ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.99.91 ರಷ್ಟು ಸಾಧನೆ ಮಾಡಿದ್ದು, ಇದುವರೆಗೆ 1095.03 ಕೋಟಿ ರೂ ಗಳನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ಮಹಿಳೆಯನ್ನು ಕುಟುಂಬದ ಯಜಮಾನಿ ಎಂದು ನಮೂದಿಸಿರುವ 3,61,481 ಪಡಿತರ ಚೀಟಿಗಳಿದ್ದು, ಅವುಗಳಲ್ಲಿ ತೆರಿಗೆ ಪಾವತಿದಾರರು, ಮರಣ ಹೊಂದಿರುವವರು, ಯೋಜನೆ ನಿರಾಕರಿಸಿರುವವರು, ವಲಸೆ ಹೋಗಿರುವ ಕಾರಣದಿಂದ 25,676 ಮಂದಿ ಗೃಹಲಕ್ಷ್ಮೀ ಯೋಜನೆಗೆ ಅನರ್ಹರಾಗಿದ್ದು , ಬಾಕಿ ಉಳಿದ ಅರ್ಹ 3,35,805 ಪಡಿತರ ಚೀಟಿಗಳಲ್ಲಿ 3,35,498 ಮಂದಿಯನ್ನು ಯೋಜನೆಗೆ ಯಶಸ್ವಿಯಾಗಿ ನೋಂದಾಯಿಸಿ ಶೇ.99.91 ಸಾಧನೆ ಮಾಡಲಾಗಿದೆ. ಐ.ಪಿ.ಎಲ್ ಬೆಟ್ಟಿಂಗ್ ಕಟ್ಟುನಿಟ್ಟಾಗಿ ನಿಯಂತ್ರಿಸಿ, ಮಟ್ಕಾ ದಂಧೆ ಹಾವಳಿ ಬಂದ್ ಮಾಡಿಸಿ- ಪೊಲೀಸ್ ಅಧಿಕಾರಿಗಳಿಗೆ ಡೀಸಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..! ಗೃಹಲಕ್ಷ್ಮಿ ಯೋಜನೆಗೆ ಅನರ್ಹರಾಗಿರುವವರಲ್ಲಿ 10,377 ಮಂದಿ ಆದಾಯ ತೆರಗೆ ಮತ್ತು ಜಿ.ಎಸ್.ಟಿ ಪಾವತಿದಾರರು, 4875 ಮಂದಿ ಮರಣ ಹೊಂದಿರುವವರು, 7503 ಮಂದಿ ವಲಸೆ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ಗೋಕರ್ಣದಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆ : ಎಸ್ಪಿ ನಾರಾಯಣ್
ಕಾರವಾರ: ಗೋಕರ್ಣ ಪ್ರವಾಸಿ ತಾಣದಲ್ಲಿ ಸಾರ್ವಜನಿಕರ ಮತ್ತು ಪ್ರವಾಸಿಗರ ಸೂಕ್ತ ರಕ್ಷಣೆಗೆ ಮತ್ತು ಇಲ್ಲಿ ಯಾವುದೇ ಅಪರಾಧ ಪ್ರಕ್ರಿಯೆ ನಡೆಯದಂತೆ ತಡೆಗಟ್ಟುವ ಉದ್ದೇಶದಿಂದ ಈ ಹಿಂದೆ ಇದ್ದ ಸಿಸಿ ಕ್ಯಾಮೆರಾ ಜೊತೆ ಇನ್ನೂ ಹೆಚ್ಚು ಸಿಸಿ ಕ್ಯಾಮೆರಾ ಅಳವಡಿಸಿ ಡಿಜಿಟಲ್ ಪೊಲೀಸ್ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಎಂ. ನಾರಾಯಣ್ ಹೇಳಿದರು. ಅವರು ಬುಧವಾರ ಗೋಕರ್ಣದಲ್ಲಿ , ಸಾರ್ವಜನಿಕರ ಮತ್ತು ಪ್ರವಾಸಿಗರ ಸುರಕ್ಷತೆ ಹಾಗೂ ಜಾಗೃತಿಗಾಗಿ ಪೊಲೀಸ್ ಮಾಹಿತಿ ಕೇಂದ್ರ, ಸಿಸಿ ಕ್ಯಾಮರಾಗಳು, ಜಾಗೃತಿ ಫಲಕಗಳು ಹಾಗೂ ಪೊಲೀಸ್ ಚೌಕಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ ಗೋಕರ್ಣವು ನೈಸರ್ಗಿಕ ಕಡಲ ತೀರಗಳು, ಕಡಿಮೆ ಜೀವನದ ವೆಚ್ಚ, ರಮಣೀಯ ಪರಿಸರ ವೈವಿದ್ಯಮಯವನ್ನು ಹೊಂದಿದ್ದು, ಪ್ರವಾಸಿಗರ ನೆಚ್ಚಿನ ಪ್ರವಾಸಿ ತಾಣವಾಗಿದೆ. ಇಲ್ಲಿಗೆ ಪ್ರತಿ ವಷÀð 1.5 ಲಕ್ಷ ಪ್ರವಾಸಿಗರು ಆಗಮಿಸುತ್ತಾರೆ ಮತ್ತು 8 ರಿಂದ 10 ವಿದೇಶಿಗರು ಪ್ರತಿ...
ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ
ಕಾರವಾರ: ಸಾರ್ವಜನಿಕರ ಕುಂದು ಕೊರತೆ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿ ಆಲಿಸಿ ಸೂಕ್ತ ಪರಿಹಾರವನ್ನು ಒದಗಿಸಲು, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಮೇ 17 ರಂದು ಬೆಳಗ್ಗೆ 10 ಗಂಟೆಗೆ ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಜಿಲ್ಲಾ ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದು, ಜಿಲ್ಲೆಯ ಸಾರ್ವಜನಿಕರು ತಮ್ಮ ಕುಂದು ಕೊರತೆಗಳಿದ್ದಲ್ಲಿ ಈ ಕಾರ್ಯಕ್ರಮದಲ್ಲಿ ಪರಿಹಾರ ಪಡೆದುಕೊಳ್ಳಬಹುದಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಮೇ.17 ರಂದು ಭಟ್ಕಳದಲ್ಲಿ ಜಿಲ್ಲಾಮಟ್ಟದ ಜನಸ್ಪಂಧನ ಕಾರ್ಯಕ್ರಮ: ಕಾರ್ಯಕ್ರಮದ ಪ್ರಯೋಜನ ಪಡೆಯಿರಿ- ಜಿಲ್ಲಾಧಿಕಾರಿ ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಅಲೆಮಾರಿ/ ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ- ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಕಾರವಾರ- ಜಿಲ್ಲೆಯಲ್ಲಿರುವ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತಂತೆ ಆ ಕಾಲೋನಿಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಅಗತ್ಯವಿರುವ ಮೂಲ ಸೌಕರ್ಯಗಳ ಕುರಿತು ವರದಿ ನೀಡುವಂತೆ ತಿಳಿಸಿದ ಅವರು, ಈ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು ಒದಗಿಸುವ ಕುರಿತು ಆದ್ಯತೆಯಲ್ಲಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!...
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!
ಮುಂಡಗೋಡ ತಾಲೂಕಿನ ಹನಮಾಪುರ ಗ್ರಾಮದಲ್ಲಿ ದೇವಸ್ಥಾನ ಶೆಡ್ಡ್ ತೆರವುಗೊಳಿಸುವ ಸಲುವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಣೇಶ ಬಸಲಿಂಗಪ್ಪ ಸುಣಗಾರ ಎಂಬುವ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ ಅನ್ನೊ ಆರೋಪ ಕೇಳಿ ಬಂದಿದೆ. ಸದ್ಯ ತಾಲೂಕಾಸ್ಪತ್ರೆಗೆ ದಾಖಲಾಗಿ ಹಲ್ಲೆಗೊಳಗಾದವ ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಹನುಮಾಪುರ ಗ್ರಾಮದ ಜನರೇಲ್ಲ ಸೇರಿ, ಗ್ರಾಮದ ಮಾಸ್ತಿ ಗುಡಿಯ ಹತ್ತಿರ ಇದ್ದ, ಬಸವಣ್ಣನ ಮೂರ್ತಿ ಯನ್ನು ಸ್ಥಳಾಂತರ ಮಾಡಿದ್ದರು. ಹೀಗಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಗ್ರಾಮಸ್ಥರು ಹಾಗೂ ಅದೊಂದು ಕುಟುಂಬದ ನಡುವೆ ಗಲಾಟೆ ನಡೆದಿದೆ. ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..! ಇದೆ ವೇಳೆ ನನ್ನ ಮೇಲೂ ಹಲ್ಲೆ ನಡೆದಿದೆ, ಅಲ್ದೆ ಜೀವ ಬೆದರಿಕೆ ಹಾಕಿದ್ದಾರೆ ಅಂತಾ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆಗೆ ದಾಖಲಾಗಿರೊ ಹಲ್ಲೆಗೊಳಗಾದವ ಆರೋಪಿಸಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು...
