ಬೆಳಗಾವಿಯಲ್ಲಿ ಸಿಎಂ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾಲೋಪ ವಿಚಾರವಾಗಿ, ಬೆಳಗಾವಿ ಕ್ಯಾಂಪ್ ಠಾಣೆ ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತುಗೊಂಡಿದ್ದಾರೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅಮಾನತು ಆದೇಶ ಹೊರಡಿಸಿದ್ದಾರೆ. ಬೆಳಗಾವಿಯಲ್ಲಿ ಇತ್ತಿಚೆಗೆ ನಡೆದಿದ್ದ ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್ ಸಮಾವೇಶದಲ್ಲಿ, ಬೆಲೆ ಏರಿಕೆ ಹಾಗೂ ಸಂವಿಧಾನ ಬಚಾವೋ ಸಮಾವೇಶದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯನವರ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದರು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಪೊಲೀಸರ ಮೇಲೆ ಸಿಟ್ಟಾಗಿ ರೇಗಾಡಿದ್ದರು. ಹೀಗಾಗಿ, ಭದ್ರತಾ ಲೋಪದ ಕಾರಣ ಕೊಟ್ಟು ಸೇವೆಯಿಂದ ಸಿಪಿಐಯವರನ್ನು ಕಮೀಷನರ್ ಅಮಾನತ್ತು ಮಾಡಿದ್ದಾರೆ. ಅಂದಹಾಗೆ, ಈಗಾಗಲೇ ಇದೇ ಪ್ರಕರಣದಲ್ಲಿ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿತ್ತು. ಈಗ ಭದ್ರತಾ ಲೋಪ ಹಿನ್ನೆಲೆ ಸಿಪಿಐ ಅಲ್ತಾಪ್ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ ಮೆರವಣಿಗೆ ಇತ್ತು. ಡಿಜೆ ನೋಡುವುದಕ್ಕೆ ಹೊರಟಿದ್ದ ಬಾಲಕರು ಮಸಣಕ್ಕೆ ಸೇರಿದ್ದಾರೆ.
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
ಹಾವೇರಿ: ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
ಜಮ್ಮು ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಭಾರತೀಯರ ಹತ್ಯಾಕಾಂಡಕ್ಕೆ ಪ್ರತಿಕಾರದಲ್ಲಿ, ಪಾಕ್ ಉಗ್ರರ ವಿರುದ್ಧ ಭಾರತೀಯ ಸೇನೆಯ “ಆಪರೇಷನ್ ಸಿಂಧೂರ” ಹೆಸರಿನ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯ ಖುರೇಷಿ ಬೆಳಗಾವಿಯ ಸೊಸೆಯಾಗಿದ್ದು, ಈಗ ಭಾಥದ ಹೆಮ್ಮೆಯಾಗಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನ ಜಗತ್ತಿಗೆ ಬಿಚ್ಚಿಟ್ಟಿದ್ದ ಕರ್ನಲ್ ಸೋಫೀಯಾ ಕುರೆಷಿ, ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಸೋಫೀಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು, ಪತಿ, ಪತ್ನಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡ್ತಿದ್ದಾರೆ. ಸೋಫೀಯಾ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿದ್ದಾರೆ. 2015 ರಲ್ಲಿ ಮ್ಯಾರೇಜ್ ಆಗಿರೋ ತಾಜುದ್ದೀನ್ ಸೋಫೀಯಾ ಅವರದ್ದು ಪ್ರೇಮ ವಿವಾಹ. ಕರ್ನಲ್ ಸುಫೀಯಾ ಮೂಲತಃ ಗುಜರಾತ್ ರಾಜ್ಯದ ಬರೋಡಾದವರು. ಸಧ್ಯ ಸೋಫೀಯಾ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತಿ ತಾಜುದ್ದೀನಿ ಬಾಗೇವಾಡಿ ಸಹ ಕರ್ನಲ್...
ಉತ್ತರ ಕನ್ನಡದಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಸ್ಥಳ ಪರಿಶೀಲನೆ ನಡೆಸಿದ ಎಸ್ಪಿ..!
ಉತ್ತರ ಕನ್ನಡ ಜಿಲ್ಲೆಯ ಕೈಗಾ, ನೇವಿ ಹಾಗೂ ಗ್ರಾಸಿಯಂ ಇಂಡಸ್ಟ್ರೀಸ್ ಪ್ರದೇಶಗಳಲ್ಲಿ “ಅಭ್ಯಾಸ್” ಮಾಕ್ ಡ್ರಿಲ್ ಅಣುಕು ಕಾರ್ಯಾಚರಣೆಯ ಪ್ರಯುಕ್ತ ಪೂರ್ವಸಿದ್ಧತೆಯ ಕುರಿತು ಪರಿಶೀಲನೆ ನಡೆಸಲಾಯಿತು. ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್, ಮಾಕ್ ಡ್ರಿಲ್ ನಡೆಸುವ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ರು.
ಕೌಶಲ್ಯಾಧಾರಿತ ಉಚಿತ ತರಬೇತಿಗೆ ಅರ್ಜಿ ಆಹ್ವಾನ..!
