Peacock Death: ಮಧುಗಿರಿ : 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ ನವಿಲುಗಳನ್ನು ಕಂಡ ಜಮೀನಿನ ಮಾಲೀಕ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪಶು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳ ಪರಿಶೀಲಿಸಿದರು. ಈ ಪೈಕಿ 3 ಗಂಡು,17 ಹೆಣ್ಣು ಸೇರಿದಂತೆ ಒಟ್ಟು 20 ನವಿಲುಗಳು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಕೀಟನಾಶಕ ಸೇವಿಸಿ ನವಿಲುಗಳು ಸಾವನ್ನಪ್ಪಿರಬಹುದು ಎಂದು ಹೇಳಲಾಗುತ್ತಿದೆ. ಉದ್ದೇಶಪೂರ್ವಕವಾಗಿ ವಿಷಪ್ರಾಶನ ಮಾಡಿಸಲಾಗಿದೆಯೇ ಅಥವಾ ಬೆಳೆಗೆ ಸಿಂಪಡಿಸಿದ್ದ ಕೀಟನಾಶಕವನ್ನು ನವಿಲುಗಳು ಸೇವಿಸಿ ಸಾವನ್ನಪ್ಪಿವೆಯೇ ಎಂಬುದು ತಿಳಿದುಬಂದಿಲ್ಲ. ಘಟನೆಗೆ ಕಾರಣವೇನೆಂದು ತನಿಖೆ ನಡೆಸಿ 5 ದಿನಗಳಲ್ಲಿ ವರದಿ ಸಲ್ಲಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ...
Top Stories
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
Dasara Festival News : ಮೈಸೂರು: ಅದ್ಧೂರಿ ಹಾಗೂ ಸಾಂಪ್ರದಾಯಿಕ ನಾಡಹಬ್ಬ ಸಮೀಪಿಸುತ್ತಿದ್ದು, ಈ ಬಾರಿಯ ಜಂಬೂ ಸವಾರಿಯಲ್ಲಿ ಭಾಗವಹಿಸಲು ಈಗಾಗಲೇ 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಗಜಪಡೆಯ ಮುಂದಾಳತ್ವವನ್ನು ಅಭಿಮನ್ಯು ವಹಿಸಲಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆಯಲ್ಲಿ 10 ಗಂಡಾನೆ ಹಾಗೂ 4 ಹೆಣ್ಣಾನೆಗಳಿವೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ. ಈ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ 14 ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಿದೆ. ಈ ಆನೆಗಳು ಎಷ್ಟು ವರ್ಷದಿಂದ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುತ್ತಿವೆ. ಇವುಗಳ ವಯಸ್ಸು, ಎತ್ತರ ಹಾಗೂ ತೂಕದ ಜೊತೆಗೆ ಯಾವ ಶಿಬಿರದಿಂದ ಬಂದಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ಕ್ಯಾಪ್ಟನ್ ಅಭಿಮನ್ಯು: ಗಂಡಾನೆ; 29 ವರ್ಷಗಳು; 2.72 ಮೀ ಎತ್ತರ; 3.51 ಮೀ ಉದ್ದ; 4,920 ಕೆ.ಜಿ. ಅಂದಾಜು ತೂಕ. ಮತ್ತಿಗೋಡು ಆನೆ ಶಿಬಿರದಿಂದ ಬಂದಿರುವ ಅಭಿಮನ್ಯುವನ್ನು 1970ರಲ್ಲಿ ಕೊಡಗು...
