ಮುಂಡಗೋಡ: ತಾಲೂಕಿನ ಕಾತೂರಿನಲ್ಲಿ ಮಹಿಳೆಯರು ಸಿಡಿದೆದ್ದಿದ್ದಾರೆ. ತಾಲೂಕಿನಲ್ಲಿ ಅಕ್ರಮವಾಗಿ ಹಳ್ಳಿ ಹಳ್ಳಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರೋ ದಂಧೆಗೆ ಕಡಿವಾಣ ಹಾಕಿ ನಮ್ಮನ್ನ ರಕ್ಷಿಸಿ ಅಂತಾ ಅಧಿಕಾರಿಗಳಿಗೆ, ಸರ್ಕಾರಕ್ಕೆ ಹಿಡಿಶಾಪ ಹಾಕ್ತಿದಾರೆ. ಕಿರಾಣಿ ಅಂಗಡಿಯಲ್ಲೂ ಮದ್ಯ..? ನಿಜ, ಮುಂಡಗೋಡ ತಾಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಅದೇಷ್ಟರ ಮಟ್ಟಿಗೆ ತನ್ನ ಕಬಂದಬಾಹು ಚಾಚಿಕೊಂಡಿದೆ ಅಂದ್ರೆ, ತಾಲೂಕಿನ ಹಳ್ಳಿಗಳಲ್ಲಿ ಕಿರಾಣಿ ಅಂಗಡಿಗಳಲ್ಲೂ ಮದ್ಯ ಸಿಗತ್ತೆ. ಅಧಿಕೃತವಾಗಿ ಮಾರಾಟ ಮಾಡೋ ಕೆಲವೇ ಕೆಲವು ಅಂಗಡಿಗಳು ತಮ್ಮ ವೈನ್ ಶಾಪ್ ಗಳಲ್ಲಿ ಕುಳಿತು ಅಧಿಕೃತವಾಗಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: crime news
ಇಂದೂರಿನಲ್ಲಿ ಆಕಸ್ಮಿಕ ಬೆಂಕಿಗೆ ಭಸ್ಮವಾದ ಮೇವಿನ ಬಣಿವೆಗಳು..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದ ಪ್ರೌಢಶಾಲೆಯ ಬಳಿ ಮೇವಿನ ಬಣಿವೆಗೆ ಬೆಂಕಿ ತಗುಲಿದೆ. ಮದ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ ಬೆಂಕಿ ನಂದಿಸಲು ಗ್ರಾಮಸ್ಥರು ಹರಸಾಹಸ ಪಟ್ಟರು. ಇಂದೂರು ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ರಾಯ್ಕರ್ ರವರಿಗೆ ಸೇರಿದ ಮೇವಿನ ಬಣವಿ ಇದಾಗಿದ್ದು, ಜಾನುವಾರುಗಳ ಪಾಲನೆಯಲ್ಲಿ ತೊಡಗಿರುವ ನಿವೃತ್ತ ಶಿಕ್ಷಕರಿಗೆ ಭಾರೀ ನಷ್ಟವಾಗಿದೆ. ಮದ್ಯಾಹ್ನದ ಸಮಯದಲ್ಲಿ ಬೆಂಕಿಯು ಕೆನ್ನಾಲಿಗೆ ಚಾಚಿದ್ದು, ಅಕ್ಕಪಕ್ಕದ ಮನೆಗಳಿಗೂ ಹರಡುವ ಸಾಧ್ಯತೆ ಇತ್ತು, ಆದ್ರೆ ಅದೃಷ್ಟವಶಾತ್ ಬೆಂಕಿ ಹತೋಟಿಗೆ...
ಬಾಚಣಕಿ ಡ್ಯಾಂ ನಲ್ಲಿ ಪತ್ತೆಯಾಯ್ತು ಮಹೇಶನ ಶವ..! ಕೊನೆಗೂ ನೀರು ಪಾಲಾಯ್ತು 3 ವರ್ಷದ ಮುಗ್ದ ಪ್ರೀತಿ..!!
