ನಿಜ, ಮುಂಡಗೋಡಿನ ಇತಿಹಾಸದಲ್ಲೇ ಇದು ಬಹುದೊಡ್ಡ ನಾಚಿಗ್ಗೇಡಿನ ಸಂಗತಿ ಅಂದ್ರೂ ತಪ್ಪಿಲ್ಲ ಅನಿಸತ್ತೆ. ತಾಲೂಕಿನ ದಂಡಾಧಿಕಾರಿಯೊಬ್ಬರ ವಿರುದ್ಧ ಈ ಪರಿಯ ಹೋರಾಟ ಬಹುಶಃ ಹಿಂದೆ ಎಂದೂ ನಡೆದಿರಲಿಲ್ಲವೆನೋ..? ಇಷ್ಟಾದ್ರೂ ಆ ಅಧಿಕಾರಿಯನ್ನ ಬಚಾವ್ ಮಾಡುವಲ್ಲಿ ತೆರೆಮರೆಯ ಕಸರತ್ತು ನಡೆಸ್ತಿರೋ “ದೊಡ್ಡ”ವರಿಗೆ ಏನೂ ಅನಿಸ್ತಾನೇ ಇಲ್ವಾ..? ಅದೂ ಹೋಗಲಿ, ತಮ್ಮ ಮೇಲೆ ಅಂತಹದ್ದೊಂದು ಭಯಂಕರ ಆರೋಪ ಬಂದು, ಪೊಲೀಸ್ ಠಾಣೆಯ ಮೆಟ್ಟಿಲೇರಿ ಜಗಜ್ಜಾಹೀರಾದಾಗಲೂ ಆ ಅಧಿಕಾರಿಗೆ ಮುಂಡಗೋಡಿಗರ ತಾಳ್ಮೆ ಅರ್ಥ ಆಗ್ತಿಲ್ವಾ..? ಇದು ಬಹುತೇಕ ಮುಂಡಗೋಡಿನ ಪ್ರಜ್ಞಾವಂತರ ಪ್ರಶ್ನೆ..!...
Top Stories
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
Tag: mundgod news
ಹನುಮಾಪುರದಲ್ಲಿ ಜಲಮಿಷನ್ ಕಾಮಗಾರಿ ಪೈಪು ಮೈಮೇಲೆ ಬಿದ್ದು ಕಾರ್ಮಿಕನ ದಾರುಣ ಸಾವು..!
ಮುಂಡಗೋಡ: ತಾಲೂಕಿನ ಹನುಮಾಪುರದ ಬಳಿ ಭಾರೀ ದುರಂತವೊಂದು ಸಂಭವಿಸಿದೆ. ಜಲಮಿಷನ್ ಯೋಜನೆಯ ಕಾಮಗಾರಿ ವೇಳೆ ಬೃಹತ್ ಪೈಪು ಮೈಮೇಲೆ ಬಿದ್ದು ಬಿಹಾರ ಮೂಲದ ಕಾರ್ಮಿಕ ಮೃತಪಟ್ಟಿದ್ದಾನೆ. ಮೂಲತಃ ಬಿಹಾರದವನಾದ ರಾಜು ಯಾದವ್ (35) ಮೃತಪಟ್ಟ ದುರ್ಧೈವಿಯಾಗಿದ್ದು, ಇಂದು ಕಾರ್ಯನಿರ್ವಹಿಸುವ ವೇಳೆ ಆಕಸ್ಮಿಕವಾಗಿ ಬೃಹತ್ ಪೈಪ್ ಆಯತಪ್ಪಿ ಕಾರ್ಮಿಕನ ಮೈಮೇಲೆ ಬಿದ್ದಿದೆ. ಹೀಗಾಗಿ, ಕಾರ್ಮಿಕನ ದೇಹ ಚಿದ್ರಗೊಂಡಿದೆ. ಸದ್ಯ ಮುಂಡಗೋಡ ಪಿಎಸ್ ಐ ಬಸವರಾಜ್ ಮಬನೂರು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮುಂಡಗೋಡ ತಾಲೂಕಿನ ಹಲವೆಡೆ ಆಲಿಕಲ್ಲು, ಗಾಳಿ ಸಮೇತ ಭಾರೀ ಮಳೆ..!