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಉಪ ಚುನಾವಣೆ ಘೋಷಣೆ ಆಗ್ತಿದ್ದಂತೆ, ಚುನಾವಣಾ ಪ್ರಕ್ರಿಯೆಗಳು ಜಾರಿಯಾಗಿವೆ. ಅಗಡಿಯ ವಾರ್ಡ್ ನಂಬರ್ 2 ರ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಇವತ್ತು ಬುಧವಾರ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಹೀಗಾಗಿ, ಬಹುತೇಕ ಅವಿರೋಧ ಆಯ್ಕೆಯಾಗುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. ಅಂದಹಾಗೆ, ಸದ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮೀ ಹನಮಂತ ಲಮಾಣಿ ನಾಮಪತ್ರ ಸಲ್ಲಿಸಿದ್ದು, ಇವ್ರೇ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ ಎಲ್ಲಾ ಲಕ್ಷಣಗಳು ಇದ್ದು, ಅವಿರೋಧವಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಇಲ್ಲಿನ ಮುಖಂಡರ ಸತತ ಪ್ರಯತ್ನ ಫಲಕೊಟ್ಟಿದೆ ಎನ್ನಲಾಗಿದೆ. ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..! ಶಾಕಸ ಶಿವರಾಮ್ ಹೆಬ್ಬಾರರ ಮಾರ್ಗದರ್ಶನದಲ್ಲಿ ಸ್ಥಳೀಯ ಮುಖಂಡರಾದ ಎಚ್. ಎಂ.ನಾಯ್ಕ್, ಯುವ ಮುಖಂಡ ಬಸವರಾಜ್ ಆಸ್ತಕಟ್ಟಿ, ಗ್ರಾಮ ಪಂಚಾಯತಿ ಅಧ್ಯಕ್ಷ ಷರೀಪಸಿಂಗ್ ಸಿಗ್ಗಟ್ಟಿ, ಸದಸ್ಯರಾದ ಸಿದ್ದನಗೌಡ ಪಾಟೀಲ, ತುಕಾರಾಮ್ ಹೊನ್ನಳ್ಳಿ, ಈಶ್ವರಗೌಡ...
ಮುಂಗಾರಿನ ಮಳೆಗಾಲದಲ್ಲಿ ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಸಿಡಿಲಿನಿಂದ ರಕ್ಷಿಸಿಕೊಳ್ಳಿ..!
ಸಾಮ್ಯಾನವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಗುಡುಗು-ಸಿಡಿಲು ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮ್ಯಾನವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹಚ್ಚಾಗಿರುತ್ತದೆ. ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಕೊಳ್ಳುವ ಮೂಲಕ ಸಿಡಿಲಿನಿಂದ ರಕ್ಷಿಸಿಕೊಳ್ಳಬಹುದಾಗಿದೆ ಗುಡುಗು-ಸಿಡಿಲಿ ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು: • ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting protocol (CAP) ಮುಖಾಂತರ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು. • ಪ್ರತಿಕೂಲ ಹವಾಮಾನ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮ್ಯಾನ ಪ್ರಯಾಣಕ್ಕಾಗಿ ಹೊರಗೆ ಹೋಗದಿರುವುದು. • ಗುಡುಗು-ಸಿಡಿಲಿ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ,ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು. • ಬೆಟ್ಟಗಳು,ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು. • ನೀರಿನ ಮೂಲಗಳಾದ ಕೆರೆ ಮತ್ತು...
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!
ಕಾರವಾರ: ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಶ್ಯಾಮ ಪ್ರಸಾದ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ ಶಿಬರವನ್ನು ಉದ್ಘಾಟಿಸಿ ಮಾತನಾಡಿದರು. ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..! ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ಸೃಜನಾತ್ಮಕ ಕಲೆಯನ್ನು ವೃದ್ಧಿಸಲು ಇಂತಹ ಶಿಬಿರಗಳು ಸಹಾಯವಾಗಲಿದೆ. ಮಕ್ಕಳಿಗೆ ಆಟ-ಪಾಠಗಳ ಜೊತೆಗೆ ನೃತ್ಯ, ಸಾಂಸ್ಕೃತಿಕ ಕಲೆ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಇಂತಹ ಶಿಬಿರಗಳು ಮೂಲ ಪ್ರೇರಣೆಯಾಗುತ್ತವೆ. ಮಕ್ಕಳ ಬೌದ್ಧಿಕ ವಿಕಾಸದೊಂದಿಗೆ ಭವಿಷ್ಯದ ಜೀವನಕ್ಕೆ ಮಾದರಿಯಾಗುತ್ತದೆ. ಮಕ್ಕಳು ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದರು....
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!
ಕಾರವಾರ ಜಿಲ್ಲೆಯಲ್ಲಿ ಸಂಭವಿಸುವ ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ಸೇರಿದಂತೆ ಎಲ್ಲಾ ತುರ್ತು ಸಂದರ್ಭಗಳಲ್ಲಿ ಗಾಯಾಳು ಸಂತ್ರಸ್ಥರಿಗೆ ವೈದ್ಯಕೀಯ ಸೇವೆ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ಸದಾ ಸನ್ನದ್ದ ಸ್ಥಿತಿಯಲ್ಲಿರುವಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಮಂಗಳವಾರ ಕ್ರಿಮ್ಸ್ ನಲ್ಲಿ, ಪೊಲೀಸ್ ಇಲಾಖೆ , ಕೊಂಕಣ ರೈಲ್ವೆ, ಜಿಲ್ಲಾ ವಿಪ್ತು ನಿರ್ವಹಣಾ ಪ್ರಾಧಿಕಾರ, ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ತೇಜಸ್ ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ವಿಪತ್ತು ನಿರ್ವಹಣಾ ವಿಭಾಗ ಕರ್ಸ್ತೂಬಾ ಮೆಡಿಕಲ್ ಕಾಲೇಜು ಮಣಿಪಾಲ , ಕೈಗಾ , ಗ್ರಾಸಿಂ ಹಾಗೂ ಕಾರವಾರ ಮೆಡಿಕಲ್ ಕಾಲೇಜು ಸಹಯೋಗದಲ್ಲಿ ನಡೆದ , ವಿಪತ್ತು ಸಂದರ್ಭದಲ್ಲಿ ತುರ್ತು ವೈದ್ಯಕೀಯ ನೆರವು ಒದಗಿಸುವ ಕುರಿತ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..! ಜಿಲ್ಲೆಯಲ್ಲಿ ಅನೇಕ ಸೂಕ್ಷ್ಮ ಸ್ಥಳಗಳಿದ್ದು ಮಳೆಗಾಲದ ಸಂದರ್ಭದಲ್ಲಿ...
CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!
ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತಪಡಿಸಿದೆ. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದಿದ್ದಾನೆ. ಐಶ್ವರ್ಯ ವೇರ್ಣೇಕರ್-88.2%, ಮುಹಮ್ಮದ್ ಫಾಝಿಲ್- 87.6%, ದಿಶಾ ಜಾಲಗಾರ್-85.4%, ರಾಘವೇಂದ್ರ ಕಲಾಲ್ -83%, ಆದಿತ್ಯ ಚವಾಣ್- 82.2% ಕ್ರಮವಾಗಿ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಒಟ್ಟು, SSLC CBSE ಪರೀಕ್ಷೆ ಬರೆದೆ 42 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಶೇಕಡಾ 75 ರಷ್ಟು ಅಂಕದೊಂದಿಗೆ15 ವಿದ್ಯಾರ್ಥಿಗಳು, ಶೆಕಡಾ 60 ರಷ್ಟು ಅಂಕಗಳೊಂದಿಗೆ 14 ವಿದ್ಯಾರ್ಥಿಗಳು, ಶೇಕಡಾ 50...









