ಮುಂಡಗೋಡ : ತಾಲೂಕಿನ ಬಸಾಪುರದಲ್ಲಿ KSRTC ಚಾಲಕ ಹಾಗೂ ನಿರ್ವಾಹಕನ ಮೇಲೆ ಇಬ್ಬರು ಯುವಕರು ಹಲ್ಲೆ ಮಾಡಿರೋ ಆರೋಪ ಕೇಳಿಬಂದಿದೆ. ಸೋಮವಾರ ಬೆಳಗ್ಗೆ ಘಟನೆ ನಡೆದಿದ್ದು ಸದ್ಯ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಬಸ್ ನಿಲ್ಲಿಸಿದ್ರೂ ಹಲ್ಲೆ..? ಬೆಳಿಗ್ಗೆ ಬಸಾಪುರದಿಂದ ಮುಂಡಗೋಡಿಗೆ ಹೊರಟಿದ್ದ, “ಮುಂಡಗೋಡ ಹುಲಿಹೊಂಡ ಮುಂಡಗೋಡ” ಬಸ್, KA-42-F-1309 ಸಂಖ್ಯೆಯ KSRTC ಬಸ್ ನಲ್ಲಿ ಓರ್ವ ಯುವಕ ಬಸ್ ಹತ್ತಲು ಬಂದಿದ್ದ ಎನ್ನಲಾಗಿದೆ. ಅಷ್ಟೊತ್ತಿಗಾಗಲೇ ಹೊರಟಿದ್ದ ಬಸ್ ಗೆ ಕೂಗಿ ನಿಲ್ಲಿಸಿದ್ದಾರೆ. ಆದ್ರೆ ಬಸ್ ನಿಲ್ಲಿಸಿದ್ರೂ...
Top Stories
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ, ಕೋರ್ಟ್ ತೀರ್ಪು ಪ್ರಕಟ..!
ಮುಂಡಗೋಡಿನ ನಕಲಿ “ಮೂಲವ್ಯಾಧಿ” ಡಾಕ್ಟರ್ ನ ಕ್ಲಿನಿಕ್ ಮೇಲೆ ಅಧಿಕಾರಿಗಳ ದಾಳಿ, ಕ್ಲಿನಿಕ್ ಕ್ಲೋಸ್..! ತಾಲೂಕಿನ ಇನ್ನುಳಿದ “ಫೇಕು” ಡಾಕ್ಟರುಗಳ ಮೇಲೆ ದಾಳಿ ಯಾಕಿಲ್ಲ..?
ಮುಂಡಗೋಡ ತಾಲೂಕಾ ಕ್ಷತ್ರೀಯ ಮರಾಠ ಮಂಡಳದ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!
ಹುನಗುಂದದ ಶ್ರೀಮತಿ ನಿಂಗವ್ವ ಆಸ್ತಕಟ್ಟಿ (76) ವಿಧಿವಶ..!
ಹುನಗುಂದದಲ್ಲಿ CBDRCT ಸಂಸ್ಥೆಯಿಂದ ಮಹತ್ಕಾರ್ಯ, ತಿಂಗಳಿಂದ ನಡೆದ ಹೊಲಿಗೆ ತರಬೇತಿ ಶಿಬಿರದ ಸಮಾರೋಪ..!
Tag: mundgod news
ಅಜ್ಜಳ್ಳಿಯಲ್ಲಿ ತೋಟಕ್ಕೆ ನುಗ್ಗಿ ಹಲ್ಲೆ ಆರೋಪ ಇಬ್ಬರ ವಿರುದ್ಧ ದೂರು ದಾಖಲು..!
ಮುಂಡಗೋಡ: ತಾಲೂಕಿನ ಅಜ್ಜಳ್ಳಿಯಲ್ಲಿ ತೋಟದ ಜಮೀನಿನಲ್ಲಿ ಬಂದು ಅವಾಚ್ಯವಾಗಿ ಬೈದು ಹಲ್ಲೆ ಮಾಡಲಾಗಿದೆ ಅಂತಾ ಆರೋಪಿಸಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಹರೀಶ್ ವೆಂಕಟೇಶ ಪಾಟೀಲ ಎಂಬುವವರು ದೂರು ನೀಡಿದ್ದು, ಹನುಮಂತ ತಿಪ್ಪಣ್ಣ ಪಾಟೀಲ, ಪ್ರವೀಣ ತಿಪ್ಪಣ್ಣ ಪಾಟೀಲ್ ಎಂಬುವವರ ವಿರುದ್ಧ ದೂರು ದಾಖಲಿಸಿದ್ದಾರೆ. ಅಜ್ಜಳ್ಳಿ ಗ್ರಾಮ ಸರ್ವೆ ನಂ. 33 ರಲ್ಲಿಯ ಜಾಗದ ಹಕ್ಕಿನ ವಿಷಯದಲ್ಲಿ 2016 ರಿಂದಲೂ ತಂಟೆ ತಕರಾರು ಮಾಡುತ್ತಾ ಬಂದಿರೋ ಆರೋಪಿತರಿಬ್ಬರೂ ಅಕ್ರಮವಾಗಿ ತೋಟಕ್ಕೆ ನುಗ್ಗಿ ಅವಾಚ್ಯವಾಗಿ ಬೈದು ಕುಡುಗೋಲಿನಿಂದ ಹಲ್ಲೆ...
ಪಾಳಾದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದಲ್ಲಿ ಮಾನಸಿಕ ವೇದನೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪಾಳಾ ಗ್ರಾಮದ ಗಂಗವ್ವ ಕೋಂ ಇಂದ್ರಪ್ಪ ಇಂಗಳೆ (60), ಎಂಬುವವಳೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ ಇವಳು ಕಳೆದ 17 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದವಳು, ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜ. 19 ರಂದು ಬೆಳಿಗ್ಗೆ, ಮನೆಯಲ್ಲಿ ತಂದಿಟ್ಟಿದ್ದ ಅಡಿಕೆ ಗಿಡಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಔಷಧಿಯನ್ನು ಸೇವಿಸಿ ಅಸ್ವಸ್ಥಳಾಗಿದ್ದಳು. ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ...
ಟಿಬೇಟಿಯನ್ ಕಾಲೋನಿಯಲ್ಲಿ ಕೋವಿಡ್ ಭೀತಿ, ಬಿಕೋ ಅಂತಿವೆ ರಸ್ತೆಗಳು..!
ಮುಂಡಗೋಡ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿರೋ ಟಿಬೇಟಿಯನ್ ಕಾಲೋನಿಗಳಲ್ಲಿ ಕೋವಿಡ್ ಸದ್ಯ ಮತ್ತೆ ತನ್ನ ಅಟ್ಟಹಾಸ ಶುರು ಮಾಡಿದೆ.. ಹೀಗಾಗಿ, ಸದ್ಯ ಕಾಲೋನಿಯಲ್ಲಿ ಬಹುತೇಕ ಸ್ತಬ್ದ ವಾತಾವರಣ ನಿರ್ಮಾಣವಾಗಿದೆ. ಕಳೆದ ಕೆಲ ವಾರದ ಹಿಂದೆ ಮೊದಲೇಲ್ಲ ವಾರಕ್ಕೆ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ ಸದ್ಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿ ಈಗ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಅರ್ಧಶತಕ ದಾಟಿದೆ. ಅದ್ರಲ್ಲೂ ಟಿಬೇಟಿಯನ್ ಕಾಲೋನಿಯ STS ಶಾಲೆಯಲ್ಲಿ 16 ವಿದ್ಯಾರ್ಥಿಗಳಿಗೆ ಪಾಸಿಟಿವ್ ದೃಢಪಟ್ಟಿರೋದು...
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹನುಮಾಪುರ ಗ್ರಾ. ಪಂಚಾಯತಿ..!
ಮುಂಡಗೋಡ: ತಾಲೂಕಿನ ಹನುಮಾಪುರ ಗ್ರಾಮ ಪಂಚಾಯತಿಯಲ್ಲಿ ಶನಿವಾರ ರಾತ್ರಿ ಎಂಟು ಗಂಟೆ ಯಾದ್ರೂ ಗ್ರಾಮ ಪಂಚಾಯತದ ಎದುರಿಗೆ ಏರಿಸಿದ್ದ ರಾಷ್ಟ್ರಧ್ವಜವನ್ನು ಇಳಿಸದೇ, ಗ್ರಾ.ಪಂ. ಸಿಬ್ಬಂದಿ ಅಗೌರವ ತೋರಿದ ಘಟನೆ ನಡೆದಿದೆ. ಪ್ರತಿ ದಿನದ ಬೆಳಿಗ್ಗೆ ರಾಷ್ಟ್ರಧ್ವಜವನ್ನು ಏರಿಸಿ, ಸೂರ್ಯಾಸ್ತದ ವೇಳೆಗೆ ಇಳಿಸಬೇಕೆಂಬ ನಿಯಮವಿದೆ. ಆದರೆ, ರಾಷ್ಟ್ರಧ್ವಜವನ್ನು ಪ್ರತಿದಿನ ಇಳಿಸುವ ಬದಲು, ಕೆಲವು ಸಿಬ್ಬಂದಿಗಳು ಬೆಳಿಗ್ಗೆ ಏರಿಸಿ ಹಾಗೆ ಬಿಡುತ್ತಾರಂತೆ. ಹನುಮಾಪುರ ಗ್ರಾ.ಪಂ.ದಲ್ಲಿಯೂ ಶನಿವಾರ ರಾತ್ರಿ ಎಂಟು ಗಂಟೆಯಾದರೂ, ರಾಷ್ಟ್ರಧ್ವಜವನ್ನು ಇಳಿಸಿಲ್ಲ. ಈ ಬಗ್ಗೆ ಗ್ರಾಮಸ್ಥರು ಮೊಬೈಲ್ ನಲ್ಲಿ...
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..!
ಮುಂಡಗೋಡಿನಲ್ಲಿ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ..! ಮುಂಡಗೋಡ: ಪಟ್ಟಣದ ಲೊಯೊಲಾ ವಿಕಾಸ ಕೇಂದ್ರದ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಬಂಜಾರಾ ಕಲಾ ಪ್ರತಿಭಾನ್ವೇಷಣಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಂಡಗೋಡ ಮತ್ತು ಹಳಿಯಾಳ ಭಾಗದ ಬಂಜಾರಾ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದ್ರು. ವಿಶೇಷ ಜನಪದ ಗೀತೆಗಳನ್ನು ವಾದ್ಯ ಸಮೇತ ಹಾಡಿ ರಂಜಿಸಿದ್ರು, ಪಾರಂಪರಿಕ ಸೊಗಡಿನ ಗೀತ ನೃತ್ಯಗಳನ್ನು ಪ್ರದರ್ಶಿಸಿದ್ರು. ಈ ವೇಳೆ ತೀರ್ಪುಗಾರರಾಗಿ ಖ್ಯಾತ ಬಂಜಾರಾ ಕಲಾವಿದರು ಆಗಮಿಸಿದ್ದರು. ಸ್ಥಳೀಯ ಬಂಜಾರಾ ಸಮಾಜದ ಮುಖಂಡರುಗಳು, ಕಲಾಭಿಮಾನಿಗಳು ಹಾಜರಿದ್ದರು.





