ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ನಿತ್ಯವೂ ಶಾಲಾ, ಕಾಲೇಜಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್ ಬಾರದ ಹಿನ್ನೆಲೆ ಸುಮಾರು 3 ತಾಸಿಗೂ ಹೆಚ್ಚು ಕಾಲ ಬಸ್ ತಡೆದು ಪ್ರತಿಭಟಿಸಿದ್ದಾರೆ. ಸೋಮವಾರ ಮುಂಜಾನೆ 7 ಗಂಟೆಯಿಂದ ಬಸ್ ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಯಾವೊಂದು ಬಸ್ಸೂ ಕೂಡ ಸಮಯಕ್ಕೆ ಸರಿಯಾಗಿ ಬರುವುದೇ ಇಲ್ಲ. ಹೀಗಾಗಿ, ನಿತ್ಯವೂ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಪರದಾಡುವಂತಾಗುತ್ತದೆ. ಕೆಲವು ಸಾರಿ ಸಮಯ ಮೀರಿ ಕಾಲೆಜುಗಳಿಗೆ ವಿದ್ಯಾರ್ಥಿಗಳು ಹೋಗದೇ ಮನೆಯಲ್ಲೇ ಉಳಿಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ, ಕೂಡಲೆ ಸಂಬಂಧಪಟ್ಟ ಅಧಿಕಾರಿಗಳು ಬಸ್ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
Top Stories
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಸಮಯಕ್ಕೆ ಬಾರದ ಬಸ್ ಹುನಗುಂದದಲ್ಲಿ ವಿದ್ಯಾರ್ಥಿಗಳಿಂದ ಬಸ್ ತಡೆದು ದಿಢೀರ್ ಪ್ರತಿಭಟನೆ..!
ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆ, ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ..!
ಪುತ್ತೂರು : ಓಟದ ಸ್ಪರ್ಧೆಯಲ್ಲಿ ಬಹುಮಾನ ಸಿಗದ ಹಿನ್ನೆಲೆಯಲ್ಲಿ ಮನನೊಂದು, ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮೃತ ಯುವತಿ ನಿಶಾ(17) ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ ಗೌಡರ ಪುತ್ರಿ ಎಂದು ಗುರುತಿಸಲಾಗಿದೆ. ನಿಶಾ ಬಿ ಎಮ್ ರವರು ಪುತ್ತೂರು ನಗರ ವಿವೇಕಾನಂದ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಹದಿನೈದು ದಿನಗಳ ಹಿಂದೆ ಬಿಹಾರದಲ್ಲಿ ನಡೆದ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ (ಓಟ ಸ್ಪರ್ಧೆ) ಭಾಗವಹಿಸಿ ಅಲ್ಲಿ ಯಾವುದೇ ಬಹುಮಾನ ದೊರೆಯದೇ ಹಿಂತಿರುಗಿ ಮನೆಗೆ ಬಂದು ಬೇಸರದಲ್ಲಿದ್ದಳು. ಆದ್ರೆ, ನ.14 ರಂದು ವಿಪರೀತವಾಗಿ ವಾಂತಿ ಮಾಡುತ್ತಿದ್ದು, ಇದರಿಂದ ಅಸ್ವಸ್ಥಳಾದವಳನ್ನು ಈ ಬಗ್ಗೆ ವಿಚಾರಿಸಿದಾಗ ನ.13 ರಂದು ಸಂಜೆ ತೋಟಕ್ಕೆ ಬೀಡುವ ಕೀಟನಾಶಕವನ್ನು ಸೇವಿಸಿರುವುದಾಗಿ ತಿಳಿಸಿದ್ದಳು. ನಂತರ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರಲ್ಲಿ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆ ಬಗ್ಗೆ...
ಬಂಧಿಸಲು ಹೋದ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ, ರೌಡಿ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ ಹುಬ್ಬಳ್ಳಿ ಪೊಲೀಸರು..!
