ಮುಂಡಗೋಡ ಬಿಜೆಪಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಹಾಗೂ ಎಪ್ರೀಲ್ 29 ರಂದು ಅಂಕೋಲದಲ್ಲಿ ನಡೆಯುವ ಯುವಶಕ್ತಿ ಸಮಾವೇಶದಲ್ಲಿ ಭಾಗಿಯಾಗುವ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು. ಈ ವೇಳೆ ಮುಂಡಗೋಡ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ ಕುಮಾರ್ ನಾಯ್ಕ್, ನಿಕಟಪೂರ್ವ ರೈತ ಮೋರ್ಚಾ ಅಧ್ಯಕ್ಷ ಮಹೇಶ ಹೊಸಕೊಪ್ಪ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಟಣಕೇದಾರ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ವಿಠ್ಠಲ ಬಾಳಂಬಿಡ ಹಾಗೂ ಭರತ್ ರಾಜ್ ಹದಳಗಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಕೆದಾರಿ ಮುಗಳಿ ಹಾಗೂ ಮಂಜುನಾಥ ರೇವಣಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Top Stories
ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?
ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
ಮುಂಡಗೋಡ ಚುನಾವಣಾ ಚೆಕ್ ಪೋಸ್ಟ್ ಗಳಲ್ಲಿ ಸೌಕರ್ಯಗಳೇ ಇಲ್ಲ..! ರಣ ಬಿಸಿಲಲ್ಲೇ ಬಸವಳಿತಿದ್ದಾರೆ ಸಿಬ್ಬಂದಿಗಳು..!!
ಮುಂಡಗೋಡ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಅದ್ರಂತೆ ಮತದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನೂ ಅಧಿಕಾರಿಗಳು ಮಾಡಿಕೊಳ್ತಿದಾರೆ. ಚುನಾವಣಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಕಾರ್ಯಗಳೂ ನಡಿತಿವೆ. ಅದರ ಭಾಗವಾಗಿ, ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಾಲೂಕಿನ ಎಲ್ಲಾ ಗಡಿಗಳಲ್ಲೂ ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಆದ್ರೆ, ಹಾಗೆ ತೆರೆಯಲಾಗಿರೋ ಚೆಕ್ ಪೊಸ್ಟ್ ಗಳು ಬಹುತೇಕ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸ್ತಿವೆ. ರಣ ಬಿಸಿಲಲ್ಲೇ ಕರ್ತವ್ಯ..! ಅಂದಹಾಗೆ, ತಾಲೂಕಿನ ಗಡಿಗಳಲ್ಲಿ ತೆರೆಯಲಾಗಿರೊ ಚೆಕ್ ಪೊಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸೋದೇ ಕಷ್ಟಕರವಾಗಿದೆ. ಮೊದಲೆ ಬೇಸಿಗೆಯ ರಣ ಬಿಸಿಲಿದೆ. ಅದ್ರಲ್ಲೇ ಇಲ್ಲಿನ ಸಿಬ್ಬಂದಿಗಳು ಬಸವಳಿದು ಹೋಗ್ತಿದಾರೆ. ಆ್ಯಟಲಿಸ್ಟ್ ತಾತ್ಕಾಲಿಕ ಟೆಂಟ್ ನಿರ್ಮಿಸೋ ಕಾಮೆನ್ ಸೆನ್ಸ್ ಕೂಡ ಇಲ್ಲಿನ ಹಿರಿಯ ಅಧಿಕಾರಿಗಳಿಗೆ ಬಂದೇ ಇಲ್ಲ. ಹೀಗಾಗಿ, ಸಿಬ್ಬಂದಿಗಳು ಹಿಡಿಶಾಪ ಹಾಕುತ್ತಲೇ ಬಿಸಿಲಲ್ಲಿ ಒಣಗಿ ಹೋಗ್ತಿದಾರೆ. ಎಸಿ ರೂಮಲ್ಲಿರೋರಿಗೆ ಅರ್ಥವಾಗಿಲ್ಲ..! ಅಸಲು, ತಾಲೂಕಿನ ಚೆಕ್ ಪೊಸ್ಟ್ ಗಳಲ್ಲಿ ಕಾರ್ಯನಿರ್ವಹಿಸ್ತಿರೋ ಸಿಬ್ಬಂದಿಗಳು ಹೈರಾಣಾಗಿದ್ದಾರೆ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಛತ್ರಿಗಳನ್ನೇ ಬಳಸಿಕೊಳ್ತಿದಾರೆ. ನಿಜ...
