ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
Tag: mundgod news
ಬಸಾಪುರದಲ್ಲಿ ರಾಣಾ ಪ್ರತಾಪ ಸಿಂಹರ ಜಯಂತಿ ಉತ್ಸವ, ಭವ್ಯ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರಾತ್ರಿಯಿಡಿ ರಾಣಾ ಪ್ರತಾಪ್ ಸಿಂಗ್ ರವರ ಜಯಂತಿ ಭವ್ಯ ಮೆರವಣಿಗೆ ನಡೆಯಿತು. ಸಮಾಜ ಬಾಂದವರು ರಾಣಾ ಪ್ರತಾಪ ಸಿಂಹರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಇಡೀ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಮೆರವಣಿಗೆ ನಡೆಸಿದ್ರು. ಭಕ್ತಿಗೀತೆಗಳನ್ನು ಹಾಕಿ ಮೆರವಣಿಗೆಯುದ್ದಕ್ಕೂ ಕುಣಿದು ಕುಪ್ಪಳಿಸಿದ ಯುವಕರು, ರಾಣಾ ಪ್ರತಾಪ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು. ಇನ್ನು ನಿನ್ನೆ ಸಂಜೆಯಿಂದಲೇ ಬಸಾಪುರ ಗ್ರಾಮದಲ್ಲಿ ” ರಾಣಾ” ಜಯಂತಿ ಆಚರಣೆ ಸಂಭ್ರಮ ಜೋರಾಗಿತ್ತು. ವಿವಿಧ ಧಾರ್ಮಿಕ ಕಾರ್ಯಕ್ರಮ...
ಶಿಗ್ಗಾವಿಯಲ್ಲಿ ಮುಂಡಗೋಡಿನ ಟಿಪ್ಪರ್ ಮಾಲೀಕ ಮರ್ಡರ್..! ಸಿಎಂ ತವರು ಕ್ಷೇತ್ರದಲ್ಲಿ ಏನಿದೇಲ್ಲ..?
ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿ ಕ್ರೈಮುಗಳ ಸಿಟಿಯಾಯ್ತಾ..? ಇಂತಹದ್ದೊಂದು ಅನುಮಾನ ಇಡೀ ಕ್ಷೇತ್ರದ ಪ್ರಜ್ಞಾವಂತರನ್ನ ಬೆಂಬಿಡದೇ ಕಾಡ್ತಿದೆ. ಇಲ್ಲಿ ಕೊಲೆ ಅನ್ನೋದು ಕಾರಣಗಳೇ ಇಲ್ಲದೇ ನಡೆದು ಹೋಗ್ತಿವೆ. ನಿನ್ನೆ ಸಂಜೆ ನಡೆದದ್ದೂ ಇದೆ. ಸರಗೊಲು ಆಡುತ್ತಿದ್ದಾಗ ಕೋಲು ಬಡಿಸಿಕೊಂಡ ಟಿಪ್ಪರ್ ಮಾಲೀಕನೊಬ್ಬ ಪ್ರಶ್ನೆ ಮಾಡಿದ್ದಕ್ಕೆ ಅನಾಮತ್ತಾಗಿ ಮರ್ಡರ್ ಆಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಉಮೇಶ್ ಶಿವಜೋಗಿಮಠ್ (45) ಎಂಬುವವನನ್ನು ಬರೋಬ್ಬರಿ ಏಳು ಜನರ ತಂಡ ಮನಬಂದಂತೆ ಥಳಿಸಿ ಕೊಂದು ಹಾಕಿದ್ದಾರೆ...
ಮುಂಡಗೋಡ ತಾಲೂಕಿನ ಮೂರು ಕಡೆ ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ, 7 ಜನರ ವಿರುದ್ಧ ಕೇಸ್..!
ಮುಂಡಗೋಡ ಪೊಲೀಸರು ನಿನ್ನೆಯಿಂದ ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ಬಲೆ ಬೀಸಿರೋ ಮುಂಡಗೋಡ ಪಿಎಸ್ಐ ಬಸವರಾಜು ಮಬನೂರು ಮತ್ತವರ ತಂಡ ಮೂರು ಕಡೆ ಪ್ರತ್ಯೇಕ ದಾಳಿ ನಡೆಸಿ ಹಲವು ದಂಧೆಕೋರರ ಹೆಡೆಮುರಿ ಕಟ್ಟಿದ್ದಾರೆ. 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದ್ರೊಂದಿಗೆ ಮೂರೂ ಕೇಸುಗಳಲ್ಲಿ ಒಟ್ಟೂ 10 ಸಾವಿರಕ್ಕೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ. ದಾಳಿ ನಂಬರ್-1 ಮುಂಡಗೋಡ ತಾಲೂಕಿನ ಕಾತೂರಿನ ಬಸ್ ನಿಲ್ದಾಣದ ಪಕ್ಕದಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದ, ನಾಗರಾಜ ಅಡಿವೆಪ್ಪ ಆಡಿನವರ ಎಂಬುವವನ...