ಹುಬ್ಬಳ್ಳಿ: ಕೊಲೆ ಯತ್ನ, ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡ ರೌಡಿಯೊಬ್ಬ ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಪ್ರತಿಯಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೆ ಯತ್ನ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ ಗೋನಾ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಶನಿವಾರ ಗದಗ ರಸ್ತೆಯಲ್ಲಿ ಈತ ಇದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ತೆರಳಿ ಹಿಡಿಯಲು ಹೋದಾಗ, ಅವರ ಮೇಲೆ ಕಲ್ಲು ತೂರಿದ್ದಲ್ಲದೆ, ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಶಹರ ಠಾಣೆ ಇನ್ಸ್ಪೆಕ್ಟರ್ ರಫಿಕ್ ತಹಶೀಲ್ದಾರ್ ಹಲ್ಲೆಗೆ ಮುಂದಾದ ರೌಡಿಯನ್ನು ತಡೆಯಲು ಆತನ ಕಾಲಿಗೆ ಫೈರ್ ಮಾಡಿ ಬಂಧಿಸಿದ್ದಾರೆ. ಸದ್ಯ ಗಾಯಗೊಂಡಿರೋ ರೌಡಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರೌಡಿಶೀಟರ್ ನ ದಾಳಿಯಿಂದಾಗಿ ಶಹರ ಠಾಣೆ ಪಿಎಸ್ ಐ ವಿನೋದ...
ಬಗಡಗೇರಿ ಗ್ರಾ. ಪಂಚಾಯತಿ ಸದಸ್ಯನ ಕೊಲೆ- ಇಬ್ಬರ ಬಂಧನ, ಆಸ್ತಿ ವಿಚಾರದಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ..!
ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ನಡೆದಿದ್ದ ಗ್ರಾಮ ಪಂಚಾಯತಿ ಸದಸ್ಯನ ಕೊಲೆ ಪ್ರಕರಣವನ್ನು ಕಲಘಟಗಿ ಪೊಲೀಸರು ಬೇಧಿಸಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗ್ರಾಮದ ಮಲ್ಲಪ್ಪ ದಂಡಿನ ಹಾಗೂ ನಾಗಪ್ಪ ದಂಡಿನ ಎಂದು ಗುರುತಿಸಲಾಗಿದೆ. ಆರೋಪಿಗಳು ಗುರುವಾರ ಸಂಜೆ ಕೊಲೆಯಾದ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಎಂಬವರ ಜೊತೆ ಆಸ್ತಿ ವಿಚಾರಕ್ಕೆ ಗಲಾಟೆ ಮಾಡಿದ್ದರು. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ನಿಂಗಪ್ಪನ ಮುಖಕ್ಕೆ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಓಪನ್ ನ್ಯಾಷನಲ್ ಮಾಸ್ಟರ್ ಗೇಮ್ ನಲ್ಲಿ ಸಾಧನೆ, ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಇಬ್ಬರು ಆಯ್ಕೆ..!
ಹುಬ್ಬಳ್ಳಿ: ಮಾಸ್ಟರ್ ಗೇಮ್ ಆಫ್ ಕರ್ನಾಟಕ ವತಿಯಿಂದ ಧಾರವಾಡದಲ್ಲಿ ಇತ್ತೀಚಿಗೆ ನಡೆದ ಓಪನ್ ಮಾಸ್ಟರ್ ಗೇಮ್ ನಲ್ಲಿ ನಿಂಗಪ್ಪ ಪುಟ್ಟಣ್ಣವರು, ಮಾರುತಿ ಬಸವರಾಜ್ ಅವರು ಉತ್ತಮ ಸಾಧನೆ ಮಾಡಿ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಆಯ್ಕೆಯಾಗಿದ್ದಾರೆ. ರೈಲ್ವೆ ಹೆಡ್ ಕಾನ್ಸ್ಟೇಬಲ್(RPF) ನಿಂಗಪ್ಪ ಪುಟ್ಟಣ್ಣವರು 60 ಮೀಟರ್,100 ಮೀಟರ್, 200 ಮೀಟರ್, 300 ಮಿಟರ್, 400 ಮಿಟರ್, ಲಾಂಗ್ ಜಂಪ್ ಮತ್ತು ಪುರುಷರ ರಿಲೇ 400 ಮಿಟರ್ ಮತ್ತು ಮಿಕ್ಸ್ ರಿಲೇ 400 ಮಿಟರ್ ಸ್ಪರ್ಧೆಯಲ್ಲಿ ಒಟ್ಟು ಏಳು ಚಿನ್ನದ ಪದಕ ಗಳಿಸಿದ್ದಾರೆ. ಹಾಗೂ ಇವರು ಕಬ್ಬಡಿಯ ಯುನಿವರ್ಸಿಟಿ ಬ್ಲೂ ನ್ಯಾಷನಲ್ ಕಬಡ್ಡಿ ಆಟಗಾರ ಆಗಿರುತ್ತಾರೆ. ಈ ಸಾಧನೆಗೈದ ಕ್ರೀಡಾಪಟುಗಳಿಗೆವಹಲವು ಗಣ್ಯರು ಶುಭ ಹಾರೈಸಿದ್ದಾರೆ.
