ಅಧಿಕಾರಿಗಳು ನಿರ್ಲಜ್ಯರಾದ್ರೆ ಇಲಾಖೆಗಳು ಹೇಗೇಲ್ಲ ಬೆತ್ತಲಾಗ್ತವೆ ಅನ್ನೋದಕ್ಕೆ ಇಲ್ಲೊಂದು ತಾಜಾ ನಿದರ್ಶನ ಸಿಕ್ಕಂತಾಗಿದೆ. ಇದು ಮುಂಡಗೋಡ ಅರಣ್ಯ ಇಲಾಖೆಯ ಸನ್ಮಾನ್ಯ ಅಧಿಕಾರಿಯೊಬ್ಬರ ಆಸೆಬುರುಕತನವೋ..? ಅಧಿಕಾರದ ಅಹಂಕಾರವೋ..? ನಮಗಂತೂ ಗೊತ್ತಿಲ್ಲ, ಬಹುತೇಕ ಚಕ್ಕಂಬಕ್ಕಳ ಹಾಕೊಂಡು ಅಮೇದ್ಯಕ್ಕಾಗಿ ವನದೇವಿಯನ್ನೇ ಬಲಿಕೊಟ್ಟುಬಿಟ್ರಾ ಅನ್ನೊ ಪ್ರಶ್ನೆ ಏಳುವಂತಾಗಿದೆ. ಅಸಲು, ಅಲ್ಲಿ ಸಿಪ್ಪೆ ಸುಲಿಸಿಕೊಂಡು ಬಿದ್ದಿರೊ ವನದೇವಿಯ ಕರುಳ ಬಳ್ಳಿಗಳನ್ನು ನೋಡಿಬಿಟ್ರೆ ಪರಿಸರ ಪ್ರಿಯರಿಗೆ ಕಣ್ಣಲ್ಲಿ ನೀರು ಬರದೇ ಇರಲ್ಲ..! ಅವು ಬರೋಬ್ಬರಿ 17 ತುಂಡುಗಳು..! ಅಂದಹಾಗೆ, ಮುಂಡಗೋಡ ತಾಲೂಕಿನ ಅದೊಂದು ಹಳ್ಳಿಯ ಮಾಲ್ಕಿ...
Top Stories
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
ಹುನಗುಂದದ ಶ್ರೀಮತಿ ನಿಂಗವ್ವ ಆಸ್ತಕಟ್ಟಿ (76) ವಿಧಿವಶ..!
ಹುನಗುಂದದಲ್ಲಿ CBDRCT ಸಂಸ್ಥೆಯಿಂದ ಮಹತ್ಕಾರ್ಯ, ತಿಂಗಳಿಂದ ನಡೆದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ..!
ಆರ್.ಟಿ.ಓ. ಕಚೇರಿಯಲ್ಲಿ ಮಧ್ಯವರ್ತಿಗಳು ಕಂಡುಬಂದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ರಾಮಲಿಂಗ ರೆಡ್ಡಿ
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಗಾಂಜಾ ಮಾರುತ್ತಿದ್ದ ಇಂದೂರಿನ ದಂಧೆಕೋರ ಆರೆಸ್ಟ್..!
ಇಂದಿನಿಂದ SSLC ಪರೀಕ್ಷೆ : ಬೆಳಗಾವಿ ವಿಭಾಗದಿಂದ 2,52,262 ವಿದ್ಯಾರ್ಥಿಗಳು, ಶಿರಸಿ-10172, ಕಾರವಾರ 9706 ವಿದ್ಯಾರ್ಥಿಗಳು..!
ಪಾಳಾ ಬಳಿ ಬೈಕ್ ಹಾಗೂ ಭಾರತ್ ಬೇಂಜ್ ನಡುವೆ ಭೀಕರ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಬಿರು ಬೇಸಿಗೆಯಲ್ಲಿ ನೀರಿಗಾಗಿ ಕಾಡು ಪ್ರಾಣಿಗಳ ಪರದಾಟ, ಕೃತಕ ತೊಟ್ಟಿಗಳಲ್ಲಿ ನೀರು ಉಣಿಸ್ತಿದೆ ಮುಂಡಗೋಡ ಅರಣ್ಯ ಇಲಾಖೆ..!
ಶಿರಸಿಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Tag: Forest news
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
Accused Escaped; ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅದೇನಾಗಿದೆಯೋ ಒಂದೂ ಅರ್ಥ ಆಗ್ತಿಲ್ಲ. ಶ್ರೀಗಂಧ ಸಿಕ್ಕ ಪ್ರಕರಣದಲ್ಲಿ ಆರೋಪಿಯಾಗಿದ್ದವ ಖುದ್ದಾಗಿ ಕಚೇರಿಗೆ ಬಂದರೂ ಆತನನ್ನು ವಶಕ್ಕೆ ಪಡೆಯದೇ ಉಧಾರತೆ ತೋರಿದ್ದಾರೆ. ಹೀಗಾಗಿ, ಆತ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದೇಲ್ಲ ಖುದ್ದು ಮುಂಡಗೋಡ RFO ಸಾಹೇಬರ ಕಣ್ಗಾವಲಿನಲ್ಲೇ ನಡೆದು ಹೋಗಿದೆ ಅನ್ನೋದು ಕಂಡವರ ಆರೋಪ. ಹೀಗಾಗಿ, ಈ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನ ಜನ ಅಡಿಕೆ ಎಲೆ ತಿಂದು.. ಛೀ.. ಅಂತಿದಾರೆ…! ಅಗಡಿಯಲ್ಲಿ ನಡೆದದ್ದು..! ಅಸಲಿಗೆ, ಮುಂಡಗೋಡ ತಾಲೂಕಿನ ಅಗಡಿಯಲ್ಲಿ...
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ...
ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್...
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಕೇಸ್ ನಲ್ಲಿ ಸದ್ಯ ಐವರು DyRFO ಗಳು ನಿರ್ಧಾಕ್ಷಿಣ್ಯವಾಗಿ ಅಮಾನತ್ತಾಗಿದ್ದಾರೆ. ಐವರನ್ನೂ ಅಮಾನತ್ತು ಮಾಡಿ ಶಿರಸಿ ಸಿಸಿಎಫ್ ಕೆ. ವಿ. ವಸಂತ ರೆಡ್ಡಿರವರು ಆದೇಶಿಸಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರೋ RFO ಜಿ.ಟಿ.ರೇವಣಕರ್ ಸಾಹೇಬ್ರನ್ನು ಅಮಾನತ್ತುಗೊಳಿಸುವಂತೆ ಬೆಂಗಳೂರು PCCF ರವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಹುಶಃ ನಾಳೆ ಸಂಜೆಯಷ್ಟೊತ್ತಿಗೆ RFO ಸಾಹೇಬ್ರೂ ಕೂಡ ಸಸ್ಪೆಂಡ್ ಆಗಿ ವಿಶ್ರಾಂತಿ ಪಡಿಯೋದು ನಿಕ್ಕಿಯಾಗಿದೆ. ಅದ್ರ ಜೊತೆ, ಇಡೀ ಇಲಾಖೆಯ ಮಾನವನ್ನು...
ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ರವಿವಾರ ಅರಣ್ಯಗಳ್ಳತನದ ವಿಫಲ ಯತ್ನ ನಡೆದಿದೆ. ಮೂರು ಬೆಲೆಬಾಳುವ ಮರಗಳನ್ನ ಕಡಿದು ಸಾಗಾಟ ಮಾಡಲು ಇನ್ನಿಲ್ಲದ ಯತ್ನ ನಡೆಸಿದ್ದಾರೆ ಆಗಂತುಕರು. ಒಂದರ್ಥದಲ್ಲಿ ಮೇಲ್ನೋಟಕ್ಕೆ, ಇದೇಲ್ಲ ಅದ್ಯಾವನೋ ಅಡ್ನಾಡಿ ಹುಂಬ ಅರಣ್ಯ ಭಕ್ಷಾಸುರನ ಫ್ರೀ ಪ್ಲ್ಯಾನ್ಡ್ ಕೃತ್ಯವಾ ಅಂತಾ ಅನಿಸ್ತಿದೆ. ತಮ್ಮ ಅಕ್ರಮಗಳಿಗೆ “ಬಗಣಿ ಗೂಟ” ಇಟ್ಟು ಅಕ್ರಮಗಳ ಬೆನ್ನು ಬಿದ್ದಿದ್ದ ಅರಣ್ಯ ಇಲಾಖೆಯ ದಕ್ಷ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿರೋ ಕೃತ್ಯ ಅನಿಸ್ತಿದೆ. ಕೆಲವು ದಕ್ಷರ ಮೇಲೆ ಕೆಟ್ಟ ಹೆಸರು ತರಲೆಂದೇ ಮಾಡಿರಬಹುದಾದ...
ಮುಂಡಗೋಡ ಟಿಂಬರ್ ಡೀಪೋದಿಂದ ಕಟ್ಟಿಗೆ ಕಳ್ಳಾಟ ಕೇಸ್, ಸಿಕ್ಕಿಬಿದ್ದ ಲಾರಿಗಳ ಮಾಲೀಕರು, ಚಾಲಕರ ಕುಟುಂಬಸ್ಥರ ಆಕ್ರೋಶ..!
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಿಂದ ಕಟ್ಟಿಗೆ ಸಾಗಾಟ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಕ್ರಮ ಸಾಗಾಟದ ವೇಳೆ ಸಿಕ್ಕಿಬಿದ್ದಿರೋ ಎರಡೂ ಲಾರಿಗಳ ಮಾಲೀಕರು ಹಾಗೂ ಚಾಲಕರ ಕುಟುಂಬಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಕೇಸ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ನಮ್ಮನ್ನ ಬಲಿ ಪಶು ಮಾಡಲಾಗಿದೆ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಹೌದು, ರವಿವಾರ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿರೋ ಲಾರಿ...
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?
ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಕತೆ ಏನಾಯ್ತು..? ಎಸಿಎಫ್ ಸಾಹೇಬ್ರು ಆ ” ಚಕ್ಕಂಬಕ್ಕಳ” ಫಾರೆಸ್ಟರ್ ನ ರಕ್ಷಣೆಗೆ ನಿಂತ್ರಾ..?
ಅಬ್ಬಬ್ಬಾ ಆ ಫಾರೆಸ್ಟರ್ ಅಂದ್ರೆ ಕಾತೂರು ಭಾಗದಲ್ಲಿ ಅದೇಂತದ್ದೋ ಅಂತೆ, ಕಂತೆ..! ಆತನ ಹಿಂದೆ ಸಿಕ್ಕಾಪಟ್ಟೆ ದೊಡ್ಡವರಿದ್ದಾರಂತೆ. ಹೀಗಾಗಿ, ಆತನ ಯಡವಟ್ಟುಗಳು, ದಂಧೆಗಳನ್ನೇಲ್ಲ ಕಣ್ಣಾರೆ ಕಂಡ್ರೂ ಏನೂ ಮಾಡದ ಸ್ಥಿತಿಯಲ್ಲಿ ಕುಳಿತಿದ್ದಾರಂತೆ ಮುಂಡಗೋಡಿನ ಎಸಿಎಫ್ ಸಾಹೇಬಾ..! ನಿಮಗೆ ನೆನಪಿರಬಹುದು, ಕಳೆದ 2022 ರ ಅಕ್ಟೋಬರ್ ತಿಂಗಳಲ್ಲೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಅದೊಂದು ಸುದ್ದಿ ಪ್ರಸಾರ ಮಾಡಿತ್ತು. ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ...
- 1
- 2









