Marketing Society: ಮುಂಡಗೋಡ ತಾಲೂಕಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿರಿಯ ಮುಖಂಡ ರವಿಗೌಡ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬುರಾವ್ ಲಾಡನವರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ರವಿಗೌಡ್ರಿಗೆ “ಅನಾಯಾಸ” ಪಟ್ಟ..! ಅಸಲು, ಮುಂಡಗೋಡಿನ ಪ್ರತಿಷ್ಟಿತ ಮಾರ್ಕೆಟಿಂಗ್ ಸೊಸೈಟಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಬೆಂಬಲಿತರು, ಬಿಜೆಪಿಯನ್ನು ಧೂಳಿಪಟ ಮಾಡಿದ್ದರು. ಹೀಗಾಗಿ, ಬಹುತೇಕ ಅಧ್ಯಕ್ಷರಾಗಿ ಹಿರಿಯ ದುರೀಣ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರಿಗೆ ಅಧ್ಯಕ್ಷ ಪಟ್ಟ ಬಹುತೇಕ ಫಿಕ್ಸ್ ಆದಂತಾಗಿತ್ತು. ಅಲ್ದೆ,...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Tag: ಮುಂಡಗೋಡ ನ್ಯೂಸ್
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
Live Suicide Attempt; ಹೆಂಡತಿಯ ಅಪ್ಪ, ತಮ್ಮ ಹಾಗೂ ಚಿಕ್ಕಮ್ಮನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ವಿಡಿಯೋ ಮಾಡಿ, ವ್ಯಕ್ತಿಯೋರ್ವ ಕಾರಿನಲ್ಲೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ಮುಂಡಗೋಡ ತಾಲೂಕಿನ ಕಳಗನಕೊಪ್ಪದ ಶಿವರಾಜ್ ಬಮ್ಮಿಗಟ್ಟಿ ಎಂಬುವವನೇ ಸದ್ಯ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮುಂಡಗೋಡ ತಾಲೂಕಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಉಸುಕಿನ ವ್ಯಾಪಾರ ಮಾಡಿಕೊಂಡಿರೋ ಈತ, ಹೆಂಡತಿಯ ತಂದೆ, ಹೆಂಡತಿಯ ತಮ್ಮ ಹಾಗೂ ಹೆಂಡತಿಯ ಚಿಕ್ಕಮ್ಮನ ಕಾಟಕ್ಕೆ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ...
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
Teacher Missing; ಮುಂಡಗೋಡಿನ ಪ್ರತಿಷ್ಟಿತ ಲೊಯೋಲಾ ವಿದ್ಯಾ ಸಂಸ್ಥೆಯ ಪ್ರೌಢಶಾಲೆಯ ಪ್ರತಿಭಾನ್ವಿತ ಹಿಂದಿ ಶಿಕ್ಷಕ ವಿನಾಯಕ ಶೇಟ್ ನಿನ್ನೆಯಿಂದ ಕಾಣೆಯಾಗಿದ್ದಾರೆ ಅಂತಾ ಅವರ ಪತ್ನಿ ಪದ್ಮಶ್ರೀ ವಿನಾಯಕ್ ಶೇಟ್ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 12.08.2025 ರಂದು ಅಂದ್ರೆ ಮಂಗಳವಾರ ಸಾಯಂಕಾಲ 5 ಗಂಟೆಯಿಂದ ರಾತ್ರಿ 8 ಗಂಟೆಯ ನಡುವಿನ ಅವಧಿಯಲ್ಲಿ, “ನಾನು ಸ್ವಲ್ಪ ಹೊರಗಡೆ ಹೋಗಿ ಬರ್ತಿನಿ” ಅಂತಾ ಹೇಳಿ ಮನೆಯಿಂದ ಹೋದವರು, ಮರಳಿ ಮನೆಗೆ ಬಾರದೆ ಎಲ್ಲಿಯೋ ಹೋಗಿ ಕಾಣೆಯಾಗಿದ್ದು, ಪರಿಚಯಸ್ಥರು...
