Home mundgod news

Tag: mundgod news

Post
ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?

ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸ್ವಾಮಿಗಳ “ಸಂಗ”..? ಅಸಲು,20 ಸಾವಿರಕ್ಕೆ ವೀಳ್ಯ ಪಡೆದವರು ಯಾರು..?

ಮುಂಡಗೋಡ ಪಟ್ಟಣ ಪಂಚಾಯತಿಗೆ ಮತ್ತೆ ಸಂಗನಬಸಯ್ಯ ಮುಖ್ಯಾಧಿಕಾರಿಯಾಗಿ ವಾಪಸ್ ಬರ್ತಾರಾ.‌? ಹಾಗಂತ ಒಂದು ಗುಮಾನಿ ಪಟ್ಟಣದಲ್ಲಿ ಗುಲ್ಲೆದ್ದಿದೆ‌. ಈ ಕಾರಣಕ್ಕಾಗಿನೇ ಸ್ವಾಮಿಗಳನ್ನು ಮತ್ತೆ ಪ್ರತಿಷ್ಟಾಪನೆಗೊಳಿಸಲು ಕೆಲವೊಬ್ರು ಸಾಹೇಬ್ರ ಜೊತೆ ಮಾತುಕತೆ ಮಾಡಿದ್ರಾ..? ವಾರದಲ್ಲಿ ಮೂರು ದಿನ ಮುಂಡಗೋಡಕ್ಕೆ ಮತ್ತೆ, ಮೂರು ದಿನ ಯಲ್ಲಾಪುರಕ್ಕೆ ಅನ್ನೋ ಕ್ಯಾಲ್ಕುಲೇಶನ್ ನಲ್ಲಿ ಕುಳಿತಿರೊ ಮಾಹಿತಿ ಲಭ್ಯವಾಗ್ತಿದೆ. ವೀಳ್ಯ..? ಇದೇ ವಿಷಯ ಇಟ್ಕೊಂಡು ಅದ್ಯಾರೋ ಮಹಾಶಯರು ಒಬ್ರು ಸಾಹೇಬ್ರ ಜೊತೆ ಮಾತಾಡೋಕೆ ಅಂತಾನೇ ಬರೋಬ್ಬರಿ ಇಪ್ಪತ್ತು ಸಾವಿರಕ್ಕೆ “ವೀಳ್ಯ” ಪಡೆದಿದ್ರು ಅನ್ನೋದು ಲೆಟೆಸ್ಟ್...

Post
ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?

ಪಾಳಾದಲ್ಲಿ MSIL ವೈನ್ ಶಾಪ್ ದೋಚಿದ ಖದೀಮರು, ಗಾಂಧಿ ಜಯಂತಿಯಂದೇ ಅದೇಷ್ಟು ಎಣ್ಣೆ ಕದ್ರು ಗೊತ್ತಾ..?

ಮುಂಡಗೋಡ ತಾಲೂಕಿನ ಪಾಳಾದಲ್ಲಿ MSIL ವೈನ್ ಶಾಪ್ ಕಳ್ಳತನವಾಗಿದೆ. ಸೆಟರ್ಸ್ ಮುರಿದು ಒಳನುಗ್ಗಿರೋ ಕಳ್ಳರು ಸಿಕ್ಕಷ್ಟು ಎಣ್ಣೆ ಬಾಚಿಕೊಂಡು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿಯೇ ನಡೆದಿರೋ ಘಟನೆ, ಇಂದು ಸಂಜೆ ಬೆಳಕಿಗೆ ಬಂದಿದೆ. ಗಾಂಧಿ ಜಯಂತಿಯ ಕಾರಣಕ್ಕೆ ಬಂದ್ ಆಗಿದ್ದ MSIL ವೈನ್ ಶಾಪ್ ಗೆ ಕನ್ನ ಹಾಕಿರೋ ಖದೀಮರು ಸುಮಾರು 60-65 ಸಾವಿರ ಮೌಲ್ಯದ ಮದ್ಯ ಎಗರಿಸಿ ಹೋಗಿದ್ದಾರೆ ಅಂತಾ ಅಂದಾಜಿಸಲಾಗಿದೆ. ಅಂದಹಾಗೆ, ನಿನ್ನೆ ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸನಕೊಪ್ಪದಲ್ಲೂ ಇದೇ‌ಮಾದರಿಯಲ್ಲಿ ವೈನ್...