ಮುಂಡಗೋಡ: ತಾಲೂಕಿನಲ್ಲಿ ಭಾರೀ ಮಳೆಯಾಗಿದೆ. ಮುಂಡಗೋಡ ಪಟ್ಟಣ ಸೇರಿದಂತೆ ಹಲವು ಕಡೆ ಗಾಳಿ, ಗುಡುಗು, ಮಿಂಚು ಆಲಿಕಲ್ಲು ಸಹಿತ ಭರ್ಜರಿ ಮಳೆಯಾಗಿದೆ. ಸುಮಾರು ಒಂದು ತಾಸಿಗೂ ಹೆಚ್ಚು ಸುರಿದ ಮಳೆಯ ಕಾರಣಕ್ಕೆ ಬಿಸಿಲ ಬೇಗೆಯಿಂದ ಬಸವಳಿದಿದ್ದ ತಾಲೂಕಿನ ಮಂದಿಗೆ ಮಳೆರಾಯ ಮತ್ತೆ ತಂಪೆರೆದಿದ್ದಾನೆ. ಮಳೆಯ ದೃಷ್ಯ ಕ್ಯಾಮೆರಾ ಕಣ್ಣಲ್ಲಿ.. ಅಲಿಕಲ್ಲು ಮಳೆ..! ಅಂದಹಾಗೆ, ಭರ್ಜರಿ ಮಳೆಗೂ ಮೊದಲು ಭಾರೀ ಗಾಳಿ ಬೀಸಿದೆ. ನಂತರ ಧಾರಾಕಾರ ಆಲಿಕಲ್ಲು ಬಿದ್ದಿವೆ. ಪರಿಣಾಮ ತಾಲೂಕಿನ ಮಾವು ಬೆಳೆಗಾರರಿಗೆ ತೀವ್ರ ಸಂಕಷ್ಟ ಎದುರಾದಂತೆ...
ಕಾತೂರು ಬಳಿ ಉರುಳಿಗೆ ಸಿಕ್ಕು ಒದ್ದಾಡುತ್ತಿದ್ದ ಕರಡಿ, ಜೀವದ ಹಂಗು ತೊರೆದು ರಕ್ಷಿಸಿದ ಅರಣ್ಯ ಸಿಬ್ಬಂದಿ..!
ಮುಂಡಗೋಡ: ತಾಲೂಕಿನ ಕಾತೂರ ವಲಯದ, ಪಾಳಾ ಶಾಖೆಯ ಒರಲಗಿ ಕಾಡಿನಲ್ಲಿ ಉರುಳಿಗೆ ಸಿಕ್ಕು ಬಿದ್ದಿದ್ದ ಕರಡಿಯನ್ನು ಅರಣ್ಯ ಸಿಬ್ಬಂದಿಗಳು ಜೀವದ ಹಂಗು ತೊರೆದು ರಕ್ಷಿಸಿ ಸಮಯ ಪ್ರಜ್ಞೆ ಮೆರೆದಿದ್ದಾರೆ. ಉರುಳಿಗೆ ಸಿಕ್ಕು ಪ್ರಾಣ ರಕ್ಷಿಸಿಕೊಳ್ಳಲು ಪರದಾಡುತ್ತಿದ್ದ ಕರಡಿಯನ್ನು, ಒರಲಗಿ ಅರಣ್ಯದಲ್ಲಿ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿಗಳು ನೋಡಿದ್ದಾರೆ. ತಕ್ಷಣವೇ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ, ಪಶುವೈದ್ಯ ಜಯಚಂದ್ರ ಹಾಗೂ ಅರಣ್ಯ ರಕ್ಷಕ ಶ್ರೀಧರ ಭಜoತ್ರಿ ಅವರನ್ನು ಕರೆಸಿ, ಕರಡಿಗೆ ಅರಿವಳಿಕೆ ಮದ್ದು ನೀಡಿ ಕರಡಿಯನ್ನು ಬಚಾವ್ ಮಾಡಲಾಗಿದೆ....
ಕಾತೂರು, ಹಿರೇಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ ನುಜ್ಜುಗುಜ್ಜು, ಚಾಲಕನಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಕಾತೂರು ಹಾಗೂ ಹಿರೇಹಳ್ಳಿ ಮದ್ಯದ ಬ್ರಿಡ್ಜ್ ಬಳಿ ಪೈಪು ತುಂಬಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರೀ ಚಾಲಕನಿಗೆ ಗಂಭೀರ ಗಾಯವಾಗಿದ್ದು ತಾಲುಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ ಪೈಪು ತುಂಬಿದ ಲಾರಿ ನಿಯಂತ್ರಣ ತಪ್ಪಿದೆ. ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಲಾರಿ ನುಜ್ಜು ಗುಜ್ಜಾಗಿದೆ. ಅಲ್ದೇ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೂ ಡಿಕ್ಕಿಯಾಗಿ ಡಿಕ್ಕಿಯ ರಭಸಕ್ಕೆ ಮರ ತುಂಡಾಗಿದೆ. ಸಧ್ಯ ಚಾಲಕ...