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ ಶೇಷ ವಸ್ತ್ರ ಆಗಮಿಸಲಿದ್ದು, ಅದನ್ನು ಮಠದ ಸಂಪ್ರಾಯದಂತೆ ಸ್ವೀಕರಿಸಿ ರಾಯರಿಗೆ ಸಮರ್ಪಣೆ ಮಾಡಲಾಗುವುದು” ಎಂದರು. . “ಪ್ರತಿನಿತ್ಯ ರಾಯರ ಮೂಲ ಬೃಂದಾವನದಲ್ಲಿ ನಿರ್ಮಲ್ಯ ವಿಸರ್ಜನೆ, ಶ್ರೀಉತ್ಸವ, ಪಾದಪೂಜೆ ಮತ್ತ ಪಂಚಾಮೃತ, ಹಸ್ತದೋಂಕ ಸೇರಿದಂತೆ ನಾನ ಪೂಜೆ ನಡೆಯಲಿವೆ. ಆ.10 ರಂದು ರಾಯರ ಪೂರ್ವರಾಧನೆ ಜರುಗಲಿದೆ. ಆ.11ರಂದು ಮಧ್ಯಾರಾಧನೆ, ಆ.12ರಂದು ರಾಯರ ಉತ್ತರಾಧನೆ ನಡೆಯಲಿದೆ. ಮಧ್ಯಾರಾಧನೆಯೆಂದು ರಾಯರ ಮೂಲಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ ಜರುಗಲಿದೆ....
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
Crime News: ಬೆಳಗಾವಿ: ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದಿದೆ. ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ್ (45) ಕೊಲೆಯಾದ ದುರ್ದೈವಿ. ಮೆಸ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ರಾತ್ರಿ ಎಂದಿನಂತೆ ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಆಗಂತುಕ ವ್ಯಕ್ತಿ ಕಬ್ಬಿಣದ ರಾಡ್ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಮಹಾದೇವಿ ಅವರು ಪ್ರಜ್ಞಾಹೀನರಾಗಿ ಸ್ಥಳದಲ್ಲೇ ಕುಸಿದುಬಿದ್ದಿದ್ದಾರೆ. ಬಳಿಕ ತೀವ್ರ ರಕ್ತಸ್ರಾವವಾಗಿ ಅಲ್ಲಿಯೇ ಉಸಿರು ಚೆಲ್ಲಿದ್ದಾರೆ. ಅದೇ ಮಾರ್ಗವಾಗಿ ಹೋಗುತ್ತಿದ್ದ ದಾರಿಹೋಕರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ, ಡಿಸಿಪಿ ನಾರಾಯಣ್ ಭರಮನಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಎಫ್ಎಸ್ಎಲ್ ಮತ್ತು ಶ್ವಾನದಳ ಸಿಬ್ಬಂದಿ ಕೂಡ ಪರಿಶೀಲಿಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದಿಲ್ಲವಾದರೂ, ಹಣಕಾಸಿನ ವ್ಯವಹಾರದ ಬಗ್ಗೆ ಶಂಕೆ...
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
Loan Transfer to Reduce EMI: ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ವಿತ್ತ ನೀತಿ ಸಮಿತಿ (MPC) ಸಭೆ ಇಂದು ಬುಧವಾರ ಮುಕ್ತಾಯಗೊಂಡಿದ್ದು, ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಸಭೆಯ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಈ ಬಾರಿ ಆರ್ಬಿಐ ತನ್ನ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ, 5.50% ರಲ್ಲಿ ಸ್ಥಿರವಾಗಿರಿಸಿದೆ. ಹೀಗಾಗಿ, ಆರ್ಬಿಐನ ಈ ನಿರ್ಧಾರದಿಂದ ಸಾಲ ಪಡೆಯುವವರು ಅಥವಾ ಇಎಂಐ ಪಾವತಿಸುವವರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ. ಆದರೂ ಕೂಡ ನಿಮ್ಮ ಸಾಲದ EMI ಹೊರೆ ಹೆಚ್ಚಿದ್ದರೆ, ಅದನ್ನು ಕಡಿಮೆ ಮಾಡಿಕೊಳ್ಳಲು ಅವಾಕಾಶವಿದೆ. ನಿಮ್ಮ ಇಎಂಐ ಕಡಿಮೆ ಮಾಡಲು ಮತ್ತು ಹಣ ಉಳಿಸಲು ಸಹಾಯ ಮಾಡುವ ಒಂದು ಸುಲಭ ಮಾರ್ಗವಿದೆ. ಈ ಕುರಿತ ಪೂರ್ಣ ಮಾಹಿತಿ ಇಲ್ಲಿದೆ. ಇಎಂಐ ಕಡಿಮೆ ಮಾಡಲು ಲೋನ್ ವರ್ಗಾವಣೆ ಲೋನ್ ವರ್ಗಾವಣೆ (Loan Transfer) ಮೂಲಕ ನಿಮ್ಮ EMI ಹೊರೆ ಇಳಿಕೆ ಮಾಡಬಹುದು. ನಿಮ್ಮ ಲೋನ್ ಇಎಂಐ ಕಡಿಮೆ ಮಾಡಲು, ನಿಮ್ಮ ಸಾಲವನ್ನು ಪ್ರಸ್ತುತ ಬ್ಯಾಂಕ್ಗಿಂತ...
