Police Firing Accused;
ಶಿಗ್ಗಾವಿಯಲ್ಲಿ ಗುತ್ತಿಗೆದಾರನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹತ್ಯೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೀಗಾಗಿ, ಗಾಯಾಳು ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ.
ಹಾವೇರಿಯ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕೊಂಡೋಜಿ ಕ್ರಾಸ್ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಪರಿಣಾಮ, ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ ಕಾಲಿಗೆ ಗುಂಡೇಟು ಬಿದ್ದಿತ್ತು, ಗಾಯಳು ಆರೋಪಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪೊಲೀಸ್ ಪೈರಿಂಗ್ ಘಟನೆಯಲ್ಲಿ,
ಹಾವೇರಿ ಎಸ್ಪಿ ಅಂಶುಕುಮಾರ ನೇತ್ರತ್ವದಲ್ಲಿ ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್ ಗೆ ರವಾನೆ ಮಾಡಲಾಗಿದೆ.
ನಿರಂತರ ಸುದ್ದಿಗಾಗಿ, ನಮ್ಮ ವಾಟ್ಸಾಪ್ ಚಾನಲ್ ಸೇರಿಕೊಳ್ಳಲು ಈ ಕೆಂಪು ಅಕ್ಷರಗಳ ಮೇಲೆ ಕ್ಲಿಕ್ ಮಾಡಿ, ಫಾಲೋ ಮಾಡಿ