ಶ್ರೀರಾಮಸೇನೆ, ಹಿಂದು ಜಾಗರಣ ವೇದಿಕೆಯಿಂದ ಮುಂಡಗೋಡಿನಲ್ಲಿ “ಶ್ರೀರಾಮ ನವಮಿ”
ಮುಂಡಗೋಡ: ಶ್ರೀರಾಮ ನವಮಿಯ ನಿಮಿತ್ತ ಶ್ರೀರಾಮ ಸೇನೆ ಮತ್ತು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಪ್ರಭು ಶ್ರೀರಾಮಚಂದ್ರರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾರ್ಯಕರ್ತರು, ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಘೋಷ ಮೊಳಗಿಸಿದ್ರು.
ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿಗೂ ಗುಡ್ ಬೈ ಹೇಳಿದ ಪ್ರಭಾವಿ ಮುಖಂಡ..!
ಕೊಪ್ಪಳ: ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕೊನೆಗೂ ಬಿಜೆಪಿ ಸಂಸದ ಕರಡಿ ಸಂಗಣ್ಣ, ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ದೆ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಗೆ ಸಂಸದ ಸ್ಥಾನಕ್ಕೆ ಮೇಲ್ ಮೂಲಕ ರಾಜೀನಾಮೆ ಸಲ್ಲಿಸಿದ ಕರಡಿ ಸಂಗಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹುತೇಕ ಕರಡಿ ಸಂಗಣ್ಣ ನಾಳೆ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ನಿಚ್ಚಳವಾಗಿದೆ. ಈಗಾಗಲೇ ಸಿಎಂ, ಡಿಸಿಎಂ ಜೊತೆಗೆ ಮಾತುಕತೆ ನಡೆಸಿರುವ ಕರಡಿ ಸಂಗಣ್ಣ, ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ. ನಿನ್ನೆ ಕರಡಿ ಸಂಗಣ್ಣ ನಿವಾಸಕ್ಕೆ ಶಾಸಕ ಲಕ್ಷ್ಮಣ ಸವದಿ ಭೇಟಿ ನೀಡಿ ಚರ್ಚಿಸಿದ್ದರು. ಅದ್ರಂತೆ ಇಂದು ಕರಡಿ ಸಂಗಣ್ಣ ನಿವಾಸಕ್ಕೆ ಕೊಪ್ಪಳ ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಕೂಡ ಭೇಟಿ ನೀಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರ್ಪಡೆ ಸಲುವಾಗಿನೇ ಕರಡಿ ಸಂಗಣ್ಣರವರು ಬೆಂಗಳೂರಿಗೆ ತೆರಳಿದ್ದಾರೆ ಅನ್ನೊಇ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಕಾರವಾರ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸೇರಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು, ಕಾರವಾರದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದ ಡಾ. ಅಂಜಲಿ, ನಾಮಪತ್ರವನ್ನು ಸಿದ್ದಿವಿನಾಯಕನ ಮುಂದೆ ಇಟ್ಟು ಸಂಕಲ್ಪ ಮಾಡಿಕೊಂಡು ಪೂಜೆ ಸಲ್ಲಿಸಿದ್ರು. ಇನ್ನು ಮತ್ತೊಮ್ಮೆ ಕಾರವಾರದ ಮಾಲಾದೇವಿ ಮೈದಾನದಿಂದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಸಲ್ಲಿಸಲಿದ್ದಾರೆ.
ಉತ್ತರ ಕನ್ನಡದಲ್ಲಿ ಇಂದು 3 ನಾಮಪತ್ರ ಸಲ್ಲಿಕೆ, ಮುಂಡಗೋಡಿನ ಚಿದಾನಂದ ಹರಿಜನ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಎರಡನೇ ದಿನವಾದ ಇಂದು, ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಕ್ಷೇತರ ಅಭ್ಯರ್ಥಿಗಳಾದ ಚಿದಾನಂದ ಹೆಚ್ ಹರಿಜನ, ಕೃಷ್ಣಾಜಿ ಪಾಟೀಲ್, ನಿರಂಜನ್ ಉದಯಸಿನ್ಹಾ ಸರ್ದೇಸಾಯಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇದ್ರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 7 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರಗಳ ಪರಿಶೀಲನೆ, 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 7 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
ಮುಂಡಗೋಡ ಬಿಜೆಪಿಗೆ ನೂತನ ಪದಾಧಿಕಾರಿಗಳ ಆಯ್ಕೆ, ಯಾರ್ಯಾರು ಗೊತ್ತಾ..?