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ ಮೂವರಿಗೆ ಗಾಯವಾಗಿದೆ. ಇಂದೂರು ಗ್ರಾಮದ ಶರಣು ನಿಂಗಯ್ಯ ಸುರಗಿಮಠ್ ಹಾಗೂ ಇವರ ಪತ್ನಿ ಸುಪ್ರೀತ ಸುರಗಿಮಠ ಎಂಬುವವರಿಗೆ ಗಾಯವಾಗಿದೆ. ಹುನಗುಂದದ ಪೊಸ್ಟಮೆನ್ ಸುನಿಲ್ ಹರಿಜನ್ ಎಂಬುವವರಿಗೂ ಗಾಯವಾಗಿದೆ. ಗಾಯಾಳಯಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರಧ್ವಜ ನಿರ್ವಹಣೆ ಕಾರ್ಯಾಗಾರ..!
ಮುಂಡಗೋಡ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಭವನದಲ್ಲಿ ಇಂದು, ಸ್ವಾತಂತ್ರ ಭಾರತದ ಅಮೃತ ಮಹೋತ್ಸವ 2022 ರ ಪ್ರಯುಕ್ತ ರಾಷ್ಟ್ರಧ್ವಜ ನಿರ್ವಹಣೆ ತರಬೇತಿ ಕಾರ್ಯಾಗಾರ ನಡೆಯಿತು. ಮುಂಡಗೋಡ ತಹಶೀಲ್ದಾರ್ ಶಂಕರ್ ಗೌಡಿ ದೀಪ ಬೆಳಗಿಸುವ ಮೂಲಕ ಕಾರ್ಯಾಗಾರ ಉದ್ಘಾಟಿಸಿದ್ರು. ತಾಲೂಕಾಡಳಿತ ಮುಂಡಗೋಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಭಾರತ ಸೇವಾದಲದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿರೋ ತರಬೇತಿ ಕಾರ್ಯಾಗಾರದಲ್ಲಿ ರಾಷ್ಟ್ರಧ್ವಜ ನಿರ್ವಹಣೆಯ ಕುರಿತು ತಹಶೀಲ್ದಾರ್ ಶಂಕರ್ ಗೌಡಿ ಮಾಹಿತಿ ನೀಡಿದ್ರು. ಕಾರ್ಯಕ್ರಮದಲ್ಲಿ ಭಾರತ್ ಸೇವಾದಲದ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ, ಕ್ಷೇತ್ರ...
ಬಿಜೆಪಿ ಪಕ್ಷದ ನೆರಳಲ್ಲೇ ನಡಿತಿದೆಯಾ ಮುಂಡಗೋಡ ಕಸಾಪ..? ಅಷ್ಟಕ್ಕೂ ಕಸಾಪ ಅಧ್ಯಕ್ಷ ನಡಗೇರಿಯವರದ್ದು ಯಾವ ಸಿದ್ಧಾಂತ..?
ಮುಂಡಗೋಡ : ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಯಾವ ರಾಜಕೀಯದ ಪಕ್ಷದ ಅಡಿ ಕೆಲಸ ಮಾಡ್ತಿದೆ..? ಅಷ್ಟಕ್ಕೂ ಇಲ್ಲಿನ ಸಾಹಿತ್ಯ ಪರಿಷತ್ತಿಗೆ ಯಾವುದಾದ್ರೂ ಪಕ್ಷದ ಸಿದ್ದಾಂತಗಳನ್ನ ಹೇರಲಾಗ್ತಿದೆಯಾ..? ಅಥವಾ ಇಡೀ ಪರಿಷತ್ತನ್ನೇ ರಾಜಕೀಯ ಪಕ್ಷದ ಜೊತೆ ವಿಲೀನಗೊಳಿಸಲಾಗಿದೆಯಾ..? ನಿಜಕ್ಕೂ ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ತಾಲೂಕಿನಲ್ಲಿ ಸಾಹಿತ್ಯಿಕ ಕೃಷಿ ಮಾಡಬೇಕಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರು ಪಕ್ಷವೊಂದರ ಬಲವರ್ಧನೆಯಲ್ಲೇ ಬ್ಯುಸಿಯಾಗಿದ್ದಾರೆ. ಅರಿಕೆಯಿರಲಿ..! ನಾವಿಲ್ಲಿ ಯಾವುದೇ ಪಕ್ಷದ ಸಿದ್ಧಾಂತಗಳ ಬಗ್ಗೆ ಖಂಡಿತ ಮಾತನಾಡಲ್ಲ. ವಿರೋಧಿಸುವುದೂ ಇಲ್ಲ. ಆಯಾ ಪಕ್ಷಗಳಿಗೆ...