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
Gold Price Today: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಮತ್ತೊಮ್ಮೆ ಗಗನಕುಸುಮವಾಗತೊಡಗಿದೆ. ಮುಂಬರುವ ವರಮಮಹಾಲಕ್ಷ್ಮೀ ಹಬ್ಬಕ್ಕೂ ಮುನ್ನ ಬಂಗಾರ ಖರೀದಿಸಬೇಕು ಎಂದುಕೊಂಡಿದ್ದವರಿಗೆ ದುಬಾರಿಯಾಗಿ ಪರಿಣಮಿಸಿದೆ. ಕಳೆದ ವಾರ ಇಳಿಕೆಯಾಗಿದ್ದ ಹಳದಿ ಲೋಹವು ಕೊನೆಯ ವೀಕೆಂಡ್ನಿಂದ ಸತತ ಏರಿಕೆಯಾಗ್ತಲೇ ಇದೆ. 22 ಕ್ಯಾರೆಟ್ ಆಭರಣ ಚಿನ್ನ ಹಾಗೂ 24 ಕ್ಯಾರೆಟ್ ಶುದ್ಧ ಬಂಗಾರಗಳೆರಡು ಸಹ ಬೆಲೆ ಹೆಚ್ಚಳಕ್ಕೆ ಸಾಕ್ಷಿಯಾಗಿದ್ದು, ಖರೀದಿದಾರರ ಬಜೆಟ್ಗೆ ಹೊಡೆತ ಬಿದ್ದಿದೆ. ಚಿನ್ನದ ಬೆಲೆ ಹೆಚ್ಚಳಕ್ಕೆ ಕಾರಣವೇನು? ಜಾಗತಿಕ ಮಟ್ಟದಲ್ಲಿ ರಷ್ಯಾ-ಉಕ್ರೇನ್ ಯುದ್ಧದ ನಡುವೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕದ ಬೆದರಿಕೆಗಳು ಮಾರುಕಟ್ಟೆಯಲ್ಲಿ ಕರೆಕ್ಷನ್ಗೆ ಕಾರಣವಾಗಿದೆ. ಭಾರತವು ರಷ್ಯಾದಿಂದ ಅಗ್ಗದ ಬೆಲೆಗೆ ತೈಲ ಖರೀದಿಸುತ್ತಿದೆ ಎಂಬ ಕಾರಣವನ್ನಿಟ್ಟುಕೊಂಡು ಡೊನಾಲ್ಡ್ ಟ್ರಂಪ್ ಭಾರತದಿಂದ ಆಮದಾಗುವ ಸರಕುಗಳ ಮೇಲೆ ಸುಂಕವನ್ನು ಮುಂದಿನ 24ಗಂಟೆಯಲ್ಲಿ ಏರಿಕೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಮುಂದಿನ ದಿನಗಳಲ್ಲಿ ಭಾರತದ ರಫ್ತುಗಳ ಮೇಲೆ ಸುಂಕವನ್ನು ಗಣನೀಯ ಏರಿಕೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ಭಾರತವು ತಕ್ಕ ತಿರುಗೇಟು ನೀಡಿದ್ದರೂ...