ವಿವೇಕ್ ಹೆಬ್ಬಾರ್ ಬಳಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂತರ ಮುಂಡಗೋಡ ಬಿಜೆಪಿ ಮೈಕೊಡವಿ ಎದ್ದಿದೆ. ಒಂದಿಷ್ಟು ಯುವಕರ ಪಡೆ ಸ್ಥಳೀಯ ಬಿಜೆಪಿಯನ್ನ ಬಲಿಷ್ಟಗೊಳಿಸಲು, ಇನ್ನಿಲ್ಲದ ಕಾರ್ಯತಂತ್ರ ರೂಪಿಸುತ್ತಿದೆ. ಮಂಡಲಾಧ್ಯಕ್ಷ ಮಂಜುನಾಥ ಪಾಟೀಲ್ ನೇತೃತ್ವದಲ್ಲಿ ಇಡೀ ತಾಲೂಕಿನ ಬೂತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ನೂತನ ಪದಾಧಿಕಾರಿಗಳ ಆಯ್ಕೆ..! ಅಂದಹಾಗೆ, ಬಿಜೆಪಿ ತೊರೆದು ಕೈ ಪಡೆಗೆ ಜಿಗಿದ ಹಲವು ಬಿಜೆಪಿ ಪದಾಧಿಕಾರಿಗಳಿಂದ ತೆರವಾದ ಸ್ಥಾನಗಳಿಗೆ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಮುಂಡಗೋಡಿನಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರುಗಳು ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇವ್ರು ಬಿಜೆಪಿ ಹೊಸ ಪದಾಧಿಕಾರಿಗಳು..! ಮುಂಡಗೋಡ ಬಿಜೆಪಿ ಮಂಡಲದ ಉಪಾಧ್ಯಕ್ಷರನ್ನಾಗಿ, ಮಂಜುನಾಥ ಹರ್ಮಲ್ಕರ್, ರವಿ ಕಲಘಟಗಿ, ಸುಭಾಷ ಲಮಾಣಿ ನೇಮಕಗೊಂಡಿದ್ದಾರೆ. ಇನ್ನು ಕಾರ್ಯದರ್ಶಿಯಾಗಿ ಶ್ರೀಮತಿ ತೃಪ್ತಿ ಭಜಂತ್ರಿ ಯವರನ್ನು ಆಯ್ಕೆ ಮಾಡಲಾಗಿದೆ. ಮಹಾಶಕ್ತಿಕೇಂದ್ರ ಅಧ್ಯಕ್ಷರುಗಳು..! ಮುಂಡಗೋಡ ತಾಲೂಕಿನ ಬಿಜೆಪಿ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷರನ್ನು ನೂತನವಾಗಿ ಆಯ್ಕೆ ಮಾಡಲಾಗಿದೆ. ಅದ್ರಂತೆ, ಚಿಗಳ್ಳಿ ಮಹಾಶಕ್ತಿ ಕೇಂದ್ರಕ್ಕೆ, ಸಂತೋಷ್ ಅಂತೋಜಿ,...
ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ ನಿಧನ..!
ಮುಂಡಗೋಡ: ಪಟ್ಟಣದಲ್ಲಿ ಹೊಟೇಲ್ ನಡೆಸುತ್ತಿದ್ದ ಕೊಪ್ಪ ಗ್ರಾಮದ ಮೋಹನ್ ಪಾಣತ್ರಿಯಲ್ (68) ದೈವಾಧೀನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮೋಹನ್ ರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗಿನ ಜಾವ ಕೊನೆ ಉಸಿರೆಳೆದಿದ್ದಾರೆ. ಮೃತರು ಪತ್ನಿ, 7 ಜನ ಗಂಡು ಮಕ್ಕಳು, ಅಣ್ಣ ತಮ್ಮಂದಿರು, ಸಹೋದರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ..! ಸಲೈನ್ ಹಚ್ಚಿಕೊಂಡೇ ಪ್ರಚಾರಕ್ಕಿಳಿದಿರೋ ಕೈ ಅಭ್ಯರ್ಥಿ..!!
