ಮುಂಡಗೋಡ: ಪಟ್ಟಣದ ಸುಭಾಷ್ ನಗರದಲ್ಲಿ ಓರ್ವ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ. ನಾರಾಯಣ ಲಮಾಣಿ ನೇಣಿಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಇಂದು ಮದ್ಯಾನ ಮನೆಯಲ್ಲಿ ಯಾರೂ ಇಲ್ಲದ ವೇಳೆ ತನ್ನಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ನಾರಾಯಣ ಲಮಾಣಿ, ಸಣ್ಣಪುಟ್ಟ ಗುತ್ತಿಗೆ ಕೆಲಸಗಳನ್ನು ಮಾಡಿಕೊಂಡಿದ್ದ. ಆದ್ರೆ ಇತ್ತಿಚೆಗೆ ಯಾಕೊ ಅದೇನೋ ಟೆನ್ಶೆನ್ ನಲ್ಲಿ ಇರುತ್ತಿದ್ದ ಅಂತಾ ಆತನ ಸ್ನೇಹಿತರ ಮೂಲಗಳಿಂದ ಮಾಹಿತಿ ಬಂದಿದೆ. ಆದ್ರೆ, ದಿಢೀರ್ ಆತನ ಆತ್ಮಹತ್ಯೆಗೆ ಕಾರಣವಾದ್ರೂ ಏನು ಅನ್ನೋ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: crime news
ಅನೈತಿಕ ಸಂಬಂಧಕ್ಕೆ ಅಡ್ಡಿ ಅಂತಾ ತಮ್ಮನನ್ನೇ ಕೊಂದ್ಲಾ ಪಾಪಿ ಅಕ್ಕ..? ನೂಲ್ವಿ ಗ್ರಾಮದಲ್ಲೊಂದು ಅಮಾನವೀಯ ಘಟನೆ..!!
ಹುಬ್ಬಳ್ಳಿ: ನೂಲ್ವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣವನ್ನು 24 ಗಂಟೆಯಲ್ಲಿ ಬೇಧಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಎಂಬ ಕಾರಣಕ್ಕೆ ಸಹೋದರಿಯೇ ತನ್ನ ಪ್ರಿಯಕರನ ಜೊತೆ ಸೇರಿ ತಮ್ಮನನ್ನು ಕೊಲೆ ಮಾಡಿರುವುದು ಬಹಿರಂಗವಾಗಿದೆ. ಕಳೆದ ಎರಡು ದಿನಗಳ ಹಿಂದೆ ಶಂಭುಲಿಂಗ ಕಮಡೊಳ್ಳಿ(35) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ 24 ಗಂಟೆಯಲ್ಲೇ ಕೊಲೆ ಮಾಡಿದ...
ಮುಂಡಗೋಡಿನಲ್ಲಿ ರಾತ್ರೋ ರಾತ್ರಿ IPL ಬೆಟ್ಟಿಂಗ್ ಅಡ್ಡೆ ಮೇಲೆ ಎಸ್ಪಿ ಟೀಂ ದಾಳಿ, ನಾಲ್ವರು ಅರೆಸ್ಟ್..!
ಇದು ಮುಂಡಗೋಡ ಮಟ್ಟಿಗೆ ಬಹುದೊಡ್ಡ ಬ್ರೇಕಿಂಗ್ ನ್ಯೂಸ್. ಯಸ್, ಉತ್ತರ ಕನ್ನಡದ ಖಡಕ್ ಎಸ್ಪಿ ಸುಮನಾ ಫನ್ನೇಕರ್ ಮೇಡಂ ಈಗಷ್ಟೇ ತಮ್ಮ ಅಸಲೀ ಆಟಗಳನ್ನು ಶುರು ಮಾಡಿ ಆಯ್ತು. ಇನ್ನೇನಿದ್ರು ಜಿಲ್ಲೆಯಲ್ಲಿ ಅಕ್ರಮಗಳಿಗೆ ಜಾಗವಿಲ್ಲ ಅನ್ನೋದು ಪಕ್ಕಾ. ಅದ್ರ ಭಾಗವಾಗೇ ನಿನ್ನೆ ತಡರಾತ್ರಿ ಮುಂಡಗೋಡಿನಲ್ಲಿ ಅದೊಂದು ಸ್ಪೇಷಲ್ ಟೀಂ ಬೃಹತ್ ಕಾರ್ಯಾಚರಣೆ ಮಾಡಿ ನಾಲ್ವರನ್ನ ಅನಾಮತ್ತಾಗಿ ವಶಕ್ಕೆ ಪಡೆದುಕೊಂಡು ಹೋಗಿದೆ. ಅಸಲು, ಈ ಕಾರ್ಯಚರಣೆ ಖುದ್ದು ಮುಂಡಗೋಡ ಪೊಲೀಸರಿಗೂ ಬೆವರು ಇಳಿಸಿದೆ. ಯಾಕಂದ್ರೆ ಅಲ್ಲೇನಾಗ್ತಿದೆ ಅನ್ನೋ ಸಣ್ಣದೊಂದು...
