ಮುಂಡಗೋಡ; ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಮೊಬೈಲ್ ಕಳ್ಳತನ ಮಾಡಿದ್ದ ವ್ಯಕ್ತಿಗೆ ಧರ್ಮದೇಟು ಬಿದ್ದಿದೆ. ಪಟ್ಟಣದ ಮೊಬೈಲ್ ಶಾಪ್ ಒಂದರಲ್ಲಿ ಮೊಬೈಲ್ ಖರೀಧಿಸುತ್ತಿದ್ದಾಗ, ಹಿಂದಿನಿಂದ ಬಂದ ವ್ಯಕ್ತಿ ಮೊಬೈಲ್ ಎಗರಿಸಿಕೊಂಡು ಹೋಗಿದ್ದಾನೆ. ನಂತರ ಮೊಬೈಲ್ ಕಳೆದುಕೊಂಡ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗಾಗಿ ತಡಕಾಡಿದ್ದಾರೆ. ನಂತ್ರ ಶಿವಾಜಿ ಸರ್ಕಲ್ ನಲ್ಲಿ ಅಚಾನಕ್ಕಾಗಿ ಮೊಬೈಲ್ ಕಳ್ಳ ತಗಲಾಕ್ಕೊಂಡಿದ್ದಾನೆ. ಹೀಗಾಗಿ, ಮೊಬೈಲ್ ಕಳೆದುಕೊಂಡಿದ್ದ ಇಬ್ಬರು ವ್ಯಕ್ತಿಗಳು ಮೊಬೈಲ್ ಕಳ್ಳನಿಗೆ ಗೂಸಾ ನೀಡಿದ್ದಾರೆ. ನಂತರ ಪೊಲೀಸ್ ಠಾಣೆಗೆ ಮೊಬೈಲ್ ಕಳ್ಳನನ್ನು ಕರೆದುಕೊಂಡು ಹೋಗಿದ್ದಾರೆ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Tag: crime news
ಇಂದೂರಿನಲ್ಲಿ ನೇಣಿಗೆ ಶರಣಾದ 17 ವರ್ಷದ ಯುವತಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ 17 ವರ್ಷದ ಯುವತಿಯೋರ್ವಳು ನೇಣಿಗೆ ಶರಣಾದ ಘಟನೆ ನಡೆದಿದೆ.ಇಂದು ಮದ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ರೂಪಾ ಬಸವರಾಜ್ ಹಳಿಯಾಳ (17) ಎಂಬ ಯುವತಿಯೇ ನೇಣಿಗೆ ಶರಣಾಗಿದ್ದು ಪೋಷಕರ ಆಕ್ರಂದನಕ್ಕೆ ಕಾರಣವಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.
ಮುಂಡಗೋಡಿನ ಕೊಪ್ಪ ಬಳಿ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ: ತಾಲೂಕಿನ ಕೊಪ್ಪ ಬಳಿ ಬೀಕರ ಅಪಘಾತ ಸಂಭವಿಸಿದೆ. ಲಾರಿ ಓವರ್ ಟೇಕ್ ಮಾಡಲು ಹೋಗಿ ಬೈಕ್ ಸ್ಕಿಡ್ ಆಗಿ ಲಾರಿಯಡಿ ಬಿದ್ದು ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ನಂದಿಕಟ್ಟಾ ಗ್ರಾಮದ ಷರೀಫ್ ಎಂಬುವ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಇನ್ನು ಮತ್ತೋರ್ವ ಸವಾರ ವಿಶ್ವನಾಥ್ ಸವಣೂರ್ ಗಂಭೀರ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾನೆ. ಇಬ್ಬರೂ ಯುವಕರು ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಹೋಗುವ ವೇಳೆ, ಮುಂಡಗೋಡ ಕಡೆಗೆ ಹೋಗುತ್ತಿದ್ದ ಲಾರಿ ಓವರ್ ಟೇಕ್ ಮಾಡಲು...
ಇಂದಿರಾನಗರ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರರು, ಇಬ್ಬರು ಗಂಭೀರ..!
ಮುಂಡಗೋಡ: ತಾಲೂಕಿನ ಇಂದಿರಾನಗರ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ. ಮುಂಡಗೋಡ ಗಾಂಧಿ ನಗರದ ದುರ್ಗಪ್ಪ ಕೊರವರ್(25) ಎಂದು ಗುರುತಿಸಲಾಗಿದೆ. ಮತ್ತೋರ್ವ ಓಣಿಕೇರಿ ಗ್ರಾಮದವನು ಅಂತಾ ಮಾಹಿತಿ ಲಭ್ಯವಾಗಿದೆ. ಅಪಘಾತ ನಡೆದ ಕೆಲವೇ ಹೊತ್ತಲ್ಲಿ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇಂದೂರಿನಲ್ಲಿ ಆಕಸ್ಮಿಕ ಅಗ್ನಿ ಅವಘಡ, ಸುಟ್ಟು ಕರಕಲಾದ ಭತ್ತದ ಬಣವಿ..!
ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಆಕಸ್ಮಿಕವಾಗಿ ಭತ್ತದ ಬಣ್ಣವಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿ ಮೌಲ್ಯದ ಭತ್ತ ಸುಟ್ಟು ಕರಕಲಾದ ಘಟನೆ ನಡೆದಿದೆ. ಚಂದ್ರಶೇಖರ್ ಅರ್ಕಸಾಲಿ ಎಂಬುವ ರೈತರಿಗೆ ಸೇರಿದ ಒಂದೂವರೇ ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ಭತ್ತದ ಬಣವಿಗೆ ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಆಗ ವಿಷಯ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದು, ಆಗಬಹುದಾದ ಮತ್ತಷ್ಟು ಹಾನಿಯನ್ನು ತಪ್ಪಿಸಿದ್ದಾರೆ. ಈ ಘಟನೆಯಲ್ಲಿ ಸುಮಾರು 50 ಸಾವಿರ ರೂ. ಮೌಲ್ಯದ ಭತ್ತ...
ಕೋಡಂಬಿಯಲ್ಲಿ ನಡೆದ ಹೋರಿ ಬೆದರಿಸೋ ಸ್ಪರ್ಧೆ ಆಯೋಜಕರಿಗೆ ಸಂಕಷ್ಟ..! ನಾಲ್ವರು ವಶಕ್ಕೆ..!
ಮುಂಡಗೋಡ: ಉತ್ತರ ಕರ್ನಾಟಕದ ಯುವಕರ ಪಾಲಿನ ರಣರೋಚಕ ಹೋರಿ ಹಬ್ಬಕ್ಕೆ ಮುಂಡಗೋಡ ತಾಲೂಕಿನಲ್ಲಿ ಭಾರೀ ಹಿನ್ನಡೆಯಾಗಿದೆ. ಕೋಡಂಬಿಯಲ್ಲಿ ನಿನ್ನೆ ನಡೆದ ಹೋರಿ ಬೆದರಿಸೋ ಸ್ಪರ್ಧೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿ ಬರೋಬ್ಬರಿ 17 ಜನರ ಮೇಲೆ ಕೇಸು ಜಡೆದಿದ್ದಾರೆ. ಅದ್ರಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಉಳಿದ 13 ಜನ ಪರಾರಿಯಾಗಿದ್ದಾರೆ. ಅನುಮತಿ ಪಡೆದಿರಲಿಲ್ಲವಾ..? ಕೋಡಂಬಿಯಲ್ಲಿ ನಿನ್ನೆ ಮಂಗಳವಾರ ನಡೆದ “ಹೋರಿ ಬೆದರಿಸುವ ಸ್ಪರ್ಧೆ” ಅಯೋಜಕರಿಗೆ ಸಂಕಷ್ಟ ತಂದೊಡ್ಡಿದೆ. ಕೊರೋನಾ ಸಂಕಷ್ಟದ ನಡುವೆ ಸರ್ಕಾರದ ಯಾವುದೇ ಅನುಮತಿ...
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..!
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಕಾರಿಗೆ ಗುದ್ದಿದ ಲಾರಿ..! ಮುಂಡಗೋಡ: ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಲಾರಿಯೊಂದು ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಿಂಬದಿ ಗೆ ಚಿಕ್ಕದಾಗಿ ಹಾನಿಯಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಲಾರಿ, ಪಟ್ಟಣದಲ್ಲಿ ಬಂಕಾಪುರ ರಸ್ತೆ ಕಡೆಗೆ ಹೊರಟಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿತ್ತು ಎನ್ನಲಾಗಿದೆ. ಹೀಗಾಗಿ ಡಿಕ್ಕಿ ಹೊಡೆದು ಶಿರಸಿ ರಸ್ತೆ ಕಡೆಗೆ ಹೊರಟಿದ್ದ ಲಾರಿಯನ್ನು ತಡೆದ ಕಾರು ಚಾಲಕ, ಆಗಿರೋ ಹಾನಿ ತುಂಬಿ ಕೊಡುವಂತೆ...
ಬಸಾಪುರದಲ್ಲಿ ಯುವಕರ ಪುಂಡಾಟ..? KSRTC ಚಾಲಕನಿಗೆ ಥಳಿಸಿದ್ರಾ ಹುಡುಗ್ರು..?
ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ...
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...