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಕೊನೆಗೂ ಪತ್ತೆಯಾಗಿದೆ. ಇಂದೂ ಕೂಡ ಬೆಳಿಗ್ಗೆಯಿಂದ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಈಗಷ್ಟೇ ಶವ ಪತ್ತೆಯಾಗಿದೆ. ಇದ್ರೊಂದಿಗೆ ಮೂರು ವರ್ಷಗಳ ಪ್ರೀತಿ ಬಾಚಣಕಿ ಜಲಾಶಯದಲ್ಲಿ ನೀರು ಪಾಲಾಗಿದೆ. ಸೋಮವಾರ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಎರಡನೇ ವರ್ಷದಲ್ಲಿ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿದ್ದ ಮಹೇಶ್...
ಬಾಚಣಕಿ ಡ್ಯಾಂ ನಲ್ಲಿ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಶೋಧ..! ಹಾಗಾದ್ರೆ ಆತ ಏನಾದ..?
ಮುಂಡಗೋಡ; ಬಾಚಣಕಿ ಜಲಾಶಯದಲ್ಲಿ ನಿನ್ನೆ ನಾಪತ್ತೆಯಾಗಿರೋ ವಿದ್ಯಾರ್ಥಿಗಾಗಿ ಇಂದೂ ಕೂಡ ಶೋಧ ಕಾರ್ಯ ಜಾರಿಯಲ್ಲಿತ್ತು. ಆದ್ರೆ ಇದುವರೆಗೂ ವಿದ್ಯಾರ್ಥಿ ಪತ್ತೆಯಾಗಿಲ್ಲ. ನಿನ್ನೆ ಇದೇ ಬಾಚಣಕಿ ಡ್ಯಾಂ ಅಂಗಳದಲ್ಲಿ ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಪಿಯೂ ಓದುತ್ತಿದ್ದ ಕಲಕೇರಿ ಗ್ರಾಮದ ತನುಜಾ ಎನ್ನುವ ವಿದ್ಯಾರ್ಥಿನಿಯ ಶವ ಪತ್ತೆಯಾಗಿತ್ತು. ಅಲ್ಲದೇ, ಆಕೆಯ ಜೊತೆಗೆ ಬಂದಿದ್ದ ಅಂತಾ ಹೇಳಲಾಗಿರೊ ವಿದ್ಯಾರ್ಥಿಯ ಪಾದರಕ್ಷೆಗಳು ಜಲಾಶಯದ ದಡದಲ್ಲಿ ದೊರೆತಿದ್ದವು. ಹೀಗಾಗಿ, ವಿದ್ಯಾರ್ಥಿ ಕೂಡ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ವಿದ್ಯಾರ್ಥಿಯ ಶವಕ್ಕಾಗಿ...
ನೀರಿಗೆ ಜಿಗಿಯೋಕೂ ಮುನ್ನ ವಿಷ ಕುಡಿದಿತ್ತಾ ಜೋಡಿ..? ಅಷ್ಟಕ್ಕೂ ಬಾಚಣಕಿ ಡ್ಯಾಂ ಅಂಗಳದಲ್ಲಿ ನಡೆದದ್ದಾದ್ರೂ ಏನು..?
ಮುಂಡಗೋಡ: ಏನಾಗ್ತಿದೆ ನಮ್ಮ ಮುಂಡಗೋಡ ತಾಲೂಕಿನ ಯುವಕ ಯುವತಿಯರಿಗೆ..? ನಿಜಕ್ಕೂ ಮಮ್ಮಲ ಮರಗುತ್ತಿದೆ ಇಡೀ ತಾಲೂಕು. ಯಾಕಂದ್ರೆ ಇನ್ನೂ ಮೀಸೆ ಚಿಗುರದ, ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ ಪ್ರೇಮ ಅಂತೇಲ್ಲ ಇಡೀ ಬದುಕನ್ನೇ ಹಾಳು ಮಾಡಿಕೊಳ್ತಿದಾರಾ ಯುವ ಪಡೆ..? ಹಾಗಂತ ಆತಂಕಗೊಂಡಿದ್ದಾರೆ ತಂದೆ ತಾಯಂದಿರು. ಪ್ರೀತಿಗೆ ಬಲಿ..? ಯಸ್, ಮುಂಡಗೋಡ ತಾಲೂಕಿನಲ್ಲಿ ಇತ್ತೀಚೆಗೆ ಪ್ರೇಮ ಪ್ರಕರಣಗಳಲ್ಲಿ ನಾಪತ್ತೆಯಾದ ಯುವಕ ಯುವತಿಯರ ಸಂಖ್ಯೆ ಇನ್ನಿಲ್ಲದ ಹಾಗೆ ಏರಿಕೆಯಾಗಿದೆ. ಅದ್ರೊಟ್ಟಿಗೆ, ಇವತ್ತಿನ ಈ ಪ್ರಕರಣ ಬಹುಶಃ ಇಡೀ ತಾಲೂಕಿನ ಮಂದಿಗೆ ಬೆಚ್ಚಿ...
ಅಯ್ಯೋ ದೇವ್ರೇ, ಬಾಚಣಕಿ ಡ್ಯಾಂನಲ್ಲಿ ಹೆಣವಾದ್ರಾ ಪ್ರೇಮಿಗಳು..? ಆತ್ಮಹತ್ಯೆನಾ..?
ಮುಂಡಗೋಡ: ಬಾಚಣಕಿ ಜಲಾಶಯದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ್ರಾ..? ಸಧ್ಯದ ಮಾಹಿತಿ ಪ್ರಕಾರ ಹೌದು ಅಂತಿವೆ ಮೂಲಗಳು. ಕಾಲೇಜು ಯೂನಿಫಾರ್ಮಿನಲ್ಲೇ ಯುವಕ ಹಾಗೂ ಯುವತಿ ಬಾಚಣಕಿ ಜಲಾಶಯದಲ್ಲಿ ದಾರುಣ ಸಾವು ಕಂಡಿರೋ ಘಟನೆ ನಡೆದಿದೆ. ಕಾಲೇಜಿನಿಂದ ನೇರವಾಗಿ ಬಾಚಣಕಿ ಜಲಾಶಯಕ್ಕೆ ಬಂದಿರೋ ಯುವಕ ಯುವತಿ ಜಲಾಶಯದಲ್ಲಿ ನೀರು ಪಾಲಾಗಿದ್ದಾರೆ ಎನ್ನಲಾಗ್ತಿದೆ. ಯುವತಿ ಶವ ಹೊರ ತೆಗೆಯಲಾಗಿದ್ದು, ಮೃತ ಯುವತಿ ಮುಂಡಗೋಡ ತಾಲೂಕಿನ ಕಲಕೇರಿ ಗ್ರಾಮದ ತನುಜಾ ಅಂತಾ ತಿಳಿದು ಬಂದಿದೆ. ಆದ್ರೆ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ....
ಮುಂಡಗೋಡಿನ ಅಮ್ಮಾಜಿ ಕೆರೆ ಮೇಲೆ ಬೈಕ್ ಅಪಘಾತ, ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ವಿರೂಪಾಕ್ಷಯ್ಯ ಜಂಬಯ್ಯನವರ್ (45) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಅಂದಲಗಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದ ತಕ್ಷಣವೇ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ್ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತಾಲೂಕಿನಲ್ಲಿ ಕುದುರೆ ಕಳ್ಳರ ಗ್ಯಾಂಗ್ ಆ್ಯಕ್ಟಿವ್ ಆಗಿದೆಯಾ..?