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ..!
ಮುಂಡಗೋಡ: ಪಟ್ಟಣದ ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ವ್ಯಕ್ತಿಯೋರ್ವ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಶಿಗ್ಗಾವಿ ತಾಲೂಕಿನ ಜೊಂಡಲಗಟ್ಟಿಯ ಮಾಧುರಾವ್ ಶಂಕರ್ ರಾವ್ ಭೋಸ್ಲೆ (26) ಎಂಬುವವನೇ ಆರೋಪಿಯಾಗಿದ್ದಾನೆ. ಈತ ಇಂದು ನ್ಯಾಸರ್ಗಿ ರಸ್ತೆಯ ಮೈಲಾರಲಿಂಗ ದೇವಸ್ಥಾನದ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ದಾಳಿ ಮಾಡಿದೆ. ಸುಮಾರು 4 ಸಾವಿರ...
“ಟಿಕ್ ಟಾಕ್” ನಲ್ಲೇ ರೀಲು ಬಿಟ್ಟ ನಂದಿಕಟ್ಟಾ ಹುಡುಗ, ಬೆಂಗಳೂರಿನಿಂದ್ಲೇ “ಲವ್ ಯೂ” ಅಂದ್ಲು ಹುಡುಗಿ..! ಮುಂದೆ ಆಗಿದ್ದೇನು..?
ಅದು ಅಪ್ಪಟ ಒಂದೂವರೇ ವರ್ಷದ ಪ್ರೇಮ್ ಕಹಾನಿ. ಆಕೆ ದೂರದ ಬೆಂಗಳೂರಿನವಳು, ಈತ ಮುಂಡಗೋಡ ತಾಲೂಕಿನ ನಂದಿಕಟ್ಟಾದವನು. ಟಿಕ್ ಟಾಕ್ ನಲ್ಲೇ ಶುರುವಾದ ಪ್ರೇಮ ಎರಡು ಮಕ್ಕಳ ತಾಯಿಯೊಂದಿಗೆ ಪ್ರೀತಿ, ಪ್ರೇಮದ ಹೆಸರಲ್ಲಿ ಕೊನೆಗೆ ಮದುವೆಯ ಮೂರು ಗಂಟು ಬೀಳುವಂತೆ ಮಾಡಿತ್ತು. ಆದ್ರೀಗ ಆ ಸಂಬಂಧ ಅಕ್ಷರಶಃ ಮೂರಾಬಟ್ಟೆಯಾಗಿದೆ. ಹಾಗಂತ, ಆ ಮಹಿಳೆ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ತನ್ನ ನೂತನ ಪತಿಯ ವಿರುದ್ಧ ಕೇಸು ದಾಖಲಿಸಿದ್ದಾಳೆ. ಅದ್ರ ಜೊತೆ ನಂಗೆ ನನ್ನ ಪತಿಯನ್ನ ಹುಡುಕಿ ಕೊಡಿ...
ಹುನಗುಂದ ಗ್ರಾಮದಲ್ಲಿ ಸರಾಯಿ ನಿಷೇಧ, ಗ್ರಾಮಸ್ಥರ ತೀರ್ಮಾನ, ಸರಾಯಿ ಮಾರಿದ್ರೆ 50 ಸಾವಿರ ದಂಡ..!
ಮುಂಡಗೋಡ: ತಾಲೂಕಿನ ಹುನಗುಂದ ಗ್ರಾಮದಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಗ್ರಾಮವನ್ನು ಸರಾಯಿ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡಲಾಗಿದ್ದು, ಗ್ರಾಮದಲ್ಲಿ ಸರಾಯಿ ನಿಷೇಧ ಮಾಡಲಾಗಿದೆ. ಈ ಮೂಲಕ ಅದೇಷ್ಟೋ ಬಡ ಮಹಿಳೆಯರ ಬಹುದಿನದ ಆಸೆ ನೆರವೇರಿದಂತಾಗಿದೆ. ಗ್ರಾಮದಲ್ಲಿ ಇಂದು ಸಭೆ ಸೇರಿದ್ದ ಗ್ರಾಮಸ್ಥರು, ಮುಖಂಡರು ಈ ಬಗ್ಗೆ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಇಂದಿನಿಂದ ಗ್ರಾಮದಲ್ಲಿ ಸರಾಯಿ ನಿಷೇಧಿಸಿ ಠರಾವು ಬರೆದಿದ್ದಾರೆ. ಒಂದುವೇಳೆ ಗ್ರಾಮದಲ್ಲಿ ಸರಾಯಿ ಮಾರಾಟ ಮಾಡಿದ್ರೆ 50 ಸಾವಿರ ದಂಡ ವಿಧಿಸುವ ನಿರ್ಣಯ ಕೈಗೊಂಡಿದ್ದಾರೆ.
ವಡಗಟ್ಟಾ ಬಳಿ ಬೈಕ್ ಅಪಘಾತ: ಗಾಯಗೊಂಡಿದ್ದ ಅರಶಿಣಗೇರಿಯ ಉಮೇಶ್ ಲಮಾಣಿ ಸಾವು..!