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ವಿರುದ್ಧ ಸಿಡಿದೆದ್ದ ದಲಿತ ಸಂಘಟನೆಗಳು..! ಅಂದಹಾಗೆ, ಕಾರವಾರದಲ್ಲಿ ಏನಾಯ್ತು ಗೊತ್ತಾ..!
ಕಾರವಾರ: ನಕಲಿ ಜಾತಿ ಪ್ರಮಾಣಪತ್ರ ಪಡೆದು ಸರ್ಕಾರಿ ಹುದ್ದೆಯಲ್ಲಿರೋ ಆರೋಪ ಹೊತ್ತಿರೊ, ಮುಂಡಗೋಡ ತಹಶೀಲ್ದಾರ್ ಶ್ರೀಧರ ಮುಂದಲಮನಿ ವಿರುದ್ಧ ತನಿಖೆ ನಡೆಸಿ, ಆರೋಪದಿಂದ ಮುಕ್ತವಾಗುವವರೆಗೆ ಹುದ್ದೆಯಲ್ಲಿ ಮುಂದುವರಿಯದಂತೆ ಆದೇಶಿಸಬೇಕೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಚಿದಾನಂದ ಹರಿಜನ ಅವರು ಕಾರವಾರದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲಾಡಳಿತದ ಮೂಲಕ ಪತ್ರ..! ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿರುವ ಅವರು, ಮುಂಡಗೋಡ ತಾಲೂಕು ತಹಶೀಲ್ದಾರ ಶ್ರೀಧರ್ ಮುಂದಲಮನಿಯವರು ನಕಲಿ...
ಅಸ್ಪಷ್ಟವಾಯ್ತು ಅಗಡಿ ಮೈಲಾರಲಿಂಗ ಕಾರಣೀಕ..! ಅಷ್ಟಕ್ಕೂ ಏನದು..?
ಮುಂಡಗೋಡ: ತಾಲೂಕಿನ ಅಗಡಿ ಶ್ರೀ ಮೈಲಾರಲಿಂಗ ಸ್ವಾಮಿಯ ಎಂಟನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಕಾರಣೀಕ ಉತ್ಸವ ನಡೆಯಿತು. ಆದ್ರೆ ಈ ವರ್ಷದ ಕಾರಣೀಕ ಅಸ್ಪಷ್ಟವಾಗಿ ಕೇಳಿತು. ಕಾರಣೀಕದ ನುಡಿಗಳು ಯಾರಿಗೂ ಸ್ಪಷ್ಟವಾಗಿ ಕೇಳಲೇ ಇಲ್ಲದಿರುವುದು ಭಕ್ತರಿಗೆ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ತಂಪಾಯಿತಲೇ ಪರಾಕ್..? “ರಾಜ್ಯ ತಂಪಾಯಿತಲೇ ಪರಾಕ್” ಇದು ಅಗಡಿಯಲ್ಲಿ ಇಂದು ಅಸ್ಪಷ್ಟವಾಗಿ ಕೇಳಿ ಬಂದ ಕಾರಣೀಕ ನುಡಿ. ಒಂದುವೇಳೆ ಇದೇ ಮೈಲಾರಲಿಂಗ ಸ್ವಾಮಿಯ ಕಾರಣೀಕವಾಗಿದ್ದರೆ, ಪ್ರಸಕ್ತ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ, ಅಲ್ಲದೆ, ರಾಜ್ಯದಲ್ಲಿ ಶಾಂತಿ...
ಮುಂಡಗೋಡ ತಾಲೂಕಾಡಳಿತ, ಅಧಿಕಾರಿಗಳ ವಿರುದ್ಧ ರಿಂಚನ್ ಲಾಮೊ ಭಾರೀ ಆಕ್ರೋಶ..!
ಮುಂಡಗೋಡ: ಟಿಬೇಟಿಯನ್ ಕಾಲೋನಿಗಳ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಪೂರೈಸುವಲ್ಲಿ ಇಲ್ಲಿನ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತಗಳು ಕಾಳಜಿ ತೋರಿಸಿಲ್ಲ ಅಂತಾ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಅಸಮಾಧಾನ ಹೊರಹಾಕಿದ್ದಾರೆ.. ಮೂರು ದಿನಗಳ ಕಾಲ ಮುಂಡಗೋಡ ಟಿಬೇಟಿಯನ್ ಕಾಲೋನಿಗಳ ಪ್ರವಾಸದಲ್ಲಿರೋ ರಿಂಚನ್ ಲಾಮೊ, ಟಿಬೇಟಿಯನ ಕ್ಯಾಂಪ್ ನಂಬರ್ 6 ರ ಸೈನ್ಸ್ ಭವನದಲ್ಲಿ ನಡೆದ, ಅಲ್ಪಸಂಖ್ಯಾತ ಧಾರ್ಮಿಕ ಮುಖಂಡರ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ರು. ಬೌದ್ಧ ಸನ್ಯಾಸಿಗಳು ಅಹಿಂಸಾವಾದಿಗಳು, ಯಾರ ಹತ್ತಿರವೂ ನಿರ್ಭಿಡೆಯಿಂದ ಮಾತನಾಡುವವರಲ್ಲ. ಇವ್ರಿಗೆ ಸಿಗಬೇಕಿದ್ದ...
ಚಿಗಳ್ಳಿ ಗ್ರಾಮ ಪಂಚಾಯತಿಗೆ ಕಾಂಗ್ರೆಸ್ ಬೆಂಬಲಿತ ಭಾರತಿ ನಿಂಬಾಯಿ ನೂತನ ಅಧ್ಯಕ್ಷೆ..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಭಾರತಿ ನಿಂಬಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ, ಆಂತರಿಕ ಒಪ್ಪಂದದಂತೆ ಅಧ್ಯಕ್ಷರ ಬದಲಾವಣೆ ಆಗಿದೆ. ಕೈ ಬಲ..! ಒಟ್ಟೂ 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು ಭರ್ಜರಿ ಜಯಗಳಿಸಿ ಬಿಜೆಪಿ ಬೆಂಬಲಿತರಿಗೆ ಭಾರೀ ನಿರಾಸೆ ಮೂಡಿಸಿದ್ದರು. ಆಡಳಿತಾರೂಢ ಬಿಜೆಪಿ ಬೆಂಬಲಿತರು ಕೇವಲ 2 ಸ್ಥಾನಕ್ಕಷ್ಟೇ ತೃಪ್ತಿ ಪಟ್ಟು ಕೈ ಚೆಲ್ಲಿದ್ದರು. ಮೂವರು ಪಕ್ಷೇತರರು ಗೆದ್ದು ಬಂದಿದ್ದರು. ಹೀಗಾಗಿ, ಕಳೆದ...
ಟಿಬೇಟಿಯನ್ ಕಾಲೋನಿಗೆ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ರಿಂಚನ್ ಲಾಮೊ ಆಗಮನ..!
ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಇಂದು ಭಾರತ ಸರ್ಕಾರದ ರಾಷ್ಟ್ರೀಯ ಅಲ್ಪಸಂಖ್ಯಾತ ರ ಆಯೋಗದ ಸದಸ್ಯೆ, ಶ್ರೀಮತಿ ರಿಂಚನ್ ಲಾಮೊ ಭೇಟಿ ನೀಡಿದ್ಧಾರೆ. ಎರಡು ವಾರಗಳ ಕಾಲ ಕರ್ನಾಟಕದ ಪ್ರವಾಸದಲ್ಲಿರೋ ರಿಂಚನ್ ಲಾಮೊ ಮುಂಡಗೋಡ ಟಿಬೇಟಿಯನ್ ಕಾಲೋನಿಯಲ್ಲಿ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದಹಾಗೆ, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕವಾಗಿ ಆಗಮಿಸಿದ ರಿಂಚನ್ ಲಾಮೊರನ್ನು ಮುಂಡಗೋಡ ತಾಲೂಕಾಡಳಿತದಿಂದ ತಾಲೂಕಿನ ಗಡಿ ಭಾಗ ವಡಗಟ್ಟಾದ ಚೆಕ್ ಪೊಸ್ಟ್ ಬಳಿ ಸ್ವಾಗತಿಸಲಾಯಿತು. ಈ ವೇಳೆ...