ಮುಂಡಗೋಡ: ತಾಲೂಕಿನ ಚಿಗಳ್ಳಿಯಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವನ್ನಪ್ಪಿದ್ದಾನೆ. ಪಾಂಡುರಂಗ ಚೆನ್ನಾಪುರ(48) ಹಾವು ಕಚ್ಚಿ ಮೃತಪಟ್ಟ ರೈತನಾಗಿದ್ದಾನೆ. ಇಂದು ಬೆಳಿಗ್ಗೆ ತನ್ನ ಗೋವಿನಜೋಳದ ಗದ್ದೆಯಲ್ಲಿ ಗೊಬ್ಬರ ಸಿಂಪಡಿಸುವ ವೇಳೆ ಆಕಸ್ಮಿಕವಾಗಿ ಹಾವು ಕಚ್ಚಿದೆ. ಹೀಗಾಗಿ, ತೀವ್ರ ಅಸ್ವಸ್ಥಗೊಂಡಿದ್ದ ರೈತನನ್ನು ಚಿಕಿತ್ಸೆಗಾಗಿ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ತೆ ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತಪಟ್ಟಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಹೈಕೋರ್ಟ್ ಮದ್ಯಂತರ ಆದೇಶ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ ದಿಢೀರ್ ವಾಪಸ್..!
ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರ ಹಾವು ಏಣಿ ಆಟ ಮುಂದುವರೆದಿದೆ. ಅಧ್ಯಕ್ಷ ಸುನಿಲ್ ವಾಗು ಸಳಕೆ ಜುಲೈ 16 ರಂದು ತಮ್ಮ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಈ ಮೂಲಕ ಮತ್ತೊಂದು ಆಟ ಶುರುವಿಟ್ಟು ಸೆಡ್ಡು ಹೊಡೆದಿದ್ದಾರೆ. ಮದ್ಯಂತರ ಆದೇಶ..! ಅಂದಹಾಗೆ, ನಾಗನೂರು ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಭೆ ಕರೆಯುವಂತೆ ಕೆಲವು ಸದಸ್ಯರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿರಸಿ ಉಪವಿಭಾಗದ ಸಹಾಯಕ್ ಆಯುಕ್ತರು ಜುಲೈ 25...
ಮತ್ತೆ ಕೋಮಾ ಸ್ಥಿತಿಗೆ ತಲುಪೇ ಬಿಡ್ತಾ ಮುಂಡಗೋಡ ಕಾಂಗ್ರೆಸ್..? ಅಷ್ಟಕ್ಕೂ ಎಲ್ಲಿದ್ದಾರೆ ಪ್ರಶಾಂತಣ್ಣ..?
ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಅನ್ನೋದು ಕೋಮಾ ಸ್ಥಿತಿಗೆ ತಲಪೇ ಬಿಡ್ತಾ..? ಸದ್ಯದ ಪರಿಸ್ಥಿತಿ ನೋಡಿದ್ರೆ ಹಾಗೇ ಅನ್ನಿಸ್ತಿದೆ. ತಾಲೂಕಿನಲ್ಲಿ ಒಂದೊಳ್ಳೆ ಅವಕಾಶ ಹೊಂದಿದ್ದ ಕೈ ಪಡೆಗೆ, ಸಿಕ್ಕ ಅವಕಾಶ ಬಳಸಿಕೊಳ್ಳುವ ಯಾವೊಂದೂ ಕಾರ್ಯಗಳೂ ಜಾರಿಯಾಗಲೇ ಇಲ್ಲ ಅನ್ನೋದು ಖುದ್ದು ಅದೇ ಪಕ್ಷದ ನಿಷ್ಟಾವಂತರನ್ನು ಚಿಂತೆಗೀಡು ಮಾಡಿದೆ. ಇನ್ನು, ನಾನೇ ಅಭ್ಯರ್ಥಿ ಅಂತಾ ಗುಂಗು ಹಿಡಿಸಿ, ಅದೇಲ್ಲೋ ಕುಳಿತು ರಿಮೋಟ್ ಒತ್ತುವ ಪ್ರಶಾಂತಣ್ಣ, ಅದೇಷ್ಟೋ ದಿನಗಳಿಂದ ಕ್ಷೇತ್ರದಲ್ಲಿ ಮುಖ ತೋರಿಸಿಲ್ಲ. ಹೀಗಾಗಿ, ಪಕ್ಷ ಕ್ಷೇತ್ರದಲ್ಲಿ ವಿಲ ವಿಲ ಅಂತಿದೆ....
