Home crime news

Tag: crime news

Post
ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!

ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!

ಮುಂಡಗೋಡ: ಪೊಲೀಸರು ಸ್ವಾತಂತ್ರೋತ್ಸವದ ದಿನವೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಟಿಬೇಟಿಯನ್‌ ಕಾಲೋನಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಮೇತ ಆರೋಪಿಯನ್ನು ಎಳೆದು ತಂದಿದ್ದಾರೆ‌. ಅಂದಹಾಗೆ, ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 4 ರ ನ್ಯಾಮಗೆಲ್ ಚೋಟೆನ್ ಎಂಬುವ ವ್ಯಕ್ತಿಯೇ ಆರೋಪಿಯಾಗಿದ್ದು ಸದ್ಯ ಅಂದರ್ ಆಗಿದ್ದಾನೆ. ಹಸಿ ಹಸಿಯಾದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು ಬರೋಬ್ಬರಿ 6 ಕೆಜಿ 900 ಗ್ರಾಂ ತೂಕ ತೂಗಿದೆ. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್ ನೇತೃತ್ವದಲ್ಲಿ ದಾಳಿ...

Post
ಮುಂಡಗೋಡಿನಲ್ಲಿ ಕಾರ್ ಡಿಕ್ಕಿಯಾಗಿ ಆಕಳ ಕರು ಸ್ಥಳದಲ್ಲೇ ಸಾವು..!

ಮುಂಡಗೋಡಿನಲ್ಲಿ ಕಾರ್ ಡಿಕ್ಕಿಯಾಗಿ ಆಕಳ ಕರು ಸ್ಥಳದಲ್ಲೇ ಸಾವು..!

ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ‌ ಲಭ್ಯವಾಗಿದೆ. ಸದ್ಯ ರಕ್ತದ ಮಡುವಿನಲ್ಲಿ...

Post
ನ್ಯಾಸರ್ಗಿಯಲ್ಲಿ ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಎರಡು ಶ್ವಾನಗಳ ದಾರುಣ ಸಾವು..!

ನ್ಯಾಸರ್ಗಿಯಲ್ಲಿ ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಎರಡು ಶ್ವಾನಗಳ ದಾರುಣ ಸಾವು..!

 ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ವಿದ್ಯುತ್ ಅವಘಡವಾಗಿದೆ. ನಿರಂತರ ಮಳೆಯಿಂದ, ರಾತ್ರಿ ವೇಳೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ವಿದ್ಯತ್ ತಂತಿ ಸ್ಪರ್ಶಿಸಿ ಎರಡು ನಾಯಿಗಳು ಸ್ಥಳದಲ್ಲೇ ದಾರುಣ ಸಾವು ಕಂಡಿವೆ. ತಪ್ಪಿದ ಭಾರೀ ಅನಾಹುತ..! ಬಹುತೇಕ ಪುಟ್ಟ ಪುಟ್ಟ ಮಕ್ಕಳು ಓಡಾಡುವ ಸ್ಥಳ ಇದಾಗಿದೆ. ಅಲ್ಲದೇ ಮನೆಯ ಎದುರಿಗೆ ಇಂತಹದ್ದೊಂದು ಘಟನೆ ನಡೆದಿದೆ. ವಿದ್ಯುತ್ ತಂತಿ ಮರಕ್ಕೆ ತಾಗಿಕೊಂಡು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ತಂತಿ ತುಂಡಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಜನರ ಜೀವ ಹಾನಿಯಾಗಿಲ್ಲ‌‌....

Post
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!

ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!

ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!

ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!

ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ‌ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.

Post
ನಂದಿಪುರ ಬಳಿ ಬೊಲೆರೋ ವಾಹನ ತಪ್ಪಿಸಲು ಹೋಗಿ ರಸ್ತೆ ಬದಿಗೆ ಜಾರಿದ KSRTC ಬಸ್..!

ನಂದಿಪುರ ಬಳಿ ಬೊಲೆರೋ ವಾಹನ ತಪ್ಪಿಸಲು ಹೋಗಿ ರಸ್ತೆ ಬದಿಗೆ ಜಾರಿದ KSRTC ಬಸ್..!

 ಮುಂಡಗೋಡ: ತಾಲೂಕಿನ ನಂದಿಪುರ ಸಮೀಪ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ಪರಿಣಾಮ ಮೂರ್ನಾಲು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎದುರಿಗೆ ಬಂದ ಬುಲೆರೋ ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಗೆ ತಾಗಿ ನಿಂತಿದೆ. ರಸ್ತೆ ಬದಿಯಲ್ಲಿದ್ದ ಮರಕ್ಕೆ ತಾಗಿ ನಿಂತ ಪರಿಣಾಮ ಬಸ್ ಮುಂಬದಿಯ ಗ್ಲಾಸ್ ಜಖಂ ಗೊಂಡಿದೆ. ಇನ್ನು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ತೆರೆದು ಹೊರ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

Post
ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!

ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!

 ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ಮರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರೇಶ ರಾಮಣ್ಣ ಗೊಲ್ಲರ್ ಎಂಬುವನ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಮರಿಗಳೊಂದಿಗೆ ಆಹಾರ ಅರಸಿ ಬಂದಿದ್ದ ಕರಡಿ ರೈತನನ್ನು ನೋಡಿ ಪ್ರಾಣಭಯದಿಂದ ದಾಳಿ ಮಾಡಿದೆ ಎನ್ನಲಾಗಿದೆ. ಅಂದಹಾಗೆ, ಗದ್ದೆಯಲ್ಲಿ ಮಂಗಗಳ ಹಾವಳಿ ಕಾರಣಕ್ಕೆ ಗೋವಿನಜೋಳ ರಕ್ಷಣೆಗಾಗಿ ಕಟ್ಟಿದ್ದ ಶ್ವಾನಗಳಿಗೆ ಆಹಾರ ಕೊಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಸ್ಥಳೀಯರು ರೈತನ‌ ನೆರವಿಗೆ ಬಂದಿದ್ದಾರೆ....

Post
ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ‌ನಿಮಗೂ ಹಾಕ್ತಾರೆ ಗಾಳ..!

ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ‌ನಿಮಗೂ ಹಾಕ್ತಾರೆ ಗಾಳ..!

ಯಲ್ಲಾಪುರ ಪೊಲೀಸರು ಕೊ‌ಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇಡೀ ಯಲ್ಲಾಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಅದೊಂದು ನಟೋರಿಯಸ್ ದರೋಡೆಕೋರರ ಭಯಾನಕ ಕೃತ್ಯ ಈಗಷ್ಟೇ ಅರ್ಧ ಬಯಲಾದಂತಾಗಿದೆ. ಬರೋಬ್ಬರಿ ಒಂದೂವರೇ ತಿಂಗಳು, ಹಗಲು ರಾತ್ರಿ ಕಾರ್ಯಾಚರಣೆ ನಡೆಸಿ, ಅರ್ದದಷ್ಟು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಯಲ್ಲಾಪುರ ಪೊಲೀಸರು. ಅಸಲು, ಯಲ್ಲಾಪುರದ ದಕ್ಷ ಪಿಐ ಸುರೇಶ್ ಯಳ್ಳೂರು ಹಾಗು ಮತ್ತವರ ಪಡೆಗೆ ಅಕ್ಷರಶಃ ನಿದ್ದೆ ಕಸಿದುಕೊಂಡಿದ್ದ ಕೇಸ್ ಇದು‌. ಅದು ಭಯಾನಕ ಗ್ರಾಮ..! ಇಲ್ಲಿ ಈ ಸ್ಟೋರಿ ಹೇಳೋಕಿಂತ ಮುಂಚೆ ಈ ಗ್ರಾಮದ...

Post
ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!

ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!

 ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ವಿಷಕಾರಿ ಹಾವು ಕಚ್ಚಿ ರೈತನೋರ್ವ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಅಸಲು ಹಾವು ಕಚ್ಚಿಯೇ ಮೃತಪಟ್ಟಿದ್ದಾನಾ ಅಥವಾ ಬೇರೆ ಯಾವುದೋ ಕಾರಣಕ್ಕೆ ಮೃತಪಟ್ಟಿದ್ದಾನಾ..? ಮಾಹಿತಿ ಲಭ್ಯವಾಗಬೇಕಿದೆ.  ಕೊಪ್ಪ ಗ್ರಾಮದ ಚಂದ್ರು ಗಾಂಜಿ(56) ಎಂಬುವವನೇ ಮೃತಪಟ್ಟ ರೈತನಾಗಿದ್ದಾನೆ. ಇಂದು ಮುಂಜಾನೆ ತನ್ನ ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸಲು ಗದ್ದೆಗೆ ತೆರಳಿದ್ದ ಚಂದ್ರು ಮದ್ಯಾನದವರೆಗೂ ಭತ್ತಕ್ಕೆ ಔಷಧಿ ಸಿಂಪಡಿಸಿದ್ದಾನೆ. ಆದ್ರೆ ಅದ್ಯಾವಾಗ ಹಾವು...

Post
ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?

ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?

 ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಶ್ರೀಮಾರಿಕಾಂಬಾದೇವಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಕೇಸ್ ಕೂಡ ಬಟಾ ಬಯಲಾಗಿದೆ. ಮುಂಡಗೋಡ ಪೊಲೀಸರ ಖಡಕ್ ತನಿಖೆಯಲ್ಲಿ ಆ ಗ್ರಾಮದಲ್ಲೇ ಅಡಗಿ ಕುಳಿತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್ ಐ ಬಸವರಾಜ್ ಮಬನೂರು ಕಳ್ಳತನದ ಕೇಸ್ ಬಯಲು ಮಾಡಿದ್ದಾರೆ. ಮಳ್ಳನಂತಿದ್ದ ಕಳ್ಳ..! ಅಸಲಿಗೆ, ಊರ ದೇವಿಯ ಆಭರಣವನ್ನೇ ಎಗರಿಸಿ ಮಳ್ಳನಂತೆ ಕುಳಿತಿದ್ದ, ಸನವಳ್ಳಿ ಗ್ರಾಮದ ಮಹಾಂತೇಶ್ ಅರ್ಜುನ್ ಆರೆಗೊಪ್ಪ ಎಂಬುವ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ....