ಕಾರವಾರ; ಜಿಲ್ಲೆಯಲ್ಲಿ ಗೃಹ ಬಳಕೆಯ ಉದ್ದೇಶಕ್ಕೆ ನೀಡಲಾಗುವ ಅಡುಗೆ ಅನಿಲದ ಸಿಲೆಂಡರ್ಗಳು ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗದ ರೀತಿಯಲ್ಲಿ ಹೆಚ್ಚಿನ ನಿಗಾವಹಿಸಿ, ವಾಣಿಜ್ಯ ಚಟುವಟಿಕೆಗಳು ನಡೆಯುವ ಸ್ಥಳಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯ ಸೂಚನೆ ನೀಡಿದರು.
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಂದ ಮುರುಡೇಶ್ವರ ಗೃಹಕಚೇರಿಯಲ್ಲಿ ಜನತಾ ದರ್ಶನ..!
ಕಾರವಾರ: ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರು ಮೇ 7 ರಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮುರುಡೇಶ್ವರದ ಗೃಹ ಕಚೇರಿಯಲ್ಲಿ “ಜನತಾ ದರ್ಶನ” ಕಾರ್ಯಕ್ರಮ ಹಮ್ಮಿಕೊಂಡಿದ್ದು , ಜಿಲ್ಲೆಯ ಹಾಗೂ ಕ್ಷೇತ್ರದ ಸಾರ್ವಜನಿಕರು ಸಚಿವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಅಹವಾಲುಗಳನ್ನು ನೀಡಬಹುದಾಗಿದೆ ಎಂದು ಸಚಿವರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!
ಪಹಲ್ಗಾಮ್ ದಾಳಿ ಬಳಿಕ ಭಾರತ-ಪಾಕ್ ನಡುವೆ ಹೆಚ್ಚಿದ ಉದ್ವಿಗ್ನತೆ ನಡುವೆಯೇ ನೆರೆ ದೇಶಕ್ಕೆ ತಕ್ಕ ತಿರುಗೇಟು ನೀಡಲು ಭಾರತ ರಣಕಹಳೆ ಮೊಳಗಿಸಿದೆ. ಪಾಕ್ ಮೇಲೆ ದಾಳಿಗೆ ಸನ್ನದ್ಧವಾಗುತ್ತಿರುವ ಸೂಚನೆ ನೀಡಿದೆ. ಮೇ 7ರಂದು ಭದ್ರತಾ ಅಣಕು ಕವಾಯತು ನಡೆಸುವಂತೆ (ಸೆಕ್ಯೂರಿಟಿ ಮಾಕ್ ಡ್ರಿಲ್) ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಮೇ 6) ನಿರ್ದೇಶನ ನೀಡಿದೆ. 1971ರಲ್ಲಿ ಭಾರತ-ಪಾಕ್ ಯುದ್ಧದ ಬಳಿಕ ಇಂತಹ ಅಣಕು ಕವಾಯತಿಗೆ ಇದೇ ಮೊದಲ ಬಾರಿಗೆ ಸೂಚಿಸಲಾಗಿದೆ. ಕಾಶ್ಲೀರದ ಪಹಲ್ಗಾಮ್ನಲ್ಲಿ ಏ.22ರಂದು ನಡೆದ ಉಗ್ರ ದಾಳಿ ಬಳಿಕ ಪಾಕಿಸ್ತಾನ ಸತತ 11 ದಿನಗಳಿಂದ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಮೂಲಕ ಭಾರತವನ್ನು ಕೆಣಕುತ್ತಿದೆ. ಮತ್ತೊಂದೆಡೆ, ಉಗ್ರರು ಕನಸಿನಲ್ಲೂ ಊಹಿಸಿರದಂತಹ ತಿರುಗೇಟು ನೀಡುವುದಾಗಿ ಭಾರತ ಶಪಥ ಮಾಡಿದೆ. ಈ ಬೆಳವಣಿಗೆಗಳನ ನಡುವೆಯೇ ಕೇಂದ್ರ ಸರಕಾರ ಯುದ್ಧದ ಸಂದರ್ಭದಲ್ಲಿ ಕೈಗೊಳ್ಳುವ ರಕ್ಷಣಾ ಕಾರ್ಯಾಚರಣೆಯ ಅಣುಕು ಕವಾಯತು ನಡೆಸುವಂತೆ ರಾಜ್ಯಗಳಿಗೆ ಸೂಚಿಸಿರುವುದು ಮಹತ್ವ ಪಡೆದುಕೊಂಡಿದೆ. ಮಾಕ್ ಡ್ರಿಲ್ಗೆ ಭಾರತ ಸಜ್ಜು...