ಮುಂಡಗೋಡಿನ ಆನಂದ್ ಕಡಗಿ ಕಣ್ಮರೆ, ಅಷ್ಟಕ್ಕೂ CCTV ದೃಷ್ಯದಲ್ಲಿ ಕಂಡದ್ದು ಏನು..?
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ. ರವಿವಾರ ದಿ.29 ರಂದು ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿರೋ ಆನಂದ್, ಹಸಿರು ಬಣ್ಣದ ಸಿಮೆಂಟ್ ಕಂಪನಿ ಹೆಸರಿರೋ ಟೀಶರ್ಟ್, ಹಾಗೇ ಖಾಕಿ ಬಣ್ಣದ ತ್ರಿಪೋರ್ಥ್ ತೊಟ್ಟು ಉಟ್ಟುಡುಗೆಯಲ್ಲೇ ನಾಪತ್ತೆಯಾಗಿದ್ದಾರೆ. ಮೊಬೈಲ್, ಪರ್ಸ್ ಏನು ಅಂದ್ರೆ ಏನೂ ತೆಗೆದುಕೊಂಡು ಹೋಗಿಲ್ಲ. ಹೀಗಾಗಿ, ಕುಟುಂಬದವರು ಆತಂಕಗೊಂಡಿದ್ದಾರೆ. ಸಿಸಿಟಿವಿಯಲ್ಲಿ..! ಅಸಲು, ಆನಂದ್ ಕಡಗಿ ರವಿವಾರ ಬೆಳಿಗ್ಗೆ ಮಕ್ಕಳನ್ನು ಸಲೂನ್ ಶಾಪ್ ಗೆ ಕರೆದುಕೊಂಡು ಹೋಗಿ ಬಂದಿದ್ದರು. ತಾವೂ ಕೂಡ ಕಟ್ಟಿಂಗ್...
ಮುಂಡಗೋಡಿನ ಶಿಕ್ಷಕ ಆನಂದ್ ಕಡಗಿ ನಾಪತ್ತೆ, ಪ್ರಕರಣ ದಾಖಲು..!
ಮುಂಡಗೋಡ ರೋಟರಿ ಖಾಸಗಿ ಶಾಲೆಯ ಶಿಕ್ಷಕ ಆನಂದ್ ಕಡಗಿ ನಾಪತ್ತೆಯಾಗಿದ್ದಾರೆ ಅಂತಾ ಕುಟುಂಬಸ್ಥರು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಬರೆದಿದ್ದ ಆನಂದ್, ಪರೀಕ್ಷೆಯಲ್ಲಿ ಪಾಸ್ ಆಗಿರಲಿಲ್ಲ. ಹೀಗಾಗಿ, ಅದನ್ನೇ ಮನಸ್ಸಿಗೆ ಹಚ್ಚಿಕೊಂಡು, ಮೇ.29 ರಂದು ಮನೆಯಿಂದ ಹೋದವನು, ಮರಳಿ ಬಂದಿಲ್ಲ ಅಂತಾ ದೂರಿನಲ್ಲಿ ತಿಳಿಸಿದ್ದಾರೆ. ಮೇ.29 ರ ರವಿವಾರ ಬೆಳಿಗ್ಗೆ ಸನವಳ್ಳಿ ರಸ್ತೆ ಕಡೆಗೆ ನಡೆದುಕೊಂಡೇ ಹೋಗಿದ್ದನ್ನ ಕೆಲವ್ರು ನೋಡಿದ್ದಾರೆ ಅನ್ನೋ ಮಾಹಿತಿ ಇದ್ದು ಮನೆ ಮಗನನ್ನು ಹುಡುಕಿ ಕೊಡಿ ಅಂತಾ ಪೊಲೀಸರಿಗೆ...
ಮುಂಡಗೋಡ ಕಿಲ್ಲೆ ಓಣಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ..!
