ಮುಂಡಗೋಡ: ಇಲ್ಲಿನ ಕೃಷಿ ಅಧಿಕಾರಿಗಳು ಅದೆಲ್ಲಿಗೆ ಹೋಗಿ ನಿದ್ದೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಅಸಲು “ಹರ್ ಘರ್ ತಿರಂಗಾ” ಕಾರ್ಯಕ್ರಮ ಇವ್ರಿಗೆ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ಈ ಬೇಜವಾಬ್ದಾರಿ ಅಪರಾವತಾರಿ ಅಧಿಕಾರಿಗಳು ಕೃಷಿ ಇಲಾಖೆ ಎದುರು ಧ್ವಜಾರೋಹಣವನ್ನೇ ಮಾಡಿಲ್ಲ. ಹೀಗಾಗಿ, ಸರ್ಕಾರದ ಮಹತ್ವಪೂರ್ಣ ಕಾರ್ಯಕ್ರಮಕ್ಕೆ ಕ್ಯಾರೇ ಅಂದಿಲ್ಲ. ಎಲ್ಲಿದ್ದಿರಾ ಕುಲಕರ್ಣಿ ಸಾಹೇಬ್ರೆ..? ಅಸಲು, ಮುಂಡಗೋಡಿನ ಕೃಷಿ ಇಲಾಖೆಯ ಅಂಗಳಕ್ಕೆ ಬಂದ್ರೆ ಬರೀ ಮಂತ್ರಕ್ಕಿಂತ ಉಗುಳೇ ಜಾಸ್ತಿ ಅನ್ನುವ ಪರಿಸರವಿದೆ. ಕುಲಕರ್ಣಿ ಅನ್ನೋ ಆ ಯಪ್ಪಾ ಬರೀ ಮಾತಾಡುವುದಕ್ಕಷ್ಟೇ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಶೂ ಧರಿಸಿಯೆ ಧ್ವಜ ಸ್ತಂಭ ಏರಿದ ಗುಂಜಾವತಿ ಅರಣ್ಯಾಧಿಕಾರಿ, ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ ಅಲ್ವಾ ಸಾಹೇಬ್ರೆ..?
ಮುಂಡಗೋಡ: ಸದ್ಯ, ರಾಷ್ಟ್ರಾಧ್ಯಂತ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಡಗರ ಸಂಭ್ರಮ ಜೋರಾಗಿದೆ. ಅಗಷ್ಟ 13 ರಿಂದಲೇ “ಹರ್ ಘರ್ ತಿರಂಗಾ” ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ದೇಶಾಧ್ಯಂತ ಅಮೃತ ಮಹೋತ್ಸವದ ಸಂಭ್ರಮ ಮನೆ, ಮನೆ ಮಾತಾಗಿದೆ. ಈ ಹೊತ್ತಲ್ಲೇ ಅವರೊಬ್ಬ ಅಧಿಕಾರಿ ಹೀಗೆ ಮಾಡಿದ್ದು ಸರಿನಾ ಅನ್ನೋ ಪ್ರಶ್ನೆ ಕೂಡ ತಾಲೂಕಿನಾಧ್ಯಂತ ಚರ್ಚೆಯಾಗ್ತಿದೆ. ತಾಲೂಕಿನ ಗುಂಜಾವತಿ ಭಾಗದ ಉಪ ವಲಯ ಅರಣ್ಯಾಧಿಕಾರಿಯೊಬ್ಬರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ರಾ..? ಈ ಪೋಟೋ ನೋಡಿದ್ರೆ ಎಂಥವರಿಗೂ ಹಾಗೆ ಅನ್ನಿಸದೇ ಇರಲ್ಲ....
ಹಿರಿಯ ಸಹಕಾರಿ ಧುರೀಣ ಎಂ.ಬಿ.ಕುಟ್ರಿ ವಿಧಿವಶ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದ ಮುಖಂಡ, ಹಿರಿಯ ರಾಜಕಾರಣಿ ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ್ ಕುಟ್ರಿ ವಿಧಿವಶರಾಗಿದ್ದಾರೆ. ಹುಬ್ಬಳ್ಳಿಯ SDM ನಲ್ಲಿ ಎಂ.ಬಿ.ಕುಟ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ತೀವ್ರ ಆನಾರೋಗ್ಯಕ್ಕೀಡಾಗಿದ್ದ ಎಂ.ಬಿ.ಕುಟ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. APMC ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಎಂ.ಬಿ.ಕುಟ್ರಿ ಜನಾನುರಾಗಿಯಾಗಿದ್ದರು. ಶ್ರೀಯುತರ ನಿಧನಕ್ಕೆ ಹಲವು ನಾಯಕರು ಕಂಬನಿ ಮಿಡಿದಿದ್ದಾರೆ.
