Home mundgod news

Tag: mundgod news

Post
ಪಾಳಾದ ದೊಡ್ಡಕೆರೆ ಒಡೆಯುವ ಆತಂಕ, ಅಧಿಕಾರಿಗಳಿಗೆ ದಿಗ್ಭಂಧನ ಹಾಕಿ, ತೀವ್ರ ತರಾಟೆಗೆ ಪಡೆದ ಅನ್ನದಾತರು..!

ಪಾಳಾದ ದೊಡ್ಡಕೆರೆ ಒಡೆಯುವ ಆತಂಕ, ಅಧಿಕಾರಿಗಳಿಗೆ ದಿಗ್ಭಂಧನ ಹಾಕಿ, ತೀವ್ರ ತರಾಟೆಗೆ ಪಡೆದ ಅನ್ನದಾತರು..!

  ಮುಂಡಗೋಡ ತಾಲೂಕಿನ ಪಾಳಾ ದೊಡ್ಡಕೇರಿ ಸಂಪೂರ್ಣ ಭರ್ತಿಯಾಗಿದೆ‌. ನಿರಂತರ ಮಳೆಯಿಂದ ತಾಲೂಕಿನಲ್ಲೇ ಅತಿದೊಡ್ಡ ಕೆರೆಯ ಸ್ಥಾನ ಪಡೆದಿರೊ ದೊಡ್ಡಕೆರೆ ಭರ್ತಿಯಾಗಿದ್ದು, ಜೊತೆಗೆ ಈ ಭಾಗದ ಜ‌ನರಿಗೆ, ರೈತರಿಗೆ ಆತಂಕವೂ ಶುರುವಾಗಿದೆ. ಯಾಕಂದ್ರೆ, ಚಿಕ್ಕ ನೀರಾವರಿ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಗೆ ಇಡೀ ಕೆರೆಯೇ ಒಡೆದು ಹೋಗುವ ಆತಂಕದಲ್ಲಿದೆ‌. ಇನ್ನೇರಡು ದಿನ ಹೀಗೆ ಮಳೆ ಸುರಿದ್ರೆ ಇಡೀ ಕೆರೆಯೇ ಒಡೆದು ಹೋಗುವ ಹಂತಕ್ಕೆ ಬಂದಿದೆ. ಹೀಗಾಗಿ, ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗಳಿಗೆ ರೈತರು ದಿಗ್ಬಂಧನ ಹಾಕಿ...

Post
ಧಾತ್ರಿ ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ,ಪುಸ್ತಕ ವಿತರಣೆ..!

ಧಾತ್ರಿ ಪೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ,ಪುಸ್ತಕ ವಿತರಣೆ..!

ಮುಂಡಗೋಡ: ತಾಲೂಕಿನ ಕೋಡಂಬಿ, ಬೆಡಸಗಾಂವ್, ಮಳಗಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಧಾತ್ರಿ ಫೌಂಡೇಶನ್ ವತಿಯಿಂದ ಉಚಿತ ಪಠ್ಯ, ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ್ ಭಟ್, ಫಣಿರಾಜ್ ಹದಳಗಿ, ಗಿರೀಶ್ ಕಾತೂರು, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ, ದಿವಾನ್ ಸಾಬ್, ವಿಜಯ್ ಕುರುಬರ ಹಾಗೂ ಪಂಚಾಯತ್ ಅಧ್ಯಕ್ಷರು, ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮದ ಮುಖಂಡರು, ಶಿಕ್ಷಕವೃಂದ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Post
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?

ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?

 ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ...

Post
ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಮುಂಡಗೋಡಿನ “ಮಾಸ್” ಹುಡುಗ್ರ ಸ್ಟೆಪ್..!

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಮುಂಡಗೋಡಿನ “ಮಾಸ್” ಹುಡುಗ್ರ ಸ್ಟೆಪ್..!

 ಮುಂಡಗೋಡಿನ ಯುವಕರ ಪಡೆಯೊಂದು ತಾಲೂಕಿನ ಹೆಮ್ಮೆಗೆ ಕಾರಣವಾಗಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗೋ “ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್” ಸ್ಪರ್ಧಾ ಕಾರ್ಯಕ್ರಮದಲ್ಲಿ ಮುಂಡಗೋಡಿನ ನೃತ್ಯ ಪಟುಗಳು ಭಾಗಿಯಾಗಿದ್ದಾರೆ. ಇಂದು ರವಿವಾರ ರಾತ್ರಿ ನಮ್ಮ ಹೆಮ್ಮೆಯ ಯುವಕರ ಡ್ಯಾನ್ಸ್ ಕಾರ್ಯಕ್ರಮ ಪ್ರಸಾರವಾಗಲಿದೆ. ಅಂದಹಾಗೆ, ಮುಂಡಗೋಡಿನ ಮಾಸ್ ಅಕಾಡೆಮಿಯ ಹುಲಿಗಳು ಇವ್ರು. ಸಂದೀಪ್ ಕೋರಿ, ಸಾನಿಕಾ ಪವಾರ್,ರಂಜಿತಾ ಜೀವಣ್ಣವರ, ಮನೋಜ್ ಮೆತ್ರಾಣಿ ಎಂಬುವ ಡ್ಯಾನ್ಸ್ ಕಲಿಗಳು ಟಿವಿ ಪರದೆಯ ಮೇಲೆ ಇಂದು ಮಿಂಚಲಿದ್ದಾರೆ. ಪ್ರತೀ ಶನಿವಾರ, ರವಿವಾರ ಜೀ ಕನ್ನಡ...