ಚೌಡಳ್ಳಿ ಗ್ರಾಪಂ “ಅವಿಶ್ವಾಸ” ಸಭೆ ರದ್ದು, ಅಧ್ಯಕ್ಷರ ರಾಜೀನಾಮೆ ಹಿನ್ನೆಲೆ ರದ್ದುಪಡಿಸಿದ ಎಸಿ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ನಡೆಯಬೇಕಿದ್ದ, ಅವಿಶ್ವಾಸ ಗೊತ್ತುವಳಿ ಮಂಡನಾ ಸಭೆ ರದ್ದಾಗಿದೆ. ಅಧ್ಯಕ್ಷೆ ನೇತ್ರಾವತಿ ಬಿಸವಣ್ಣವರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಇವತ್ತಿಗೆ ಹತ್ತು ದಿನವಾದ ಹಿನ್ನೆಲೆ ರಾಜೀನಾಮೆ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಿರಸಿ ಉಪ ವಿಭಾಗಾಧಿಕಾರಿ ದೇವರಾಜು, ಚೌಡಳ್ಳಿ ಗ್ರಾಪಂ ಸದಸ್ಯರಿಗೆ ತಿಳುವಳಿಕೆ ಪತ್ರ ನೀಡಿದ್ದಾರೆ. ಅಧ್ಯಕ್ಷರು ರಾಜೀನಾಮೆ ನೀಡಿರೋ ಹಿನ್ನೆಲೆಯಲ್ಲಿ ಈಗಾಗಲೇ ರಾಜೀನಾಮೆ ಅಂಗೀಕಾರವಾಗಿದ್ದು, ಈ ಹಿನ್ನೆಲೆಯಲ್ಲಿ ಅವಿಶ್ವಾಸ ನಿರ್ಣಯದ ಸಭೆ ನಡೆಸುವ ಅವಶ್ಯಕತೆ ಇಲ್ಲ. ಹೀಗಾಗಿ, ಸಭೆಯನ್ನು ರದ್ದುಗೊಳಿಸಲಾಗಿದೆ...
ಇಂದೂರು ಬಳಿ ಕ್ರೂಸರ್ ಹಾಗೂ ಬೈಕ್ ನಡುವೆ ಡಿಕ್ಕಿ, ಬೈಕ್ ಸವಾರನಿಗೆ ಗಾಯ..!
ಮುಂಡಗೋಡ: ತಾಲೂಕಿನ ಇಂದೂರು ಹೊರವಲಯದ ಶರೀಪ ಗೋವಿಂದ ದೇವಸ್ಥಾನದ ಹತ್ತಿರ, ಬೈಕ್ ಹಾಗೂ ಕ್ರೂಸರ್ ನಡುವೆ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಇಂದೂರು ಗ್ರಾಮದ ಬೈಕ್ ಸವಾರ ಮಲ್ಲೇಶ್ ದೊಡ್ಡಮನಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಇಂದೂರಿನಿಂದ ಮುಂಡಗೋಡ ಕಡೆಗೆ ಹೊರಟಿದ್ದ ಬೈಕ್ ಸವಾರನಿಗೆ, ಮುಂಡಗೋಡ ಕಡೆಯಿಂದ ಇಂದೂರು ಕಡೆಗೆ ಬರುತ್ತಿದ್ದ ಕ್ರೂಸರ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯಗೊಂಡಿದ್ದಾನೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇಂದೂರು ಪಂಚಾಯತಿಯಲ್ಲಿ ಪಕ್ಷಾಂತರ, ಗ್ರಾಪಂ ಸದಸ್ಯ ರಾಜೂ ಹರಿಜನ್ ಬಿಜೆಪಿ ಸೇರ್ಪಡೆ..!