ವಾಹನ ಬಿಡುಗಡೆಗೆ ಹಣದ ಬೇಡಿಕೆ, ಶಿಗ್ಗಾವಿ ಠಾಣೆ ಪೊಲೀಸಪ್ಪ ಸಸ್ಪೆಂಡ್..!
ಶಿಗ್ಗಾವಿ: ವಾಹನ ಬಿಡುಗಡೆಗೆ ಹಣದ ಬೇಡಿಕೆ ಇಟ್ಟ ಪೊಲೀಸಪ್ಪನೊಬ್ಬ ಅಮಾನತು ಗೊಂಡಿದ್ದಾನೆ. ವಾಹನ ಬಿಡುಗಡೆಗೆ ಸಾರ್ವಜನಕರಿಂದ ಹಣದ ಬೇಡಿಕೆಯನ್ನು ಇಟ್ಟ ರಮೇಶ್ ಭಜಂತ್ರಿ ಎಂಬುವವರನ್ನು ಅಮಾನತು ಮಾಡಿ ಹಾವೇರಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ರಮೇಶ ಭಜಂತ್ರಿಯನ್ನು ಅಮಾನತು ಗೊಳಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾತಿ ಅಂಶುಕುಮಾರ್, ಗುರುವಾರ ರಾತ್ರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಇನ್ನು ರಮೇಶ ಭಜಂತ್ರಿ ಪ್ರಕರಣವೊಂದರಲ್ಲಿ ವಾಹನವನ್ನು ಬಿಡುಗಡೆ ಮಾಡಲು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ವ್ಯಾಪಕವಾಗಿ ಚರ್ಚಿಯಾಗಿತ್ತು. ಜವಾಬ್ದಾರಿಯುತ ಹುದ್ದೆಯಲ್ಲಿರುವ ಸದರಿ ಸಿಹೆಚ್ ಸಿ ರಮೇಶ ಭಜಂತ್ರಿ ಗಂಭೀರ ದುರ್ನಡತೆಯನ್ನು ಪ್ರದರ್ಶಿಸಿರುತ್ತಾರೆ. ಆದ್ದರಿಂದ ರಮೇಶ ಭಜಂತ್ರಿ, ಸಿಹೆಚ್ ಸಿ-631, ಶಿಗ್ಗಾವಿ ಪೊಲೀಸ್ ಠಾಣೆ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತು ಮಾಡಲಾಗಿದ್ದು, ಇಲಾಖಾ ವಿಚಾರಣಾ ನಡೆಸಿ ಅವರ ಮೇಲೆ ಮುಂದಿನಕಾನೂನು ಕ್ರಮ ಜರುಗಿಸಲಾಗುವದು ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಅತ್ತಿವೇರಿ ಬಸವಧಾಮದಲ್ಲಿ ಡಿಸೆಂಬರ್ 3 ರಂದು ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ- ಮಾತೆ ಬಸವೇಶ್ವರಿ
ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ನಡೆಯಲಿದೆ. ಇದೇ ಡಿಸೆಂಬರ್ 3 ರಂದು ನಡೆಯಲಿರೋ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಳಿಯಾಳದ ಸುಮಂಗಲಾ ಅಂಗಡಿಯವರು ಆಯ್ಕೆಯಾಗಿದ್ದಾರೆ ಅಂತಾ ಅತ್ತಿವೇರಿ ಬಸವಧಾಮದ ಶ್ರೀ ಮಾತೆ ಬಸವೇಶ್ವರಿಯವರು ಮಾಹಿತಿ ನೀಡಿದ್ದಾರೆ. ಡಿಸೆಂಬರ್ 3 ರಂದು ಜರುಗುವ ವಚನ ಸಾಹಿತ್ಯ ಸಮ್ಮೇಳನದಲ್ಲಿ ನಾಡಿನ ಮೂವರು ಹಿರಿಯ ಶ್ರೀಗಳು ಭಾಗಿಯಾಗಲಿದ್ದಾರೆ. ಗದುಗಿನ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಲಿದ್ದಾರೆ. ಚಿತ್ತರಗಿ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮಿಗಳ ಸಾನಿದ್ಯದಲ್ಲಿ ಹಾಗೂ ಶ್ರೀ ನಿಜಗುಣಾನಂದ ಸ್ವಾಮಿಗಳ ಸಮ್ಮುಖದಲ್ಲಿ ಜರುಗಲಿದೆ ಅಂತಾ ಮಾತೆ ಬಸವೇಶ್ವರಿ ಮಾಹಿತಿ ನೀಡಿದ್ರು. ಶರಣರ ವಚನ ಸಾಹಿತ್ಯವನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಈ ಸಮ್ಮೇಳನ ಸಹಕಾರಿಯಾಗಲಿದೆ. ಹೀಗಾಗಿ, ಶರಣರ ವಚನ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ.