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ನೇತೃತ್ವದಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ. ಪಟ್ಟಣದ ಕಿಲ್ಲೆ ಓಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 45 ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಸಿರಾಜ್ ಮುಲ್ಲಾ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಇಡಲಾಗಿತ್ತು. ಈ ಕುರಿತು ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪಿಎಸ್ಐ ಮತ್ತವರ ತಂಡ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಂಡಿದೆ. ನಂತರದಲ್ಲಿ ಮುಂಡಗೋಡ ತಹಶೀಲ್ದಾರ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ...
“ಮುಂಡಗೋಡ ಮಹಾರಾಜ್” ಸ್ಪರ್ಧಾ ಹೋರಿ ಅಸ್ತಂಗತವಾಗಿ ಒಂದು ವರ್ಷ, ಅಭಿಮಾನಿಗಳಿಂದ ವಾರ್ಷಿಕ ಪುಣ್ಯತಿಥಿ..!
ಮುಂಡಗೋಡ: ತಾಲೂಕಿನ ಮೊಟ್ಟ ಮೊದಲ ಪೀಪಿ ಹೋರಿ ಅಂತ ಹೆಸರು ಮಾಡಿದ್ದ, ಮುಂಡಗೋಡಿನ ಮನೆ ಮಗ ಅಂತಲೇ ಕರೆಸಿಕೊಂಡಿದ್ದ “ಮುಂಡಗೋಡ ಮಹಾರಾಜ್” 181 ಪಿಪಿ ಸ್ಪರ್ಧಾ ಹೋರಿಯ ಒಂದನೇ ವರ್ಷದ ಪುಣ್ಯತಿಥಿ ಕಾರ್ಯವನ್ನು ಅಭಿಮಾನಿಗಳು ನಡೆಸಿದ್ರು. ಅಸಂಖ್ಯ ಅಭಿಮಾನಿಗಳನ್ನು ಹೊಂದಿದ್ದ ಸ್ಪರ್ಧಾ ಹೋರಿ “ಮುಂಡಗೋಡ ಮಹಾರಾಜ್” ಅನಾರೋಗ್ಯದಿಂದ ಮೃತಪಟ್ಟು ಇಂದಿಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ, ಅಭಿಮಾನಿಗಳು ತಮ್ಮ ನೆಚ್ಚಿನ ಹೋರಿಯ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿದ್ರು. ಅಲ್ಲದೇ ಹೋರಿಯ ನೆನಪಿನಲ್ಲಿ ಅನ್ನ ಸಂತರ್ಪಣೆ ಮಾಡಿದ್ರು. ಆರಾಧ್ಯ...
ಕೊಪ್ಪ ಗ್ರಾಮದಲ್ಲಿ ಕಳೆನಾಶಕ ಸೇವಿಸಿ ಯುವಕ ಆತ್ಮಹತ್ಯೆ, ಕಾರಣವಾದ್ರೂ ಏನು..?
ಮುಂಡಗೋಡ: ತಾಲೂಕಿನ ಕೊಪ್ಪದಲ್ಲಿ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕೊಪ್ಪ ಗ್ರಾಮದ ಚನ್ನಪ್ಪ ಬಸಪ್ಪ ಶ್ಯಾಬಾಳ್ (30) ಎಂಬುವವನೇ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವ. ನಿನ್ನೆ ಬಾನುವಾರ ಬೆಳಿಗ್ಗೆ ತನ್ನ ಗದ್ದೆಯಲ್ಲೇ ಎಮರ್ಜೆನ್ಸಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಹೀಗಾಗಿ, ತಕ್ಷಣವೇ ಆತನನ್ನು ತಾಲೂಕಾಸ್ಪತ್ರೆಗ ದಾಖಲಿಸಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತ ಪಟ್ಟಿದ್ದಾನೆ...
ಟಿಬೇಟಿಯನ್ ಕಾಲೋನಿಗೆ ಅಕ್ರಮ ಗೋ ಮಾಂಸ ಸಾಗಿಸುತ್ತಿದ್ದ ವಾಹನ ಸಮೇತ ಓರ್ವ ಪೊಲೀಸರ ವಶಕ್ಕೆ..?
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಸಾಗಾಣಿಕೆ ಮಾಡಲಾಗುತ್ತಿದ್ದ ಅಕ್ರಮ ಗೋ ಮಾಂಸದ ವಾಹನವನ್ನು ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಲಘಟಗಿ ಕಡೆಯಿಂದ ಸಾಗಿಸಲಾಗುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗೂ ಹೆಚ್ಚು ತೂಗುವ ಗೋಮಾಂಸವನ್ನು ವಾಹನ ಸಮೇತ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಅನ್ನೊ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಬರಬೇಕಿದೆ.