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಬಸಕ್ಕೆ ಕಾರಿನಲ್ಲಿದ್ದ 5 ಜನ ಸ್ಥಳದಲ್ಲೇ ಸಾವು ಸಾವನಪ್ಪಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪರಿಸರ ರಕ್ಷಣೆಗೆ ವಿದ್ಯಾರ್ಥಿಗಳೇ ಯೋಧರು : ಉಪ ರಾಷ್ಟ್ರಪತಿ ಜಗದೀಪ್ ಧನಕರ್
ಶಿರಸಿ: ಮಾನವ ಮತ್ತು ಜೀವ ಸಂಕುಲದ ಏಕೈಕ ಆವಾಸ ಸ್ಥಾನವಾಗಿರುವ ಭೂಮಿ ಮತ್ತು ಇಲ್ಲಿನ ಪ್ರಕೃತಿ ಸಂಪತ್ತನ್ನು ಸಂರಕ್ಷಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಯೋಧರಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ಅವರು ಸೋಮವಾರ ಶಿರಸಿಯ ಅರಣ್ಯ ಕಾಲೇಜು ಆವರಣದಲ್ಲಿ ‘ದೇಶ ಕಟ್ಟುವಿಕೆಯಲ್ಲಿ ಅರಣ್ಯ ವಿಜ್ಞಾನದ ಪಾತ್ರ’ ವಿಷಯದ ಕುರಿತಾಗಿ ಅರಣ್ಯ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಪ್ರಕೃತಿಯು ನಮಗೆ ಎಲ್ಲವನ್ನು ನೀಡಿದೆ ಆದರೆ ಅದನ್ನು ದುರ್ಬಳಕೆ ಮಾಡಿಕೊಳ್ಳದೆ ನಮ್ಮ ಅವಶ್ಯಕತೆಗೆ ತಕ್ಕಂತೆ ಮಿತವಾಗಿ ಬಳಸಬೇಕು, ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸಬೇಕು. ಈ ಪ್ರಕೃತಿಯು ಮಾನವನಿಗೆ ಮಾತ್ರವಲ್ಲದೇ ಪ್ರಾಣಿ ಪಕ್ಷಿಗಳು ಮರ ಗಿಡಗಳು ಸೇರಿದಂತೆ ಎಲ್ಲಾ ಜೀವ ಸಂಕುಲಕ್ಕೆ ಸೇರಿದೆ , ಇಂದಿನ ಯುವ ಪೀಳಿಗೆ ಈ ಸತ್ಯದೊಂದಿಗೆ ಅಧ್ಯಯನ ನಡೆಸುತ್ತ, ಮುಂದಿನ ಪೀಳಿಗೆಗೂ ಅರಿವು ಮೂಡಿಸಬೇಕು ಎಂದರು. ನಮ್ಮ ದೇಶದಲ್ಲಿ ವೈದಿಕ ಯುಗದಿಂದಲೂ ಪರಿಸರ ಮತ್ತು ಅರ್ಥ ವ್ಯವಸ್ಥೆ ಪರಸ್ಪರ ಒಟ್ಟಾಗಿ ಸಾಗಿದೆ. ಭಾರತವು ಸಾಂಸ್ಕೃತಿಕವಾಗಿ ಸಿರಿವಂತವಾಗಿದೆ....
ಶಿರಸಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ತಾಯಿ ಹೆಸ್ರಲ್ಲಿ ಗಿಡ ನೆಟ್ಟರು..!
ಶಿರಸಿ; ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಶಿರಸಿ ಮತ್ತು ಸಿದ್ಧಾಪುರ ದಲ್ಲಿ ನಡೆಯುವ ಕಾರ್ಯಕ್ರಮಗಳಿಗಾಗಿ ಶಿರಸಿ ಮಾರಿಕಾಂಬ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್ ಗೆ ಬಂದಿಳಿದರು. ರಾಜ್ಯಪಾಲ ಥಾವರ ಚಂದ್ ಗೆಹಲೊಟ್, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ಎಸ್ ವೈದ್ಯ ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿಕೊಂಡರು. ಶಿರಸಿಯಲ್ಲಿ ನಡೆದ ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಪರಾಷ್ಟ್ರಪತಿ ಗಳು, ತಾಯಿಯ ಸ್ಮೃರಣೆಯಲ್ಲಿ ಒಂದು ವೃಕ್ಷ ದಡಿ, ಶಿರಸಿಯ ಅರಣ್ಯ ಕಾಲೇಜಿನ ಆವರಣದಲ್ಲಿ ತಮ್ಮ ದಿವಂಗತ ತಾಯಿ ಶ್ರೀಮತಿ ಕೇಸರಿ ದೇವಿ ಹೆಸರಿನಲ್ಲಿ ಅಶೋಕ ವೃಕ್ಷ ನೆಟ್ಟರು. ಇದೇ ವೇಳೆ ರಾಜ್ಯಪಾಲ ಥಾವರ ಚಂದ್ ಗೆಹಲೊಟ್, ಅವರು ತಮ್ಮ ತಾಯಿ ದಿವಂಗತ ಶ್ರೀಮತಿ ಸುಮನ್ ಬಾಯಿ ಹೆಸರಿನಲ್ಲಿ ಮತ್ತು ಗೌರವಾನ್ವಿತ ಉಪ ರಾಷ್ಟ್ರಪತಿ ಅವರ ಪತ್ನಿ ಶ್ರೀಮತಿ ಡಾ. ಸುದೇಶ್ ಧನಕರ್ ಅವರು ತಮ್ಮ ತಾಯಿ ದಿವಂಗತ ಶ್ರೀಮತಿ ಭಗವತಿ ದೇವಿ ಅವರ ಹೆಸರಿನಲ್ಲಿ ಅಶೋಕ ವೃಕ್ಷ ನೆಟ್ಟರು.
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!
ಮುಂಡಗೋಡ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಆಕಸ್ಮಿಕವಾಗಿ ಬಿದ್ದು ಸಾವು ಕಂಡಿರೋ ಘಟನೆ ನಡೆದಿದೆ. ಹುನಗುಂದ ಗ್ರಾಮದ ಅಂದಾನಯ್ಯ ಗದಗಯ್ಯ ಚಿಕ್ಕಮಠ(45) ಎಂಬುವವನೇ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಶನಿವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದ ಮೃತ ವ್ಯಕ್ತಿ, ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದರು. ಆದ್ರೆ, ರವಿವಾರ ಸಂಜೆ ವೇಳೆಗೆ ಅತ್ತಿವೇರಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನೀರು ಕುಡಿಯಲು ಹೋಗಿ ಜಲಾಶಯದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?
ಮುಂಡಗೋಡ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಆಗಿ ವಿನೋದ್ ರೆಡ್ಡಿ ಚಾರ್ಜ್ ತಕ್ಕೊಂಡು ನಾಲ್ಕೈದು ದಿನ ಆಗಿದೆ. ನಮ್ಮ ಹನ್ಮಂತ್ ಗುಡುಗುಂಟಿಯವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಹುತೇಕ ನಿರೀಕ್ಷೆಯಂತೆಯೇ ರೆಡ್ಡಿ ಸಾಹೇಬ್ರು ಬಂದು ಕೂತಿದ್ದಾರೆ. ನಿಜ ಅಂದ್ರೆ, ಸದ್ಯಕ್ಕಂತೂ, ಪಕ್ಕಾ ಎನರ್ಜೆಟಿಕ್ ಆಗಿರೋ ಹೊಸ ಕ್ರೈಂ ಪಿಎಸ್ಐ, ತಾಲೂಕಿನ ಕ್ರೈಮು ಗಳಿಗೆ ಕಡಿವಾಣ ಹಾಕಲು ಉತ್ಸುಕರಾದಂತೆ ಕಾಣ್ತಿದಾರೆ. ಇವ್ರು ಗಟ್ಟಿ ಹೆಜ್ಜೆ ಇಟ್ಟು ಬಂದ ಕಡೆಯಲ್ಲೇಲ್ಲಾ ಇವ್ರ ಪರವಾಗಿ ಒಂದಿಷ್ಟು ಒಳ್ಳೆಯ ಮಾತುಗಳೇ ಕೇಳಿ ಬರ್ತಿವೆ. ಆದ್ರೆ, ಮುಂದೆ ಏನಿದೆಯೋ ನಂಗಂತೂ ಗೊತ್ತಿಲ್ಲ. ನಮ್ಮ ಕ್ರೈಂ ಟೀಂ..! ಅಸಲು, ಮುಂಡಗೋಡ ಠಾಣೆಯ ಪಡಸಾಲೆಗೆ ಹೆಜ್ಜೆ ಇಟ್ಟ ಗಳಿಗೆಯಿಂದಲೇ ಕ್ರೈಂ ಟೀಂ ನ್ನು ಬಡಿದೆಬ್ಬಿಸಿರೋ ವಿನೋದ್ ರೆಡ್ಡಿ, ಒಂದಿಷ್ಟು ನಿರೀಕ್ಷೆ ಹುಟ್ಟುವಂತೆ ಮಾಡಿರೋದು ಸತ್ಯ. ಆದ್ರೆ, ಮುಂಡಗೋಡಿನಲ್ಲಿ ಕಳೆದ ಕೆಲ ವರ್ಷಗಳಿಂದಲೇ ಕಣ್ಣಿದ್ದರೂ ಕುರುಡು, ಕಾಲಿದ್ದರೂ ನಡೆಯಲು ಆಗದ ಸ್ಥಿತಿಯಲ್ಲಿರೋ ಕ್ರೈಂ ಟೀಂ ಗೆ ಗಟ್ಟಿಯಾಗಿ ಬೆನ್ನು ತಟ್ಟುವ ಕೈಗಳ ಕೊರತೆ ಇತ್ತು....
ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ಪ್ರಶಸ್ತಿ
ಕಾರವಾರ: ಕಾರವಾರ ಅಂಚೆ ವಿಭಾಗಕ್ಕೆ ಕರ್ನಾಟಕ ರಾಜ್ಯ ವೃತ್ತ ಮಟ್ಟದ ನಾಲ್ಕು ಪ್ರಶಸ್ತಿಗಳು ಲಭಿಸಿವೆ ಎಂದು ಕಾರವಾರ ವಿಭಾಗದ ಅಂಚೆ ಅಧೀಕ್ಷಕ ಧನಂಜಯ ಆಚಾರ್ಯ ರವರು ಹರ್ಷ ವ್ಯಕ್ತಪಡಿಸಿದ್ದಾರೆ. 2024-25 ಆರ್ಥಿಕ ವರ್ಷದಲ್ಲಿ ನಿವ್ವಳ ಖಾತೆಗಳ ಸಂಖ್ಯೆಯ ವಿಭಾಗದಲ್ಲಿ ಹಾಗೂ ಅಂಚೆ ಉಳಿತಾಯ ಯೋಜನೆಯ ವಿವಿಧ ಹೊಸ ಖಾತೆಯನ್ನು ತೆರೆಯುವ ವಿಭಾಗದಲ್ಲಿ ಕಾರವಾರ ಅಂಚೆ ವಿಭಾಗ ದ್ವಿತೀಯ ಪ್ರಶಸ್ತಿ ಪಡೆದುಕೊಂಡಿದೆ. ಅಂಚೆ ಕಚೇರಿ ಉಳಿತಾಯ ಯೋಜನೆಯ ವಿವಿಧ ಹೊಸ ಖಾತೆಗಳನ್ನು ತೆರೆಯುವ ಉಪ ಅಂಚೆ ಕಚೇರಿಗಳ ವಿಭಾಗದಲ್ಲಿ ಹೊನ್ನಾವರ ಅಂಚೆ ಕಚೇರಿಯ ಅಂಚೆ ಪಾಲಕ ಎಮ್.ಎಸ್. ಗೊಂಡ ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕಳೆದ ಆರ್ಥಿಕ ವರ್ಷದಲ್ಲಿ ಕಾರವಾರ ವಿಭಾಗಕ್ಕೆ ಒಟ್ಟು 39,872 ಸಣ್ಣ ಉಳಿತಾಯ ಯೋಜನೆಗಳ ಖಾತೆಗಳನ್ನು ತೆರೆಯುವ ಗುರಿಗಳನ್ನು ನೀಡಲಾಗಿದ್ದು, ಎಲ್ಲಾ ಅಂಚೆ ಸಿಬ್ಬಂದಿಗಳ ಅವಿರತ ಪರಿಶ್ರಮದಿಂದ 88,331 ಸಣ್ಣ ಉಳಿತಾಯ ಖಾತೆಗಳನ್ನು ತೆರೆದು ಗುರಿಯನ್ನು ದಾಟಿ ಶೇಕಡಾ 221.54% ಗುರಿ ಸಾಧಿಸಿ ಕರ್ನಾಟಕ ವೃತ್ತ ಮಟ್ಟದಲ್ಲಿ ದ್ವಿತೀಯ...