Post
ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್

ಮುಂಡಗೋಡಿನಲ್ಲಿ ಗಾಂಧಿ ಜಯಂತಿಯಂದು ಪುಣ್ಯದ ಕೆಲಸ ಮಾಡುತ್ತಿರೋ ಧನ್ಯತೆಯಿದೆ- ಸಚಿವ ಹೆಬ್ಬಾರ್

ಮುಂಡಗೋಡ: ಗಾಂಧಿ ಜಯಂತಿ ಹಾಗೂ ಶಾಸ್ತ್ರಿಯವರ ಜಯಂತಿಯಂದು ಮುಂಡಗೋಡಿನಲ್ಲಿ ಪುಣ್ಯದ ಕೆಲಸ ಮಾಡುತ್ತಿರುವ ಧನ್ಯತೆ ಇದೆ ಅಂತಾ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮನತುಂಬಿ ಹೇಳಿದ್ರು.   ಅವ್ರು ಇಂದು ಪಟ್ಟಣದ ಟೌನ್ ಹಾಲ್ ನಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪಟ್ಟಣದ ಗಾಂಧಿನಗರ, ಕಂಬಾರಗಟ್ಟಿ, ಲಂಬಾಣಿ ತಾಂಡಾ, ಅಂಬೇಡ್ಕರ್ ಬಡಾವಣೆಯ 250 ಅರ್ಹ ಫಲಾನುಭವಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿ ಮಾತನಾಡುತ್ತಿದ್ದರು‌. ಮುಂಡಗೋಡಿನ ಬಡವರಿಗೆ ಒಳ್ಳೆಯ ದಿನಗಳು ಬಂದಿವೆ. ಕಳೆದ ಮೂವತ್ತು...

Post
ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!

ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಬಸ್ ವ್ಯವಸ್ಥೆಗೆ ಆಗ್ರಹ, ಮುಂಡಗೋಡಿನಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ..!

ಮುಂಡಗೋಡ: ತಾಲೂಕಿನಲ್ಲಿ ಇದುವರೆಗೂ ಬಸ್ ಮುಖವನ್ನೇ ಕಾಣದ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು ಇಂದು ಪ್ರತಿಭಟನೆಗಿಳಿದಿದ್ದಾರೆ. ನಮಗೆ ಬಸ್ ಬೇಕೇ ಬೇಕು ಅಂತಾ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ರಸ್ತೆ ತಡೆದು ಪ್ರತಿಭಟಿಸಿದ್ದಾರೆ.  ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ, ಗೌಳಿದಡ್ಡಿ ಗ್ರಾಮಗಳಿಗೆ ಇದುವರೆಗೂ ಬಸ್ ಸೌಲಭ್ಯ ಸಿಕ್ಕೇ ಇಲ್ಲ. ಹೀಗಾಗಿ, ಇಲ್ಲಿ ನಿತ್ಯವೂ ನೂರಾರು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಬೇಕು ಅಂದ್ರೆ ಏನಿಲ್ಲವೆಂದರೂ ನಾಲ್ಕೈದು ಕೀ.ಮಿ ನಡೆದುಕೊಂಡೇ ಬರಬೇಕು. ಅಲ್ದೆ ಗ್ರಾಮಸ್ಥರು...

Post
ಬರಗೆಟ್ಟವನ ಲಂಚದಾಸೆಗೆ ಬೀದಿಗೆ ಬಿದ್ಲಾ ಆ ವೃದ್ದೆ..? ಅಸಲು, ಆ ವೃದ್ದೆಗೆ ಆಗಿರೋ ಅನ್ಯಾಯ ಎಂಥಾದ್ದು ಗೊತ್ತಾ..?

ಬರಗೆಟ್ಟವನ ಲಂಚದಾಸೆಗೆ ಬೀದಿಗೆ ಬಿದ್ಲಾ ಆ ವೃದ್ದೆ..? ಅಸಲು, ಆ ವೃದ್ದೆಗೆ ಆಗಿರೋ ಅನ್ಯಾಯ ಎಂಥಾದ್ದು ಗೊತ್ತಾ..?

