ಮುಂಡಗೋಡ: ತಾಲೂಕಿನ ಹಲವು ಕಡೆ ಭರ್ಜರಿ ಮಳೆಯಾಗಿದೆ. ಸಂಜೆಯಿಂದ ಒಂದು ಗಂಟೆಗೂ ಹೆಚ್ಚು ಕಾಲ ಭಾರೀ ಮಳೆಯಾಗಿದೆ. ಇದ್ರಿಂದ ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿದೆ. ಮುಂಡಗೋಡ ತಾಲೂಕಿನ ಬಡ್ಡಿಗೇರಿ ಹಾಗೂ ಗುಂಜಾವತಿ ಮದ್ಯೆ ಬಡ್ಡಿಗೇರಿ ಹಳ್ಳ ತುಂಬಿದ ಪರಿಣಾಮ ಹಳ್ಳದ ನೀರು ರಸ್ತೆಯ ಮೇಲೆ ಹರಿದು, ಕಿರು ಸೇತುವೆ ಮುಳುಗಡೆಯಾಗಿದೆ. ಹೀಗಾಗಿ, ರಸ್ತೆ ಮೇಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಯಲ್ಲಾಪುರ ರಸ್ತೆಯ ಬಹುತೇಕ ಕಡೆ ಭಾರಿ ಮಳೆಯಾಗಿದ್ದು ,ಹಲವು ಹಳ್ಳಗಳಲ್ಲಿ ನೀರು ಭರ್ತಿಯಾಗಿ ಹರಿಯುತ್ತಿದೆ.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಲಕ್ಕೊಳ್ಳಿಯ ಯುವ ಕ್ರೀಡಾಪಟು ಎನ್.ಎಸ್. ಸಿಮಿ ಸಂಭ್ರಮದ ಹೆಜ್ಜೆ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಲಕ್ಕೊಳ್ಳಿ ಗ್ರಾಮದ ಯುವ ಕ್ರೀಡಾಪಟು ಎನ್.ಎಸ್.ಸಿಮಿ, ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ 4×100 ಮೀ ರಿಲೇ ಓಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಅಲ್ಲಿಂದಲೇ, ವಿಡಿಯೋ ಮೂಲಕ ಸಂತಸ ಹಂಚಿಕೊಂಡಿದ್ದಾರೆ. ಕಾಮನ್ವೆಲ್ತ್ ಗೇಮ್ಸ್ ಗೆ ಆಯ್ಕೆಯಾಗಿ ಮುಂಡಗೋಡ ತಾಲೂಕಿನ ಕೀರ್ತಿಯನ್ನು ಹಾಗೂ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ಸದ್ಯ ಇಂಗ್ಲೆಂಡ್ ನ ಬರ್ಮಿಂಗ್ ಹ್ಯಾಮ್ ನಲ್ಲಿರೊ ಎನ್.ಎಸ್.ಸಿಮಿ, ಹುರುಪಿನಿಂದಲೇ ಭಾರತ ಧ್ವಜ ಹಿಡಿದು ಸಂಭ್ರಮಿಸಿದ್ದಾರೆ....
ಗೌರವಧನ ಹೆಚ್ಚಳ ಸೇರಿ, ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಶಿಕ್ಷಕರಿಂದ ಸರ್ಕಾರಕ್ಕೆ ಮನವಿ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಇಂದು ಅತಿಥಿ ಶಿಕ್ಷಕರು, ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಅರ್ಪಿಸಿದ್ರು. ಶಿಕ್ಷಣ ಇಲಾಖೆಯ ಗುರಿ ಸಾಧನೆಗಾಗಿ ಹಾಗೂ ಮಕ್ಕಳ ಕಲಿಕಾ ಹಿತ ದೃಷ್ಠಿಯಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದೆ. ಸದ್ಯ, ಸರ್ಕಾರವು ನಿಗಧಿಪಡಿಸಿದ ಗೌರವಧನದಿಂದ ದೈನಂದಿನ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಹೀಗಾಗಿ, ಕನಿಷ್ಠ 25 ಸಾವಿರ ರೂ. ಗೌರವಧನ ನಿಗಧಿ ಮಾಡಬೇಕು. ಅಲ್ಲದೆ, ಸರ್ಕಾರ ನೀಡುತ್ತಿರೋ ಗೌರವಧನ, ನೇಮಕಗೊಂಡು 2 ತಿಂಗಳು ಕಳೆಯುತ್ತಿದ್ದರೂ ಇದುವರೆಗೂ ಕೈ ಸೇರಿಲ್ಲ....
ನಂದಿಪುರ ಬಳಿ ಬೊಲೆರೋ ವಾಹನ ತಪ್ಪಿಸಲು ಹೋಗಿ ರಸ್ತೆ ಬದಿಗೆ ಜಾರಿದ KSRTC ಬಸ್..!
ಮುಂಡಗೋಡ: ತಾಲೂಕಿನ ನಂದಿಪುರ ಸಮೀಪ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ಪರಿಣಾಮ ಮೂರ್ನಾಲು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎದುರಿಗೆ ಬಂದ ಬುಲೆರೋ ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಗೆ ತಾಗಿ ನಿಂತಿದೆ. ರಸ್ತೆ ಬದಿಯಲ್ಲಿದ್ದ ಮರಕ್ಕೆ ತಾಗಿ ನಿಂತ ಪರಿಣಾಮ ಬಸ್ ಮುಂಬದಿಯ ಗ್ಲಾಸ್ ಜಖಂ ಗೊಂಡಿದೆ. ಇನ್ನು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ತೆರೆದು ಹೊರ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!
ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ಮರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರೇಶ ರಾಮಣ್ಣ ಗೊಲ್ಲರ್ ಎಂಬುವನ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಮರಿಗಳೊಂದಿಗೆ ಆಹಾರ ಅರಸಿ ಬಂದಿದ್ದ ಕರಡಿ ರೈತನನ್ನು ನೋಡಿ ಪ್ರಾಣಭಯದಿಂದ ದಾಳಿ ಮಾಡಿದೆ ಎನ್ನಲಾಗಿದೆ. ಅಂದಹಾಗೆ, ಗದ್ದೆಯಲ್ಲಿ ಮಂಗಗಳ ಹಾವಳಿ ಕಾರಣಕ್ಕೆ ಗೋವಿನಜೋಳ ರಕ್ಷಣೆಗಾಗಿ ಕಟ್ಟಿದ್ದ ಶ್ವಾನಗಳಿಗೆ ಆಹಾರ ಕೊಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಸ್ಥಳೀಯರು ರೈತನ ನೆರವಿಗೆ ಬಂದಿದ್ದಾರೆ....
ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು, ಗದ್ದೆಗಳಲ್ಲಿ ಗಜರಾಜನ ಹೆಜ್ಜೆ ಗುರುತು ಪತ್ತೆ..! ಆತಂಕದಲ್ಲಿ ರೈತರು..!!
ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು ಠಿಕಾಣಿ ಹೂಡಿದೆಯಾ..? ಇಂತಹದ್ದೊಂದು ಅನುಮಾನ ಈ ಭಾಗದ ರೈತರಿಗೆ ನಿದ್ದೆಗೆಡಿಸಿದೆ. ನಿನ್ನೆ ರಾತ್ರಿ ಸನವಳ್ಳಿ ಭಾಗದ ಕಾಡಂಚಿನ ಗದ್ದೆಗಳಲ್ಲಿ ಕಾಡಾನೆಗಳು ಓಡಾಡಿ ಹೋಗಿರೋ ಕುರುಹುಗಳು ಸಿಕ್ಕಿವೆ. ಸನವಳ್ಳಿಯ ಫಕ್ಕೀರಪ್ಪ ಬೋಕಿಯವರ್, ಪಕ್ಕಿರೇಶ್ ಕೆರಿಹೊಲದವರ, ರಮೇಶ್ ಅರಶೀಣಗೇರಿಯವರ ನಾಟಿ ಮಾಡಿರೋ ಬತ್ತದ ಗದ್ದೆಗಳಲ್ಲಿ, ಗೋವಿನಜೋಳದ ಗದ್ದೆಗಳಲ್ಲಿ ಆನೆಗಳು ನಡೆದಾಡಿರೋ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಇನ್ನು ಅಡಿಕೆ ತೋಟದಲ್ಲಿ ನುಗ್ಗಿರೋ ಆನೆಗಳು ಕೆಲವು ಅಡಿಕೆ ಗಿಡಗಳಿಗೆ ಹಾನಿ ಮಾಡಿವೆ. ಹೀಗಾಗಿ...
ನಂದಿಕಟ್ಟಾ ಗ್ರಾಮದಲ್ಲಿ ಬಾಲಕನಿಗೆ ಕಚ್ಚಿದ ಉರಿಮಂಡಲ ಹಾವು, ಕಿಮ್ಸ್ ಗೆ ದಾಖಲು..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 16 ವರ್ಷದ ಬಾಲಕನಿಗೆ ಉರಿಮಂಡಲ ಹಾವು ಕಚ್ಚಿದೆ. ಪರಿಣಾಮ ಗಾಯಗೊಂಡ ಬಾಲಕನಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂದಿಕಟ್ಟಾ ಗ್ರಾಮದಲ್ಲಿ ಸಂಜೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಕಟ್ಟಿಗೆ ಮೇಲೆ ಕಾಲಿಟ್ಟ ಬಾಲಕ ನಂದನ್ ರವಿ ತೇರಗಾಂವ್(16) ಎಂಬುವವನಿಗೆ ಕಟ್ಟಿಗೆಯಡಿ ಇದ್ದ ಹಾವು ಕಾಲಿಗೆ ಕಚ್ಚಿದೆ. ತಕ್ಷಣವೇ ಬಾಲಕನನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿಂದ ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಬಾಲಕನ ಆರೋಗ್ಯ ಸ್ಥಿರವಾಗಿದೆ ಅಂತಾ ಕುಟುಂಬದ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ....
ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ವಿಷಕಾರಿ ಹಾವು ಕಚ್ಚಿ ರೈತನೋರ್ವ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಅಸಲು ಹಾವು ಕಚ್ಚಿಯೇ ಮೃತಪಟ್ಟಿದ್ದಾನಾ ಅಥವಾ ಬೇರೆ ಯಾವುದೋ ಕಾರಣಕ್ಕೆ ಮೃತಪಟ್ಟಿದ್ದಾನಾ..? ಮಾಹಿತಿ ಲಭ್ಯವಾಗಬೇಕಿದೆ. ಕೊಪ್ಪ ಗ್ರಾಮದ ಚಂದ್ರು ಗಾಂಜಿ(56) ಎಂಬುವವನೇ ಮೃತಪಟ್ಟ ರೈತನಾಗಿದ್ದಾನೆ. ಇಂದು ಮುಂಜಾನೆ ತನ್ನ ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸಲು ಗದ್ದೆಗೆ ತೆರಳಿದ್ದ ಚಂದ್ರು ಮದ್ಯಾನದವರೆಗೂ ಭತ್ತಕ್ಕೆ ಔಷಧಿ ಸಿಂಪಡಿಸಿದ್ದಾನೆ. ಆದ್ರೆ ಅದ್ಯಾವಾಗ ಹಾವು...
ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಶ್ರೀಮಾರಿಕಾಂಬಾದೇವಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಕೇಸ್ ಕೂಡ ಬಟಾ ಬಯಲಾಗಿದೆ. ಮುಂಡಗೋಡ ಪೊಲೀಸರ ಖಡಕ್ ತನಿಖೆಯಲ್ಲಿ ಆ ಗ್ರಾಮದಲ್ಲೇ ಅಡಗಿ ಕುಳಿತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್ ಐ ಬಸವರಾಜ್ ಮಬನೂರು ಕಳ್ಳತನದ ಕೇಸ್ ಬಯಲು ಮಾಡಿದ್ದಾರೆ. ಮಳ್ಳನಂತಿದ್ದ ಕಳ್ಳ..! ಅಸಲಿಗೆ, ಊರ ದೇವಿಯ ಆಭರಣವನ್ನೇ ಎಗರಿಸಿ ಮಳ್ಳನಂತೆ ಕುಳಿತಿದ್ದ, ಸನವಳ್ಳಿ ಗ್ರಾಮದ ಮಹಾಂತೇಶ್ ಅರ್ಜುನ್ ಆರೆಗೊಪ್ಪ ಎಂಬುವ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ....
ಅಡಿಕೆ ಕಳ್ಳತನ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸರು, ಕೊಪ್ಪ ಗ್ರಾಮದವನೇ ಅಡಿಕೆ ಕದ್ದವನಂತೆ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಡಿಕೆ ಕಳ್ಳತನ ಮಾಡಿದ್ದ ಆರೋಪಿಯನ್ನು ರಾತ್ರೋ ರಾತ್ರಿ ಎಳೆದು ತಂದಿದ್ದಾರೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಮತ್ತವರ ತಂಡ ಅಡಿಕೆ ಕಳ್ಳತನದ ಕೇಸ್ ಸಾರಾಸಗಟಾಗಿ ಬೇಧಿಸಿದೆ. ಕೊಪ್ಪ (ಇಂದೂರು) ಗ್ರಾಮದ ಫಕ್ಕಿರೇಶ ಮಲ್ಲಪ್ಪ ದೊಡ್ಮನಿ ಎಂಬುವವನೇ ಅಡಿಕೆ ಕಳ್ಳತನದ ಆರೋಪಿಯಾಗಿದ್ದು, ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಈತನನ್ನು ಖಚಿತ ಸುಳಿವಿನ ಮೇರೆಗೆ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ ಐ ಬಸವರಾಜ್ ಮಬನೂರು ಸೇರಿದಂತೆ ಮತ್ತವರ ತಂಡ ದಾಳಿ ಮಾಡಿ...