ಕಾರವಾರ: ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕರಿಗಾಗಿ ಜೂನ್ ತಿಂಗಳಿನಲ್ಲಿ ಲಘು ಮೋಟಾರ ವಾಹನ ಚಾಲನೆ, ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಹಾಗೂ ವೆಲ್ಡಿಂಗ್ ಮತ್ತು ಫ್ಯಾಬ್ರಿಕೇಶನ್ ಮತ್ತು ಜುಲೈ ತಿಂಗಳಲ್ಲಿ ಸೋಲಾರ ಟೆಕ್ನೀಶಿಯನ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸವನ್ನು ನೋಂದಾಯಿಸಿಕೊಳ್ಳಲು ಮೇ.25 ಕೊನೆಯ ದಿನವಾಗಿದೆ. ತರಬೇತಿ ಅವಧಿಯಲ್ಲಿ ಊಟ ವಸತಿ ಸಂಪೂರ್ಣ ಉಚಿತವಾಗಿರುತ್ತದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲತೇಯ ದಕ್ಷ ಗುಣಗಳು, ಹೊಸ ಉದ್ಯಮದ ಸ್ಥಾಪನೆ ಬಗ್ಗೆ ಮಾಹಿತಿ, ಮಾರುಕಟ್ಟೆ ಸಮೀಕ್ಷೆ, ಮಾರಾಟ ತಂತ್ರಗಳು, ಯಶ್ವಸಿ ಉದ್ಯಮಗಳಿಂದ ಅನುಭವ ಹಂಚಿಕೆ, ಕ್ಷೇತ್ರ ಭೇಟಿ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿನಿಂದ ಸಾಲ ಪಡೆದು ಸ್ವಉದ್ಯೋಗ ಪ್ರಾಂಭಿಸಲು ಬೇಕಾದ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ...
ಗೃಹ ಬಳಕೆಯ ಅನಿಲ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಿರಿ: ಡಿಸಿ ಲಕ್ಷ್ಮೀ ಪ್ರಿಯ…!
ಕಾರವಾರ; ಜಿಲ್ಲೆಯಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ನೀಡಲಾಗುವ ಅಡುಗೆ ಅನಿಲದ ಸಿಲೆಂಡರ್ಗಳು ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದ ರೀತಿಯಲ್ಲಿ ಹೆಚ್ಚಿನ ನಿಗಾವಹಿಸಿ, ವಾಣಿಜ್ಯ ಚಟುವಟಿಕೆಗಳು ನಡೆಯುವ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು.
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
ಕಾರವಾರ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಮೇ 7 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮುರುಡೇಶ್ವರದ ಗೃಹ ಕಚೇರಿಯಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡಿದ್ದು , ಜಿಲ್ಲೆಯ ಹಾಗೂ ಕ್ಷೇತ್ರದ ಸಾರ್ವಜನಿಕರು ಸಚಿವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕ್ ನಡುವೆ ಹೆಚ್ಚಿದ ಉದ್ವಿಗ್ನತೆ ನಡುವೆಯೇ ನೆರೆ ದೇಶಕ್ಕೆ ತಕ್ಕ ತಿರುಗೇಟು ನೀಡಲು ಭಾರತ ರಣಕಹಳೆ ಮೊಳಗಿಸಿದೆ. ಪಾಕ್ ಮೇಲೆ ದಾಳಿಗೆ ಸನ್ನದ್ಧವಾಗುತ್ತಿರುವ ಸೂಚನೆ ನೀಡಿದೆ. ಮೇ 7ರಂದು ಭದ್ರತಾ ಅಣಕು ಕವಾಯತು ನಡೆಸುವಂತೆ (ಸೆಕ್ಯೂರಿಟಿ ಮಾಕ್ ಡ್ರಿಲ್) ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಮೇ 6) ನಿರ್ದೇಶನ ನೀಡಿದೆ. 1971ರಲ್ಲಿ ಭಾರತ-ಪಾಕ್ ಯುದ್ಧದ ಬಳಿಕ ಇಂತಹ ಅಣಕು ಕವಾಯತಿಗೆ ಇದೇ ಮೊದಲ ಬಾರಿಗೆ ಸೂಚಿಸಲಾಗಿದೆ. ಕಾಶ್ಲೀರದ ಪಹಲ್ಗಾಮ್ನಲ್ಲಿ ಏ.22ರಂದು ನಡೆದ ಉಗ್ರ ದಾಳಿ ಬಳಿಕ ಪಾಕಿಸ್ತಾನ ಸತತ 11 ದಿನಗಳಿಂದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಮೂಲಕ ಭಾರತವನ್ನು ಕೆಣಕುತ್ತಿದೆ. ಮತ್ತೊಂದೆಡೆ, ಉಗ್ರರು ಕನಸಿನಲ್ಲೂ ಊಹಿಸಿರದಂತಹ ತಿರುಗೇಟು ನೀಡುವುದಾಗಿ ಭಾರತ ಶಪಥ ಮಾಡಿದೆ. ಈ ಬೆಳವಣಿಗೆಗಳನ ನಡುವೆಯೇ ಕೇಂದ್ರ ಸರಕಾರ ಯುದ್ಧದ ಸಂದರ್ಭದಲ್ಲಿ ಕೈಗೊಳ್ಳುವ ರಕ್ಷಣಾ ಕಾರ್ಯಾಚರಣೆಯ ಅಣುಕು ಕವಾಯತು ನಡೆಸುವಂತೆ ರಾಜ್ಯಗಳಿಗೆ ಸೂಚಿಸಿರುವುದು ಮಹತ್ವ ಪಡೆದುಕೊಂಡಿದೆ. ಮಾಕ್ ಡ್ರಿಲ್ಗೆ ಭಾರತ ಸಜ್ಜು...