ಉಗ್ರ ಸ್ವರೂಪಕ್ಕಿಳಿದ ವಿದ್ಯಾರ್ಥಿಗಳ ಹೋರಾಟ, ಮುಂಡಗೋಡಿನಲ್ಲೇ ರಸ್ತೆ ತಡೆದ ನಂದಿಕಟ್ಟಾ ಗ್ರಾಮಸ್ಥರು..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಸ್ಥರ ಆಕ್ರೋಶ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ವಿದ್ಯಾರ್ಥಿಗಳಿಗೆ ನಿತ್ಯವೂ ಉಂಟಾಗ್ತಿರೊ ಬಸ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲೇ ಬೇಕು. ನಮಗೆ ಬಸ್ ಬೇಕೆ ಬೇಕು ಅಂತಾ ಸತತವಾಗಿ ಪ್ರತಿಭಟನೆ ಕೈಗೊಂಡಿರೋ ನಂದಿಕಟ್ಟ ಭಾಗದ ವಿದ್ಯಾರ್ಥಿಗಳು, ಪೋಷಕರು ಇವತ್ತು ಮುಂಡಗೋಡಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡ್ರು. ನಾಲಾಯಕ ಸಾರಿಗೆ ಅಧಿಕಾರಿಗಳೇ..! ಅಸಲು, ನಿನ್ನೆ ಸಂಜೆ 4.30 ರಿಂದ ಇಂದೂರಿನ ಸಮೀಪ ಪ್ರೌಢಶಾಲೆಯ ಹತ್ತಿರ ಬಸ್ ತಡೆದು ಪ್ರತಿಭಟಿಸಿದ್ದ ವಿದ್ಯಾರ್ಥಿಗಳಿಗೆ ಯಾರೂ ಕ್ಯಾರೇ ಅಂದಿರಲಿಲ್ಲ....
ನಮಗೆ ಬಸ್ ಬೇಕೇ ಬೇಕು..! ಇಂದೂರಿನಲ್ಲಿ ವಿದ್ಯಾರ್ಥಿಗಳಿಂದ ಮಳೆಯಲ್ಲೇ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆ ಹತ್ತಿರ ಸುರಿವ ಮಳೆಯಲ್ಲೇ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ರು. ಅಸಲು, ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಕೆಂದಲಗೇರಿ, ಹುಲಿಹೊಂಡ, ಬಸಾಪುರ ಗ್ರಾಮದ ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ಇಂದೂರುಹೈಸ್ಕೂಲ್ ಹತ್ತಿರ.. ಅಂದಹಾಗೆ, ಇಂದು ಸಂಜೆ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಸುಮಾರು...
ಸನವಳ್ಳಿಯಲ್ಲಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಮೂಲಕ ಹೊರಟ ಭವ್ಯ ಮೂರ್ತಿ..!
ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಹೀಗಾಗಿ, ಇಂದು ಪಟ್ಟಣದ ಮಾರಿಕಾಂಬಾ ದೇವಸ್ಥಾನದ ಆವರಣಕ್ಕೆ ಆಗಮಿಸಿದ್ದ ಸಂಗೊಳ್ಳಿ ರಾಯಣ್ಣನವರ ಮೂರ್ತಿಗೆ ಭವ್ಯ ಸ್ವಾಗತ ಕೋರಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಾಯಣ್ಣನ ಮೂರ್ತಿಯ ಭವ್ಯ ಮೆರವಣಿಗೆ ನಡೆಸಲಾಯಿತು. ಇನ್ನು ಮೆರವಣಿಗೆ ನಂತರ ಸನವಳ್ಳಿ ಗ್ರಾಮಕ್ಕೆ ಕೊಂಡೊಯ್ಯಲಾಗುವ ರಾಯಣ್ಣನ ಮೂರ್ತಿಗೆ ವಿಶೇಷ ಗೌರವಗಳೊಂದಿಗೆ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ.
ಮುಂಡಗೋಡ ತಾಲೂಕಿನಲ್ಲಿ ಹಿಂದು ಮುಸ್ಲಿಂ ಭಾವೈಕ್ಯತೆಯ ಮೊಹರಂ ಸಂಭ್ರಮ..!