ಮುಂಡಗೋಡ: ತಾಲೂಕಿನಲ್ಲಿ ಕುದುರೆ ಕಳ್ಳರು ಬಂದಿದ್ದಾರಾ ಎನ್ನುವ ಪ್ರಶ್ನೆ ಎದುರಾಗಿದೆ. ಯಾಕಂದ್ರೆ ಇಲ್ಲಿ ಎಲ್ಲಿಂದಲೋ ಬಂದು ವಾಹನ ತಂದು ಕುದುರೆಗಳನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಸಂಚಾರಿ ಕುರುಬರು ಎಲ್ಲೆಂದರಲ್ಲಿ ಬಿಟ್ಟು ಹೋಗುತ್ತಿರೋ ಕುದುರೆಗಳನ್ಬು ಕಳವು ಮಾಡಿಕೊಂಡು ಹೋಗುವ ಗ್ಯಾಂಗ್ ಬಂದಿದೆಯಾ ಅನ್ನೋ ಅನುಮಾನಗಳು ಶುರುವಾಗಿದೆ. ಯಾಕಂದ್ರೆ ತಾಲೂಕಿನ ಟಿಬೇಟಿಯನ್ ಕಾಲೊನಿ ಸೇರಿದಂತೆ ಎಲ್ಲೆಂದರಲ್ಲಿ ತಿರುಗಾಡುವ ಕುದುರೆಗಳನ್ನು ಕಳ್ಳರು ಹಾಡಹಗಲೆ ಎತ್ತಾಕೊಂಡು ಹೋಗ್ತಿದಾರಾ ಅನ್ನೊ ಅನುಮಾನಗಳು ಶುರುವಾಗಿದೆ. ಹೀಗಾಗಿ, ಹಾಗೆ ಕಳ್ಳರ ಕೃತ್ಯಗಳನ್ನು ಕೆಲ ಯುವಕರ ಪಡೆ ನಿಯಂತ್ರಿಸಲು ಪಣ...
ಮುಂಡಗೋಡಿನ ನ್ಯಾಸರ್ಗಿ ಬಳಿ ಭೀಕರ ಅಪಘಾತ, ಮರಕ್ಕೆ ಡಿಕ್ಕಿ ಹೊಡೆದ ಕಾರು, ಓರ್ವ ಗಂಭೀರ..!!
ಮುಂಡಗೋಡ; ತಾಲೂಕಿನ ನ್ಯಾಸರ್ಗಿ ಬಳಿ ಭೀಕರ ಅಪಘಾತವಾಗಿದೆ. ವೇಗವಾಗಿ ಬಂದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ನ್ಯಾಸರ್ಗಿಯ ಅನ್ವರ್ ಷಹಜಹಾನ್ ದೊಡ್ಮನಿ(26) ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ನ್ಯಾಸರ್ಗಿಯಿಂದ ಮುಂಡಗೋಡಿಗೆ ಕಾರಲ್ಲಿ ಬರುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮುಂಡಗೋಡಿನ 108 ಅಂಬ್ಯಲೆನ್ಸ್ ಗೆ ಕರೆ ಮಾಡಿ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುವಿನ ಕಾಲಿಗೆ ಭಾರೀ ಪೆಟ್ಟು ಬಿದ್ದಿದ್ದು ತಾಲೂಕಾಸ್ಪತ್ರೆಯಲ್ಲಿ ಪ್ರಥಮ...
ಅಗಡಿ ಚೆಕ್ ಪೊಸ್ಟ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಒದ್ದಾಡಿದ ಸವಾರ, ಆಸ್ಪತ್ರೆಗೆ ರವಾನೆ..!
ಮುಂಡಗೋಡ; ತಾಲೂಕಿನ ಕಲಘಟಗಿ ರಸ್ತೆಯ ಅಗಡಿ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ಬೆಂಡ್ಲಗಟ್ಟಿ ಗ್ರಾಮದವನು ಅಂತಾ ಹೇಳಲಾಗಿರೋ ವ್ಯಕ್ತಿ ಬೈಕ್ ನಿಂದ ಬಿದ್ದು ಒದ್ದಾಡುತ್ತಿದ್ದಾನೆ. ಈ ವೇಳೆ ಸ್ಥಳೀಯರು ಅಂಬ್ಯುಲೆನ್ಸ್ ಗೆ ಕಾಲ್ ಮಾಡಿ ಗಾಯಾಳು ವ್ಯಕ್ತಿಯ ಚಿಕಿತ್ಸೆಗೆ ರವಾನಿಸಲು ರೆಡಿಯಾಗಿದ್ದಾರೆ. ಆದ್ರೆ ಇದೇ ವೇಳೆ ಪೊಲೀಸರ ವಾಹನ ಬಂದು ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿದೆ.