Post
ಚೌಡಳ್ಳಿ-ಮಲವಳ್ಳಿ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..!

ಚೌಡಳ್ಳಿ-ಮಲವಳ್ಳಿ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..!

ಮುಂಡಗೋಡ: ತಾಲೂಕಿನ ಚೌಡಳ್ಳಿ- ಮಲವಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಎರಡನೇ ಅವಧಿಗೆ, ನೂತನ ಅಧ್ಯಕ್ಷರಾಗಿ ಮೌಲಾಸಾಬ ಪೀರ್ ಸಾಬ್ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಯಲ್ಲಪ್ಪ ಬಿಸುಗಣ್ಣನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮುಖಂಡರಾದ ವೈ.ಪಿ ಪಾಟೀಲ್, ಅರ್ಜುನಪ್ಪ ಸಿಗ್ನಳಿ, ಪಿ. ಜಿ.ಪಾಟೀಲ, ಪರಶುರಾಮ್ ತಹಸೀಲ್ದಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ.ಭುಜಂಗಿ, ಪರಶುರಾಮ್ ಕುರಿಯವರ್, ಬಸವರಾಜ್ ಉಗ್ಗಿನಕೇರಿ, ರಾಮಚಂದ್ರ ರಾಥೋಡ್, ಮಹೇಶ್ ಅರ್ಕಸಾಲಿ, ಚವಡಳ್ಳಿ ಗ್ರಾಪಂ ಸದಸ್ಯ ಪ್ರದೀಪ್ ಚವಾಣ್, ಅಬ್ದುಲ್ ಖಾದರ್...

Post
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!

ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!

ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ನಂದಿಕಟ್ಟಾದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ..!

ನಂದಿಕಟ್ಟಾದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹ, ವಿದ್ಯಾರ್ಥಿಗಳಿಂದ ಬಸ್ ತಡೆದು ಪ್ರತಿಭಟನೆ..!

 ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಆದ್ಯಕ್ಷ ವಿ.ಎಸ್. ಪಾಟೀಲರ ತವರಲ್ಲಿ ನಿತ್ಯವೂ ವಿದ್ಯಾರ್ಥಿಗಳು ಗೋಳು ಅನುಭವಿಸ್ತಿದಾರೆ. ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಗ್ರಾಮದಲ್ಲಿ ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ವಿದ್ಯಾರ್ಥಿಗಳು ಪ್ರತಿಭಟಿಸಿದ್ದಾರೆ. ಅಂದಹಾಗೆ..! ನಂದಿಕಟ್ಟಾ ಗ್ರಾಮದಿಂದ ಮುಂಡಗೋಡಿಗೆ ಪ್ರತಿದಿನ 150 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತೆರಳುತ್ತಾರೆ. ಹಾಗೆ ತೆರಳುವ ಮಕ್ಕಳಿಗೆ ನಿತ್ಯವೂ ಸರಿಯಾದ ಸಮಯಕ್ಕೆ ಬಸ್ ಬರೋದೋ ಇಲ್ಲ....

Post
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?

ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?

 ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ....

Post
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!

ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!

ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ‌ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.

Post
ಚೌಡಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕಟಗಿ ಅವಿರೋಧ ಆಯ್ಕೆ ಫಿಕ್ಸ್..!

ಚೌಡಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಮಂಜುನಾಥ್ ಕಟಗಿ ಅವಿರೋಧ ಆಯ್ಕೆ ಫಿಕ್ಸ್..!

ಮುಂಡಗೋಡ: ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಚೌಡಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಗಾದಿಯ ಫೈಟ್ ನಿರ್ಣಾಯಕ ಹಂತಕ್ಕೆ ಬಂದು ನಿಂತಿದೆ. ನೇತ್ರಾವತಿ ಬಿಸವಣ್ಣವರ್ ರಾಜೀನಾಮೆಯಿಂದ ಖಾಲಿಯಾಗಿದ್ದ ಅಧ್ಯಕ್ಷ ಖುರ್ಚಿಗೆ ಮಂಜುನಾಥ್ ಕಟಗಿ ನೂತನ ಅಧ್ಯಕ್ಷರಾಗಿ ಪಟ್ಟಕ್ಕೆ ಏರೋದು ಬಹುತೇಕ ಕನ್ಫರ್ಮ್ ಆದಂತಾಗಿದೆ. ಅವಿರೋಧ ಆಯ್ಕೆನಾ..? ಬಿಜೆಪಿಯಲ್ಲೇ ಎರಡೆರಡು ಬಣಗಳಾಗಿ ಕಚ್ಚಾಡಿಕೊಂಡಿದ್ದ ಚೌಡಳ್ಳಿ ಪಂಚಾಯತಿಯ ಅಧಿಕಾರದ ತಿಕ್ಕಾಟ, ಇಡೀ ತಾಲೂಕಿನ ಬಿಜೆಪಿ ಮುಖಂಡರುಗಳಿಗೆ ಮುಜುಗರ ತಂದಿಟ್ಟಿತ್ತು. ಕೋರ್ಟ್ ಅಂಗಳಕ್ಕೂ ಹೋಗಿ ಬಂದಿದ್ದ ಅಧ್ಯಕ್ಷರ ಬದಲಾವಣೆ ಪ್ರಹಸನಗಳು ಖುದ್ದು ಸಚಿವ ಶಿವರಾಮ್...