ಮುಂಡಗೋಡ: ತಾಲೂಕಿನಾಧ್ಯಂತ ಮೊಹರಂ ಹಬ್ಬದ ಕೊನೆಯ ದಿನದ ಸಂಭ್ರಮ ಜೋರಾಗಿದೆ. ಕಳೆದ ಐದು ದಿನಗಳಿಂದ ತಾಲೂಕಿನಾಧ್ಯಂತ ಹಿಂದು ಮುಸ್ಲಿಂ ಬಾಂಧವರು ಭಾವೈಕ್ಯತೆಯ ಮೊಹರಂ ಆಚರಿಸುತ್ತಿದ್ದಾರೆ. ಬುಧವಾರ ಮೊಹರಂ ಕೊನೆಯ ದಿನದ ಆಚರಣೆಯಾಗಿದೆ. ಅಗ್ನಿ ಕುಂಡ..! ತಾಲೂಕಿನೆಲ್ಲೆಡೆ ಮೊಹರಂ ಪಂಜಾಗಳನ್ನು ಪ್ರತಿಷ್ಟಾಪಿಸಿ ಇಂದು ವಿಸರ್ಜನೆ ನಡೆಯುತ್ತಿದೆ. ಹೀಗಾಗಿ, ಇಂದು ಬೆಳಿಗಿನ ಜಾವ ಅಗ್ನಿ ಕುಂಡ ರಚಿಸಿ ಪಂಜಾಗಳನ್ನು ಹೊತ್ತು ಕೆಂಡ ತುಳಿಯಲಾಯಿತು. ಆ ನಂತರದಲ್ಲಿ ಪಂಜಾಗಳ ಮೆರವಣಿಗೆ ನಡೆಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಪಂಜಾಗಳಿಗೆ...
ಬಾಚಣಕಿ ಸಮೀಪ ರಸ್ತೆ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಸ್ಥಗಿತ..!
ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿದೆ. ನಿರಂತರ ಮಳೆಯಿಂದ ಬೃಹತ್ ಮರ ರಸ್ತೆ ಮೇಲೆ ಉರುಲಕಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತವಾಗಿದೆ. ರಸ್ತೆ ಬದಿ ಇದ್ದ ಮರ ಮದ್ಯಾಹ್ನ ಏಕಾಏಕಿ ಉರುಳಿ ಬಿದ್ದಿದೆ. ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ, ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಕಂದಾಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದಾರೆ. ಅಂದಹಾಗೆ, ಕಳೆದ ಹತ್ತು ದಿನಗಳಿಂದ ತಾಲೂಕಿನಲ್ಲಿ ನಿರಂತರವಾಗಿ ಬಿಟ್ಟೂ ಬಿಡದೇ ಸುರಿಯುತ್ತಿರೋ...
ಮುಂಡಗೋಡಿನಲ್ಲಿ ಕಾರ್ ಡಿಕ್ಕಿಯಾಗಿ ಆಕಳ ಕರು ಸ್ಥಳದಲ್ಲೇ ಸಾವು..!
ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ತದ ಮಡುವಿನಲ್ಲಿ...
ನ್ಯಾಸರ್ಗಿಯಲ್ಲಿ ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಎರಡು ಶ್ವಾನಗಳ ದಾರುಣ ಸಾವು..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ವಿದ್ಯುತ್ ಅವಘಡವಾಗಿದೆ. ನಿರಂತರ ಮಳೆಯಿಂದ, ರಾತ್ರಿ ವೇಳೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ವಿದ್ಯತ್ ತಂತಿ ಸ್ಪರ್ಶಿಸಿ ಎರಡು ನಾಯಿಗಳು ಸ್ಥಳದಲ್ಲೇ ದಾರುಣ ಸಾವು ಕಂಡಿವೆ. ತಪ್ಪಿದ ಭಾರೀ ಅನಾಹುತ..! ಬಹುತೇಕ ಪುಟ್ಟ ಪುಟ್ಟ ಮಕ್ಕಳು ಓಡಾಡುವ ಸ್ಥಳ ಇದಾಗಿದೆ. ಅಲ್ಲದೇ ಮನೆಯ ಎದುರಿಗೆ ಇಂತಹದ್ದೊಂದು ಘಟನೆ ನಡೆದಿದೆ. ವಿದ್ಯುತ್ ತಂತಿ ಮರಕ್ಕೆ ತಾಗಿಕೊಂಡು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ತಂತಿ ತುಂಡಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಜನರ ಜೀವ ಹಾನಿಯಾಗಿಲ್ಲ....