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ ಮೂವರಿಗೆ ಗಾಯವಾಗಿದೆ. ಇಂದೂರು ಗ್ರಾಮದ ಶರಣು ನಿಂಗಯ್ಯ ಸುರಗಿಮಠ್ ಹಾಗೂ ಇವರ ಪತ್ನಿ ಸುಪ್ರೀತ ಸುರಗಿಮಠ ಎಂಬುವವರಿಗೆ ಗಾಯವಾಗಿದೆ. ಹುನಗುಂದದ ಪೊಸ್ಟಮೆನ್ ಸುನಿಲ್ ಹರಿಜನ್ ಎಂಬುವವರಿಗೂ ಗಾಯವಾಗಿದೆ. ಗಾಯಾಳಯಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ZP CEO VISIT; ಮುಂಡಗೋಡ/ಶಿರಸಿ; ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಲ್ಲಿ ಅನುಷ್ಠಾನಗೊಳಿಸಲಾದ ಜೆಜೆಎಮ್ ಕಾಮಗಾರಿ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದಿಲೀಷ್ ಶಶಿ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಮಳಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಧರ್ಮಾ ಜಲಾಶಯದಲ್ಲಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯನ್ನು ಪರಿಶೀಲಿಸಿದರು. ಬಳಿಕ ಕಾತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಳ್ಳಿ, ಚವಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಗಿನಕೊಪ್ಪ, ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯಾಸರ್ಗಿ ಮಲಬಾರ್ ಕಾಲೋನಿ ಮತ್ತು ನಂದಿಗಟ್ಟಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸನಾಳ ಗ್ರಾಮದಲ್ಲಿ ಜೆಜೆಎಮ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಪಡೆದುಕೊಂಡ ಮನೆಗಳಿಗೆ ಭೇಟಿ ನೀಡಿ, ನೀರಿನ ಪೂರೈಕೆ, ಶುದ್ಧತೆ ಮತ್ತು ಉಪಯೋಗದ ಕುರಿತು ಫಲಾನುಭವಿಗಳಿಂದ ಮಾಹಿತಿ ಪಡೆದರು. ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಜಲಾಶಯಕ್ಕೆ ಭೇಟಿ ನೀಡಿ, ಬಹು ಗ್ರಾಮ ಕುಡಿಯುವ ನೀರು ಯೋಜನೆಯ...
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
Soldier Dies News; ರಸ್ತೆ ಅಪಘಾತದಲ್ಲಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪ್ರಭುನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 4(A)ನಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಸೂರಜ್ ದ್ರೌಪದ್ಕರ್ (29) ಎಂಬುವನೇ ಮೃತ ಯೋಧನಾಗಿದ್ದಾನೆ. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗುದ್ದಿದ ಪರಿಣಾಮ, ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವ ಹಿನ್ನೆಲೆ ಸ್ಥಳದಲ್ಲೇ ಯೋಧ ಸೂರಜ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ👇 ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..! ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
Cobra Trapped In Pipe Rescued; ಮುಂಡಗೋಡ ತಾಲೂಕಿನ ಕಾತುರ ಅರಣ್ಯ ವಲಯದಲ್ಲಿ ಪೈಪಿನಲ್ಲಿ ಸಿಲುಕಿ ಸಾಚು ಬದುಕಿನ ನಡುವೆ ಹೋರಾಡುತ್ತಿದ್ದ, ನಾಗರಹಾವನ್ನು ರಕ್ಷಣೆ ಮಾಡಲಾಗಿದೆ. ಓರಲಗಿ ಗಸ್ತಿನ ಮಾಲತೇಶ ಗೊಂದಿ ಅವರ ಗದ್ದೆದಲ್ಲಿ ಪೈಪ್ ನಲ್ಲಿ ಸಿಕ್ಕಿಹಾಕಿಕೊಂಡು ಒದ್ದಾಡುತಿದ್ದ ನಾಗರಹಾವನ್ನು ಮುತ್ತುರಾಜ ಹಳ್ಳಿ, ಹುಡೇಲಕೊಪ್ಪ ಗಸ್ತು ವನಪಾಲಕರು ಹಾವನ್ನು ಪೈಪ್ ನಿಂದ ಹೊರ ತೆಗೆದು, ಗಾಯಕ್ಕೆ ನ್ಯಾಚುರಲ್ (Anti Septic) ಆದ ಅರಶಿಣ ಹಚ್ಚಿ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಮಳಗಿ ಗಸ್ತು ವನಪಾಲಕ ಮಂಜುನಾಥ್ ಕೆ. ವಿ., ಮಾನ್ಸೂರ್ ಮತ್ತು ಮುಂತಾದವರು ಇದ್ದರು. ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..? ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!