 ಮುಂಡಗೋಡ: ಪ್ರಿಯ ವೀಕ್ಷಕರೇ, ನಿನ್ನೆ ನಿಮಗೆ ಮುಂಡಗೋಡ ತಾಲೂಕಿನಲ್ಲಿ ಬಡವ್ರಿಗೆ ಹಂಚಿಕೆಯಾಗೋ ಮನೆಗಳಲ್ಲಿ ನಡೆಯುತ್ತಿರೋ ಎತ್ತುವಳಿ ಪುರಾಣದ ಬಗ್ಗೆ ಹೇಳಿದ್ವಿ. ನೊಂದ ಸಂತ್ರಸ್ಥ ಕುಟುಂಬಗಳ ಆರ್ತನಾದ ಕೇಳಿಸಿದ್ವಿ. ಇವತ್ತೂ ಕೂಡ ಅದರದ್ದೇ ಮುಂದುವರಿದ ಭಾಗವಾಗಿ ಅದೊಂದು ಮನಕಲುಕುವ ಹಕೀಕತ್ತು ತಮ್ಮ ಮುಂದೆ ಇಡ್ತಿದಿವಿ. ರೊಕ್ಕ ಗಳಿಸಲೆಂದೇ ಬಾಯ್ತೆರೆದು ಕೂತಿರೋ, ಮನುಷ್ಯತ್ವವನ್ನೇ ಮರೆತಿರೋ ಕೆಲವು ಸರ್ಕಾರಿ ಸಿಬ್ಬಂದಿಗಳು ಹೇಗೇಲ್ಲ ಅಮಾನುಷವಾಗಿ ನಡೆದುಕೊಳ್ತಾರೆ ಅನ್ನೋದನ್ನ ಇವತ್ತು ಹೇಳ್ತಿವಿ.  ವೇದಿಕೆಯಷ್ಟೇ..! ಯಸ್, ನಾವೀಗ ಮುಂಡಗೋಡಿನ ತಹಶೀಲ್ದಾರ್ ಕಚೇರಿಯ ಅವನೊಬ್ಬನ...

Post
ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?

ಮುಂಡಗೋಡ ತಾಲೂಕಿನಲ್ಲಿ ಮನೆ ಕಳೆದುಕೊಂಡ ಬಡವ್ರಿಗೆ ಲಂಚಬಾಕರದ್ದೇ ಕಾಟ, ಸಚಿವರ ಪಿಎ ಹೆಸರಲ್ಲೂ ವಸೂಲಿ..? ಹಿಂಗಾದ್ರೆ ಹೆಂಗೆ ಗುರೂ..?

   ಮುಂಡಗೋಡ: ತಾಲೂಕಿನಲ್ಲಿ ಮಹಾಮಳೆ ಅನ್ನೋದು ಅದೇಷ್ಟೋ ಬಡವರನ್ನು ಬೀದಿಗೆ ತಂದಿದೆ. ಗ್ರಾಮೀಣ ಭಾಗದಲ್ಲಿ ಮಹಾಮಳೆಯಿಂದ ಅದೇಷ್ಟೋ ಬಡಕುಟುಂಬಗಳು ಸೂರು ಕಳೆದುಕೊಂಡು ಅಕ್ಷರಶಃ ನಲುಗಿ ಹೋಗಿವೆ. ಹೀಗಿದ್ದಾಗ, ಸರ್ಕಾರ ಅಂತಹ ಕುಟುಂಬಗಳಿಗೆ ಆಸರೆಯಾಗಲು, ಪರಿಹಾರದ ರೂಪದಲ್ಲಿ ಮನೆಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಳ್ಳಲು ನೆರವು ನೀಡ್ತಿದೆ. ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಹಣ ಕಂತುಗಳ ಮೂಲಕ ಬಿಡುಗಡೆ ಮಾಡ್ತಿದೆ. ಆದ್ರೆ, ಹೀಗೆ ಬರುವ ಹಣದಲ್ಲಿ ಕೆಲವು ಬ್ರಷ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಿಹಾರದ...

Post
ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!

ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕಳ್ಳತನವಾಗಿದೆ. ಒಟ್ಟೂ 1 ಲಕ್ಷ 30 ಸಾವಿರ ಮೌಲ್ಯದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಖದೀಮರು. ವೆಲ್ಡಿಂಗ್ ವರ್ಕ್ ಶಾಪ್ ನ ಮಾಲೀಕ ಎಜಾಜ್ ನವಾಜ ಮಹ್ಮದ್ ರಫೀಕ ನರೇಗಲ್ ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ರಾತ್ರಿ ಘಟನೆ ನಡೆದಿದ್ದು, ನವರಂಗ್ ವೆಲ್ಡಿಂಗ ವರ್ಕ್ಸ್ ಶಾಪ್ ನ ಮುಂದೆ ಇಟ್ಟಿದ್ದ ಕಬ್ಬಿಣದ ಟೇಬಲ್ಲುಗಳು, ದೊಡ್ಡದಾದ ಕಬ್ಬಿಣದ...

Post
ಮುಂಡಗೋಡಿನಲ್ಲಿ ವಿಶ್ವಕರ್ಮ ಜಯಂತಿ ಸರಳ ಉತ್ಸವ..!

ಮುಂಡಗೋಡಿನಲ್ಲಿ ವಿಶ್ವಕರ್ಮ ಜಯಂತಿ ಸರಳ ಉತ್ಸವ..!

ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕಾಡಳಿತ ಹಾಗೂ ಮುಂಡಗೋಡ ತಾಲೂಕ ವಿಶ್ವಕರ್ಮ ಸಮಾಜ ಸೇವಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಉತ್ಸವವನ್ನು ಸರಳವಾಗಿ ಆಚರಿಸಲಾಯಿತು. ವಿಶ್ವಕರ್ಮ ಭಗವಾನರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಗೌರವ ಸಮರ್ಪಣೆ ಮಾಡಲಾಯಿತು. ನಂತರ ಇಲಾಖೆಯ ವತಿಯಿಂದ, ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ, ವಿಶ್ವಕರ್ಮ ಸಮಾಜದ ಶ್ರೀಮತಿ ರೇಣುಕಾ ಬಡಿಗೇರ, ಈಶ್ವರಪ್ಪ ಬಡಿಗೇರ ಇಂದೂರು, ಮೌನೇಶ ಬಡಿಗೇರ ಉಗ್ಗಿನಕೇರಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಿಇಓ...

Post
ಇಂದು “ನಮೋ ಜನ್ಮದಿನ” ಹಡಪದ ಸಮಾಜದಿಂದ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ..!

ಇಂದು “ನಮೋ ಜನ್ಮದಿನ” ಹಡಪದ ಸಮಾಜದಿಂದ ಅರ್ಥಪೂರ್ಣ ಹುಟ್ಟುಹಬ್ಬ ಆಚರಣೆ..!

ಮುಂಡಗೋಡ: ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಸಂಭ್ರಮ ಜೋರಾಗಿತ್ತು. ಇಲ್ಲಿನ ಹಡಪದ ಅಪ್ಪಣ್ಣ ಸಮಾಜದಿಂದ ವಿಶೇಷವಾಗಿ ಮೋದಿಯವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಜ್ಞಾನಪ್ರಜ್ಞಾ ಅಂಧಮಕ್ಕಳ ವಿಶೇಷ ವಸತಿ ಶಾಲೆಯಲ್ಲಿ ಅಂಧ ಮಕ್ಕಳಿಗೆ ಕ್ಷೌರ ಸೇವೆ ಸಲ್ಲಿಸಲಾಯಿತು. ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ ನೇತೃತ್ವದಲ್ಲಿ ಸುಮಾರು 35 ಅಂಧ ಮಕ್ಕಳಿಗೆ ಉಚಿತವಾಗಿ ಕ್ಷೌರ ಮಾಡಲಾಯಿತು. ಕದಂಬ ಹೇರ್ ಡ್ರೆಸಸ್ ನ ಕ್ಷೌರಿಕ ಬಾಂಧವರು ಅಂಧ ಮಕ್ಕಳಿಗೆ ಬೆಳಿಗಿನಿಂದಲೇ ಕ್ಷೌರ...

Post
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?

ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?

 ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ‌. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...