ಕುಮಟಾ: ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಪ್ರಚಾರದಲ್ಲಿರುವ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್, ಅನಾರೋಗ್ಯದ ನಡುವೆಯೂ ಪ್ರಚಾರ ಮುಂದುವರಿಸಿ ಕಾರ್ಯಕರ್ತರ ಹುರುಪು ಹೆಚ್ಚಿಸಿದ್ದಾರೆ. ಕಾಂಗ್ರೆಸ್ನಿಂದ ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಪ್ರಚಾರಕ್ಕೆ ಇಳಿದಿದ್ದ ಡಾ.ಅಂಜಲಿ ನಿಂಬಾಳ್ಕರ್, ಈಗಾಗಲೇ ಬ್ಲಾಕ್ ಮಟ್ಟದ ಸಭೆಗಳನ್ನ ಪೂರ್ಣಗೊಳಿಸಿ ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಸಭೆಗಳನ್ನ ನಡೆಸುತ್ತಿದ್ದಾರೆ. ಸತತವಾಗಿ ವಿರಾಮವಿಲ್ಲದೆ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಅವರಿಗೆ ಕೊಂಚ ಆರೋಗ್ಯದಲ್ಲಿ ಏರುಪೇರಾಗಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ವೈದ್ಯಕೀಯ ತಪಾಸಣೆಗೆ ಒಳಗಾಗಿ ವೈದ್ಯಕೀಯ ಉಪಚಾರ ಪಡೆದಿರುವ ಅವರು, ವಾಸ್ತವ್ಯ ಹೂಡುವ ಸ್ಥಳದಲ್ಲೇ ಸಲೈನ್ (ಡ್ರಿಪ್ಸ್) ಹಚ್ಚಿಕೊಂಡು ಪ್ರಚಾರ ಕಾರ್ಯಗಳನ್ನ ಮುಂದುವರಿಸಿದ್ದಾರೆ. ಕೈನಲ್ಲಿ ಸಲೈನ್ನ ಕ್ಯಾನುಲಾ (ಸೂಜಿ) ಇಟ್ಟುಕೊಂಡೇ ಕ್ಷೇತ್ರದಲ್ಲಿ ಪ್ರಚಾರಕ್ಕಿಳಿದಿರುವ ಡಾ.ಅಂಜಲಿಯವರ ಬದ್ಧತೆ ಕಾರ್ಯಕರ್ತರಲ್ಲೂ ಹುರುಪು ತಂದಿದೆ. ಕೆಲವೆಡೆ ಕಾರ್ಯಕರ್ತರೇ ‘ತಾವು ವಿಶ್ರಾಂತಿ ಪಡೆಯಿರಿ. ತಮಗಾಗಿ ನಾವು ಪ್ರಚಾರ ನಡೆಸುತ್ತೇವೆ’ ಎನ್ನುತ್ತಿದ್ದಾರೆ. ‘ನನ್ನ ಜನರಿಗಾಗಿ ಈ ಚುನಾವಣೆ ನಡೆಯುತ್ತಿದೆ. ನನ್ನೆಲ್ಲ ಕಾರ್ಯಕರ್ತರು, ನಾಯಕರು ನಮಗಾಗಿ ದುಡಿಯುತ್ತಿರುವಾಗ...
ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ, ಸಿಡಿಲು ಬಡಿದು 5 ಹಸುಗಳು ದಾರುಣ ಸಾವು..!
ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಕಲಕೊಪ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಮೊದಲ ದಿನದ ಮಳೆಯಲ್ಲೇ ಐದು ಹಸುಗಳು ದಾರುಣ ಸಾವು ಕಂಡಿವೆ. ಸಿಡಿಲು ಬಡಿದು ಗದ್ದೆಯಲ್ಲಿದ್ದ 5 ಹಸುಗಳು ಮೃತಪಟ್ಟಿವೆ. ಪಾಳಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲಕೊಪ್ಪ ಗ್ರಾಮದ ಪಕ್ಕೀರ ಗೌಡ ಕಡಬಗೇರಿ ಎಂಬುವವರ ಐದು ಹಸುಗಳು ಗದ್ದೆಯಲ್ಲಿ ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿವೆ. ಇಂದು ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಲ್ಲಿ ಸಿಡಿಲ ಅರ್ಭಟದಿಂದ ಅನಾಹುತ ಸಂಭವಿಸಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