ಮಂಜೂರಾದ ಮನೆ GPS ಮಾಡಲು ಲಂಚ, ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಸದಸ್ಯ..!
ಸವಣೂರು: ಸರ್ಕಾರದಿಂದ ಮಂಜೂರಾದ ಮನೆಯ ಜಿಪಿಎಸ್ ಮಾಡಿಸಿಕೊಡಲು ಲಂಚ ಸ್ವೀಕರಿಸಿದ ಗ್ರಾಮ ಪಂಚಾಯತಿ ಸದಸ್ಯ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಸವಣೂರು ತಾಲ್ಲೂಕಿನ ಕಾರಡಗಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರಡಗಿ ಗ್ರಾಮದ ದಾದಾಪೀರ ಮಹ್ಮದಗೌಸ್ ಲೋಹಾರ ಎಂಬುವವರಿಗೆ ಮನೆ ಕಟ್ಟಿಸಿಕೊಳ್ಳಲು ಸರ್ಕಾರದಿಂದ 5 ಲಕ್ಷ ಹಣ ಮಂಜೂರಾಗಿತ್ತು. ಹೀಗಾಗಿ, ಕಾರಡಗಿ ಗ್ರಾಮ ಪಂಚಾಯಿತಿ ಸದಸ್ಯ ಮಹ್ಮದ್ ಜಾಫರ್ ಸಂಶಿ, ಫಲಾನುಭವಿ ದಾದಪೀರನ ಮನೆಯ ಜಿಪಿಎಸ್ ಮಾಡಿಸಿಕೊಡಲು ರೂ 40 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದ. ಮುಂಗಡವಾಗಿ 20 ಸಾವಿರ ರೂ. ಲಂಚದ ಹಣವನ್ನು ಪಡೆದುಕೊಳ್ಳುವಾಗ ಯಶಸ್ವಿಯಾಗಿ ಲೋಕಾಯುಕ್ತ ಪೊಲೀಸರು ಬಲೆಗೆ ಬೀಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಬಿ. ಪಿ. ಚಂದ್ರಶೇಖರ ನೇತೃತ್ವದಲ್ಲಿ ತನಿಖಾಧಿಕಾರಿಗಳಾದ ಆಂಜನೇಯ ಎನ್.ಎಚ್, ಮುಸ್ತಾಕ್ ಅಹ್ಮದ್ ಶೇಖ, ಮಂಜುನಾಥ ಪಂಡಿತ್ ಪಿ. ಎನ್, ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ಎಮ್ ಕೆ ನದಾಫ, ಟಿ ಇ ತಿರುಮಲೆ, ಬಿ ಎಮ್ ಕರ್ಜಗಿ, ಎಮ್ ಕೆ ಲಕ್ಷ್ಮೀಶ್ವರ,...
ಬಗಡಗೇರಿಯಲ್ಲಿ ಗ್ರಾಪಂ ಸದಸ್ಯನ ಭೀಕರ ಹತ್ಯೆ, ಗ್ರಾಮದ ನಡುಬೀದಿಯಲ್ಲೇ ಕೊಂದು ಬೀಸಾಕಿದ ದುಷ್ಕರ್ಮಿಗಳು..!
ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯನ ಭೀಕರ ಹತ್ಯೆಯಾಗಿದೆ. ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ದುಷ್ಕರ್ಮಿಗಳು. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಆಸ್ತಿ ವಿಚಾರವಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಇನ್ನು ನಡುಬೀದಿಯಲ್ಲೇ ಕೊಲೆ ಮಾಡಿ ಪರಾರಿಯಾಗಿದ್ದಾರೆ ದುಷ್ಕರ್ಮಿಗಳು. ಇನ್ನು ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮ ಗೋಮಾಂಸ ದಂಧೆ, ಇಬ್ಬರು ಆರೆಸ್ಟ್..!
ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಗೋಮಾಂಸ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ. ಓರ್ವ ಟಿಬೇಟಿಗನೂ ಸೇರಿದಂತೆ ಇಬ್ಬರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಟಿಬೇಟಿಯನ್ ಕಾಲೋನಿ ನಂಬರ್ 3 ರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಈ ಕುರಿತು ಮುಂಡಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.