ಮುಂಡಗೋಡ: ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಸದಸ್ಯ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯ ರಾಜೂ ಫಕ್ಕೀರವ್ವ ಹರಿಜನ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಇದ್ರೊಂದಿಗೆ, ಗ್ರಾಮ ಪಂಚಾಯತಿ ಮಟ್ಟದ ರಾಜಕೀಯ ಮೇಲಾಟ ಮತ್ತೊಂದು ಮಗ್ಗಲಿಗೆ ಹೊರಳಿದೆ. ಅಧ್ಯಕ್ಷರ ಬದಲಾವಣೆ ಎಫೆಕ್ಟ್..? ಅಸಲು, ಇಂದೂರು ಗ್ರಾಮ ಪಂಚಾಯತಿಯಲ್ಲಿ ಈ ಹಿಂದೆ ಅಧ್ಯಕ್ಷರಾಗಿದ್ದ ಅನ್ನಪೂರ್ಣ ಬೆಣ್ಣಿ ಮೇಡಂ ಒಪ್ಪಂದದಂತೆ ತಮ್ಮ ಪದವಿಗೆ ರಾಜೀನಾಮೆ ನೀಡಲು ಕೊಂಚ ತಡ ಮಾಡಿದ್ರು. ಹೀಗಾಗಿ, ತಮ್ಮದೇ ಪಕ್ಷದ ಸದಸ್ಯರಲ್ಲಿ ಸಾಕಷ್ಟು ತಳಮಳಕ್ಕೆ...
ನಿರಂತರ ಮಳೆಗೆ ಬಾಚಣಕಿ ಜಲಾಶಯ ಭರ್ತಿ, ರೈತರಲ್ಲಿ ಸಂತಸ..!
ಮುಂಡಗೋಡ: ತಾಲೂಕಿನ ಬಾಚಣಕಿ ಜಲಾಶಯ ಭರ್ತಿಯಾಗಿದೆ. ನಿರಂತರವಾಗಿ ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ಬಾಚಣಕಿ ಜಲಾಶಯ ಭರ್ತಿಯಾಗಿದ್ದು, ಉಬ್ಬು ಬಿದ್ದಿದೆ. ಹೀಗಾಗಿ, ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು ಬಾಚಣಕಿ ಜಲಾಶಯ ಬಾಚಣಕಿ, ಮಜ್ಜಿಗೇರಿ, ಇಂದೂರು, ಕೊಪ್ಪ, ಇಂದಿರಾನಗರ ಸೇರಿದಂತೆ ಹಲವು ಗ್ರಾಮಗಳ ರೈತರಿಗೆ ಜೀವನಾಡಿಯಾಗಿದೆ. ಹೀಗಾಗಿ, ಸದ್ಯ ಜಲಾಶಯ ಭರ್ತಿಯಾಗಿದ್ದು ರೈತರ ಸಂತಸಕ್ಕೆ ಕಾರಣವಾಗಿದೆ. ಇನ್ನು, ಜಲಾಶಯ ಭರ್ತಿ ಹಿನ್ನೆಲೆ ನಿತ್ಯವೂ ಪ್ರವಾಸಿಗರು ಬರುತ್ತಿದ್ದಾರೆ. ಅದ್ರಲ್ಲೂ ಟಿಬೇಟಿಗರು ಈ ಜಲಾಶಯದಲ್ಲಿ ಬಂದು ಮೋಜು ಮಸ್ತಿಮಾಡುತ್ತಿದ್ದಾರೆ.
ಮುಂದುವರೆದ ರಾಜೀನಾಮೆ ಪರ್ವ, ನಾಗನೂರು ಗ್ರಾಪಂ ಅಧ್ಯಕ್ಷ ಸುನಿಲ್ ಸಳಕೆ ರಾಜೀನಾಮೆ..!
