ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಂದ ಪ್ರಶಸ್ತಿ ಸ್ವೀಕರಿಸಿದ್ದ ಸಾಹಿತಿ ಇಂದು ಅಗಲಿದ್ದು ಬನವಾಸಿಯಲ್ಲಿ ಸಾಹಿತ್ಯಾಸಕ್ತರು ನೆನಪಿಸಿಕೊಂಡಿದ್ದಾರೆ.
ಕಾತೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು..!
ಮುಂಡಗೋಡ: ತಾಲೂಕಿನ ಕಾತೂರು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು ಮಾಡಿದ ಘಟನೆ ನಡೆದಿದೆ. ಶಿರಾಜ್ ಬೊಮ್ನಳ್ಳಿ ಎಂಬುವವರ ಹೀರೋ ಹೊಂಡಾ ಸ್ಪೆಂಡರ್ ಪ್ರೊ ಬೈಕ್ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದಾಗ ರಾತ್ರಿ ಯಾರೋ ಖದೀಮರು ಬಂದು ಬೈಕ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಅಂತಾ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಶಿರಾಜ್ ಬೊಮ್ನಳ್ಳಿ ದೂರು ದಾಖಲಿಸಿದ್ದಾರೆ