ಮುಂಡಗೋಡ: ತಾಲೂಕಿನ ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ, ಏ.29 ರಂದು ನಡೆದಿದ್ದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅರಶಿಣಗೇರಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ಅರಶಿಣಗೇರಿಯ ಉಮೇಶ್ ಶೇಖಪ್ಪಾ ಲಮಾಣಿ(55) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಕಳೆದ ಏ.29 ರಂದು ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿತ್ತು.
ವಡಗಟ್ಟಾ ಸಮೀಪದ ಬೀರವಳ್ಳಿ ಕ್ರಾಸ್ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರು ಗಂಭೀರ..!
ಮುಂಡಗೋಡ: ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಸಮೀಪ ಬೀರವಳ್ಳಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರೂ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಅದರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ಉಮೇಶ್ ಶೇಖಪ್ಪಾ ಲಮಾಣಿ ಗಂಭೀರ ಗಾಯಗೊಂಡಿದ್ದಾನೆ. ಇನ್ನುಳಿದಂತೆ ಶಿಗ್ಗಾವಿ ತಾಲೂಕಿನ ಕಮಲಾನಗರ ತಾಂಡಾದ ಇಬ್ಬರು ಮಹಿಳೆಯರು ಸೇರಿ ಮೂವರು ಗಾಯಗೊಂಡಿದ್ದಾರೆ. ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದಿಂದ ಕಮಲಾನಗರಕ್ಕೆ ಬೈಕ್...
ಮುಂಡಗೋಡ ಮಾರಿಕಾಂಬಾ ದೇವಾಲಯದ ಹತ್ತಿರ ಬೈಕ್ ಗಳ ನಡುವೆ ಡಿಕ್ಕಿ ವೃದ್ಧನಿಗೆ ಗಂಭೀರ ಗಾಯ..!
ಮುಂಡಗೋಡ: ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಹತ್ತಿರ ಟಿವಿಎಸ್ ಎಕ್ಸೆಲ್ ಹಾಗೂ ಸ್ಪ್ಲೆಂಡರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಟಿವಿಎಸ್ ಎಕ್ಸೆಲ್ ಸವಾರ ವೃದ್ದನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ತಮ್ಯಾನಕೊಪ್ಪ ಗ್ರಾಮದ ಲಕ್ಷ್ಮಣ ಮಾನು ರಾಠೋಡ್(60) ಎಂಬುವವರೇ ಗಾಯಗೊಂಡ ವೃದ್ದನಾಗಿದ್ದಾನೆ. ಮತ್ತೊರ್ವ ಬೈಕ್ ಸವಾರ ನಂದಿಕಟ್ಟಾ ಗ್ರಾಮದ ತೋಪಣ್ಣ ರೇಟರಿ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ತಮ್ಯಾನಕೊಪ್ಪದಿಂದ ಇಂದೂರು ಕಡೆಗೆ ಹೊರಟಿದ್ದ ವೃದ್ದನಿಗೆ ಸ್ಪ್ಲೆಂಡರ್ ಬೈಕ್ ಗುದ್ದಿದೆ. ಪರಿಣಾಮ ವೃದ್ದ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ...
ಮುಡಸಾಲಿ ಬಳಿ ಎತ್ತಿನ ಚಕ್ಕಡಿಗೆ ಹಿಂದಿನಿಂದ ಗುದ್ದಿದ KSRTC ಬಸ್, ಇಬ್ಬರಿಗೆ ಗಾಯ..! ತಪ್ಪಿದ ಭಾರೀ ಅನಾಹುತ
ಮುಂಡಗೋಡ: ತಾಲೂಕಿನ ಮೂಡಸಾಲಿ ಕ್ರಾಸ್ ಬಳಿ ಬಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದಂತಾಗಿದೆ. ಎತ್ತಿನ ಚಕ್ಕಡಿಗೆ KSRTC ಬಸ್ ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಕಡೆ ಹೊರಟಿದ್ದ ಚಕ್ಕಡಿಗೆ ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ ಸಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರಿಗೆ ಗಾಯವಾಗಿದೆ. ಕಾತೂರು ಗ್ರಾಮದ ಸಂತೋಷ ತಿಪ್ಪಣ್ಣ ಹರಿಜನ (30), ಮಂಜುನಾಥ್ ಬಸಪ್ಪ ಡೊಳ್ಳೇಶ್ವರ್ (38) ಎಂಬುವರಿಗೆ ಗಾಯವಾಗಿದೆ. KSRTC ಚಾಲಕನ ಸಮಯ ಪ್ರಜ್ಞೆಯಿಂದ ಆಗಬಹುದಾಗಿದ್ದ ಭಾರೀ ಅವಘಡ ತಪ್ಪಿದಂತಾಗಿದೆ. ತಡರಾತ್ರಿಯಲ್ಲಿ ಘಟನೆ...