ಮುಂಡಗೋಡ: ತಾಲೂಕಿನ ನಾಗನೂರು ಗ್ರಾಮ ಪಂಚಾಯತಿ ಅಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಇದ್ರೊಂದಿಗೆ, ಇನ್ನೇನು ಅವಿಶ್ವಾಸ ನಿರ್ಣಯಕ್ಕೆ ವೇದಿಕೆ ರೆಡಿ ಮಾಡಿಕೊಂಡಿದ್ದ ಸದಸ್ಯರಿಗೆ ಅಧ್ಯಕ್ಷರ ರಾಜೀನಾಮೆಯಿಂದ ಬೇಗುದಿ ತಣ್ಣಗಾದಂತಾಗಿದೆ. ಬಿಜೆಪಿ ತಾಲೂಕಾ ಮುಖಂಡರ ಹಾಗೂ ಸಚಿವ ಶಿವರಾಮ ಹೆಬ್ಬಾರ ಅವರ ಮಾತಿಗೆ ಒಪ್ಪಿ, ತಮ್ಮ ಸ್ವ ಇಚ್ಛೆಯಿಂದ ಗ್ರಾಮ ಪಂಚಾಯತಿ ಅಧ್ಯಕ್ಷ ಸುನೀಲ್ ವಾಗು ಸಳಕೆ ಅವರು ಶನಿವಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿ ಆರ್. ದೇವರಾಜ್ ಅವರಿಗೆ ರಾಜೀನಾಮೆ ನೀಡಿದ್ದಾರೆ. ಈ...
ಕೊಪ್ಪದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕ್ಷೌರಿಕ..!
ಮುಂಡಗೋಡ:ತಾಲೂಕಿನ ಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿದ್ದಾನೆ. ಶ್ರೀನಿವಾಸ್ ನರಸಿಂಹ ಬಾರಬಾರ್ (45) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಮದ್ಯಾನ ಕೊಪ್ಪ ಗ್ರಾಮದ ತನ್ನ ಹಳೆಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪ ಗ್ರಾಮದಲ್ಲೇ ಹೇರ್ ಕಟ್ಟಿಂಗ್ ಸಲೂನ್ ನಡೆಸುತ್ತಿದ್ದ ಶ್ರೀನಿವಾಸ್, ಇಂದು ಮದ್ಯಾಹ್ನ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹುನಗುಂದ ಸೊಸೈಟಿ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ, ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಅವಿರೋಧ ಆಯ್ಕೆ..!
ಮುಂಡಗೋಡ: ತಾಲೂಕಿನ ಹುನಗುಂದ ವೀರೇಶ್ವರ ಸೇವಾ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶಂಕ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅದ್ರಂತೆ ಉಪಾಧ್ಯಕ್ಷರಾಗಿ ಈರಪ್ಪ ಯಲಿವಾಳ ಆಯ್ಕೆಯಾಗಿದ್ದಾರೆ. ಇಂದು ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷರು ಉಪಾಧ್ಯಕ್ಷರ ಅವಿರೋಧ ಆಯ್ಕೆ ನಡೆಯಿತು. ಅಂದಹಾಗೆ, ಈ ಹಿಂದೆ ಅಧ್ಯಕ್ಷರಾಗಿದ್ದ ಅಬ್ದುಲ್ ರೆಹಮಾನ್ ಹಕೀಂ ಹಾಗೂ ಉಪಾಧ್ಯಕ್ಷರಾಗಿದ್ದ ಪರಶುರಾಮ್ ತಳವಾರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಆಯ್ಕೆ ನಡೆಯಿತು. ಈ ವೇಳೆ ಕಾಂಗ್ರೆಸ್ ಮುಖಂಡ ಎಚ್.ಎಂ.ನಾಯ್ಕ್, ಮಾಜಿ ಅಧ್ಯಕ್ಷ ಸಿದ್ದಪ್ಪ ಹಡಪದ್ ಸೇರಿದಂತೆ...









